Advertisement
ಗುರುಪ್ರಸಾದ್‌ ಕುರ್ತಕೋಟಿ

ಗುರುಪ್ರಸಾದ್‌ ಕುರ್ತಕೋಟಿ ಇಪ್ಪತ್ತು ವರ್ಷಗಳ ಕಾಲ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿ ಕೃಷಿಗಿಳಿದ ಉತ್ಸಾಹಿರೈತರು. "ಬೆಳೆಸಿರಿ" ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ.  "ಕೇಶಕ್ಷಾಮ" (ಹಾಸ್ಯ ಬರಹಗಳ ಸಂಕಲನ) ಸೇರಿ ಇವರ ಮೂರು ಕೃತಿಗಳು ಪ್ರಕಟಗೊಂಡಿವೆ.

ನಾವು ಬೆಳಕಾಗಿರಬೇಕು ಇಲ್ಲವೆ ಶಾಂತವಾಗಿರಬೇಕು

ಮಾನವ ಸಹಜವಾಗಿ ಸೆಕ್ಯೂಲರ್ ಆಗಿರುತ್ತಾನೆ. ಆದರೆ ಅವನನ್ನು ಪ್ರಜ್ಞಾಪೂರ್ವಕವಾಗಿ ಕಮ್ಯೂನಲ್ ಮಾಡಿದರೂ ಅದು ಬಹಳದಿನ ಬಾಳಿಕೆ ಬರುವುದಿಲ್ಲ. ಮತ್ತೆ ಮತ್ತೆ ಜನ ಸಹಜತೆಯನ್ನು ಬಯಸುತ್ತಲೇ ಇರುತ್ತಾರೆ. ಹೀಗಾಗಿ ಕೋಮುವಾದಿಗಳು ಮತ್ತು ಮೂಲಭೂತವಾದಿಗಳ ಆಟ ನಿರಂತರವಾಗಿ ನಡೆಯುವುದಿಲ್ಲ. ಜನರು ವಿವಿಧ ಜಾತಿ ಮತ್ತು ಧರ್ಮಗಳ ಚೌಕಟ್ಟಿನಲ್ಲಿ ಸಿಲುಕಿದ್ದರೂ ದೈನಂದಿನ ಬದುಕಲ್ಲಿ ಇವೆಲ್ಲವುಗಳನ್ನು ಮೀರಿದವರೇ ಆಗಿರುತ್ತಾರೆ. ರಂಜಾನ್ ದರ್ಗಾ ‘ನೆನಪಾದಾಗಲೆಲ್ಲ ‘ ಸರಣಿಯ  20ನೇ ಕಂತಿನಲ್ಲಿ ತಮ್ಮ ಬಾಲ್ಯದ ನೆನಪುಗಳನ್ನು ಅನಾವರಣಗೊಳಿಸಿದ್ದಾರೆ.

Read More

ಬೋರ್ಡಿಂಗ್ ನಲ್ಲಿ ಸರ್ವಧರ್ಮದ ಸೌಹಾರ್ದ ಗೀತ

ನನ್ನ ಬಾಲ್ಯಕಾಲದಲ್ಲಿ ಎಲ್ಲ ಸಮುದಾಯಗಳಲ್ಲಿ ಇಂಥ ಸಂವೇದನಾಶೀಲ ಮತ್ತು ನ್ಯಾಯನೀತಿಯ ಹಿರಿಯರು ಇದ್ದರು. ತಪ್ಪುಗಳು ಘಟಿಸಬಾರದು ಎಂಬುದಕ್ಕೆ ‘ನಾಲ್ಕು ಜನ ಏನಂದಾರು?’ ಎಂದು ತಪ್ಪು ದಾರಿ ಹಿಡಿಯುವ ಲಕ್ಷಣವುಳ್ಳವರಿಗೆ ಅವರು ಪ್ರಶ್ನಿಸುತ್ತಿದ್ದರು. ಅಂದಿನ ಕಾಲದಲ್ಲಿ ಸಮಾಜವೇ ದೈವವಾಗಿತ್ತು. ಹಿರಿಯರೇ ನ್ಯಾಯಾಧೀಶರಾಗಿದ್ದರು. ಇತರ ಅನುಭವಿಗಳೇ ವಕೀಲರಾಗಿದ್ದರು.

Read More

ಅಮ್ಮನ ನಂಬಿಕೆ, ಔಷಧಿಗಳ ಮಹಿಮೆಯಲ್ಲಿ ಕಳೆದ ಬಾಲ್ಯ

ಬಡ ಗಿರಾಕಿಗಳಿಂದ ಹಿಡಿದು ಶ್ರೀಮಂತ ಗಿರಾಕಿಗಳವರೆಗೆ ಅವರ ಶಕ್ತ್ಯನುಸಾರ ಹಣ್ಣುಗಳನ್ನು ಕೊಳ್ಳುತ್ತಿದ್ದರು. ಹಣ್ಣುಗಳನ್ನು ಕೊಳ್ಳುವಾಗ ರೇಟಿಗೆ ಸಂಬಂಧಿಸಿದ ಕೊಸರಾಟ ಮಜಾ ಅನಿಸುತ್ತಿತ್ತು. ಗಿರಾಕಿಗಳು ತಮ್ಮ ಎಲ್ಲ ತರ್ಕ ಉಪಯೋಗಿಸಿ ಕಡಿಮೆ ಬೆಲೆಗೆ ಕೇಳುತ್ತಿದ್ದರು. ಆ ಹಣ್ಣುಗಳನ್ನು ತರುವ ಕಷ್ಟ, ಅದಕ್ಕಾಗಿ ಮಾಡಿದ ಖರ್ಚು, ಗಿರಾಕಿಗಳು ಕೇಳುವ ಬೆಲೆಗಿಂತ ಹೆಚ್ಚಾಗಿದೆ ಎಂಬುದನ್ನು ಅಜ್ಜಿ ವಿವರಿಸುತ್ತಿದ್ದಳು. ಇಷ್ಟಕ್ಕಾದರೆ ಕೊಡು ಎಂದು ಹೇಳುತ್ತ ಗಿರಾಕಿಗಳು ಮುಂದೆ ಹೋದಂತೆ ಮಾಡುತ್ತಿದ್ದರು. ಅಜ್ಜಿ ಕರೆಯದೆ ಇದ್ದಾಗ ಮತ್ತೆ ವಾಪಸ್ ಬರುತ್ತಿದ್ದರು.

Read More

ಪ್ರಾಣಿಲೋಕದ ಪ್ರೀತಿಸುಧೆಯ ನೆನಪುಗಳು

ನನ್ನ ತಂದೆ ಹಾವು ಹೊಡೆಯುವುದನ್ನು ಕೂಡ ಸಹಿಸಿಕೊಳ್ಳುತ್ತಿರಲಿಲ್ಲ. ಆದರೆ ಕಂದೂರಿ ಒಂದು ಶ್ರದ್ಧೆಯಾಗಿದ್ದರಿಂದ ಮನೆತನದಲ್ಲಿ ತಲೆತಲಾಂತರದಿಂದ ಬಂದ, ಅವರದೇ ನಂಬಿಕೆಯಿಂದ ಕೂಡಿದ ಧಾರ್ಮಿಕ ಕರ್ತವ್ಯ ನಿರ್ವಹಣೆಯನ್ನು ನಿಷ್ಠೆಯಿಂದ ಮಾಡುತ್ತಿದ್ದರು. ನನ್ನ ದಲಿತ ಮಿತ್ರ ತುಕಾರಾಮ ನನಗಿಂತ ಆರುವರ್ಷ ದೊಡ್ಡವರಿದ್ದರು. ನಾನು ನಾಲ್ಕನೆಯ ಇಯತ್ತೆ ಓದುವಾಗ ಅವರು ಮ್ಯಾಟ್ರಿಕ್ ಇದ್ದರು. ನಮ್ಮ ಮನೆಯ ಹತ್ತಿರದ ಹರಿಜನ ಬೋರ್ಡಿಂಗ್‌ನಲ್ಲಿ ಇದ್ದು ಓದುತ್ತಿದ್ದರು.

Read More

‘ಭಕ್ತರಿಗೆ ಭಾಗ್ಯ ಕೊಡು. ಮಕ್ಕಳಿಗೆ ಬಡತನ ಕೊಡು’

ಒಬ್ಬ ವ್ಯಕ್ತಿ ಹೀಗೆ ದೇವನಾಗಲು ಹೇಗೆ ಸಾಧ್ಯ ಎಂದು ವಿಚಾರವಾದಿಗಳಿಗೆ ಅನಿಸದೆ ಇರದು. ಜನಸಮುದಾಯಗಳ ಬಗ್ಗೆ ಅತೀವ ಕಾಳಜಿಯುಳ್ಳ ಸಾಮಾಜಿಕ ಮನುಷ್ಯ ಜನಪದರ ಕಣ್ಣಲ್ಲಿ ದೇವರಾಗಿ ಕಾಣುತ್ತಾನೆ. ತಮ್ಮ ಮೇಲೆ ನಿಷ್ಕಾಮ ಪ್ರೀತಿಯ ಮಳೆಗೆರೆಯುವವನನ್ನು ಜನಸಾಮಾನ್ಯರು ಹೀಗೆ ದೇವರಾಗಿಸುತ್ತಾರೆ. ಅಮೋಘಸಿದ್ಧನಂಥ ಅಖಂಡ ಪ್ರೀತಿಯೇ ದೈವೀ ಗುಣ. ಅಂಥ ಗುಣವುಳ್ಳವರೇ ದೇವರು. ಅದ್ದರಿಂದ ಇಂಥ ಸಿದ್ಧರ ಕುರಿತ ಡೊಳ್ಳಿನ ಪದಗಳೆಲ್ಲ “ನಮ್ಮಯ ದೇವರು ಬಂದಾರ ಬನ್ನಿರೇ” ಎಂದೇ ಪ್ರಾರಂಭವಾಗುತ್ತವೆ.
ರಂಜಾನ್ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ