Advertisement
ಗುರುಪ್ರಸಾದ್‌ ಕುರ್ತಕೋಟಿ

ಗುರುಪ್ರಸಾದ್‌ ಕುರ್ತಕೋಟಿ ಇಪ್ಪತ್ತು ವರ್ಷಗಳ ಕಾಲ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿ ಕೃಷಿಗಿಳಿದ ಉತ್ಸಾಹಿರೈತರು. "ಬೆಳೆಸಿರಿ" ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ.  "ಕೇಶಕ್ಷಾಮ" (ಹಾಸ್ಯ ಬರಹಗಳ ಸಂಕಲನ) ಸೇರಿ ಇವರ ಮೂರು ಕೃತಿಗಳು ಪ್ರಕಟಗೊಂಡಿವೆ.

ಅರುವತ್ತು ವರ್ಷಗಳ ರಾಜಕೀಯ ಅರಿವು

ನನಗೆ ಬಾಲ್ಯದಲ್ಲೇ ರಾಜಕೀಯ ಪ್ರಜ್ಞೆ ಮೂಡತೊಡಗಿತು. ಆಗ ಎಲ್ಲ ರಾಜಕೀಯ ಪಕ್ಷದವರು ತಮ್ಮ ಚುನಾವಣಾ ಚಿಹ್ನೆಗಳುಳ್ಳ ಬಿಲ್ಲೆಗಳನ್ನು ಚುನಾವಣಾ ಭಾಷಣದ ಸಂದರ್ಭದಲ್ಲಿ ಹಂಚುತ್ತಿದ್ದರು. ಕಾಂಗ್ರೆಸ್ ಚಿಹ್ನೆ ನೊಗಹೊತ್ತ ಜೋಡೆತ್ತು ಇದ್ದರೆ, ಜನಸಂಘದ್ದು ಅಲ್ಲಾವುದ್ದೀನ ಚಿರಾಗದಂಥ ದೀಪದ ಚಿಹ್ನೆಯಾಗಿತ್ತು. ಸ್ವತಂತ್ರ ಪಕ್ಷದ್ದು ನಕ್ಷತ್ರ ಆಗಿತ್ತು. ಈ ಪ್ಲ್ಯಾಸ್ಟಿಕ್ ಅಥವಾ ತಗಡಿನ ಬಿಲ್ಲೆಗಳನ್ನು ಸಂಗ್ರಹಿಸುವುದಕ್ಕಾಗಿ ನಾವು ಹುಡುಗರು ಎಲ್ಲ ಪಕ್ಷಗಳ ಚುನಾವಣಾ ಸಭೆಗಳಿಗೆ ಹೋಗುತ್ತಿದ್ದೆವು. ಅವರ ಭಾಷಣಗಳನ್ನು ನಾನಂತೂ ತದೇಕಚಿತ್ತದಿಂದ ಕೇಳುತ್ತಿದ್ದೆ.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ನೆನಪಾದಾಗಲೆಲ್ಲ ಸರಣಿಯ 40ನೆಯ ಕಂತು.

Read More

ರಾವಸಾಹೇಬ್ ಆದ ಪೊಲೀಸ್ ಅಧಿಕಾರಿ ಸಿದ್ರಾಮಪ್ಪ ಲಕ್ಷ್ಮೇಶ್ವರ

ಅಪರಾಧಿ ಬುಡಕಟ್ಟು ಎಂದು ಅಪಮಾನಕ್ಕೀಡಾದ ಯುವಕರಿಗೆ ಸಂಸ್ಕಾರ ನೀಡಿ ಸಭ್ಯ ಗೃಹಸ್ಥರನ್ನಾಗಿ ಮಾಡುವುದು ಬಹಳ ಕಷ್ಟದ ಕೆಲಸ. ಅದಕ್ಕಾಗಿ ಅಪರಿಮಿತವಾದ ತಾಳ್ಮೆ ಬೇಕು. ‘ಅವರಲ್ಲೂ ಮನುಷ್ಯತ್ವ ಇದೆ’ ಎಂಬ ಅಚಲವಾದ ನಂಬಿಕೆ ಬೇಕು. ದೈನಂದಿನ ಬದುಕಿನ ಎಲ್ಲ ಹಂತಗಳಲ್ಲಿ ಅವರನ್ನು ನಿರೀಕ್ಷಿಸುವ ಮೂಲಕ ಅವರನ್ನು ತಿದ್ದುವುದು. ಅವರಲ್ಲಿ ಹೊಸ ಕನಸುಗಳ ಸೃಷ್ಟಿ ಮಾಡುವುದು. ತಮಗೂ ಬೇರೆಯರಿಗೂ ಯಾವುದೇ ವ್ಯತ್ಯಾಸವಿಲ್ಲ ಎಂಬ ಆತ್ಮವಿಶ್ವಾಸ ಮೂಡಿಸುವುದು.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ಸರಣಿಯ 39ನೆಯ ಕಂತು .

Read More

ಬ್ರಿಟಿಷ್ ಹ್ಯಾಟ್ ಮತ್ತು ಗಾಂಧಿಟೋಪಿ

ಅವರು ಅಟವಳಕರ್ ಸಾಹೇಬರ ಹಾಗೆ ಪ್ಯಾಂಟು ಹ್ಯಾಟು ತೊಟ್ಟಿರಲಿಲ್ಲ. ನನ್ನ ತಂದೆಯ ಹಾಗೆ ಸಾದಾ ಧೋತರ, ಅಂಗಿ ಮತ್ತು ಟೋಪಿ ಧರಿಸಿದ್ದರು. ನನ್ನ ತಂದೆಯಂಥ ಸಾಮಾನ್ಯರೂ ದೊಡ್ಡ ಮನುಷ್ಯರಾಗಿರುತ್ತಾರೆ ಎಂಬುದು ನನಗೆ ಮೊದಲ ಬಾರಿಗೆ ಅನಿಸಿತು. ನನ್ನ ಜೀವನದಲ್ಲಿ ನಾನು ನೋಡಿದ ಮೊದಲ ದೊಡ್ಡವ್ಯಕ್ತಿ ಅವರಾಗಿದ್ದರು. ನಾನು ಒಂದನೆಯ ಇಯತ್ತೆಯ ವಿದ್ಯಾರ್ಥಿಯಾಗಿದ್ದಾಗಲೇ ಮನುಷ್ಯರು ಹೇಗೆ ಇರಬೇಕು ಎಂಬುದರ ಪಾಠವನ್ನು ಅವರನ್ನು ನೋಡುವುದರ ಮೂಲಕ ಕಲಿತೆ. ಇಂದಿಗೂ ಆ ಪಾಠವೇ ನನ್ನ ಬದುಕನ್ನು ರೂಪಿಸುತ್ತಿದೆ. ಹೀಗಾಗಿ ಅವರ ನೆನಪು ನನ್ನಲ್ಲಿ ಸದಾ ಹಸಿರಾಗಿದೆ.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ನೆನಪಾದಾಗಲೆಲ್ಲ ಸರಣಿಯ 38ನೆಯ ಕಂತು ಇಲ್ಲಿದೆ.

Read More

ನಾವು ಎತ್ತ ಸಾಗಿದ್ದೇವೆ?

ಈ ಜಾತ್ರೆಯಲ್ಲಿ ಬಡಿಗೆಗಳನ್ನು ಕೊಳ್ಳುವುದೊಂದು ವಿಶೇಷ. ಹಿಡಿಯಲು ಅನುಕೂಲವಾಗುವಷ್ಟು ದಪ್ಪನೆಯ ಬೆತ್ತದ ಬಡಿಗೆಗಳಿಗೆ ಕೇರಿನ ರಸದಿಂದ ಡಿಸೈನ್ ಮಾಡಿ ಸಿಂಗರಿಸುತ್ತಿದ್ದರು. ಈ ಜಾತ್ರೆಯಲ್ಲಿ ಮನೆಗೆ ಮತ್ತು ಒಕ್ಕಲುತನಕ್ಕೆ ಬೇಕಾದ ಎಲ್ಲ ವಸ್ತುಗಳು ಕೂಡ ಸಿಗುತ್ತಿದ್ದವು. ಎತ್ತುಗಳ ಆಲಂಕಾರಿಕ ವಸ್ತುಗಳು ರೈತರ ಮನಸೂರೆಗೊಳ್ಳುತ್ತಿದ್ದವು. ತಮ್ಮ ದನಕರುಗಳನ್ನು ಸಿಂಗರಿಸುವುದೆಂದರೆ ರೈತರಿಗೆ ಎಲ್ಲಿಲ್ಲದ ಖುಷಿ. ಅವರು ಆ ಪರಿಯಿಂದ ಕಾಳಜಿ ವಹಿಸಿ ತಮ್ಮ ಮಕ್ಕಳ ಸಿಂಗಾರ ಮಾಡಿದ್ದನ್ನು ನಾನು ಹಳ್ಳಿಯಲ್ಲಿ ನೋಡಲಿಲ್ಲ.
ರಂಜಾನ್ ದರ್ಗಾ ಬರೆಯುವ ಆತ್ಮಕತೆ

Read More

ಅವರ ಬದುಕು ಅರ್ಥವಾಗದೆ ನಮ್ಮ ಬದುಕು ವ್ಯರ್ಥ

ನನ್ನ ತಂದೆಯ ಕಡೆಯಿಂದ ಹಣ ಪಡೆದು ಏನೋ ತರಲು ನನ್ನ ತಾಯಿ ತಿಳಿಸುತ್ತಿದ್ದಳು. ನಾನು ಮರೆಗುಳಿಯಾಗಿದ್ದರಿಂದ ಅಂಗಿಯ ಕೆಳಗೆ ಗಂಟು ಹಾಕಿ ಕಳಿಸುತ್ತಿದ್ದಳು. ಶ್ರೀ ಸಿದ್ಧೇಶ್ವರ ರಸ್ತೆಯ ಮರಗಳ ಸಾಲಿನ ನೆರಳಲ್ಲಿ ನನ್ನ ತಂದೆಯ ಬಳಿ ಹೋಗುವ ಮೊದಲೆ ಅಂಗಿಯ ಗಂಟು ಹಾಕಿದ ವಿಚಾರವೇ ಮರೆತುಹೋಗುತ್ತಿತ್ತು! ಹೀಗೇಕೆ ಗಂಟು ಹಾಕಿಕೊಂಡಿರುವೆ ಎಂದು ನನಗೆ ನಾನೇ ಬೇಸರಪಟ್ಟುಕೊಂಡು ಅದನ್ನು ಬಿಚ್ಚುತ್ತಿದ್ದೆ. ನನ್ನ ತಂದೆ ಕೆಲಸ ಮಾಡುವ ಅಡತಿ ಅಂಗಡಿಗೆ ಹೋದಾಗ ಸೇಂಗಾ ಕೊಡಿಸಲು ಹೇಳುತ್ತಿದ್ದೆ.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ನೆನಪಾದಾಗಲೆಲ್ಲ ಸರಣಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ