Advertisement
ಎಸ್. ನಾಗಶ್ರೀ ಅಜಯ್

ನಾಗಶ್ರೀ ಎಂ.ಕಾಂ ಹಾಗೂ ICWAI Intermediate ಪದವೀಧರೆ. ಆಕಾಶವಾಣಿ ಎಫ್.ಎಂ ರೈನ್ಬೋದಲ್ಲಿ ರೇಡಿಯೋ ಜಾಕಿಯಾಗಿ ಕಳೆದ ಒಂಭತ್ತು ವರ್ಷಗಳಿಂದ ಹಾಗೂ ದೂರದರ್ಶನ ಚಂದನ ವಾಹಿನಿಯಲ್ಲಿ ನಿರೂಪಕಿಯಾಗಿ ಕಳೆದ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಸಾಹಿತ್ಯದ ಓದು ಹಾಗೂ ನಿರೂಪಣೆ ಅವರ ಆಸಕ್ತಿಯ ಕ್ಷೇತ್ರಗಳು.

ಸೋಕಿದ ಕಹಿಯನ್ನು ಒಳಗಿಳಿಸಿಕೊಳ್ಳದೆ, ಸಿಹಿಯನಷ್ಟೇ ಹಂಚುತ್ತಾ….

೫೭ ವರ್ಷಗಳ ತಮ್ಮ ಬದುಕಿನ ಪಯಣದ ಬಗ್ಗೆ ಅವರ ಮಾತಿನಲ್ಲಿ ಸಂತೃಪ್ತಿಯಿತ್ತು. ಸವಾಲು, ಸಮಸ್ಯೆ, ಸಣ್ಣತನ, ಮೋಸ, ರಾಜಕೀಯಗಳ ಬಗ್ಗೆ ಒಂದು ಶಬ್ದವನ್ನೂ ವ್ಯಯಿಸದೆ, ತಮ್ಮ ಜ್ಞಾನ, ಉದಾತ್ತ ವಿಚಾರಗಳು, ಸಕಾರಾತ್ಮಕ ಸಂಗತಿಗಳ ಬಗ್ಗೆ ನಿರರ್ಗಳವಾಗಿ ಮಾತನಾಡಿದರು. ಅಲ್ಲಿ ಕೃತಕತೆಗೆ, ಕೃತ್ರಿಮಕ್ಕೆ ಆಸ್ಪದವೇ ಇರಲಿಲ್ಲ. ಅವರೊಳಗಿನ ಶುದ್ಧ ಆನಂದವನ್ನು ಸುತ್ತ ಪಸರಿಸುವ ಬೆಳಕಿನ ನದಿಯಂತೆ ಹರಿದರು. ಮಾತಾಡಿದರು. ನೃತ್ಯ ಮಾಡಿದರು. ಅದೊಂದು ಅನಿರ್ವಚನೀಯ ಅನುಭವ. ಬದುಕನ್ನು ಸಂಭ್ರಮಿಸುವುದಕ್ಕೆ ಅವರಿಗೆ ಮಿಗಿಲಾದ ಉದಾಹರಣೆ ಸದ್ಯಕ್ಕೆ ನನ್ನ ಕಣ್ಣ ಮುಂದಿಲ್ಲ.
ಎಸ್. ನಾಗಶ್ರೀ ಅಜಯ್‌ ಬರೆಯುವ “ಲೋಕ ಏಕಾಂತ” ಅಂಕಣ

Read More

ಆಡಿಕೊಳ್ಳುವ ಬಾಯಿಗೊಂದು ಬೀಗ…

ಯಾವ ಯಾವ ಕಾರಣಕ್ಕೆ ದಾಂಪತ್ಯಗಳು ಮುರಿದು ಬೀಳ್ತಿವೆ ಎಂಬುದು ಚರ್ಚೆಗೆ ನಿಲುಕುವ ವಿಷಯವೇ ಅಲ್ಲ. ಈಗ ಪ್ರತಿಮನೆಯಲ್ಲೂ ವಿಚ್ಚೇದನದ ಕೇಸ್‌ಗಳು, ಹೆಣ್ಣು-ಗಂಡಿನ ವರ್ತನೆ, ಮನಃಸ್ಥಿತಿಯ ಕುರಿತಾದ ದೂರುಗಳು, ಸ್ತ್ರೀವಾದ, ನೊಂದಗಂಡಂದಿರ ಸಂಘದ ಅಳಲುಗಳು ಯಥೇಚ್ಛವಾಗಿವೆ. ಯಾರ ಪರವೂ, ವಿರುದ್ಧವೂ ನಿಲ್ಲಲಾಗದ, ನಿಂತು ಸಾಧಿಸಲಾಗದ ಸಿಕ್ಕಾಗಿ ಉಳಿದಿವೆ. ಆದರೆ ಮಕ್ಕಳು ಬೇಕು ಅಥವಾ ಬೇಡ ಎಂಬ ಕಾರಣಕ್ಕಾಗಿ ನಡೆಯುತ್ತಿರುವ ದಾಂಪತ್ಯ ಸಮರಗಳ ಬಗ್ಗೆ ಸ್ವಲ್ಪ ಗಮನಹರಿಸಬಹುದು.
ಎಸ್. ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ ನಿಮ್ಮ ಓದಿಗೆ

Read More

ಹಂಚಿ ಹಗೂರಾಗಿ, ಬೇಗುದಿಗಳನೆಲ್ಲ…

ಎಲ್ಲದರಲ್ಲೂ ಹುಳುಕು ಹುಡುಕುತ್ತಾ, ಗೋಳುಗುಟ್ಟುತ್ತಾ, ಆಪಾದಿಸುತ್ತಾ, ಕೊಂಕು ತೆಗೆಯುತ್ತಾ ಕೂರುವುದು ಸರಿಯಲ್ಲ. ಆದರೆ ಬದುಕೆಂದರೆ ಸಿಹಿ-ಕಹಿಗಳೆರಡೂ ಇರುವಾಗ, ಸಿಹಿಯ ಮಾತನ್ನೇ ಹಂಚುತ್ತಾ, ಕಹಿಯನ್ನೆಲ್ಲಾ ಒಳಗೇ ನುಂಗಿ ನುಂಗಿ ನಂಜುಂಡರಾಗುವುದು ನಮ್ಮ ಮೇಲೆ ನಾವೇ ಹೊರೆಸಿಕೊಳ್ಳುವ ಭಾರ. ಹತ್ತರಲ್ಲಿ ಒಂದು ಸಲವಾದರೂ ನೋವನ್ನು ನೋವಾಗಿ, ಅಳುವನ್ನು ಅಳುವಾಗಿ, ಸೋಲನ್ನು ಸೋಲಾಗಿ ತೋರಿಸಿಕೊಳ್ಳುವ ಸ್ವಾತಂತ್ರ್ಯ ನಾವು ರೂಢಿಸಿಕೊಳ್ಳಬೇಕಿದೆ.
ಎಸ್ ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

Read More

ಬಿಸಿಲು ಮೂಡುವ ಹೊತ್ತಿಗೆ, ಕೈಯಲ್ಲೊಂದು ಹೊತ್ತಿಗೆಯಿರಲಿ

ಇತ್ತೀಚೆಗೆ ಇತ್ತ ನಾಟಕವೂ ಅಲ್ಲದ, ಅತ್ತ ಸರಳ ಓದುವಿಕೆಯೂ ಅಲ್ಲದ ಮಧ್ಯಮಾರ್ಗದಲ್ಲಿ ನಿಂತ ಆಡಿಯೋ ಪುಸ್ತಕಗಳ ಭರಾಟೆಯೂ ಹೆಚ್ಚಿದೆ. ಕೆಲಸ ಮಾಡುತ್ತಲೇ ಕೇಳಿಸಿಕೊಳ್ಳಬಹುದು. ವಿಚಾರ ತಿಳಿಯಬಹುದು ಎಂಬ ಸಕಾರಾತ್ಮಕ ಅಂಶಗಳ ಬೆಂಬಲವಿದ್ದರೂ, ಏಕಾಂತದಲ್ಲಿ ಈ ಜಗದ ಪರಿವೆ ಇಲ್ಲದೆ, ಮನೋಲೋಕದಲ್ಲಿ ಪಾತ್ರವೇ ನಾವಾಗಿ ವಿಹರಿಸುವ ‘ಓದಿ’ನ ಆನಂದವನ್ನು ಎಂದಿಗೂ ಅವು ನೀಡಲಾರವು. ನಮ್ಮ ಕಲ್ಪನೆಯಲ್ಲಿ ಪಾತ್ರಗಳಿಗೆ ರೂಪ, ಬಣ್ಣ, ನಿಲುವು ಸಿಕ್ಕಂತೆಯೇ ಅವುಗಳಿಗೆ ಧ್ವನಿಯೂ ಲಭಿಸಿರುತ್ತದೆ.
ಎಸ್. ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

Read More

ಕೊಳ್ಳುವ ಭರದಲ್ಲಿ ವಿವೇಕವೇ ಕಳೆದುಹೋದರೆ!

ಮುವ್ವತ್ತರ ಸುಮಾರಿಗೆ ಕೆಲವು ಪ್ರಶ್ನೆಗಳನ್ನು ಕೇಳಿಕೊಳ್ಳಬೇಕಿದೆ. ಕಂಡಿದ್ದನ್ನೆಲ್ಲಾ ಕೊಳ್ಳುವ ಶಕ್ತಿ ನೀಡುವ ಖುಷಿ, ಸವಿಯಾದ ನೆನಪಿನ ಘಮ ಹೊತ್ತ ಅರಿವೆಗಳು ನೀಡುವ ಹಿತಾನುಭವಕ್ಕೆ ಸಾಟಿಯಾಗಬಲ್ಲದೆ? ಕೊಳ್ಳುತ್ತೇನೆಂಬುದು ನಮ್ಮ ಅಹಂಕಾರವನ್ನು ತಣಿಸಬಹುದು. ಆದರೆ ಅಕ್ಕರೆಯ ಸಕ್ಕರೆಯಾಗಬಹುದೆ? ಅರವತ್ತರ ಸುಮಾರಿಗೆ ಈ ಮಟ್ಟಗಿನ ಸರಳತೆ ರೂಢಿಸಿಕೊಳ್ಳೋಣ ಅನ್ನುವಂತಿಲ್ಲ. ಇದು ಖಂಡಿತ ವೈರಾಗ್ಯದ ದಾರಿಯಲ್ಲ. ವಿವೇಚನೆಯ ಹಾದಿ.
ಎಸ್ ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

Read More

ಜನಮತ

ಅಗಲಿದ ಕೆ.ವಿ. ತಿರುಮಲೇಶರು

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ಎಸ್. ನಾಗಶ್ರೀ ಅಜಯ್‌ ಬರೆಯುವ “ಲೋಕ ಏಕಾಂತ” ಅಂಕಣ

https://t.co/rpDaPzac8B
ಮಾಲತಿ ಶಶಿಧರ್ ಬರೆದ ಯುಗಾದಿ ಕವಿತೆ

https://t.co/n4GaK3gF0Q
ಪ್ರಕೃತಿ ಜೊತೆಗೆ ನಂಟಿರುವ ಯುಗಾದಿ ಹಬ್ಬ ಇಂದಿನ ದಿನಗಳಲ್ಲಿ ಹೇಗೆ ಆಚರಿಸಲ್ಪಡುತ್ತಿದೆ ಎನ್ನುವುದರ ಕುರಿತು ಬರೆದಿದ್ದಾರೆ ನಾಗರೇಖಾ ಗಾಂವಕರ

https://t.co/909ZgYhUEC

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಸಿಕಾಡ- ಕೀಟಲೋಕದ ಸಂಗೀತಸಾಮ್ರಾಟ

ಸಾಮಾನ್ಯವಾಗಿ ಹಾಡುವುದು ಗಂಡು ಸಿಕಾಡಗಳೇ; ಇವು ಹಲವಾರು ಹೆಣ್ಣು ಸಿಕಾಡಗಳ ಮಧ್ಯೆ ಒಂದು ಹೆಣ್ಣು ಸಿಕಾಡವನ್ನು ಆರಿಸಿ, ಅದಕ್ಕೆ ಸಂಗಾತಿಯಾಗೆಂದು ಆಹ್ವಾನವೀಯುವಾಗ ಹಾಡುವ ಹಾಡೇ ಬೇರೆ; ಆ...

Read More

ಬರಹ ಭಂಡಾರ