Advertisement
ಸುಮಾವೀಣಾ

ವೃತ್ತಿಯಿಂದ ಉಪನ್ಯಾಸಕಿ. ಹಲವಾರು ಪತ್ರಿಕೆಗಳಲ್ಲಿ ಇವರ ಲೇಖನಗಳು ಪ್ರಕಟವಾಗಿವೆ. ‘ನಲವಿನ ನಾಲಗೆ’ (ಪ್ರಬಂಧ ಸಂಕಲನ) ‘ಶೂರ್ಪನಖಿ ಅಲ್ಲ ಚಂದ್ರನಖಿ’(ನಾಟಕ) ‘ಮನಸ್ಸು ಕನ್ನಡಿ’ ಪ್ರಕಟಿತ ಕೃತಿಗಳು. ‘ಲೇಖ ಮಲ್ಲಿಕಾ’,’ವಿಚಾರ ಸಿಂಧು’  ಪುಸ್ತಕಗಳು ಅಚ್ಚಿನಲ್ಲಿವೆ.

ಕಣ್ಣೊರಿಸಿಕೊಂಡ ಪುಟ್ಟ ದೇವರು…

ತರಗತಿಯಿಂದ ತರಗತಿಗೆ ಹಾರಿ ಅದೇ ಶಾಲೆಯಲ್ಲಿ ಕೂತವರಿಗೆ ಒಂದು ರೂಮಿನ ಬದಲಾವಣೆ ಅಷ್ಟೇ.. ತರಗತಿಯಿಂದ ಉಸಿರು ಬಿಗಿ ಹಿಡಿದು ಹಾರಿ ಜಿಗಿದು ಮತ್ತೆಲ್ಲೊ ಮತ್ಯಾವ ಶಾಲೆ, ಕಾಲೇಜಿನ ರೂಮಿನಲ್ಲೊ ಇಲ್ಲಿ ಕಿತ್ತುಕೊಂಡು ಬಂದ ಓದಿನ ಗಿಡವನ್ನು ಅಲ್ಲಿ ನೆಟ್ಟು ಪೋಷಿಸಬೇಕು. ಕಿತ್ತು ನಡೆಯುವ ಹೊತ್ತಲ್ಲಿ ಗಂಟಲಿಗೆ ಬಂದು ಆತು ಕೂತುಕೊಳ್ಳುತ್ತಲ್ಲಾ ಆ ದುಃಖ ಮತ್ತು ಅದನ್ನು ನುಂಗಿ ಸಾಯಿಸಿ ಸಾಯಿಸಿ ನಗಬೇಕಲ್ಲ ಆ ಸಂಕಟ, ಮತ್ತು ಪಿಳಿಪಿಳಿ ಕಣ್ಣುಗಳಿಂದ ಬಂದೇ ಬಿಡುತ್ತಲ್ಲ ಆ ಪವಿತ್ರ ಕಣ್ಣೀರು.. ಓ ಎಂತ ಪಾಪಿಷ್ಟ ಗಳಿಗೆ ಅದು.
ಸದಾಶಿವ ಸೊರಟೂರು ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ…

“ಸುರಿದ ಹನಿಗೆ ದಾರಿಗಳು ಅಳಿಸಿಹೋಗಿರಬಹುದು
ಹೊಸ ಹೆಜ್ಜೆಗಳನು
ಕಿತ್ತಿಡು
ಹೊಸ ದಾರಿಯಲಿ ಹೊಸದೆ ಇರುತ್ತದೆ
ಮಳೆಗೆ ನಿನ್ನದೊಂದು‌ ಧನ್ಯವಾದ ಹೇಳು..”-

Read More

ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ

“ಹಗಲಿಗೊಂದು ದನಿಯಿದೆ
ಇರುಳಿಗೊಂದು ನರಳಿಕೆಯಿದೆ
ಉರುಳುರುಳುವಾಗ
ಶಬ್ದಗಳು ಕಳಚಿ ಕಳಚಿ ಬಿದ್ದು
ನಡೆಯುವ ಹಾದಿಯಲ್ಲಿ ಬಿದ್ದು
ಅಂಗಾಲು ಚುಚ್ಚುತ್ತವೆ..”- ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ

Read More

ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ

“ಮೊಳೆವ ಬೀಜಕ್ಕೂ ಇದೆ
ಒಂದು ಬಿಕ್ಕಳಿಕೆ
ಚಿಗುರ ತುಳಿಸಿಕೊಂಡ ಎಳೆ
ಎಸಳಿಗೂ ಇದೆ ನೋವ
ಕದಲಿಕೆ
ಹಾದಿ ಬದಿಯಲಿ ಬಿದ್ದ ಈ ಶಬ್ದಗಳು
ಎಷ್ಟೊಂದು ಅನಾಥ..”- ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ

Read More

ಮಳೆ ದೇವರು ಬರೆದ ಕವಿತೆ..

ಮಳೆಯು ಮಳೆಗಾಲವನು ತೊರೆದಿದೆ. ಈಗ ಎಲ್ಲಾ ತಿಂಗಳಲ್ಲಿ ಆತ ಒಮ್ಮೆಯಾದರೂ ಇಣುಕುವ ಅತಿಥಿ. ಅಲ್ಲೆಲ್ಲೊ ಸಮುದ್ರದ ಮೇಲೆ ಆಗಾಗ್ಗೆ ನೂರೆಂಟು ಭಾರಗಳು. ಮಳೆಗೆ ಅಲ್ಲಲ್ಲಿ ಎಕ್ಸ್ಟ್ರಾ ಡ್ಯೂಟಿ. ತರಗತಿಯಲ್ಲಿ ನೋಡಿ ಮಕ್ಕಳೇ ಕಾಲಗಳು ಮೂರು, ಮಳೆಗಾಲ, ಚಳಿಗಾಲ, ಬೇಸಿಗೆಕಾಲ ಅಂದೆ. ಒಬ್ಬ ಪೋರ ಕಿಕೀಕ್ ಅಂತ ನಕ್ಕು ಹೇಳಿದ “ಬಿಸಿಲು ಇದ್ದಾಗ ಬರುತ್ತೆ ಚಳಿ‌ ಇದ್ದಾಗಲೂ ಬರುತ್ತಲ್ಲ” ಅಂತ. “ಹೌದು ಮಳೆಗೆ ಈಗ ವಿಶೇಷ ಸೀಸನ್ ಪಾಸ್ ಸಿಕ್ಕಿದೆ” ಎಂದೆ. ಹೇಳು ಮಳೆಯೆ ಮಕ್ಕಳ ಮುಂದೆ ಹೀಗೆ ನೀನು ಅವಮಾನಿಸುವುದು ಸರಿಯೇ..?
ಸದಾಶಿವ್ ಸೊರಟೂರು ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನಮ್ಮನ್ನೂ ಮನುಷ್ಯರಂತೆ ಕಾಣಿ: ಈರಣ್ಣ ಬೆಂಗಾಲಿ ಕಾದಂಬರಿಯ ಪುಟಗಳು

“ನಾವೂ ಮನುಷ್ಯರೇ, ದಯಮಾಡಿ ನೀವು ನಮ್ಮನ್ನು ಮನುಷ್ಯರಂತೆ ಕಾಣಿ” ಎಂದು ಕೇಳಿಕೊಳ್ಳುತ್ತಾನೆ. ಇದನ್ನು ಕೇಳಿದ ಯಜಮಾನನಿಗೆ ತೀವ್ರ ಮುಜುಗರವಾಗುತ್ತದೆ. ಒಳ್ಳೆಯವರು, ಕೆಟ್ಟವರು ಎಂಬುದು ಅವರ ಜಾತಿಯಿಂದಲ್ಲ, ಬದಲಾಗಿ…

Read More

ಬರಹ ಭಂಡಾರ