Advertisement
ಗುರುಪ್ರಸಾದ್‌ ಕುರ್ತಕೋಟಿ

ಗುರುಪ್ರಸಾದ್‌ ಕುರ್ತಕೋಟಿ ಇಪ್ಪತ್ತು ವರ್ಷಗಳ ಕಾಲ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿ ಕೃಷಿಗಿಳಿದ ಉತ್ಸಾಹಿರೈತರು. "ಬೆಳೆಸಿರಿ" ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ.  "ಕೇಶಕ್ಷಾಮ" (ಹಾಸ್ಯ ಬರಹಗಳ ಸಂಕಲನ) ಸೇರಿ ಇವರ ಮೂರು ಕೃತಿಗಳು ಪ್ರಕಟಗೊಂಡಿವೆ.

ಆನೆಗಳಿಗಾಗಿ ಕಾಡಿನಲ್ಲಿ ಮೇವು ಬೆಳೆದರೇ..

ವಲಯ ಅರಣ್ಯಾಧಿಕಾರಿಗಳಿಗೆ ಕರೆ ಮಾಡಿ ಹೇಳಿದೆ. `ಬೀಜ ರೆಡಿಯಾಗಿದೆ. ಯಾವಾಗ ಬರುತ್ತೀರಿ?’ ಅವರೂ ಉತ್ಸುಕತೆಯಲ್ಲಿದ್ದರು. `ನಾಳೆಯೇ ಬರುತ್ತೇವೆ’ ಎಂದರು. ಹೇಳಿದ ಮಾತಿನಂತೆ ಅವರು ಮರುದಿನ ಹತ್ತು ಗಂಟೆಗೆ ಸರಿಯಾಗಿ ಉಪವಲಯ ಅರಣ್ಯಾಧಿಕಾರಿ ಅಲ್ಲದೆ ಇತರ ಆರು ಮಂದಿ ಸಿಬ್ಬಂದಿಯವರೊಂದಿಗೆ ಮನೆಗೆ ಬಂದರು. ನಾನು ಎಲ್ಲರಿಗೂ ಟೀ ಮತ್ತು ಬಿಸಿಬಿಸಿ ಗೆಣಸಿನ ಪೋಡಿ ಮಾಡಿ ಕೊಟ್ಟೆ. ಕಾಡಿನಲ್ಲಿ ಬಾಯಾರಿಕೆಯಾದರೆ ಎಂದು 5 ಲೀಟರ್ ಕ್ಯಾನ್‌ನಲ್ಲಿ ಮಜ್ಜಿಗೆ ತುಂಬಿಸಿಕೊಂಡೆ. ನಂತರ ನಾವೆಲ್ಲರೂ ನಮ್ಮ ಮನೆಯಿಂದ ಮೇಲೆ ಇರುವ ರಕ್ಷಿತಾರಣ್ಯಕ್ಕೆ ಕತ್ತಿ, ಕೋಲು, ಬೀಜ ಹಿಡಿದು ಪ್ರವೇಶಿಸಿದೆವು.
ಸಹನಾ ಕಾಂತಬೈಲು ಅವರ ‘ಆನೆ ಸಾಕಲು ಹೊರಟವಳು’ ಪುಸ್ತಕದ ಮತ್ತೊಂದು ಬರಹ ಇಲ್ಲಿದೆ.

Read More

ಮತ್ತೆಂದೂ ಅವಳು ಬರೆಯುವ ಸಾಹಸಕ್ಕೆ ಇಳಿಯಲಿಲ್ಲ

ನನ್ನ ಮದುವೆಯಾಗಿ ಕೆಲವು ವರ್ಷಗಳ ನಂತರ ದೊಡ್ಡ ಜಮೀನ್ದಾರನೊಂದಿಗೆ ಅವಳ ಮದುವೆಯಾಯ್ತು. ಅವಳ ಗಂಡನಿಗೆ ಅವಳು ಹೊರಗೆ ಹೋಗಿ ಹಾಡುವುದು ಇಷ್ಟವಿರಲಿಲ್ಲ. `ನೀನು ನಮ್ಮ ಮಕ್ಕಳಿಗೆ ಹಾಡು ಕಲಿಸಿದರೆ ಬೇಕಾದಷ್ಟಾಯಿತು. ಸಾರ್ವಜನಿಕ ಪ್ರದರ್ಶನ ಬೇಡ. ಹೊರಗೆ ಹೋದರೆ ತೋಟದ ಉಸ್ತುವಾರಿ, ಮನೆ ವಾರ್ತೆ ನೋಡಿಕೊಳ್ಳುವವರು ಯಾರು? ಊರ ಜನರಿಗೆ ಸಂಗೀತ ಹೇಳಲಿಕ್ಕೆ ಅಲ್ಲ ನಾನು ನಿನ್ನನ್ನು ಮದುವೆಯಾದದ್ದು’ ಎಂದಿದ್ದ. ಹಾಡುಹಕ್ಕಿಯ ರೆಕ್ಕೆ ಅಲ್ಲಿಗೆ ಮುರಿಯಿತು ಎಂದು ಬೇರೆ ಹೇಳಬೇಕಾಗಿಲ್ಲ ತಾನೆ?
ಸಹನಾ ಕಾಂತಬೈಲು ಅವರ ‘ಆನೆ ಸಾಕಲು ಹೊರಟವಳು’ ಪುಸ್ತಕದ ಇನ್ನೊಂದು ಪ್ರಬಂಧ ಇಲ್ಲಿದೆ.

Read More

ನಾನೂ ವಿದ್ಯುತ್ ತಯಾರಿಸಿದೆ!

ನನಗಿಂತ ದೊಡ್ಡದಾದ ರುಬ್ಬುವ ಕಲ್ಲಿನ ಮುಂದೆ ಕುಳಿತು ಬೆಳಗಿನ ಉಪಾಹಾರಕ್ಕೆ, ಮಧ್ಯಾಹ್ನದ ಭೋಜನಕ್ಕೆ ಮತ್ತೆ ರಾತ್ರಿಯ ಊಟಕ್ಕೆ ರುಬ್ಬುವ ಕೆಲಸ.  ಏಳು-ಎಂಟು ಕೂಲಿಯಾಳುಗಳು ದಿನಾ ಊಟಕ್ಕೆ. ಅಷ್ಟು ಮಾತ್ರವಲ್ಲ ನನ್ನ ತವರಿನ ಕಡೆಯಿಂದ ಬಂದ ಇಬ್ಬರು ಕೆಲಸಗಾರರು ಮನೆಯಲ್ಲೇ ಇರುತ್ತಿದ್ದರು. ಅವರಿಗೆ ರಾತ್ರಿಯೂ ಬೇಯಿಸಿ ಹಾಕುವ ಕೆಲಸ ನನ್ನದಾಗಿತ್ತು. ನೆಂಟರು ಬಂದರೆ ಕೇಳುವುದೇ ಬೇಡ. ಒಟ್ಟಿನಲ್ಲಿ ನನ್ನ ಬದುಕೇ ರುಬ್ಬುವುದರಲ್ಲಿ ಕಳೆದುಹೋಗುತ್ತಿತ್ತು. `ಇದರಿಂದ ನನಗೆ ಬಿಡುಗಡೆ ಯಾವಾಗ? ಎಂದು ಯೋಚಿಸುವಾಗ ವಿದ್ಯುತ್ ತಯಾರಿಸುವ ಯೋಚನೆ ಮನಸ್ಸಿಗೆ ಬಂತು. ಸಹನಾ ಕಾಂತಬೈಲು ಅವರ ‘ಆನೆ ಸಾಕಲು ಹೊರಟವಳು’ ಪುಸ್ತಕದ ಪ್ರಬಂಧ  ಇಲ್ಲಿದೆ. 

Read More

ಒಲೆ ಬದಲಾದರೂ ಉರಿ ಬದಲಾಗದು!

ಇದು ಅವಳ ಒಬ್ಬಳ ಕತೆಯಲ್ಲ ಮನೆ ಮನೆ ಕತೆ. ಹೊರಗೆ ಹೋಗಬೇಕಾದರೆ ಹೆಚ್ಚಿನ ಎಲ್ಲ ಹೆಂಗಸರಿಗೂ ಈ ಜವಾಬ್ದಾರಿ ಹೆಗಲಿಗೇರಿರುತ್ತದೆ. ನನ್ನಂಥ ಜಮೀನ್ದಾರ ಮಹಿಳೆಯರಿಗೆ ಇನ್ನೂ ಕಷ್ಟ. ಅವಳಿಗೆ ಗಂಡ, ಮಕ್ಕಳಿಗೆ ಮಾತ್ರ ಅಲ್ಲ ತೋಟದ ಕೆಲಸಕ್ಕೆ ಬರುವ ಕಾರ್ಮಿಕರಿಗೂ ಅಡುಗೆ ಮಾಡಬೇಕಾದ ಪರಿಸ್ಥಿತಿ. ನಾನು ನಾಳೆ ಹೊರಗೆ ಹೋಗಲು ಇದೆಯೆಂದಾದರೆ ಇಂದೇ ರಾತ್ರಿ ಉಗಿಯಲ್ಲಿ ಬೇಯಿಸಿ ಮಾಡುವ ಪುಂಡಿ, ಕಡುಬು, ಪತ್ರೊಡೆಯಂತಹ ತಿಂಡಿಯನ್ನು ಮಾಡಿ ಇಡುತ್ತೇನೆ. ಯಾಕೆ ಹೀಗೆ? ಒಂದು ದಿನದ ಮಟ್ಟಿಗಾದರೂ ಅಡುಗೆ ಮನೆ ಹೊಣೆಯನ್ನು ಗಂಡಿಗೆ ಹೊತ್ತುಕೊಳ್ಳಲು ಆಗುವುದಿಲ್ಲವಾ?
ಸಹನಾ ಕಾಂತಬೈಲು ಅವರು ಬರೆದ ‘ಆನೆ ಸಾಕಲು ಹೊರಟವಳು’ ಪುಸ್ತಕದ ಮತ್ತೊಂದು ಅಧ್ಯಾಯ ಇಲ್ಲಿದೆ.

Read More

ಹೋರಿಕರುವಿನ ವಿದಾಯ ಪ್ರಸಂಗ

ಇಂದು ಬೇಸಾಯ ಮಾಡುವುದನ್ನು ಎಲ್ಲರೂ ನಿಲ್ಲಿಸಿದ್ದರಿಂದ ಹೋರಿ ಯಾರಿಗೂಬೇಡ. ಗದ್ದೆ ಮಾಡುವವರೂ ಯಂತ್ರಕ್ಕೆ ಶರಣಾಗಿದ್ದಾರೆ. ಗೊಬ್ಬರಕ್ಕಾಗಿ ಸಾಕುವುದೂ ವ್ಯರ್ಥ. ಏಕೆಂದರೆ, ಇರುವ ಹಸುಗಳ ಗೊಬ್ಬರವನ್ನೇ ತೆಗೆಯಲು ಕೂಲಿಯಾಳುಗಳ ಕೊರತೆ ಇದೆ. ಕೂಲಿಯವರು ಸಿಕ್ಕಿದರೂ ಸಂಬಳ ಕೊಡಲು ಪೂರೈಸಬೇಕಲ್ಲ? ವೆಚ್ಚ ಹೆಚ್ಚಾಗಿ ಉಳಿತಾಯ ಇಲ್ಲದ ಹೋರಿ ಸಾಕುವ ಕೆಲಸ ಯಾರಿಗೆ ಬೇಕು? ಎಲ್ಲ ಹೈನುಗಾರರ ಮನೆಗೆ ಹೋಗಿ ನೋಡಿದರೆ ಅಲ್ಲಿ ಹಸು ಮತ್ತು ಹೆಣ್ಣು ಕರುಗಳು ಮಾತ್ರ ಇರುತ್ತವೆ!  ಹಾಗಾದರೆ, ಅವರಲ್ಲಿ ಗಂಡು ಕರು ಹುಟ್ಟುವುದೇ ಇಲ್ಲವೇ? ಹುಟ್ಟಿದರೆ ಅವರು ಏನು ಮಾಡುತ್ತಾರೆ ? ಸಹನಾ ಕಾಂತಬೈಲು ಅವರು ಬರೆದ ಆನೆ ಸಾಕಲು ಹೊರಟವಳು ಪುಸ್ತಕದ  ಕೆಲವು ಅಧ್ಯಾಯಗಳು ಪ್ರತೀ ಮಂಗಳವಾರ ಪ್ರಕಟವಾಗಲಿದೆ. ಮೊದಲ ಅಧ್ಯಾಯ ಇಲ್ಲಿದೆ. 

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ