Advertisement
ಆಶಾ ಜಗದೀಶ್

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಶಿಕ್ಷಕಿ. ಕತೆ, ಕವಿತೆ, ಪ್ರಬಂಧ ಬರೆಯುವುದು ಇವರ ಆಸಕ್ತಿಯ ವಿಷಯ.ಮೊದಲ ಕವನ ಸಂಕಲನ "ಮೌನ ತಂಬೂರಿ."

ಬೆಚ್ಚಿ ಬೀಳಿಸಿದ ದೆವ್ವಗಳ ಕಥೆಗಳು: ಸುಧಾ ಆಡುಕಳ ಅಂಕಣ

ಸುಮಾರು ಹೊತ್ತಿನಲ್ಲಿ ಮೊದಲು ಮಾತನಾಡಿಸಿದ ಹೆಂಗಸೇ ಹೊರಬಂದು, “ಬನ್ನಿ ಒಳಗೆ. ನಿಮಗೆ ಬಿಸಿ, ಬಿಸಿ ಚಾ ಕೊಡುವೆ.” ಎಂದಳಾದರೂ ಮಾತು ಮುಗಿಸುವಾಗ ಕಣ್ಣು ಕೆಂಡದಂತೆ ಹೊಳೆಯುತ್ತಿತ್ತು. ನಡುಮನೆಯಲ್ಲಿರುವ ಎರಡು ಕತ್ತಲೆಯ ಕೋಣೆಯನ್ನು ದಾಟಿ ಅಡುಗೆಮನೆಗೆ ಕಾಲಿಟ್ಟಿದ್ದೇ ಸೋಮಣ್ಣ ಬೆಚ್ಚಿಬಿದ್ದ! ಕಟ್ಟಿಗೆಯ ಒಲೆಯಲ್ಲಿ ಸೌದೆಯ ಬದಲು ತನ್ನ ಕಾಲನ್ನೇ ಒಟ್ಟಿ ಅಲ್ಲವಳ ಸೊಸೆ ಹಾಲು ಕಾಯಿಸುತ್ತಿದ್ದಳು!
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಹೆಬ್ಬುಲಿಯೊಂದು ಡಮಾರ್!!: ಸುಧಾ ಆಡುಕಳ ಅಂಕಣ

ಶಾಲೆಗೆ ಹೋದರೂ ನೀಲಿಗೆ ಹುಲಿಯದೇ ಮುಖ ನೆನಪಿಗೆ ಬರುತ್ತಿತ್ತು. ತನ್ನ ಸಹಪಾಟಿಗಳಿಗೂ ಹುಲಿಯನ್ನು ತೋರಿಸಬೇಕು ಅನಿಸತೊಡಗಿತು. ಮಾಸ್ತ್ರು ಪಾಠ ಮಾಡುತ್ತಿರುವಂತೆಯೇ ಪಿಸಪಿಸನೆ ಆಚೀಚೆಗೆ ಕುಳಿತವರಿಗೆ ವಿಷಯ ಮುಟ್ಟಿಸಿದಳು. ಇಂದೇನು? ಯಾವ ಮಕ್ಕಳೂ ಪಾಠದೆಡೆಗೆ ಗಮನವನ್ನೇ ನೀಡುತ್ತಿಲ್ಲವೆಂದು ಕ್ಷಣಕಾಲ ದಿಟ್ಟಿಸಿದ ಗೌಡಾ ಮಾಸ್ತ್ರು ಸುದ್ದಿಮೂಲವನ್ನು ಪತ್ತೆ ಹಚ್ಚಿಯೇಬಿಟ್ಟರು. ನೀಲಿಯನ್ನು ನಿಲ್ಲಿಸಿ ವಿಷಯ ಕೇಳಿದ್ದೇ ತಡ ಪಟಪಟನೆ ಪಟಾಕಿ ಸರಕ್ಕೆ ಬೆಂಕಿ ಕೊಟ್ಟಂತೆ ಎಲ್ಲ ಕತೆಯನ್ನು ಹೇಳಿಬಿಟ್ಟಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಸುಧಾ ಆಡುಕಳ ಹೊಸ ಅಂಕಣ “ಹೊಳೆಸಾಲು” ಇಂದಿನಿಂದ ಆರಂಭ

ಪ್ರಯಾಣದ ಕನಸಿನಿಂದ ಥಟ್ಟನೆ ವಾಸ್ತವಕ್ಕಿಳಿದ ನೀಲಿ ನೀರಿನಾಳದಲ್ಲಿ ಹೊಳೆಯುತ್ತಿರುವ ನಾಣ್ಯಗಳನ್ನು ನೋಡುತ್ತಾ ನಡುಹೊಳೆಯಲ್ಲಿ ನಿಂತುಬಿಟ್ಟಳು. ಅವಳಿಗೀಗ ಇರುವುದು ಎರಡೇ ಅವಕಾಶಗಳು. ಒಂದೋ ದುಡ್ಡನ್ನು ಹೊಳೆಯಲ್ಲಿಯೇ ಬಿಟ್ಟು ಶಾಲೆಗೆ ಹೋಗುವುದು, ಇಲ್ಲವೆಂದರೆ ಅಂಗಿ ಒದ್ದೆಯಾಗುವ ಪರಿವೆಯಿಲ್ಲದೇ ಹೊಳೆಯೊಳಗೆ ಒಮ್ಮೆ ಮುಳುಗಿ ದುಡ್ಡನ್ನು ಹೆಕ್ಕಿಕೊಳ್ಳುವುದು. ಒದ್ದೆಯಾದ ಅಂಗಿಯನ್ನು ಬದಲಿಸಿ ಬರಲು ಮನೆಗೆ ಹೋಗುವಷ್ಟು ಸಮಯವಿಲ್ಲ.
ಸುಧಾ ಆಡುಕಳ ಹೊಸ ಅಂಕಣ “ಹೊಳೆಸಾಲು” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

Read More

ಪ್ರಪಂಚದಷ್ಟೇ ಪುರಾತನವಾದ ಪ್ರಶ್ನೆಗಳಿಗೆ ಉತ್ತರದ ಹುಡುಕಾಟ: ಸುಧಾ ಆಡುಕಳ ಮಾತುಗಳು

ಅನೇಕ ದಶಕಗಳ ಹಿಂದೆ ಹೀಗೆ ಬಿಸಿಲಲ್ಲಿ ಕುಳಿತು ಮಾತನಾಡಿದ ಬಸುರಿಯರ ಮಕ್ಕಳೀಗ ಸಮಾಜವೆಂಬ ಇರುವೆ ಸಾಲಿನ ಭಾಗವಾಗಿಯೂ, ತಮ್ಮದೇ ಸ್ವಾತಂತ್ರ್ಯದ ಹಾದಿಯನ್ನು ಹುಡುಕಿಕೊಂಡು, ತಾವಿರುವೆಡೆಯಲ್ಲೆಲ್ಲಾ ಪ್ರೀತಿಯ ಧಾರೆಯನ್ನೇ ಹಂಚುತ್ತಾ ಸಾಗಿದ್ದಾರೆ. ಒಡಲೊಳಗೆ ಮಗುವನ್ನು ಹೊತ್ತ ತಾಯಂದಿರ ಬೇಗೆ ಮಾತ್ರ ಎಷ್ಟೇ ಕಾಲ ಸರಿದರೂ ಹೀಗೆಯೇ ಮುಂದುವರೆಯುವುದೇನೋ ಎಂದು ಅನಿಸುತ್ತಲೇ ಇರುತ್ತದೆ. ಹಾಗೆ ನನ್ನ ಮಗುವಿಗೆ ನಾನೇನಾದರೂ ಕಥೆಯನ್ನು ಹೇಳುವಂತಿದ್ದರೆ ಮೇಲೆ ಬರೆದ ಕಥೆಯನ್ನು ಹೇಳುತ್ತಿದ್ದೆ ಮತ್ತು ಕೊನೆಯಲ್ಲಿ ಅವಳಂತೆಯೇ ಒಂದು ವಾಕ್ಯವನ್ನು ಸೇರಿಸುತ್ತಿದ್ದೆ, ಆ ಇಬ್ಬರಲ್ಲಿ ನಾನೂ ಒಬ್ಬಳಾಗಿದ್ದೆ ಎಂದು.
ಸುಧಾ ಆಡುಕಳ ಅನುವಾದಿಸಿದ ಒರಿಯಾನ ಫಲಾಚಿ ಕಾದಂಬರಿ “ಎಂದೂ ಹುಟ್ಟದ ಮಗುವಿಗೆ ಪತ್ರ”ಕ್ಕೆ ಬರೆದ ಅವರ ಮಾತುಗಳು ಇಲ್ಲಿವೆ

Read More

ನರ್ಗೆಸ್ ಮೊಹಮ್ಮದಿಗೆ ನೊಬೆಲ್ ಶಾಂತಿ ಪುರಸ್ಕಾರ: ಸುಧಾ ಆಡುಕಳ ಬರಹ

ಹಿಜಾಬ್ ಧಾರಣೆಯ ವಿರುದ್ಧ ಇರಾನಿ ಮಹಿಳೆಯರೆಲ್ಲರೂ ಬಂಡೆದ್ದಿರುವ ವಿಷಯ ಇಡಿಯ ಜಗತ್ತಿಗೆ ತಿಳಿದಿದೆ. ಮೊಹಮ್ಮದಿ ಈ ಹೋರಾಟದ ಮುಂಚೂಣಿಯಲ್ಲಿರುವವರು. ‘ಮಹಿಳೆ – ಜೀವನ – ಸ್ವಾತಂತ್ರ್ಯ’ ಎಂಬ ಮೂರು ವಿಷಯಗಳನ್ನು ಮುಂದಿಟ್ಟುಕೊಂಡು ತಮ್ಮ ಹೋರಾಟವನ್ನು ಸಂಘಟಿಸಿದರು. ಮಹಿಳೆಯರ ಮೇಲೆ ನಡೆಯುತ್ತಿರುವ ಎಲ್ಲ ರೀತಿಯ ದೌರ್ಜನ್ಯಗಳು ನಿಲ್ಲಬೇಕು.
ಈ ಸಲದ ನೊಬೆಲ್‌ ಶಾಂತಿ ಪುರಸ್ಕೃತ ನರ್ಗೆಸ್‌ ಮೊಹಮ್ಮದಿ ಅವರ ಕುರಿತು ಸುಧಾ ಆಡುಕಳ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ