Advertisement
ಗುರುಪ್ರಸಾದ್‌ ಕುರ್ತಕೋಟಿ

ಗುರುಪ್ರಸಾದ್‌ ಕುರ್ತಕೋಟಿ ಇಪ್ಪತ್ತು ವರ್ಷಗಳ ಕಾಲ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿ ಕೃಷಿಗಿಳಿದ ಉತ್ಸಾಹಿರೈತರು. "ಬೆಳೆಸಿರಿ" ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ.  "ಕೇಶಕ್ಷಾಮ" (ಹಾಸ್ಯ ಬರಹಗಳ ಸಂಕಲನ) ಸೇರಿ ಇವರ ಮೂರು ಕೃತಿಗಳು ಪ್ರಕಟಗೊಂಡಿವೆ.

ಅರೋರಾ ಬೋರಿಯಾಲಿಸ್: ನರ್ತಿಸುವ ಬೆಳಕಿನ ನೂರೆಂಟು ಮೋಹಕ ರೂಪ

ಹಿಂದಿನ ಸಾಲಿನಲ್ಲಿ ಮಲಗಿದ್ದ ಶ್ವೇತಾ ಜೋರಾಗಿ ಭುಜ ಅಲುಗಿಸಿ ನನ್ನನೆಬ್ಬಿಸುತ್ತಿದ್ದಾಳೆ. ಅವಳಿಗೆ ಗಂಟಲುಬ್ಬಿ ಮಾತೇ ಹೊರಡುತ್ತಿಲ್ಲ. ಕೈಸನ್ನೆ ಮಾಡಿ ಕಿಟಕಿಯ ಪರದೆ ಎತ್ತು ಎನ್ನುತ್ತಿದ್ದಾಳೆ. ಪೈಲಟ್ ಕಡೆ ಬೆರಳು ತೋರಿಸುತ್ತಿದ್ದಾಳೆ. ನನಗೋ ಎದೆ ಧಸಕ್ ಎಂದಿತು. ಅವಳ ಮುಖದ ತುಂಬಾ ಇದ್ದ ನಗು ನೋಡಿ ವಿಮಾನ ಅಪಾಯದಲ್ಲಿಲ್ಲ ಎಂದು ಖಾತ್ರಿಯಾಯಿತು. ಅಂದರೆ.. ಅಂದರೆ.. ನಿಜಕ್ಕೂ ನಾರ್ಥರ್ನ್ ಲೈಟ್ಸ್ ಕಾಣಿಸುತ್ತಿದೆಯಾ? ಇವೆಲ್ಲ ನಡೆದಿದ್ದು ಕೆಲವೇ ಸೆಕೆಂಡುಗಳಲ್ಲಿ ಎನ್ನಬಹುದು.
ʻಜಗದ ಜಗಲಿಯಲಿ ನಿಂತುʼ ಪ್ರವಾಸ ಬರಹಗಳ ಸಾಲಿನಲ್ಲಿ ವೈಶಾಲಿಹೆಗಡೆ ಬರಹ

Read More

ಬಯೊಲುಮಿನಿಸೆನ್ಸ್ ಎಂಬ ಬೆಳಕಿನ ಮಾಯಾಲೋಕ

ಅಷ್ಟಷ್ಟೇ ವೇಗವನ್ನು ಹೆಚ್ಚಿಸಿಕೊಳ್ಳುತ್ತಾ, ಜಾರುವ ಸೂರ್ಯನೊಂದಿಗೆ ಪೈಪೋಟಿ ನಡೆಸುತ್ತ ನಮ್ಮ ದೋಣಿ ಕರಿಬಿಯನ್ ನೀಲ ಕಡಲನ್ನು ಸೀಳಿಕೊಂಡು ಸುತ್ತಲ ಅಂದವನ್ನೆಲ್ಲ ಉಣಿಸುತ್ತ ಸಾಗುತ್ತಿತ್ತು. ಅಂಚಲ್ಲಿ ಕಾಣುವ ಮನೆ, ತೋಟಗಳ ಇತಿಹಾಸ ಇತ್ಯಾದಿ ವಿವರಣೆ ನೀಡುತ್ತಾ ನಮ್ಮ ಗೈಡ್ ಅಲ್ಲದೆ ಚಾಲಕನೂ ಆದ ಮ್ಯಾಟ್ ಹರಟುತ್ತಿದ್ದ. ಪೋರ್ತೋರಿಕನ್ ಮೂಲದವನೇ ಆದ ಮ್ಯಾಟ್ ನಡುವೆ ಒಂದಷ್ಟು ವರುಷ ಫ್ಲರಿಡಾದಲ್ಲಿದ್ದು, ನೆಲದ ಕರೆಯ ಸೆಳೆತಕ್ಕೆ ಹಿಂತಿರುಗಿ ಬಂದು ಇಲ್ಲಿಯೇ ನೆಲೆಯೂರಿದ್ದ.
ʻಜಗದ ಜಗಲಿಯಲಿ ನಿಂತುʼ ಪ್ರವಾಸ ಬರಹಗಳ ಸಾಲಿನಲ್ಲಿ ಲಾ ಪ್ಯಾರ್ಗೇರದ ಬಯೊಲುಮಿನಿಸೆನ್ಸ್ ಮಾಯಾಲೋಕದ ಕುರಿತು ಬರೆದಿದ್ದಾರೆ ವೈಶಾಲಿ ಹೆಗಡೆ

Read More

ಮಾರ್ಕೋನಿ ಬೀಚ್: ತೆರೆಯ ಮೇಲಣ ತರಂಗಾಂತರಂಗ

ಸಾಮಾನ್ಯ ಜನರು ಮಾರ್ಕೋನಿ ರಿಸೀವರ್‌ಗಳನ್ನು ಕೊಂಡು ಬೇರೆ ಬೇರೆ ತರಂಗಗಳನ್ನು ಕೈಯಲ್ಲಿ ಕಟ್ಟಿ ಹಾಕಿ ಆಲಿಸುವ ತಂತ್ರಜ್ಞಾನ ಹುಟ್ಟಿದ್ದು ಇಲ್ಲೇ, ಈ ವೆಲ್ಫ್ಲೀಟ್ ಎಂಬ ಚಿಕ್ಕ ಊರಿನಲ್ಲಿ. ರೇಡಿಯೋ ತರಂಗಗಳು ಹುಟ್ಟುಹಾಕಿದ ಕ್ರಾಂತಿ ಅದೆಷ್ಟು ಬೇಗ ಹಬ್ಬಿತೆಂದರೆ ಎಲ್ಲ ಹಡಗುಗಳಲ್ಲೂ ಮಾರ್ಕೋನಿ ಉಪಕರಣವಿತ್ತು. ಸುಪ್ರಸಿದ್ಧ ಟೈಟಾನಿಕ್ ಹಡಗು ಕೂಡ ಮುಳುಗುವ ಮೊದಲು ಮಾರ್ಕೊನಿ ಉಪಕರಣದ ಮೂಲಕ “SOS” ಸಂದೇಶ ಕಳಿಸಿತ್ತು.
ವೈಶಾಲಿ ಹೆಗಡೆ ಬರೆಯುವ ಪ್ರವಾಸ ಲೇಖನ ಮಾಲೆ

Read More

ಯೆಲ್ಲೋಸ್ಟೋನ್ : ಸತ್ಯಂ ಶಿವಂ ಸುಂದರಂ

ಇಲ್ಲಿನ ಬಿಸಿನೀರ ಬುಗ್ಗೆಯ ಅನುಭವವನ್ನು ಸ್ವಲ್ಪವಾದರೂ ಪಡೆದುಕೊಳ್ಳಬೇಕೆಂದಲ್ಲಿ ನೀವು ಈ ಪರೀಕ್ಷೆ ಉತ್ತರ ಬಾಗಿಲಿನ ಹೊರಗೆ ಅನತಿ ದೂರದಲ್ಲಿ ಹರಿವ ಗಾರ್ಡನರ್ ನದೀತೀರಕ್ಕೆ ನಡೆದುಕೊಂಡು ಹೋಗಬೇಕು. ಅಲ್ಲಿ ಒಂದು ನಿರ್ದಿಷ್ಟ ಪ್ರದೇಶದಲ್ಲಿ ತಣ್ಣಗೆ ಹರಿವ ನದಿಗೆ ಪಕ್ಕದ ಭೂಮಿಯಾಳದೊಳಗಿಂದ ಬಿಸಿನೀರ ಬುಗ್ಗೆಯೊಂದು ಹರಿದು ಬಂದು ಸೇರಿಕೊಳ್ಳುತ್ತೆ. ಇಲ್ಲಿ ಕೂತರೆ ಸ್ನಾನದ ನೀರನ್ನು ಹದಮಾಡಿಕೊಳ್ಳುವಂತೆ ಬಿಸಿ ನೀರು ತಣ್ಣೀರು ಬೆರೆಸಿಕೊಳ್ಳುತ್ತ ಬೆಚ್ಚಗೆ ಕುಳಿತುಕೊಳ್ಳಬಹುದು.
ʻಜಗದ ಜಗಲಿಯಲಿ ನಿಂತುʼ ಪ್ರವಾಸ ಬರಹಗಳ ಸಾಲಿನಲ್ಲಿ ಅಮೆರಿಕಾದ ಯೆಲ್ಲೋಸ್ಟೋನ್ ರಾಷ್ಟ್ರೀಯ ಉದ್ಯಾನವನದ ಕುರಿತು ಬರೆದಿದ್ದಾರೆ ವೈಶಾಲಿ ಹೆಗಡೆ

Read More

ಬರಿ ಬಿಯರಿನ ಕತೆಯಲ್ಲ ಇದು…

ಬಹಳಷ್ಟು ಪಬ್‌ಗಳು ಹತ್ತು, ಹನ್ನೆರಡನೇ ಶತಮಾನದಲ್ಲಿ ಡಬ್ಲಿನ್ ಬೀದಿಗಳಲ್ಲಿ ತಲೆದೋರಿದವು. ಮುಂದೆ ಇವು ಸಮಾನ ಆಸಕ್ತರ ಕೇಂದ್ರಗಳಾಗಿ ಸಾಮಾಜಿಕ ಹರಟೆಕಟ್ಟೆಗಳಾಗಿ ಬೆಳೆದವು. ಕೆಲವು ಪಬ್‌ಗಳಲ್ಲಿ ಬರೀ ವ್ಯಾಪಾರಸ್ಥರು ಸೇರಿಕೊಂಡರೆ, ಮತ್ತೆ ಹಲವು ಸಂಗೀತಗಾರರ ಕೇಂದ್ರಗಳಾದವು. ಮತ್ತೆ ಹಲವು ಸಾಹಿತಿಗಳೂ ಕವಿಗಳೂ ಸೇರುವ ಸ್ಥಳಗಳಾದವು. ಮತ್ತೆ ಕೆಲವು ರಾಜಕೀಯದವರು, ಗಣ್ಯರು, ಶ್ರೀಮಂತರು ಸೇರುವ ಜಾಗಗಳು… ವೈಶಾಲಿ ಹೆಗಡೆ ಐರಿಷ್ ಬರಹ

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ