Advertisement
ಗುರುಪ್ರಸಾದ್‌ ಕುರ್ತಕೋಟಿ

ಗುರುಪ್ರಸಾದ್‌ ಕುರ್ತಕೋಟಿ ಇಪ್ಪತ್ತು ವರ್ಷಗಳ ಕಾಲ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿ ಕೃಷಿಗಿಳಿದ ಉತ್ಸಾಹಿರೈತರು. "ಬೆಳೆಸಿರಿ" ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ.  "ಕೇಶಕ್ಷಾಮ" (ಹಾಸ್ಯ ಬರಹಗಳ ಸಂಕಲನ) ಸೇರಿ ಇವರ ಮೂರು ಕೃತಿಗಳು ಪ್ರಕಟಗೊಂಡಿವೆ.

ಬೆಳಕು ಬಣ್ಣದ ಭ್ರಮಾಲೋಕ ​ರಿವರ್ ಫೈರ್

ಬ್ರಿಸ್ಬೇನ್ ಫೆಸ್ಟಿವಲ್ ಎನ್ನುವ ಆನಂದದ ಲೋಕದಲ್ಲಿ ಈ ಬಾರಿ ಉತ್ಸಾಹ ಒಂದು ತೂಕ ಹೆಚ್ಚೇ. ಕಳೆದೆರಡು ವರ್ಷಗಳಲ್ಲಿ ನಡೆಯದ ಉತ್ಸವ ಈ ಬಾರಿ ಹೆಚ್ಚು ರಂಗಿನಿಂದ ನಡೆಯುತ್ತಿದೆ. ಕಳೆದದ್ದನ್ನ ಗಿಟ್ಟಿಸಿಕೊಳ್ಳಲು ಹಬ್ಬದ ತಯಾರಿ ಜೋರಾಗೆ ನಡೆದಿದೆಯೆಂದು ಟಿವಿ ವಾಹಿನಿಗಳು ಬಿತ್ತರಿಸುತ್ತಿವೆ. ಈ ಫೆಸ್ಟಿವಲ್‌ ನಡೆಯುವ  ಮೂರು ವಾರಗಳ ಕಾಲದಲ್ಲಿ ಬರಹಗಾರರ ಶಿಬಿರ, ಅಂತಾರಾಷ್ಟ್ರೀಯ ಚಲನಚಿತ್ರ ಪ್ರದರ್ಶನ, ಕಲೆಗಳ ಪ್ರದರ್ಶನ, ಸೌತ್ ಬ್ಯಾಂಕಿನಲ್ಲಿ ಆಹಾರ ಮೇಳ ಇನ್ನೂ ಹಲವಾರು ವೈವಿಧ್ಯತೆಗಳುಳ್ಳ ಕಾರ್ಯಕ್ರಮಗಳಿರುತ್ತವೆ.ಇವೆಲ್ಲಕ್ಕೂ ಕಳಶವಿಡುವಂತೆ ಇಂದು ಉದ್ಘಾಟನೆಯ ಶನಿವಾರದಂದು ರಾತ್ರಿ River Fire ನಡೆಯುತ್ತದೆ.  ಬ್ರಿಸ್ಬೇನ್‌ ನದಿಯು ಪಟಾಕಿಗಳ ಬಣ್ಣಗಳನ್ನು ಪ್ರತಿಫಲಿಸುವ ಖುಷಿಯಲ್ಲಿ ಹರಿಯುತ್ತಿದೆ. ಈ ಬಾರಿಯ ಆಸ್ಟ್ರೇಲಿಯಾ ಪತ್ರದಲ್ಲಿ ಡಾ. ವಿನತೆ ಶರ್ಮ  ಸಡಗರದ ಸುದ್ದಿಯನ್ನು ಬರೆದಿದ್ದಾರೆ. 

Read More

ಬದಲಾವಣೆಯಲ್ಲಿ ಸ್ವಾತಂತ್ರ್ಯದ ಸಾಕಾರ

ಈ ಭೂಗೋಳದ ಬಹುತೇಕ ರಾಷ್ಟ್ರಗಳಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಜಗಳ, ಕದನ, ವೈಮನಸ್ಸು, ಪ್ರತಿಭಟನೆ, ಆಗ್ರಹಗಳು ನಡೆಯುತ್ತಲೇ ಇರುವುದನ್ನು ಓದಿದಾಗ, ಕೇಳಿದಾಗ ಮನುಷ್ಯ ಮನಸ್ಸು ಅದೆಷ್ಟು ಅತಂತ್ರವೆನಿಸುತ್ತದೆ. ಆ ಮನಸ್ಸುಗಳು ಅದೆಷ್ಟು ಸುಲಭವಾಗಿ ಆಕ್ರಮಣಶೀಲತೆಯನ್ನು ಅಪ್ಪಿಕೊಳ್ಳುತ್ತವೆ ಎಂದು ಗೋಚರಿಸುತ್ತದೆ. ತಾನು ಮುಖ್ಯ, ತನ್ನದು ಮುಖ್ಯ, ತನ್ನದೇ ಮೇಲು, ತನ್ನದನ್ನು ವಾದಿಸುತ್ತಾ ಮುಂದಿರಿಸಬೇಕು, ಎನ್ನುವುದು ಬರೀ ಮನುಷ್ಯ ಸ್ವಭಾವವೇ ಹೌದು. ಒಮ್ಮೊಮ್ಮೆ ಅದು ಎಲ್ಲ ಪ್ರಾಣಿಗಳ ಸಾರ್ವತ್ರಿಕ ಸ್ವಭಾವ ಎನ್ನುವುದಾದರೂ ಪ್ರಾಣಿಪ್ರಪಂಚವನ್ನು ಗಮನಿಸಿದಾಗ ಈ ಬಗೆಯ ವೈಮನಸ್ಯಗಳು ಕಾಣುವುದಿಲ್ಲ.
ಡಾ. ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕದ್ದವರು, ಕಳಕೊಂಡವರು, ಕ್ಷಮಿಸಿ ಎಂದವರು

ವಸಾಹತುಶಾಹಿ-ಸಂಬಂಧಿತ ಅನ್ಯಾಯಗಳು ಮತ್ತು ತಾರತಮ್ಯಗಳು ಆಸ್ಟ್ರೇಲಿಯದಲ್ಲಿ ನಡೆಯುತ್ತಲೇ ಬಂದಿದೆ. ಆಸ್ಟ್ರೇಲಿಯಾದ ಅಬೊರಿಜಿನಲ್ ಜನರ ಕುಟುಂಬಗಳಿಂದ ಬಲವಂತವಾಗಿ ಅವರ ಮಕ್ಕಳನ್ನು ಬೇರ್ಪಡಿಸಿ ಬಿಳಿಯರ ಕುಟುಂಬಗಳಿಗೆ ಕೊಟ್ಟು ಬಿಳಿಯರ ಸಂಸ್ಕೃತಿ, ಶಿಕ್ಷಣ, ಕ್ರೈಸ್ತಧರ್ಮಗಳಿಗೆ ಅನುಗುಣವಾಗಿ ಮಕ್ಕಳು ಬೆಳೆಯುವಂತಾಗಿದ್ದು ಎರಡು ನೂರು ವರ್ಷಗಳಿಂದ ನಡೆದ ವಿಷಯ ಕಣ್ಣಿಗೆ ರಾಚುವಂತಿದೆ. ಅಂತಹ ‘ಸ್ಟೋಲನ್ ಜನರೇಶನ್’ ನ ದನಿಯಾಗಿದ್ದ ಅಂಕಲ್ ಆರ್ಚಿ ರೋಚ್ ಕಳೆದ ವಾರಾಂತ್ಯದಲ್ಲಿ ತೀರಿಕೊಂಡರು.  ಡಾ. ವಿನತೆ ಶರ್ಮಾ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಬಿಸಿಲ ಧಗೆ, ಚಳಿಯ ಹೊರೆಗಳ ನಡುವೆ ಅರಳುವ ಡಾಫೋಡಿಲ್ ಎಲ್ಲಿದೆ..

ಆಸ್ಟ್ರೇಲಿಯದ  ಹೊಸ ಪ್ರಧಾನಿಗಳು ಚುನಾಯಿತರಾದ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿದ ಮೊದಲ ನಾಲ್ಕು ವಾರಗಳಲ್ಲಿ ಊರೂರು, ಅಂದರೆ ವಿದೇಶಗಳನ್ನು, ಸುತ್ತಿದ್ದಕ್ಕೆ ದೇಶದ ಜನರ ಮತ್ತು ವಿರೋಧಪಕ್ಷದ ಟೀಕೆಗೆ ಗುರಿಯಾದರು. ಆದರೂ ಕೂಡ ತಮ್ಮ ಪರದೇಶ ಸುತ್ತಾಟವನ್ನು ಸಮರ್ಥಿಸಿಕೊಂಡು ‘ನೆರೆಹೊರೆಯವರೊಂದಿಗೆ ಆಸ್ಟ್ರೇಲಿಯದ ರಾಜಕೀಯ ಸಂಬಂಧ ಕುಂಟುತ್ತಿತ್ತು, ನಾವು ಆ ದೇಶದ ನಾಯಕರ ವಿಶ್ವಾಸವನ್ನು ಕಳೆದುಕೊಂಡಿದ್ದೆವು. ಹಾಗಾಗಿ ಅವರೊಂದಿಗಿನ ಸಂಬಂಧವನ್ನು ಕುದುರಿಸಿಕೊಳ್ಳುವುದೂ ಮುಖ್ಯವಾಗಿತ್ತು.
ಡಾ. ವಿನತೆ ಶರ್ಮಾ ಅಂಕಣ

Read More

ಗೆಟ್ ಅಪ್, ಸ್ಟಾಂಡ್ ಅಪ್, ಶೋ ಅಪ್….

ಆಸ್ಟ್ರೇಲಿಯಾ ದೇಶದ ಅಬೊರಿಜಿನಲ್ ಮತ್ತು ಟೊರ್ರೆ ಸ್ಟ್ರೇಟ್ ದ್ವೀಪವಾಸಿ ಜನಪಂಗಡಗಳು ಎಷ್ಟೋ ಸಾವಿರ ವರ್ಷಗಳಿಂದ ಈ ನಾಡಿನಲ್ಲಿ ಬದುಕಿ ಬಾಳಿ, ನೆಲ-ಜಲ-ಪ್ರಕೃತಿಯನ್ನು ಕಾಪಾಡಿಕೊಂಡು ಬಂದಿದ್ದಾರೆ. ಸುಮಾರು ಅರವತ್ತು ಸಾವಿರ ವರ್ಷಗಳಿಗೂ ಹೆಚ್ಚಿನ ಕಾಲದಿಂದ ಈ ಖಂಡದಲ್ಲಿ ಅಬೊರಿಜಿನಲ್ ಜನರ ಇರುವಿಕೆಯ ಬಗ್ಗೆ ಅಧಿಕೃತ ಪುರಾವೆಗಳಿವೆ. ಬ್ರಿಟಿಷರ ವಸಾಹತು ಸ್ಥಾಪನೆಯಿಂದ ಆರಂಭವಾಗಿ ಇಲ್ಲಿನ ಮೂಲನಿವಾಸಿಗಳ ನಿರ್ಮೂಲನೆಗೆ ನಡೆದ ಪ್ರಯತ್ನಗಳು, ಅವರ ಅತ್ಯಂತ ಕ್ರೂರ ಆಡಳಿತದೊಡನೆ ಮುಂದುವರೆದು ಅನ್ಯಾಯಗಳ ನಡುವೆಯೂ ಬದುಕುಳಿದ ಅಬೊರಿಜಿನಲ್ ಜನರ ಜೀವನಗಾಥೆ ಇನ್ನೂ ಜ್ವಲಂತವಾಗಿದೆ.
ಡಾ. ವಿನತೆ ಶರ್ಮಾ ಅಂಕಣ

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ