
ಅಕ್ಷತಾ ಕೃಷ್ಣಮೂರ್ತಿ
ಅಕ್ಷತಾ ಕೃಷ್ಣಮೂರ್ತಿ ಉತ್ತರಕನ್ನಡ ಜಿಲ್ಲೆಯ ಅಂಕೋಲಾದವರು. ಜೊಯಿಡಾದ ದಟ್ಟ ಕಾನನದ ಅಣಶಿಯ ಶಾಲೆಯಲ್ಲಿ ಹದಿನಾಲ್ಕು ವರ್ಷದಿಂದ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ದೀಪ ಹಚ್ಚಬೇಕೆಂದಿದ್ದೆʼ ಇವರ ಪ್ರಕಟಿತ ಕವನ ಸಂಕಲನ
9 Posts
ಅಕ್ಷತಾ ಪಾಂಡವಪುರ
ಪ್ರಶಸ್ತಿ ವಿಜೇತ ಚಿತ್ರನಟಿ ಮತ್ತು ರಂಗಕರ್ಮಿ. ಎನ್ ಎಸ್ ಡಿ ಪದವೀದರೆ. ಊರು ಪಾಂಡವಪುರ.ಇರುವುದು ಬೆಂಗಳೂರು.
3 Posts
ಅಗ್ರಹಾರ ಕೃಷ್ಣಮೂರ್ತಿ
ತುಮಕೂರಿನ ಜೆಟ್ಟಿ ಅಗ್ರಹಾರದಲ್ಲಿ ಜನಿಸಿದ ಅಗ್ರಹಾರ ಕೃಷ್ಣಮೂರ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದವರು. ‘ನೀರು ಮತ್ತು ಪ್ರೀತಿ’ ಎಂಬ ನವಿರಾದ ಕಾದಂಬರಿ ಬರೆದಿದ್ದಾರೆ. ಬೆಳ್ದಿಂಗ್ಳಪ್ಪನ ಪೂಜೆ ಎಂಬ ಸಂಶೋಧನಾ ಕೃತಿ ಪ್ರಕಟಿಸಿದ್ದಾರೆ. ಕಾಶಿ ವಿಶ್ವವಿದ್ಯಾಲಯಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡಿದ್ದಾರೆ..
2 Posts
ಅಂಜನಾ ಗಾಂವ್ಕರ್
ಅಂಜನಾ ಗಾಂವ್ಕರ್ ಕುಮಟಾದಲ್ಲಿ ಶಿಕ್ಷಕ ತರಬೇತಿ ಮುಗಿಸಿ ಏಳು ವರ್ಷಗಳ ಕಾಲ ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಹಿಂದಿ ಭಾಷೆಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿ ಈಗ ಯಲ್ಲಾಪುರದ ದಟ್ಟ ಅರಣ್ಯದ ನಡುವೆ ಪುಟ್ಟ ಮನೆ ಮಾಡಿದ ರೈತ ಮಹಿಳೆ. ಕತೆ ಬರೆಯೋದು ಇವರ ಹವ್ಯಾಸ.
2 Posts
ಅಂಜನಾ ಹೆಗಡೆ
ಅಂಜನಾ ಹೆಗಡೆ ಮೂಲತಃ ಉತ್ತರ ಕನ್ನಡದವರಾಗಿದ್ದು ಸದ್ಯ ಬೆಂಗಳೂರಲ್ಲಿ ನೆಲೆಸಿದ್ದಾರೆ. 'ಕಾಡ ಕತ್ತಲೆಯ ಮೌನ ಮಾತುಗಳು' ಇವರು ಪ್ರಕಟಿತ ಕವನಸಂಕಲನ. ಓದು ಬರಹದ ಜೊತೆಗೆ ಗಾರ್ಡನಿಂಗ್ ಇವರ ನೆಚ್ಚಿನ ಹವ್ಯಾಸ.
1 Post
ಅಂಜಲಿ ರಾಮಣ್ಣ
ಅಂಜಲಿ ರಾಮಣ್ಣ ಲೇಖಕಿ, ಕವಯಿತ್ರಿ, ಅಂಕಣಗಾರ್ತಿ, ನ್ಯಾಯವಾದಿ ಹಾಗೂ ಸಾಮಾಜಿಕ ಕಾರ್ಯಕರ್ತೆ. ‘ರಶೀತಿಗಳು - ಮನಸ್ಸು ಕೇಳಿ ಪಡೆದದ್ದು’, 'ಜೀನ್ಸ್ ಟಾಕ್' ಇವರ ಲಲಿತ ಪ್ರಬಂಧಗಳ ಸಂಕಲನ.
23 Posts
ಅನು ಪಾವಂಜೆ
ಮುಂಬಯಿಯಲ್ಲಿ ಬದುಕುತ್ತಿರುವ ಕನ್ನಡ ಕವಯಿತ್ರಿ ಮತ್ತು ಚಿತ್ರ ಕಲಾವಿದೆ. ಹುಟ್ಟೂರು ಮಂಗಳೂರು. ಸಾಂಪ್ರದಾಯಿಕ ಕಲಾ ಪ್ರಾಕಾರದಲ್ಲಿ ವಿಶೇಷ ಆಸಕ್ತಿ.
1 Post
ಅನುಷ್ ಎ ಶೆಟ್ಟಿ
ಮೈಸೂರಿನಲ್ಲಿ ಬದುಕುತ್ತಿರುವ ತರುಣ ಕಾದಂಬರಿಗಾರ ಮತ್ತು ಸಂಗೀತ ಕಲಾವಿದ. ‘ನೀನು ನನ್ನೊಳಗೆ ಖೈದಿ’ ಇವರ ಇತ್ತೀಚಿನ ಕಾದಂಬರಿ.
1 Post
ಅಬ್ದುಲ್ ರಶೀದ್
ಕಥೆ, ಕಾದಂಬರಿ, ಕವಿತೆ, ಅಂಕಣಗಳನ್ನು ಬರೆಯುತ್ತಾರೆ. ಲಕ್ಷದ್ವೀಪ ಕವರತ್ತಿ ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥ. ಅಲೆದಾಟ, ಫೋಟೋಗ್ರಫಿ ಮತ್ತು ಬ್ಲಾಗಿಂಗ್ ಇವರ ಇತರ ಹವ್ಯಾಸಗಳಲ್ಲಿ ಕೆಲವು. ಕೊಡಗಿನವರು.
89 Posts
ಅರವಿಂದ
ಅರವಿಂದ ಮೂಲತಃ ಚಿಕ್ಕಬಳ್ಳಾಪುರದ ಮಾವಿನಕಾಯನಹಳ್ಳಿಯವರು.ಈಗ ಬೆಂಗಳೂರಿನ ರಾಮನ್ ರಿಸರ್ಚ್ ಇನ್ಸ್ಟಿ ಟ್ಯೂಟ್ ನಲ್ಲಿ ಸಂಶೋಧನೆ ನಡೆಸುತ್ತಿದ್ದಾರೆ. ತಾರ್ಕಿಕವಾಗಿ ಉತ್ತರಿಸಲಾಗದ ಪ್ರಶ್ನೆಗಳು ಎದುರಾದಾಗ ಕಾವ್ಯದ ಮೊರೆ ಹೋಗುತ್ತಾರೆ
1 Post
ಅರವಿಂದ ಕುಡ್ಲ
ಅರವಿಂದ ಕುಡ್ಲ ವೃತ್ತಿಯಿಂದ ಶಾಲಾ ಶಿಕ್ಷಕರು. ರಂಗಭೂಮಿ, ಫೋಟೋಗ್ರಫಿ, ಓದು, ಶಿಕ್ಷಣ ಮತ್ತು ಚಾರಣ ಇವರ ಆಸಕ್ತಿಯ ವಿಷಯಗಳು. ಸದ್ಯ ದಕ್ಷಿಣ ಕನ್ನಡ ಜಿಲ್ಲೆಯ ಮೂಡಂಬೈಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ
9 Posts
ಅರುಣ್ ಜೋಳದಕೂಡ್ಲಿಗಿ
ಅರಣ್ ಜೋಳದಕೂಡ್ಲಿಗಿ ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಜೋಳದಕೂಡ್ಲಿಗಿಯವರು. ಜಾನಪದ ಎಂ.ಎ ಮತ್ತು ಕನ್ನಡ ಸಾಹಿತ್ಯದಲ್ಲಿ ಎಂ.ಎ ಸ್ನಾತಕೋತ್ತರ ಪದವಿಗಳನ್ನು ಕನ್ನಡ ವಿಶ್ವವಿದ್ಯಾಲಯದಲ್ಲಿ ಪಡೆದರು. ಅಲ್ಲಿಯೇ ಪಿಎಚ್.ಡಿ ಪದವಿ ಪಡೆದು, ಪ್ರಸ್ತುತ ಪೋಸ್ಟ್ ಡಾಕ್ಟರಲ್ ಉನ್ನತ ಸಂಶೋಧನೆಯಲ್ಲಿ ಮುಗಿಸಿದ್ದಾರೆ.ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಅತಿಥಿ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಕಟಿತ ಕೃತಿಗಳು: ನೆರಳು ಮಾತನಾಡುವ ಹೊತ್ತು (ಕವಿತೆ, 2004) ಸಂಡೂರು ಭೂಹೋರಾಟ ( ಸಂಶೋಧನೆ, 2008) ಅವ್ವನ ಅಂಗನವಾಡಿ ( ಕವನಸಂಕಲನ, 2010), ಕನ್ನಡ ಜಾನಪದ ತಾತ್ವಿಕ ನೆಲೆಗಳು ( ಪಿಎಚ್.ಡಿ ಸಂಶೋಧನೆ, 2012), ಜಾನಪದ ಮುಖಾಮುಖಿ (ಸಂಶೋಧನೆ, 2013), ಜಾನಪದ ವರ್ತಮಾನ (ಸಂಶೋಧನೆ, 2013), ಕನಸೊಡೆದೆದ್ದೆ ( ವಿಮರ್ಶೆ, 2013) ಗಂಟಿಚೋರ್ ಸಮುದಾಯ (ಸಂಶೋಧನೆ, 2016) ತತ್ವಪದ ಪ್ರವೇಶಿಕೆ (ಪ್ರೊ.ರಹಮತ್ ತರೀಕೆರೆ ಅವರ ಜತೆ ಸಹ ಸಂಪಾದಕ, 2017) ಓದು ಒಕ್ಕಾಲು ( ಸಾಹಿತ್ಯ ವಿಮರ್ಶೆ, 2020) ಕೊರೋನಾ ಜಾನಪದ (ನವಜಾನಪದ ಕುರಿತ ಸಂಶೋಧನ ಲೇಖನಗಳ ಸಂಕಲನ, 2020) ನಡುವೆ ಸುಳಿವ ಹೆಣ್ಣು ( ಮಂಜಮ್ಮ ಜೋಗತಿ ಅವರ ಆತ್ಮಕಥನದ ನಿರೂಪಣೆ, 2020)
25 Posts
ಅಲಕಾ ಕಟ್ಟೆಮನೆ
ಅಲಕಾ ಕಟ್ಟೆಮನೆ ಲೇಖಕಿ , ಪತ್ರಕರ್ತೆ, ಕತೆಗಾರ್ತಿ. ಸಧ್ಯ ಮೈಸೂರಿನಲ್ಲಿ ನೆಲೆಸಿದ್ದಾರೆ. 'ಶಾಲ್ಮಲೆಯ ಹೊನಲಲ್ಲಿ' ಅವರ ಪ್ರಕಟಿತ ಕಥಾಸಂಕಲನ. ಇವರ ಹಲವಾರು ಕತೆಗಳು ಬೇರೆಬೇರೆ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.
1 Post
ಆರ್. ದಿಲೀಪ್ ಕುಮಾರ್
ಆರ್ . ದಿಲೀಪ್ ಕುಮಾರ್ ಮೂಲತಃ ಚಾಮರಾಜನಗರದವರು. ಸಾಹಿತ್ಯ ವಿಮರ್ಶೆ, ಸಂಶೋಧನೆ, ಕಾವ್ಯ ರಚನೆ ಮತ್ತು ಭಾಷಾಂತರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
17 Posts
ಆರ್. ಪವನ್ ಕುಮಾರ್
ಆರ್. ಪವನ್ ಕುಮಾರ್ ಮೂಲತಃ ಶ್ರೀರಂಗಪಟ್ಟಣದವರು. ಸಿನಿಮಾ ಮತ್ತು ಸಾಹಿತ್ಯ ಇವರ ಆಸಕ್ತಿಯ ಕ್ಷೇತ್ರಗಳು. ಇವರ ಕತೆಗಳು ಮತ್ತು ಬರಹಗಳು ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ
1 Post
ಆರ್. ವಿಜಯರಾಘವನ್
ಕವಿ, ಕಥೆಗಾರ, ಕಾದಂಬರಿಗಾರ ಮತ್ತು ಅನುವಾದಕ. ಕವನ ಸಂಕಲನ ‘ಅನುಸಂಧಾನ’, ಕಾದಂಬರಿ ‘ಅಪರಿಮಿತದ ಕತ್ತಲೊಳಗೆ’ ” ಸಮಗ್ರ ಕವಿತೆಗಳ ಸಂಕಲನ ‘ಪ್ರೀತಿ ಬೇಡುವ ಮಾತು’ ಇವರ ಮುಖ್ಯ ಕೃತಿಗಳು. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಲಿಯಪ್ಪನಹಳ್ಳಿಯವರು.
29 Posts
ಆಲೂರು ದೊಡ್ಡನಿಂಗಪ್ಪ
ಆಲೂರು ದೊಡ್ಡನಿಂಗಪ್ಪ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಮಾಲೂರಿನವರು. ಸದ್ಯಕ್ಕೆ ಮೈಸೂರಿನ ರಂಗಾಯಣದಲ್ಲಿ ಉದ್ಯೋಗಿ. ಈಗಾಗಲೇ ನೇಕಾರ, ಮುಟ್ಟು, ಎದೆಯ ಹೊಲದಲ್ಲಿ ಸೂರ್ಯಕಾಂತಿ, ಕವನಸಂಕಲನಗಳನ್ನು ಹೊರತಂದಿದ್ದಾರೆ.
1 Post
ಆಶಾ ಜಗದೀಶ್
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಶಿಕ್ಷಕಿ. ಕತೆ, ಕವಿತೆ, ಪ್ರಬಂಧ ಬರೆಯುವುದು ಇವರ ಆಸಕ್ತಿಯ ವಿಷಯ.ಮೊದಲ ಕವನ ಸಂಕಲನ "ಮೌನ ತಂಬೂರಿ."
45 Posts
ಇ. ಆರ್. ರಾಮಚಂದ್ರನ್
ಫಿಲಿಪ್ಸ್ ಕಂಪನಿಯಿಂದ ನಿವೃತ್ತರಾದ ನಂತರ ಮೈಸೂರಿನಲ್ಲಿ ನೆಲೆಸಿದ್ದಾರೆ. ಅವರು `ಶಂಕರ್ಸ್ ವೀಕ್ಲಿ'ಯಲ್ಲಿ ಹಾಸ್ಯ ಲೇಖನವನ್ನು ಬರೆಯುತ್ತಿದ್ದರು. ಈಗ ಅಪರಂಜಿ ಮಾಸಿಕ ಪತ್ರಿಕೆಗೆ ಹಾಸ್ಯ ಲೇಖನ ಬರೆಯುತ್ತಾರೆ. ಚುರುಮುರಿ, ಹಿಂದುಸ್ತಾನ್ ಟೈಮ್ಸ್, ಸಿಎನೆನ್ ಮತ್ತು ನ್ಯೂಸ್ ೧೮ ಲ್ಲಿಯೂ ಅವರ ಲೇಖನಗಳು ಪ್ರಕಟವಾಗಿವೆ.
9 Posts
ಉಮಾರಾವ್
ಖ್ಯಾತ ಕಥೆಗಾರ್ತಿ ಮತ್ತು ಅಂಕಣಗಾರ್ತಿ. ಹುಟ್ಟಿದ್ದು ಮತ್ತು ಈಗ ಇರುವುದು ಬೆಂಗಳೂರು. ‘ಅಗಸ್ತ್ಯ , ಕಡಲ ಹಾದಿ, ಸಿಲೋನ್ ಸುಶೀಲ ಕಥಾ ಸಂಕಲನಗಳು. ‘ನೂರು ಸ್ವರ’ ಕಾದಂಬರಿ. ‘ಮುಂಬೈ ಡೈರಿ’ ಅಂಕಣ ಬರಹಗಳ ಸಂಕಲನ. ‘ರಾಕೀ ಪರ್ವತಗಳ ನಡುವೆ ಕ್ಯಾಬರೆ’ ಪ್ರವಾಸ ಕಥನ. ‘ಬಿಸಿಲು ಕೋಲು', ಖ್ಯಾತ ಸಿನೆಮಾ ಛಾಯಾಗ್ರಾಹಕ ವಿ. ಕೆ ಮೂರ್ತಿಯವರ ಜೀವನ ಚರಿತ್ರೆ.
11 Posts
ಉಮೇಶ ದೇಸಾಯಿ
ಉಮೇಶ ದೇಸಾಯಿ ವೃತ್ತಿಯಿಂದ ಲೆಕ್ಕಿಗ. ಪ್ರವೃತ್ತಿಯಿಂದ ಲೇಖಕ. ಎರಡು ಕಿರುಕಾದಂಬರಿಗಳು- ‘ಭಿನ್ನ’ ಹಾಗೂ ‘ಅನಂತಯಾನ’ ಪ್ರಕಟವಾಗಿವೆ. ‘ಚೌಕಟ್ಟಿನಾಛೆ’ ಎಂಬ ಕಥಾಸಂಕಲನವೂ ಪ್ರಕಟವಾಗಿದೆ. ‘ಮೈತ್ರಿ ಪ್ರಕಾಶನ’ದ ಮೂಲಕ ಇಲ್ಲಿಯವರೆಗೆ ೧೫ ಪುಸ್ತಕಗಳನ್ನು ಪ್ರಕಟಿಸಿದ್ದಾರೆ.
2 Posts
ಎಂ ಆರ್ ಭಗವತಿ
ಪಕ್ಷಿ ಛಾಯಾಚಿತ್ರಗ್ರಾಹಕಿ ಮತ್ತು ಕವಯಿತ್ರಿ. ವಿಜ್ಞಾನ, ಕಲೆ ವಿಷಯಗಳಲ್ಲೂ ಸಮಾನವಾದ ಆಸಕ್ತಿ. 'ಏಕಾಂತದ ಮಳೆ ಮತ್ತು 'ಚಂಚಲ ನಕ್ಷತ್ರಗಳು’ಪ್ರಕಟಿತ ಕವನ ಸಂಕಲನಗಳು. ಹುಟ್ಟೂರು ಚಿಕ್ಕಮಗಳೂರು. ವಾಸ ಬೆಂಗಳೂರು.
2 Posts
ಎ. ಎನ್. ಪ್ರಸನ್ನ
ದಾವಣಗೆರೆಯಲ್ಲಿ ಎಂಜಿನಿಯರಿಂಗ್ ಪದವಿಯ ನಂತರ ಕೆ. ಪಿ. ಟಿ. ಸಿ. ಎಲ್.ನಲ್ಲಿ ಕಾರ್ಯ ನಿರ್ವಹಿಸಿ ನಿವೃತ್ತ. ಸಾಹಿತ್ಯ, ನಾಟಕ ಮತ್ತು ದೃಶ್ಯಮಾಧ್ಯಮದಲ್ಲಿ ಆಸಕ್ತಿ. ಅದರಲ್ಲಿಯೂ ಸಣ್ಣ ಕಥೆ, ಅನುವಾದ, ಚಲನಚಿತ್ರ ವಿಮರ್ಶೆ ಮುಂತಾದವುಗಳ ಬಗ್ಗೆ ಹೆಚ್ಚಿನ ಗಮನ. ಹಾರು ಹಕ್ಕಿಯನೇರಿ(ಚಲನಚಿತ್ರ) ನಿರ್ದೇಶನವೂ ಇದರಲ್ಲಿ ಸೇರಿದೆ. ಚಿತ್ರಕಥೆಯ ಸ್ವರೂಪ ಮತ್ತು ಪ್ರತಿಫಲನ, ಬಿಡುಗಡೆ(ಕಥಾ ಸಂಕಲನ) ಅವರ ಇತ್ತೀಚಿನ ಪ್ರಕಟಣೆಗಳು.
43 Posts
ಎಂ. ವೆಂಕಟಸ್ವಾಮಿ
ಎಂ.ವೆಂಕಟಸ್ವಾಮಿ ಜಿಯಾಲಿಜಿಕಲ್ ಸರ್ವೇ ಆಫ್ ಇಂಡಿಯಾದಲ್ಲಿ ವೃತ್ತಿಯಲ್ಲಿದ್ದವರು. ಇವರ ನಾಗಾಲ್ಯಾಂಡಿನ ಪ್ರವಾಸ ಕಥನ ‘ಅಲೆಮಾರಿಯ ಹೆಜ್ಜೆಗಳು’ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟಗೊಂಡಿದೆ.
2 Posts
ಎಂ.ಆರ್. ದತ್ತಾತ್ರಿ
ಎಂ.ಆರ್. ದತ್ತಾತ್ರಿ ಮೂಲತಃ ಚಿಕ್ಕಮಗಳೂರಿನವರು. ಹಲವಾರು ವರ್ಷ ಅಮೇರಿಕಾದಲ್ಲಿ ಕೆಲಸ ಮಾಡಿ ಈಗ ಬೆಂಗಳೂರಿಗೆ ವಾಪಾಸಾಗಿದ್ದಾರೆ. `ಮಸುಕು ಬೆಟ್ಟದ ದಾರಿ' ಇವರ ಇತ್ತೀಚಿನ ಕಾದಂಬರಿ.
1 Post
ಎಂ.ಎಸ್. ಪ್ರಕಾಶ್ ಬಾಬು
ಚಿತ್ರ ನಿರ್ದೇಶಕ,ಕಥಾಲೇಖಕ ಮತ್ತು ಕಲಾವಿದ. ‘ಅತ್ತಿಹಣ್ಣು ಮತ್ತು ಕಣಜ’ ಇವರ ಪ್ರಶಸ್ತಿ ವಿಜೇತ ಚಿತ್ರ. ಚಿತ್ರದುರ್ಗ ಹುಟ್ಟೂರು.ಈಗ ಇರುವುದು ಬೆಂಗಳೂರು.
1 Post
ಎಂ.ಎಸ್.ಶ್ರೀರಾಂ
ಶ್ರೀರಾಂ, ಎಂ. ಎಸ್. ಆಂಧ್ರಪ್ರದೇಶದ ನೆಲ್ಲೂರಿನವರು. ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟಿನ ಪ್ರಾಧ್ಯಾಪಕರಾಗಿದ್ದಾರೆ. ಕನ್ನಡ, ತೆಲುಗು, ಹಿಂದಿ, ಇಂಗ್ಲಿಷ್, ತಮಿಳು ಭಾಷೆಗಳನ್ನು ಬಲ್ಲವರು. ಗ್ರಾಮೀಣ ಅಭಿವೃದ್ಧಿ ಇವರ ಪರಿಣತಿಯ ವಿಷಯ. ಸಮಕಾಲೀನ ಸಾಹಿತ್ಯ, ರಂಗಭೂಮಿ, ಸಿನಿಮಾ ಇವರ ಆಸಕ್ತಿಯ ವಿಷಯಗಳು. ಮಾಯಾದರ್ಪಣ, ಅವರವರ ಸತ್ಯ, ತೇಲ್ ಮಾಲಿಶ್, ಸಲ್ಮಾನ್ ಖಾನನ ಡಿಫಿಕಲ್ಟೀಸು ಮತ್ತು ನಡೆಯಲಾರದ ದೂರ – ಹಿಡಿಯಲಾರದ ಬಸ್ಸು (ಕಥಾ ಸಂಕಲನಗಳು), ಕನಸು ಕಟ್ಟುವ ಕಾಲ, ಶನಿವಾರ ಸಂತೆ, ಅರ್ಥಾರ್ಥ, ಕಥನ ಕುತೂಹಲ (ಪ್ರಬಂಧ ಸಂಕಲನಗಳು) ಜೊತೆ ಇನ್ನೂ ಹಲವು ಕೃತಿಗಳು ಪ್ರಕಟವಾಗಿವೆ.
13 Posts
ಎಂ.ಜಿ. ಶುಭಮಂಗಳ
ಕೋಲಾರ ಜಿಲ್ಲೆಯ ಗುಡಿಬಂಡೆಯವರು. ಪತ್ರಕರ್ತೆ ಮತ್ತು ಅನುವಾದಕಿಯಾಗಿ ವಿವಿಧ ನಿಯತಕಾಲಿಕೆಗಳಲ್ಲಿ ಕೆಲಸ ಮಾಡಿದ್ದಾರೆಅನುವಾದಿತ ತೆಲುಗು ಕಥೆಗಳು, ಲೇಖನಗಳು, ಸಂದರ್ಶನಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ‘ಸಾಧಕರೊಡನೆ’ ಎಂಬ ಸ್ವಂತ ಕೃತಿ ಪ್ರಕಟಗೊಂಡಿದೆ.
8 Posts
ಎ.ಬಿ. ಪಚ್ಚು
ಎ.ಬಿ. ಪಚ್ಚು ಮಂಗಳೂರಿನ ಮೂಡುಬಿದಿರೆಯವರು. ಓದು, ಬರಹ, ಪ್ರವಾಸ, ಚಾರಣ, ಸಿನಿಮಾ ವೀಕ್ಷಣೆ ಹಾಗೂ ವಿಮರ್ಶೆ ಇವರ ಆಸಕ್ತಿಯ ವಿಷಯಗಳು. ಜೊತೆಗೆ ಛಾಯಾಗ್ರಹಣದಲ್ಲೂ ಆಸಕ್ತಿ ಹೊಂದಿದ್ದಾರೆ.
2 Posts
ಎಚ್ ಆರ್ ರಮೇಶ್
ಹೊಸ ತಲೆಮಾರಿನ ಪ್ರತಿಭಾವಂತ ಕವಿ. ಊರು ಚಿತ್ರದುರ್ಗದ ಬಳಿಯ ಹರಿಯಬ್ಬೆ. ಈಗ ಮಡಿಕೇರಿಯಲ್ಲಿ ಇಂಗ್ಲಿಷ್ ಪ್ರಾದ್ಯಾಪಕ. ಝೆನ್ನದಿ ಇವರ ಪ್ರಮುಖ ಕವಿತಾ ಸಂಕಲನ.
17 Posts
ಎಚ್. ಎಸ್. ಮುಕ್ತಾಯಕ್ಕ
ನಾನು ಮತ್ತು ಅವನು, ನೀವು ಕಾಣಿರೇ ನೀವು ಕಾಣಿರೇ, ಡಕ್ಕೆಯ ಬೊಮ್ಮಣ್ಣ, ಶಿವಶರಣೆ ಮುಕ್ತಾಯಕ್ಕ, ಕಭೀ ಕಭೀ ಮುಂತಾದ ಕೃತಿಗಳನ್ನು ಎಚ್.ಎಸ್. ಮುಕ್ತಾಯಕ್ಕ ರಚಿಸಿದ್ದಾರೆ. ನೀವು ಕಾಣಿರೇ ನೀವು ಕಾಣಿರೇ ಕವನ ಸಂಕಲನಕ್ಕೆ ಕರ್ನಾಟಕ ವಿದ್ಯಾವರ್ಧಕ ಸಂಘದ ರತ್ಮಮ್ಮ ಹೆಗ್ಗಡೆ ದತ್ತಿ ನಿಧಿ ಬಹುಮಾನ, ಕನ್ನಡ ಸಾಹಿತ್ಯ ಪರಿಷತ್ತಿನ ಮಲ್ಲಿಕಾ ಪ್ರಶಸ್ತಿ ಮುಂತಾದ ಪ್ರಶಸ್ತಿಗಳು ಸಂದಿವೆ.
1 Postಎಚ್. ಶೇಷಗಿರಿರಾವ್
ಅಪ್ಪಾಜಿ ಎಂದೇ ಪರಿಚಿತರು. ಹಂಪಿಯ ಹತ್ತಿರ ಇವರ ಊರು. ಹಸ್ತಪ್ರತಿ, ಪುರಾತತ್ವ ಪರಿಣಿತರು. ಚಾರಣ, ಓದು, ಬರಹ ನೆಚ್ಚಿನ ಹವ್ಯಾಸ. ನಿವೃತ್ತರಾಗಿ ಒಂದೂವರೆ ದಶಕ.
2 Posts
ಎಚ್.ಎಲ್. ಪುಷ್ಪ
ಕವಯತ್ರಿ ಎಚ್.ಎಲ್. ಪುಷ್ಪ ಅವರು ಮೂಲತಃ ದೊಡ್ಡಬಳ್ಳಾಪುರದ ಹೊಸಹಳ್ಳೀ ಉಜ್ಜನಿಯವರು. ಅಮೃತಮತಿಯ ಸ್ವಗತ, ಗಾಜುಗೊಳ, ಮದರಂಗಿ, ವೃತ್ತಾಂತ, ಲೋಹದ ಕಣ್ಣು (ಕವನ ಸಂಕಲನ), ಭೂಮಿಲ್ಲ ಇವಳು, ಗೆಲ್ಲಲಾರ್ಕುಮೆ ಮೃತ್ಯುರಾಜನಂ, ಪರ್ವಾಪರ್ವ (ನಾಟಕ), ಅವಲೋಕನ, ಗಂಧಗಾಳಿ, ವಚನ ಸಾಹಿತ್ಯ ಮತ್ತು ಸ್ತ್ರೀತ್ವದ ಕಲ್ಪನೆ (ವಿಮರ್ಶೆ) ಪ್ರಕಟಿತ ಕೃತಿಗಳು. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ಪು.ತಿ.ನ.ಕಾವ್ಯ ಪುರಸ್ಕಾರ, ಕಡೆಂಗೋಡ್ಲು ಶಂಕರಭಟ್ ಕಾವ್ಯ ಪ್ರಶಸ್ತಿ, ಸಾರಂಗಮಠ ಪಾಟೀಲ ಪ್ರಶಸ್ತಿ ಜೊತೆಗೆ ಹಲವು ಪ್ರಶಸ್ತಿಗಳು ಇವರಿಗೆ ಸಂದಿವೆ.
1 Postಎಚ್.ಎಸ್. ರಾಘವೇಂದ್ರರಾವ್
ಕನ್ನಡದ ಮುಖ್ಯ ವಿಮರ್ಶಕರಲ್ಲಿ ಒಬ್ಬರು. 'ಹಾಡೆ ಹಾದಿಯ ತೋರಿತು' ಮತ್ತು ‘ತರುತಳೆದ ಪುಷ್ಪ' ಅವರ ಪ್ರಸಿದ್ಧ ಕೃತಿಗಳಲ್ಲಿ ಕೆಲವು.
1 Postಎಚ್.ಎಸ್. ವೆಂಕಟೇಶಮೂರ್ತಿ
ಕನ್ನಡದ ಖ್ಯಾತ ಕವಿಗಳು. ಕಥೆಗಾರರು, ಕಾದಂಬರಿಗಾರರು ಮತ್ತು ಸಾಹಿತ್ಯ ವಿಮರ್ಶಕರೂ ಕೂಡಾ.
1 Postಎಚ್.ವೈ. ರಾಜಗೋಪಾಲ್
ಅಮೇರಿಕಾದಲ್ಲಿ ನೆಲೆಸಿರುವ ಕನ್ನಡದ ಹಿರಿಯ ಲೇಖಕರು.‘ಕನ್ನಡ ಸಾಹಿತ್ಯ ರಂಗ'ದ ಸ್ಥಾಪಕ ಸದಸ್ಯರಲ್ಲೊಬ್ಬರು.
6 Postsಎನ್.ಎ.ಮಹಮದ್ ಇಸ್ಮಾಯಿಲ್
ಮೂಲತಃ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ನಲ್ಲೂರಿನವರು. ಈಗ ಹೊಟ್ಟೆಪಾಡಿಗಾಗಿ ಬೆಂಗಳೂರಿನಲ್ಲಿ ಪತ್ರಕರ್ತ. ಸಾಹಿತ್ಯ, ವಿಜ್ಞಾನ, ಸಿನೆಮಾ, ಅಂತರ್ಜಾಲ, ಧರ್ಮ ಮತ್ತು ರಾಜಕೀಯದ ಕುರಿತು ಖಚಿತವಾಗಿ ಬರೆಯಬಲ್ಲವರು.
1 Postಎನ್.ಎಸ್. ಶಂಕರ್
ಬರಹಗಾರ, ಚಿಂತಕ, ಪತ್ರಕರ್ತ, ಚಿತ್ರ ನಿರ್ದೇಶಕ.ಜನವಾಣಿ, ಪ್ರಜಾವಾಣಿ, ಲಂಕೇಶ್ ಪತ್ರಿಕೆ ಮುಂತಾಗಿ ಹಲವು ಸಂಸ್ಥೆಗಳಲ್ಲಿ ಪತ್ರಕರ್ತನಾಗಿ ದುಡಿಮೆ. ‘ಮುಂಗಾರು’ ದಿನಪತ್ರಿಕೆ ಹಾಗೂ ‘ಸುದ್ದಿ ಸಂಗಾತಿ’ ವಾರಪತ್ರಿಕೆಗಳ ಸಂಸ್ಥಾಪಕರಲ್ಲೊಬ್ಬರು.
2 Postsಎನ್.ಎಸ್. ಶ್ರೀಧರಮೂರ್ತಿ
ಪತ್ರಕರ್ತ, ಅಂಕಣಕಾರ ಹಾಗೂ ಲೇಖಕ. ಮಲ್ಲಿಗೆ ಮಾಸ ಪತ್ರಿಕೆ, ಮಂಗಳ ಹಾಗೂ ವಿಜಯವಾಣಿ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸಿನಿಮಾ ಕುರಿತ ಬರವಣಿಗೆಗಳು ಇವರ ವಿಶೇಷ.
1 Postಎನ್.ಬಿ. ಚಂದ್ರಮೋಹನ್
ಎನ್ ಬಿ ಚಂದ್ರಮೋಹನ್ ಹೊಸಕೋಟೆ ತಾಲೂಕಿನ ನೆಲವಾಗಿಲು ಗ್ರಾಮದವರು. ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾಗಿ, ಪದವಿ ಕಾಲೇಜು ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತರು. ಬೆಂಗಳೂರಲ್ಲಿ ನೆಲೆಸಿದ್ದಾರೆ.
1 Post
ಎಸ್. ನಾಗಶ್ರೀ
ನಾಗಶ್ರೀ ಎಂ.ಕಾಂ ಹಾಗೂ ICWAI Intermediate ಪದವೀಧರೆ. ಆಕಾಶವಾಣಿ ಎಫ್.ಎಂ ರೈನ್ಬೋದಲ್ಲಿ ರೇಡಿಯೋ ಜಾಕಿಯಾಗಿ ಕಳೆದ ಒಂಭತ್ತು ವರ್ಷಗಳಿಂದ ಹಾಗೂ ದೂರದರ್ಶನ ಚಂದನ ವಾಹಿನಿಯಲ್ಲಿ ನಿರೂಪಕಿಯಾಗಿ ಕಳೆದ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ.. ಕನ್ನಡ ಸಾಹಿತ್ಯದ ಓದು ಹಾಗೂ ನಿರೂಪಣೆ ಅವರ ಆಸಕ್ತಿಕ್ಷೇತ್ರಗಳು.
1 Post
ಎಸ್. ಸಿರಾಜ್ ಅಹಮದ್
ಕನ್ನಡ ವಿಮರ್ಶಕ, ಲೇಖಕ, ಅನುವಾದಕ. ಮೂಲತಃ ಚಿತ್ರದುರ್ಗದವರು. ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಇಂಗ್ಲೀಷ್ ಪ್ರಾಧ್ಯಾಪಕರು
21 Postsಎಸ್.ಎಂ. ಪೆಜತ್ತಾಯ
ತಮ್ಮ ಜೀವಿತದ ಕೊನೆಯ ಘಟ್ಟದಲ್ಲಿ ಬರೆಯಲು ತೊಡಗಿದ್ದ ವೃತ್ತಿಪರ ರೈತ. ಚಾರಣ, ಪ್ರವಾಸ, ತುಂಬಿದ ನದಿಗಳಲ್ಲಿನ ಈಜು, ಬಂದೂಕು ಗುರಿಕಾರಿಕೆ, ಛಾಯಾಗ್ರಹಣ, ಓದು ಎಲ್ಲದರಲ್ಲೂ ಮುಂದಿದ್ದ ಜೀವನೋತ್ಸಾಹಿ.ಈಗ ನಮ್ಮೊಡನಿಲ್ಲ
3 Postsಎಸ್.ದಿವಾಕರ
ಹಿರಿಯ ಕಥೆಗಾರರು, ಅನುವಾದಕರು ಮತ್ತು ಸಂಪಾದಕರು. ಮಲ್ಲಿಗೆ ಮಾಸ ಪತ್ರಿಕೆಯ ಸಂಪಾದಕರಾಗಿದ್ದವರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೋಮತ್ತನಹಳ್ಳಿ ಹುಟ್ಟಿದ ಊರು. ಈಗ ಬೆಂಗಳೂರಿನಲ್ಲಿದ್ದಾರೆ.
1 Postಎಸ್.ಮಂಜುನಾಥ್
ಅಕಾಲಿಕವಾಗಿ ಅಗಲಿದ ಕನ್ನಡದ ಬಹು ಮುಖ್ಯ ಕವಿ. ಹಕ್ಕಿ ಪಲ್ಟಿ, ಬಾಹುಬಲಿ, ಕಲ್ಲ ಪಾರಿವಾಳಗಳ ಬೇಟ ಇವರ ಮುಖ್ಯ ಸಂಕಲನಗಳು. ಸುಮ್ಮನಿರುವ ಸುಮ್ಮಾನ ಎಂಬುದು ತಾವೋ ಚಿಂತನೆಗಳ ಅನುವಾದ.
3 Posts
ಓ.ಎಲ್. ನಾಗಭೂಷಣ ಸ್ವಾಮಿ
ಹೆಸರಾಂತ ವಿಮರ್ಶಕರು, ಭಾಷಾಂತರಕಾರರು ಹಾಗೂ ಇಂಗ್ಲಿಷ್ ಪ್ರಾಧ್ಯಾಪಕರು. ಇದೀಗ ಮೈಸೂರಿನಲ್ಲಿ ನೆಲೆಸಿದ್ದಾರೆ.
62 Posts
ಕಡತೋಕಾ ಗೋಪಾಲಕೃಷ್ಣ ಭಾಗವತ
ಕಡತೋಕಾ ಗೋಪಾಲಕೃಷ್ಣ ಭಾಗವತ. ಉ.ಕ. ಜಿಲ್ಲಾ ಹಳದೀಪುರದ ವಾಸಿ. ಯಕ್ಷಮೀಸಲಾದ ಯಕ್ಷರರಂಗ ಎಂಬ ಮಾಸಪತ್ರಿಕೆಯನ್ನು ನಡೆಸಿಕೊಂಡು ಬರುತ್ತಿರುವ ನ್ಯಾಯವಾದಿ ಮತ್ತು ಹವ್ಯಾಸಿ ಭಾಗವತ.
2 Postsಕನಕರಾಜು ಬಿ. ಆರನಕಟ್ಟೆ
ಹೊಸ ತಲೆಮಾರಿನ ಕಥೆಗಾರ. ಸಿಲೋನ್ ಸೈಕಲ್ ಇವರ ಇತ್ತೀಚೆಗಿನ ಕಥಾ ಸಂಕಲನ. ಸೌದಿ ಅರೇಬಿಯಾದ ಕಿಂಗ್ ಸೌದ್ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿರುವ ಇವರು ಮೂಲತಃ ಚಿತ್ರದುರ್ಗ ಜಿಲ್ಲೆಯ ಆರನಕಟ್ಟೆಯವರು.
3 Postsಕಪಿಲ ಪಿ ಹುಮನಾಬಾದೆ
ಹೆಸರು ಕಪಿಲ ಪಿ ಹುಮನಾಬಾದೆ ಮೂಲತಃ ಬೀದರ್ ನವರು. ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಎರಡನೇ ವರ್ಷದ ಅರ್ಥಶಾಸ್ತ್ರ ವಿದ್ಯಾರ್ಥಿ. ಕಾದಂಬರಿಗಳನ್ನು ಓದುವುದು ಇವರ ಮುಖ್ಯ ಆಸಕ್ತಿ. ಕವಿತೆ, ಕಥೆ ಬರೆಯುವುದು ಇವರ ಹವ್ಯಾಸ.
1 Postಕಲೀಮ್ ಉಲ್ಲಾ
ಶಿವಮೊಗ್ಗೆಯಲ್ಲಿ ಕನ್ನಡದ ಮೇಷ್ಟ್ರು. ಮೂಲತಃ ತರೀಕೆರೆಯವರು. ಉತ್ತಮ ಛಾಯಾಗ್ರಾಹಕರೂ ಕೂಡ. ‘ಕ್ಲಾಸ್ ಟೀಚರ್’ಇವರ ಖ್ಯಾತ ಕೃತಿ.
1 Post
ಕಲ್ಲೇಶ್ ಕುಂಬಾರ್
ಕಲ್ಲೇಶ್ ಕುಂಬಾರ್ ಮೂಲತಃ ಬೆಳಗಾವಿ ಜಿಲ್ಲೆಯ ಹಾರೂಗೇರಿಯವರು. ಸಧ್ಯ, ಬಾಗಲಕೋಟ ಜಿಲ್ಲೆಯ ತೇರದಾಳದ ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 'ಉರಿಯ ನಾಲಗೆಯ ಮೇಲೆ', 'ಉಸುರಿನ ಪರಿಮಳವಿರಲು', 'ನಿಂದ ನಿಲುವಿನ ಘನ' ಇವರ ಪ್ರಕಟಿತ ಕಥಾಸಂಕಲನಗಳು. 'ಪುರುಷ ದಾರಿಯ ಮೇಲೆ' ಕವನಸಂಕಲನದ ಪ್ರಕಟಣೆ.
4 Posts
ಕವಿತಾ ಹೆಗಡೆ
ಕವಿತಾ ಹೆಗಡೆ ಉತ್ತರ ಕನ್ನಡದ ಕುಮಟಾ ತಾಲೂಕಿನ ಕತಗಾಲದವರು. ಪ್ರಸ್ತುತ ಹುಬ್ಬಳ್ಳಿಯ ಕೆ ಎಲ್ ಇ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕಿ. "ದ ನೆಸ್ಟೆಡ್ ಲವ್" ಇವರ ಪ್ರಥಮ ಇಂಗ್ಲಿಷ್ ಕಥಾ ಸಂಕಲನ. ಮೂರು ಕನ್ನಡ ಕೃತಿಗಳು ಶೀಘ್ರದಲ್ಲಿ ಹೊರಬರಲಿವೆ. ಇಂಗ್ಲಿಷ್ -ಕನ್ನಡ ಕಥೆ ಕವನಗಳ ರಚನೆ ಮತ್ತು ಅನುವಾದದಲ್ಲಿ ಆಸಕ್ತಿ ಹೊಂದಿದ್ದಾರೆ.
3 Posts
ಕಾ.ಹು. ಚಾನ್ ಪಾಷ
ಕಾ.ಹು. ಚಾನ್ ಪಾಷ ಮೂಲತಃ ಕೋಲಾರ ಜಿಲ್ಲೆಯ ಬಂಗಾರಪೇಟೆಯವರು. ಅಲ್-ಅಮೀನ್ ಅಂಜುಮನ್ ಪ್ರೌಢಶಾಲೆಯಲ್ಲಿ ಕನ್ನಡ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ, ಮನದ ಮಲ್ಲಿಗೆ(ಚುಟುಕು ಸಂಕಲನ), ಜನ ಮರುಳೋ! ಜಾತ್ರೆ ಮರುಳೋ! (ಕಥಾ ಸಂಕಲನ), 3. ಭಲೇ! ಗಿಣಿರಾಮ (ಮಕ್ಕಳ ನಾಟಕ), ಮೂರು ವರಗಳು (ಮಕ್ಕಳ ನಾಟಕ) ಜೊತೆಗೆ ಕೆಲವು ಅನುವಾದಿತ ಕೃತಿಗಳೂ ಪ್ರಕಟಗೊಂಡಿವೆ.
3 Posts
ಕಾತ್ಯಾಯಿನಿ ಕುಂಜಿಬೆಟ್ಟು
ಕಾತ್ಯಾಯಿನಿ ಕುಂಜಿಬೆಟ್ಟು ಉಡುಪಿಯ ಕಾಪು ಬಳಿಯ ಕರಂದಾಡಿಯವರು. ಹಿಂದೂಸ್ತಾನೀ ಶಾಸ್ತ್ರೀಯ ಸಂಗೀತದಲ್ಲಿ ಪದವಿ ಪಡೆದಿದ್ದಾರೆ. ಕನ್ನಡ ಮತ್ತ ತುಳು ಎರಡೂ ಭಾಷೆಯ ಲೇಖಕಿ. ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ೨೬ ಕೃತಿಗಳು ಪ್ರಕಟವಾಗಿವೆ.
2 Posts
ಕಾರ್ತಿಕ್ ಆರ್
ಕಾರ್ತಿಕ್ ಆರ್. ಬೆಂಗಳೂರು ನಿವಾಸಿ, ವೃತ್ತಿಯಿಂದ ಅನುವಾದಕ ಮತ್ತು ಬರಹಗಾರ. ಇವರ ಹಲವು ಲೇಖನಗಳು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. 'ಬುಕ್ ಪೋಸ್ಟ್' ಇವರ ಪ್ರಕಟಿತ ಕಥಾ ಸಂಕಲನ.
1 Post
ಕಾವ್ಯಾ ಕಡಮೆ
ಕಾವ್ಯಾ ಕಡಮೆ ಉತ್ತರ ಕನ್ನಡ ಜಿಲ್ಲೆಯ ಕಡಮೆಯವರು. ಸದ್ಯ ಅಮೆರಿಕಾದ ನ್ಯೂಜೆರ್ಸಿಯಲ್ಲಿ ವಾಸ. ಧ್ಯಾನಕೆ ತಾರೀಖಿನ ಹಂಗಿಲ್ಲ, ಜೀನ್ಸು ತೊಟ್ಟ ದೇವರು (ಕವನ ಸಂಕಲನಗಳು) ಪುನರಪಿ (ಕಾದಂಬರಿ) ಆಟದೊಳಗಾಟ ಮತ್ತು ಡೋರ್ ನಂಬರ್ ಎಂಟು (ನಾಟಕಗಳು) ದೂರ ದೇಶವೆಂಬ ಪಕ್ಕದ ಮನೆ (ಪ್ರಬಂಧಗಳು.) ಮಾಕೋನ ಏಕಾಂತ (ಕಥಾ ಸಂಕಲನ) ಇವರ ಪ್ರಕಟಿತ ಕೃತಿಗಳು.
26 Postsಕಿರಣ ಅಕ್ಕಿ
ಕಿರಣ ಅಕ್ಕಿ ಮೂಲತಃ ಉತ್ತರ ಕರ್ನಾಟಕದ ಗದಗ ಊರಿನವರು. ಎಂಟು ವರ್ಷಗಳಿಂದ ಬೆಂಗಳೂರಿನ ನಿವಾಸಿ. ಐ.ಟಿ ಕಂಪೆನಿಯ ಉದ್ಯೋಗಿ. ಚಿತ್ರಕಲೆ, ಪುಸ್ತಕಗಳು ಹಾಗೂ ಬರವಣಿಗೆ ಇವರ ಹವ್ಯಾಸಗಳು.
1 Postಕಿರಸೂರ ಗಿರಿಯಪ್ಪ
ಕಿರಸೂರ ಗಿರಿಯಪ್ಪ ಮೂಲತಃ ಬಾಗಲಕೋಟ ತಾಲೂಕಿನ ಕಿರಸೂರಿನವರು. ಸದ್ಯ ಸ.ಕಿ.ಪ್ರಾ.ಶಾಲೆ.ಗುಗಲಗಟ್ಟಿˌ ಸುರಪೂರ ತಾಲೂಕಿನಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹಲವು ಪತ್ರಿಕೆಗಳ ಕಾವ್ಯ ಸ್ಪರ್ಧೆಗಳಲ್ಲಿ ಹಾಗೂ ದಲಿತ ಯುವ ಕಾವ್ಯ ಪ್ರಶಸ್ತಿ ಮುಂತಾದವುಗಳಲ್ಲಿ ಬಹುಮಾನ ಲಭಿಸಿವೆ. ಇವರ ಚೊಚ್ಚಲ ಕೃತಿಗೆ ಪುಸ್ತಕ ಪ್ರಾಧಿಕಾರ ಕರ್ನಾಟಕ ಸರಕಾರ ಪ್ರೋತ್ಸಾಹ ಧನ ಲಭಿಸಿದೆ. ನಾಭಿಯ ಚಿಗುರು(ಕವನಸಂಕಲನ) ಪ್ರಕಟಗೊಂಡಿದ್ದು, 'ಅಲೆವ ನದಿ' ಗಜಲ್ ಸಂಕಲನ ಬಿಡುಗಡೆಯ ಸಿದ್ಧತೆಯಲ್ಲಿದೆ.
1 Post
ಕೀರ್ತನಾ ಹೆಗಡೆ
ಸದ್ಯ ಜರ್ಮನಿಯಲ್ಲಿರುವ ಕೀರ್ತನಾ ಹೆಗಡೆ ಶಿರಸಿ ಬಳಿಯ ಅಳ್ಳಿಹದ್ದ ಎಂಬ ಪುಟ್ಟ ಹಳ್ಳಿಯವರು. ಓದಿದ್ದು ವಾಣಿಜ್ಯ ಸ್ನಾತಕೋತ್ತರ ಪದವಿ.. ಭಾಷೆ, ಬರವಣಿಗೆ, ಓದು, ಸಾಹಿತ್ಯದಲ್ಲಿ ಒಲವು
1 Post
ಕುಮಾರ ಬೇಂದ್ರೆ
<strong>ಕುಮಾರ ಬೇಂದ್ರೆ</strong> 'ಉದಯವಾಣಿ' 'ಸಂಯುಕ್ತ ಕರ್ನಾಟಕ' 'ಗೌರಿ ಲಂಕೇಶ್' ಪತ್ರಿಕೆಗಳಲ್ಲಿ ಹದಿನಾಲ್ಕು ರ್ಷಗಳ ಕಾಲ ಪತ್ರಕರ್ತನಾಗಿ ಕಾರ್ಯ ನಿರ್ವಹಿಸಿದ್ದಾರೆ. ಸಧ್ಯ ಚಲನಚಿತ್ರ ನಿರ್ದೇಶನದಲ್ಲಿ ತೊಡಗಿಸಿಕೊಂಡಿದ್ದಾರೆ. 'ಮಾದಪ್ಪನ ಸಾವು', 'ಅದೃಶ್ಯ ಲೋಕದ ಮಾಯೆ'. 'ನಿರ್ವಾಣ', 'ಗಾಂಧಿ ವೃತ್ತದ ದಂಗೆ' ಕಥಾ ಸಂಕಲನ, 'ಮನಸೆಂಬ ಮಾಯಾವಿ' ಆಯ್ದ ಕತೆಗಳ ಸಂಕಲನ. 'ಜೋಗವ್ವ', 'ತಲ್ಲಣ', 'ನೆಲೆ', 'ದಾಳಿ' ಕಾದಂಬರಿ ಸೇರಿದಂತೆ ಒಟ್ಟು ಹತ್ತು ಕೃತಿಗಳು ಪ್ರಕಟವಾಗಿವೆ.
1 Postಕುಸುಮಾ ಶಾನಭಾಗ
ಹಿರಿಯ ಪತ್ರಕರ್ತೆ. ಕಥೆಗಾರ್ತಿ. ‘ನೆನಪುಗಳ ಬೆನ್ನೇರಿ’ ಇವರ ಕಥಾ ಸಂಕಲನ. ‘ಕಾಯದ ಕಾರ್ಪಣ್ಯ’ ಲೈಂಗಿಕ ಕಾರ್ಯಕರ್ತೆಯರ ಕುರಿತ ಕಥನ.
5 Postsಕೃತಿ ಆರ್
ಮಾನವಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀದರೆ. ಅಮೆರಿಕಾದಲ್ಲಿ ಒಳಾಂಗಣ ವಿನ್ಯಾಸದಲ್ಲಿ ವ್ಯಾಸಾಂಗ ನಡೆಸಿದ್ದಾರೆ. ಸಾಹಿತ್ಯ, ಸಮಾಜಶಾಸ್ತ್ರ, ಸಂಗೀತ, ಒಳಾಂಗಣ ವಿನ್ಯಾಸ ಹೀಗೆ ಹಲವು ಹತ್ತು ಆಸಕ್ತಿ ಹಾಗೂ ಪರಿಣತಿ ಇರುವ ಕೃತಿ.ಆರ್, ಸದ್ಯಕ್ಕೆ ಸಾಗರದಲ್ಲಿ ತೋಟ ನೋಡಿಕೊಳ್ಳುತ್ತಿದ್ದಾರೆ.
2 Posts
ಕೃತಿ ಆರ್ ಪುರಪ್ಪೇಮನೆ
ಕೃತಿ ಹೊಸನಗರ ತಾಲ್ಲೂಕಿನ ಪುರಪ್ಪೇಮನೆ ಗ್ರಾಮದವರು. ಕೃಷಿಕರು. ಬಿಡುವಿನಲ್ಲಿ ಮಹಿಳಾ ತಾಳಮದ್ದಲೆ ತಂಡ, ಭಾಗವತಿಕೆ, ಬರವಣಿಗೆ ಹಾಗೂ ಅನುವಾದದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ.
13 Postsಕೃಪಾಕರ್ ಸೇನಾನಿ
ಅಂತರಾಷ್ಟ್ರೀಯ ಖ್ಯಾತಿಯ ವನ್ಯ ಛಾಯಾಚಿತ್ರಗ್ರಾಹಕ ಜೋಡಿ.ಬಂಡೀಪುರದ ಕಾಡಿನೊಳಗೆ ಬದುಕುತ್ತ, ಬೆಳೆಯುತ್ತ ಬಂದ ಇವರಿಬ್ಬರದು ಈಗ ಅಂತಾರಾಷ್ಟ್ರೀಯ ಹೆಸರು. ಊರು ಮೈಸೂರು.
1 Post
ಕೃಷ್ಣ ದೇವಾಂಗಮಠ
ಕೃಷ್ಣ ದೇವಾಂಗಮಠ ಬೆಳಗಾವಿಯ ರಾಮದುರ್ಗದವರು. ಸಿನಿಮಾ ನಿರ್ದೇಶನ ವಿಭಾಗದಲ್ಲಿ ಕೆಲಸ. "ಭಾವಬುತ್ತಿ" ಪ್ರಕಟಿತ ಕವನ ಸಂಕಲನ.
30 Posts
ಕೃಷ್ಣಪ್ರಕಾಶ್ ಉಳಿತ್ತಾಯ
ಮಂಗಳೂರಿನ ಪೆರ್ಮಂಕಿಯವರಾದ ಕೃಷ್ಣಪ್ರಕಾಶ ಉಳಿತ್ತಾಯ ಉದ್ಯೋಗ ಕರ್ಣಾಟಕ ಬ್ಯಾಂಕ್ ಪ್ರಬಂಧಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಅಗರಿ ಮಾರ್ಗ’ ಮತ್ತು ‘ಸುಘಾತ’ ಅವರ ಪ್ರಕಟಿತ ಕೃತಿಗಳು. ಯಕ್ಷಗಾನ ಹಿಮ್ಮೇಳ ಚೆಂಡೆ ಮದ್ದಳೆ, ಯಕ್ಷಗಾನ ನಾಟ್ಯಾಭ್ಯಾಸ, ಮತ್ತು ಮೃದಂಗವಾದನದಲ್ಲಿ ಆಸಕ್ತಿ ಹೊಂದಿದ್ದಾರೆ.
15 Posts
ಕೆ. ಪ್ರಭಾಕರನ್
ಮಲಯಾಳಂ ಮೂಲದ ಕನ್ನಡಿಗರಾಗಿರುವ ಕೆ. ಪ್ರಭಾಕರನ್ ಕೆಪಿಟಿಸಿಎಲ್ನಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ನಿವೃತ್ತಿ ಹೊಂದಿದ್ದಾರೆ. ಕನ್ನಡ ಸಾಹಿತ್ಯ ಮತ್ತು ಸಮಾಜಶಾಸ್ತ್ರದ ಸ್ನಾತಕೋತ್ತರ ಪದವೀಧರರಾದ ಇವರು ಶಿವಮೊಗ್ಗದ ವಾಸಿ. ಮಲಯಾಳಂನಿಂದ ಎಂಟು ಕೃತಿಗಳು ಹಾಗೂ ಎರಡು ಇಂಗ್ಲಿಷ್ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಇವರ ಅನೇಕ ಅನುವಾದಿತ ಕಥೆಗಳು ಮಯೂರ, ಉದಯವಾಣಿ ಮುಂತಾದ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.
2 Posts
ಕೆ. ವೈ. ನಾರಾಯಣಸ್ವಾಮಿ
ಕವಿ, ನಾಟಕಕಾರ ಹಾಗೂ ವಿಮರ್ಶಕರಾಗಿ ಗುರುತಿಸಿಕೊಂಡಿರುವ ಕೆ.ವೈ. ನಾರಾಯಣ ಸ್ವಾಮಿ ಅವರು ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರು. ಪಂಪಭಾರತ, ಕಳವು, ಅನಭಿಜ್ಞ ಶಾಕುಂತಲ, ಮಳೆಮಾಂತ್ರಿಕ, ಚಕ್ರರತ್ನ ಮುಂತಾದ ನಾಟಕಗಳನ್ನು ಬರೆದಿದ್ದಾರೆ. ಕುವೆಂಪು ಅವರ ‘ಮಲೆಗಳಲ್ಲಿ ಮದುಮಗಳು’ ಕಾದಂಬರಿಯನ್ನು ರಂಗರೂಪಕ್ಕಿಳಿಸಿದವರು. ‘ಶೂದ್ರತಪಸ್ವಿ ಕೃತಿ’ಯನ್ನು ತೆಲುಗಿಗೆ ಅನುವಾದಿಸಿದ್ದಾರೆ. ಸಂಘಟನಾತ್ಮಕ ಚಟುವಟಿಕೆಗಳಲ್ಲಿ, ಸಿನಿಮಾ, ಸಂಗೀತ ಕ್ಷೇತ್ರಗಳಲ್ಲಿಯೂ ಅವರು ಸಕ್ರಿಯವಾಗಿ ಗುರುತಿಸಿಕೊಂಡಿದ್ದಾರೆ.
1 Post
ಕೆ.ಆರ್.ಉಮಾದೇವಿ ಉರಾಳ
ಉಮಾದೇವಿ ನಿವೃತ್ತ ಉಪನ್ಯಾಸಕಿ. ಹಲವು ಪತ್ರಿಕೆಗಳಲ್ಲಿ ಇವರ ಲೇಖನಗಳು ಪ್ರಕಟಗೊಂಡಿವೆ. "ಮುಂಬೆಳಕಿನ ಮಿಂಚು", "ಮಕ್ಕಳಿಗಿದು ಕಥಾ ಸಮಯ" ಇವರ ಪ್ರಕಟಿತ ಕೃತಿಗಳು.
4 Postsಕೆ.ಎಲ್. ಪದ್ಮಿನಿ ಹೆಗಡೆ
ಲೇಖಕಿ ಮತ್ತು ತತ್ತ್ವಶಾಸ್ತ್ರ ಪ್ರಾಧ್ಯಾಪಕಿ. ಮುಖ್ಯ ಪುಸ್ತಕಗಳು: ಗ್ರೀಕ್ ತತ್ತ್ವಶಾಸ್ತ್ರ ಮತ್ತು ಆಧುನಿಕ ವಿಚಾರವಾದ, ತಪಸ್ವಿ, ದಕ್ಷಿಣೇಶ್ವರ, ಧ್ಯಾನ, ನಿವೇದಿತ ಮತ್ತು ಪ್ರಕೃತಿದೈವೈಕ್ಯವಾದ., ಚಿತ್ರದುರ್ಗ ಜಿಲ್ಲೆ ಹೊಳಲಕೆರೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿದ್ದರು. ಈಗ ಮೈಸೂರಿನಲ್ಲಿದ್ದಾರೆ.
1 Post
ಕೆ.ಎಲ್. ಹೇಮಾವತಿ
ಕೆಲಕಾಲ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿದ್ದ ಹೇಮಾವತಿ ಸದ್ಯ ಗೃಹಿಣಿ. ಪಕ್ಷಿಗಳ ಬಗ್ಗೆ, ಬರವಣಿಗೆ, ಕ್ವಿಜ್ ನಲ್ಲಿ ಆಸಕ್ತಿ.
1 Post
ಕೆ.ವಿ. ತಿರುಮಲೇಶ್
ಹೈದರಾಬಾದಿನಲ್ಲಿ ನೆಲೆಸಿರುವ ಕನ್ನಡದ ಹಿರಿಯ ಕವಿ, ಲೇಖಕ ಮತ್ತು ಭಾಷಾಶಾಸ್ತ್ರಜ್ಞರು, ಮೂಲತಃ ಕಾಸರಗೋಡಿನ ಬಳಿಯ ಕಾರಡ್ಕದವರು. ಹೈದರಾಬಾದಿನ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಗ್ಲೀಷ್ ಅಂಡ್ ಫಾರಿನ್ ಲಾಂಗ್ವೇಜಸ್ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ನಿವೃತ್ತಿಯನ್ನು ಹೊಂದಿ, ನಂತರ ಯೆಮನ್ ದೇಶದಲ್ಲಿ ಕೆಲಕಾಲ ಇಂಗ್ಲೀಷ್ ಅಧ್ಯಾಪನ ಮಾಡಿ, ಈಗ ಹೈದರಾಬಾದಿನಲ್ಲಿ ತಮ್ಮ ನಿವೃತ್ತಿ ಜೀವನವನ್ನು ಕಳೆಯುತ್ತಿದ್ದಾರೆ. ನಾಟಕ, ಕವನ, ಕಥೆ, ಕಾದಂಬರಿಗಳನ್ನು ರಚಿಸಿರುವ ಅವರು ಭಾಷಾವಿಜ್ಞಾನ ಕ್ಷೇತ್ರದಲ್ಲಿ ಮೌಲಿಕ ಕೃತಿಗಳನ್ನು ಪ್ರಕಟಿಸಿರುವ ವಿದ್ವಾಂಸರು. ವಿಮರ್ಶಕರು.
49 Posts
ಕೆರೆಮನೆ ಶಿವಾನಂದ ಹೆಗಡೆ
ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿಯ ನಿರ್ದೇಶಕರಾಗಿರುವ ಕೆರೆಮನೆ ಶಿವಾನಂದ ಹೆಗಡೆ ಅವರು ಹೊನ್ನಾವರದವರು. ಯಕ್ಷಗಾನದ ದಂತಕತೆಯೆಂದೆ ಪ್ರಸಿದ್ಧರಾದ ಕೆರೆಮನೆ ಶಂಭು ಹೆಗಡೆಯವರ ಮಗ, ಶಿವರಾಮ ಹೆಗಡೆಯವರ ಮೊಮ್ಮಗ... ಕರ್ನಾಟಕ ಸಂಗೀತ ನಾಟಕ ಅಕಾಡೆಮಿ ಸದಸ್ಯರಾಗಿ ಕೆಲಸ ಮಾಡಿದವರು. ಭಾರತದ ಕಲಾಪ್ರಕಾರಗಳ ಕುರಿತು ಉತ್ತಮ ಗ್ರಹಿಕೆ ಇರುವ, ಕೆರೆಮನೆ ಅವರು ಸ್ವತಃ ಯಕ್ಷಗಾನ ಕಲಾವಿದರು. ಬರಹ ಅವರ ಮೆಚ್ಚಿನ ವಿಷಯ
1 Post
ಕೇಶವ ಕುಲಕರ್ಣಿ
ಹುಟ್ಟಿ ಬೆಳೆದು ಓದಿದ್ದು ಬಿಜಾಪುರ, ಬಾಗಲಕೋಟೆ, ಹುಬ್ಬಳ್ಳಿ ಮತ್ತು ಮೈಸೂರು. ವೃತ್ತಿಯಿಂದ ವೈದ್ಯ - ರೇಡಿಯಾಲಾಜಿ. ಸಾಹಿತ್ಯ, ಸಂಗೀತ ಮತ್ತು ಸಿನೆಮಾಗಳಲ್ಲಿ ಆಸಕ್ತಿ. ೨೦೦೪ರಿಂದ ಇಂಗ್ಲೆಂಡ್ ನಿವಾಸಿ, ವಾಸ ಇಂಗ್ಲೆಂಡಿನ ಬರ್ಮಿಂಗ್-ಹ್ಯಾಮ್ ನಗರ. ಕೆಲವು ಕತೆಗಳು ಕನ್ನಡ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಇಂಗ್ಲೆಂಡ್ ಕನ್ನಡಿಗರ `<a href="http://www.anivaasi.com/">ಅನಿವಾಸಿ</a>` ಎಂಬ ಜಾಲತಾಣದಲ್ಲಿ ಸಕ್ರಿಯ.
18 Posts
ಕೋಡಿಬೆಟ್ಟು ರಾಜಲಕ್ಷ್ಮಿ
<strong>ಮಂಗಳೂರಿನವರಾದ ಕೋಡಿಬೆಟ್ಟು ರಾಜಲಕ್ಷ್ಮಿ ಪತ್ರಕರ್ತೆಯಾಗಿ ಕೆಲಸ ಮಾಡಿದವರು. ‘ಒಂದುಮುಷ್ಟಿ ನಕ್ಷತ್ರ’ ಅವರು ಬರೆದ ಕಥಾ ಸಂಕಲನ. ‘ಅಮ್ಮನ ಜೋಳಿಗೆ’ ಪ್ರಬಂಧ ಸಂಕಲನ. </strong>
42 Postsಕೌಶಿಕ್ ಕುಕ್ಕೆಮನೆ
ಕೌಶಿಕ್ ಕುಕ್ಕೆಮನೆ ಧರ್ಮಸ್ಥಳದ ಹತ್ತಿರದ ಪುಟ್ಟದೊಂದು ಹಳ್ಳಿಯವರು. ವಿಜ್ಞಾನ, ಸಾಹಿತ್ಯ, ರಂಗಭೂಮಿ ಮತ್ತು ಸಿನಿಮಾ ಅವರ ಆಸಕ್ತಿಯ ಕ್ಷೇತ್ರಗಳು. ಸದ್ಯ ಹೈದರಾಬಾದ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಯಾಗಿದ್ದು ಜೈವಿಕ ಗಡಿಯಾರಗಳ ಬಗ್ಗೆ ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದಾರೆ.
1 Postಕ್ಷಮಾ ವಿ. ಭಾನುಪ್ರಕಾಶ್
ಕ್ಷಮಾ ಸೂಕ್ಷ್ಮಾಣುಜೀವಿ ವಿಜ್ಞಾನದಲ್ಲಿ ಎಂ.ಎಸ್.ಸಿ ಪದವೀಧರೆ. ವಿಜ್ಞಾನ ಶಿಕ್ಷಕಿ. ವಿಜ್ಞಾನ ಲೇಖನಗಳ ಲೇಖಕಿ ಮತ್ತು ಅನುವಾದಕಿ. ರಿಸರ್ಚ್ ಮ್ಯಾಟರ್ಸ್ ನಲ್ಲಿ ವಿಜ್ಞಾನ ಲೇಖನಗಳ ಕನ್ನಡ ವಿಭಾಗದಲ್ಲಿ ಸಂಪಾದಕಿಯೂ ಆಗಿರುವ ಇವರು ಗಾಯಕಿಯೂ, ಕಂಠದಾನ ಕಲಾವಿದೆಯೂ ಹೌದು.
1 Post
ಕ್ಷಿತಿಜ್ ಬೀದರ್
ಬಸವರಾಜ್ ಮಠಪತಿ, ಕ್ಷಿತಿಜ್ ಬೀದರ್ ಕಾವ್ಯನಾಮದ ಮೂಲಕ ಪರಿಚಿತರು. ಬೀದರ್ ಜಿಲ್ಲೆಯವರಾದ ಇವರು ಕತೆಗಾರರು, ಕಾದಂಬರಿಕಾರರು. ಈಗ ತುಮಕೂರಿನಲ್ಲಿ ವಿಶ್ರಾಂತಿ ಜೀವನ ನಡೆಸುತ್ತಿದ್ದಾರೆ. ಈವರೆಗೆ 36 ಕೃತಿಗಳನ್ನು ಪ್ರಕಟಿಸಿದ್ದಾರೆ. ಅದರಲ್ಲಿ ೧೫ ಕಾದಂಬರಿ, ೯ ಕಥಾಸಂಕಲನ , ೨ ಮಕ್ಕಳ ಕಥಾಸಂಕಲನ, ೩ ರೇಷ್ಮೆ ಉದ್ಯಮ ಮತ್ತು ೭ ಚಿಂತನ ಕೃತಿ ಸೇರಿವೆ.
1 Postಗಜಾನನ ಈಶ್ವರ ಹೆಗಡೆ
ಗಜಾನನ ಈಶ್ವರ ಹೆಗಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಪ್ರಧ್ಯಾಪಕರು. ಇವರ ಪ್ರಕಟಿತ ಕೃತಿಗಳು ಶ್ರೀಕಲ್ಪ, ಕವನ ಸಂಕಲನ; ಗುರು, ನೀಳ್ಗವನ; ಸಮಾಜಮುಖಿ, ಗೀತ ನಾಟಕ; ರಸರಾಮಾಯಣ, ಕಾವ್ಯ; ಲೋಕ ಶಂಕರ, ಕಾವ್ಯ. ರಂಗದಲ್ಲಿ ಪ್ರದರ್ಶಿತವಾದ ಗೀತನಾಟಕಗಳು ಶ್ರೀರಾಮ ಚಂದನ, ಶರಣ ಸಂಕುಲ, ಶಿವರಾಗಿಣಿ, ಭವತಾರಿಣಿ. ಹೊಯ್ಸಳ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಇವರಿಗೆ ದೊರೆತಿವೆ. ಇವರ ಕವನ, ಕಥೆ, ವಿಮರ್ಶೆ, ಪ್ರಬಂಧಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಣೆಗೊಂಡಿವೆ.
1 Post
ಗಿರಿಜಾ ರೈಕ್ವ
ಗಿರಿಜಾ ರೈಕ್ವ ವೃತ್ತಿಯಲ್ಲಿ ಕಾರ್ಪೋರೇಟ್ ರಿಯಲ್ ಎಸ್ಟೇಟ್ ಮತ್ತು ಫೆಸಿಲಿಟಿಸ್ ಉದ್ಯೋಗಿ. ಅಲೆದಾಟ, ತಿರುಗಾಟ, ಹುಡುಕಾಟ ಆಸಕ್ತಿ ಮತ್ತು ರಂಗಭೂಮಿಯಲ್ಲಿ ಒಲವು ಹೊಂದಿದ್ದಾರೆ.
3 Posts
ಗಿರಿಜಾ ಶಾಸ್ತ್ರಿ
<div id=":nv" class="ii gt"> <div id=":oq" class="a3s aiL "> <div class="gmail_quote"> <div dir="auto">ಗಿರಿಜಾ ಸಾಸ್ತ್ರಿ ಅವರಿಗೆ ಕವಿತೆ ಮತ್ತು ವಿಮರ್ಶೆ ಬರೆಯುವುದರಲ್ಲಿ ಆಸಕ್ತಿ. ಮುಂಬಯಿ ವಿ.ವಿ.ಯಿಂದ "ಆಧುನಿಕ ಕನ್ನಡ ಕಥಾ ಸಾಹಿತ್ಯ ಒಂದು ಸ್ತ್ರೀವಾದಿ ಅಧ್ಯಯನ" ವಿಷಯದ ಕುರಿತು ಪಿಎಚ್.ಡಿ. ಮಾಡಿದ್ದಾರೆ. ಇವರ ೭-೮ ಪುಸ್ತಕಗಳು ಪ್ರಕಟವಾಗಿವೆ.</div> </div> </div> </div>
1 Post
ಗಿರಿಧರ್ ಗುಂಜಗೋಡು
ಊರು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಗುಂಜಗೋಡು. ಸದ್ಯ ಮೈಸೂರಿನಲ್ಲಿ ವಾಸ. ಓದು, ತಿರುಗಾಟ, ಚದುರಂಗ ಇತ್ಯಾದಿ ಇಷ್ಟದ ಆಸಕ್ತಿಗಳು. ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.
12 Posts
ಗೀತಾ ಹೆಗಡೆ
ಕವಯತ್ರಿ, ಲೇಖಕಿ ಗೀತಾ ಹೆಗಡೆಯವರಿಗೆ ಸಂಗೀತ ಮತ್ತು ಪ್ರಕೃತಿಯಲ್ಲಿ ಆಸಕ್ತಿ. ‘ಅಕ್ಷರ ಚೈತನ್ಯ’ ಇವರ ಪ್ರಕಟಿತ ಕೃತಿ.
2 Postsಗುರುಗಣೇಶ್ ಭಟ್ ಡಬ್ಗುಳಿ
ಗುರುಗಣೇಶ್ ಉತ್ತರ ಕನ್ನಡದ ಯಲ್ಲಾಪುರದವರು. ಪತ್ರಿಕೋದ್ಯಮ, ಸಾಹಿತ್ಯ, ಪರಿಸರ ಮತ್ತು ಕೃಷಿಯ ವಿದ್ಯಾರ್ಥಿ. ಊರೂರು ಅಲೆದಾಟ ಖುಷಿಯ ಕೆಲಸ. ಓದು, ಬರಹ ಇವರ ಹವ್ಯಾಸಗಳು.
3 Posts
ಗುರುದತ್ ಅಮೃತಾಪುರ
<div dir="auto">ಮೂಲತಃ ದಾವಣಗೆರೆಯವರಾದ ಗುರುದತ್ ಸಧ್ಯ ಜೆರ್ಮನಿಯ ಕಾನ್ಸ್ಟೆನ್ಸ್ನಲ್ಲಿ ವಾಸಿಸುತ್ತಿದ್ದಾರೆ. ವೃತ್ತಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಫೋಟೋಗ್ರಫಿ, ಪ್ರವಾಸ, ಚಾರಣ, ಪುಸ್ತಕಗಳ ಓದು ಇವರ ಹವ್ಯಾಸಗಳು..</div>
10 Posts
ಗುರುಪ್ರಸಾದ್ ಕಂಟಲಗೆರೆ
ಗುರುಪ್ರಸಾದ್ ಕಂಟಲಗೆರೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನವರು. ವೃತ್ತಿಯಲ್ಲಿ ಸರ್ಕಾರಿ ಶಾಲೆ ಶಿಕ್ಷಕ. ಕಪ್ಪುಕೋಣಗಳು (ಕವನ ಸಂಕಲನ), ಗೋವಿನ ಜಾಡು (ಕಥಾ ಸಂಕಲನ), ಕೆಂಡದ ಬೆಳುದಿಂಗಳು (ಕಥಾ ಸಂಕಲನ), ದಲಿತ ಸಾಂಸ್ಕೃತಿಕ ಕಥನಗಳ ಅಧ್ಯಯನ (ಸಂಶೋಧನೆ) ಪ್ರಕಟಿತ ಕೃತಿಗಳು. ಪ್ರಜಾವಾಣಿ ದೀಪಾವಳಿ ಕಥಾ ಪ್ರಶಸ್ತಿ 2019, ಪ್ರಜಾವಾಣಿ ದೀಪಾವಳಿ ಕವನ ಸ್ಪರ್ಧೆ ಬಹುಮಾನ, ಗೋವಿನಜಾಡು ಕೃತಿಗೆ ಕೆ.ಸಾಂಬಶಿವಪ್ಪ ಸ್ಮರಣ ರಾಜ್ಯ ಪ್ರಶಸ್ತಿ ದೊರೆತಿದೆ.
18 Posts
ಗುರುಪ್ರಸಾದ್ ಕುರ್ತಕೋಟಿ
ಗುರುಪ್ರಸಾದ್ ಕುರ್ತಕೋಟಿ ಇಪ್ಪತ್ತು ವರ್ಷಗಳ ಕಾಲ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸಿ ಕೃಷಿಗಿಳಿದ ಉತ್ಸಾಹಿರೈತರು. "ಬೆಳೆಸಿರಿ" ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ. "ಕೇಶಕ್ಷಾಮ" (ಹಾಸ್ಯ ಬರಹಗಳ ಸಂಕಲನ) ಸೇರಿ ಇವರ ಮೂರು ಕೃತಿಗಳು ಪ್ರಕಟಗೊಂಡಿವೆ.
2 Posts
ಗೌರಿ ಅದಮ್ಯ
ಗೌರಿ ಅದಮ್ಯ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರದವರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಎಂ.ಎಸ್ಸಿ ಪದವಿ ಓದಿದ್ದಾರೆ. ಸದ್ಯ ಬೆಂಗಳೂರಲ್ಲಿ ಹೆಗ್ಗೋಡು ಪ್ರಸನ್ನ ಅವರೊಟ್ಟಿಗೆ ಗ್ರಾಮ ಸೇವಾ ಸಂಘದಲ್ಲಿ ಕೆಲಸ ಮಾಡುತ್ತಿದ್ದಾರೆ.
1 Post
ಚಂದ್ರಪ್ರಭ ಕಠಾರಿ
ಹುಟ್ಟಿದ್ದು, ಬೆಳೆದದ್ದು ಬೆಂಗಳೂರಿನ ಗಾಂಧಿನಗರದಲ್ಲಿ. ಸಿವಿಲ್ ಇಂಜಿನಿಯರ್ ಪದವಿ ಪಡೆದದ್ದು ತುಮಕೂರಿನ ಸಿದ್ಧಗಂಗಾ ತಾಂತ್ರಿಕ ಕಾಲೇಜಿನಲ್ಲಿ. ವೃತ್ತಿಯಲ್ಲಿ ಸಿವಿಲ್ ಇಂಜಿನಿಯರ್ ಆಗಿ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಸಲಹೆಗಾರ ಮತ್ತು ಗುತ್ತಿಗೆದಾರ. ಹವ್ಯಾಸವಾಗಿ ಕತೆ, ಕವನ ಮತ್ತು ನಾಟಕ ರಚನೆ. ಅಂಬು(ನಾಟಕ), ಕಠಾರಿ ಕಥೆಗಳು ಮತ್ತು ಕಾಗೆ ಮೋಕ್ಷ (ಕಥಾ ಸಂಕಲನ), ಅಗೋಚರ ಕೈ (ಕವನ ಸಂಕಲನ).
1 Post
ಚಂದ್ರಮತಿ ಸೋಂದಾ
ಚಂದ್ರಮತಿ ಸೋಂದಾ ಅವರಿಗೆ ಸಾಹಿತ್ಯದಲ್ಲಿ ಆಸಕ್ತಿ. ‘ಮೈಸೂರು ಮಿತ್ರ’ದಲ್ಲಿ ಬರೆದ ಇವರ ಅಂಕಣಗಳು ಆರು ಸಂಕಲನಗಳಲ್ಲಿ ಪ್ರಕಟವಾಗಿವೆ. ಮಹಿಳಾಪರ ಚಿಂತನೆ ಅವರ ಆದ್ಯತೆ.
3 Postsಚನ್ನಕೇಶವ
ಕನ್ನಡ ರಂಗಭೂಮಿಯ ಪೂರ್ಣಪ್ರಮಾಣದ ಕೃಷಿಕ. ನಾಟಕ ಆಡುವುದು, ಆಡಿಸುವುದು,ಆಡುವುದನ್ನು ಕಲಿಸುವುದು, ನಾಟಕ ವಿನ್ಯಾಸ, ರಸಗ್ರಹಣ ಹೀಗೆ ತನ್ನ ಪೂರ್ಣ ಹೊತ್ತನ್ನು ರಂಗಭೂಮಿಯಲ್ಲೇ ಕಳೆಯುವವರು.
5 Posts
ಚಾಂದ್ ಪಾಷ ಎನ್. ಎಸ್.
ಚಾಂದ್ ಪಾಷ ಮೂಲತಃ ಗುಲ್ಬರ್ಗಾ ಜಿಲ್ಲೆಯ ಜೆವರ್ಗಿ ತಾಲೂಕಿನ ಮಂದೇವಾಲದವರು. ಪ್ರಸ್ತುತ ಬೆಂಗಳೂರು ವಾಸಿ. ಬೆಂಗಳೂರು ವಿ. ವಿ. ಯಲ್ಲಿ ಕನ್ನಡ ಎಂ. ಎ. ಪದವಿ ಪಡೆದಿದ್ದು ಪ್ರಸ್ತುತ ಬೆಂಗಳೂರಿನ ದಿ ಆಕ್ಸ್ಫರ್ಡ್ ವಿಜ್ಞಾನ ಕಾಲೇಜಿನಲ್ಲಿ ಕನ್ನಡ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. "ಮೌನದ ಮಳೆ" ಮತ್ತು "<strong>ಚಿತ್ರ ಚಿಗುರುವ ಹೊತ್ತು" ಇವರ ಪ್ರಕಟಿತ ಕವನ ಸಂಕಲನಗಳು</strong>
0 Postsಚೇತನಾ ತೀರ್ಥಹಳ್ಳಿ
ಕವಯತ್ರಿ, ಲೇಖಕಿ, ಪತ್ರಕರ್ತೆ ಮತ್ತು ಸಾಮಾಜಿಕ ಹೋರಾಟಗಾರ್ತಿ. ತೀರ್ಥಹಳ್ಳಿಯವರು. ಈಗ ಬೆಂಗಳೂರು. ಭಾಮಿನಿ ಷಟ್ಪದಿ ಇವರ ಹೆಸರಾಂತ ಅಂಕಣ ಕಾದಂಬರಿ.
1 Postಜಯಂತ ಕಾಯ್ಕಿಣಿ
ಕವಿ, ಕಥೆಗಾರ, ಕನ್ನಡದ ಜನಪ್ರಿಯ ಸಿನೆಮಾ ಗೀತ ರಚನೆಗಾರ. ಮೂಲತ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದವರು. ಈಗ ಇರುವುದು ಬೆಂಗಳೂರು.
3 Posts
ಜಯಶ್ರೀನಿವಾಸ ರಾವ್
ಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು. ‘<strong><em><u>ಚಂದ್ರಮುಖಿಯ ಘಾತವು</u></em></strong>’ (1900) ಕಾದಂಬರಿಯನ್ನು, ‘<strong><em>ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ</em></strong>’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘<strong><em>ವಿಸ್ಮಯಜನಕವಾದ ಹಿಂಸೆಯ ಕ್ರಮವು</em></strong>’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ. ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘<strong><em>ಸೆಷುರೆ</em></strong>’ ಹಾಗೂ ‘<strong><em>ಮ್ಯೂಜ಼್ ಇಂಡಿಯ</em></strong>’ ದಲ್ಲಿ ಪ್ರಕಟವಾಗಿವೆ. ಹೈದರಾಬಾದಿನ CIEFLನಿಂದ (ಈಗ The EFL University) ‘<strong>Translation and Transformation: The Early Days of the Novel in Kannada</strong>’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದ ಇವರು ಪ್ರಸ್ತುತ ಹೈದರಾಬಾದಿನಲ್ಲಿರುವ ‘<strong>ಅರೋರಾಸ ತೆಕ್ನೊಲಾಜಿಕಲ್ ಅಂಡ್ ರಿಸರ್ಚ್ ಇನ್ಸ್ಟಿಟ್ಯೂಟ್</strong>’ ನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದಾರೆ.
1 Postಜೆ.ವಿ.ಕಾರ್ಲೊ
ಕಥೆಗಾರ, ಅನುವಾದಕ, ಕೃಷಿಕ ಮತ್ತು ಕಟ್ಟಡ ನಿರ್ಮಾಣಗಾರ. ಕನ್ನಡ ಮತ್ತು ಕೊಂಕಣಿ ಎರಡು ಭಾಷೆಗಳಲ್ಲೂ ಬರೆಯುತ್ತಾರೆ.'ಗಾಂಧಿಚೆಂ ಪರ್ಜಳಿಕ್ ಪುಢಾರ್ಪೊಣ್' ಎಂಬ ಅನುವಾದಿತ ಕೃತಿಗೆ 2014 ರಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಪುರಸ್ಕಾರ ಲಭಿಸಿದೆ. ಹುಟ್ಟಿದ್ದು ಸಕಲೇಶಪುರದ ಬಳಿ. ಈಗ ಇರುವುದು ಹಾಸನ.
1 Post
ಜ್ಯೋತಿ ಭಟ್
ಜ್ಯೋತಿ ಭಟ್ ಮೂಲತಃ ಉತ್ತರಕನ್ನಡದ ಮಂಚೀಕೇರಿ ಸಮೀಪದ ಬೊಮ್ಮನಹಳ್ಳಿಯವರು. ಇಂಗ್ಲಿಷ್ ಸಾಹಿತ್ಯದ ವಿದ್ಯಾರ್ಥಿ. ಸಂಯುಕ್ತ ಕರ್ನಾಟಕದಲ್ಲಿ ಪತ್ರಕರ್ತೆಯಾಗಿ ಕೆಲಕಾಲ ಕಾರ್ಯನಿರ್ವಹಿಸಿದ್ದಾರೆ. "ಸಖಿ ಗೀತೆ" ಅಂಕಣ ಬರಹಗಳ ಕೃತಿ. ಪ್ರಸ್ತುತ ಮಹಿಳಾ ಉದ್ಯಮಿ.
1 Postಟಿ ಕೆ ದಯಾನಂದ
ಕವಿ, ಕಥೆಗಾರ, ಪತ್ರಕರ್ತ,ಅಂಕಣಗಾರ ಹಾಗೂ ಎಲ್ಲಕ್ಕಿಂತ ಮಿಗಿಲಾಗಿ ಅಸಮಾನತೆ ಹಾಗೂ ಅನ್ಯಾಯಗಳ ವಿರುದ್ಧದ ಸಾಮಾಜಿಕ ಕಾರ್ಯಕರ್ತ.
1 Postಟಿ.ಎಸ್. ಗೊರವರ
ಟಿ.ಎಸ್. ಗೊರವರ ಗದಗ ಜಿಲ್ಲೆಯ ರೋಣ ತಾಲೂಕಿನ ರಾಜೂರ ಗ್ರಾಮದವರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. ಭ್ರಮೆ (2007) ಕಥಾ ಸಂಕಲನ, ಆಡು ಕಾಯೋ ಹುಡುಗನ ದಿನಚರಿ (2011) ಅನುಭವ ಕಥನ, ಕುದರಿ ಮಾಸ್ತರ (2012) ಕಥಾ ಸಂಕಲನ, ರೊಟ್ಟಿ ಮುಟಗಿ (2016) ಕಾದಂಬರಿ, ಮಲ್ಲಿಗೆ ಹೂವಿನ ಸಖ (2018) ಕಥಾ ಸಂಕಲನ ಪ್ರಕಟಿತ ಕೃತಿಗಳು. ಕರ್ನಾಟಕ ಸಾಹಿತ್ಯ ಅಕಾಡೆಮಿ ಪುರಸ್ಕಾರ, ದ.ರಾ.ಬೇಂದ್ರೆ ಗ್ರಂಥ ಬಹುಮಾನ, ಅರಳು ಪ್ರಶಸ್ತಿ, ಪ್ರಜಾವಾಣಿ, ಕನ್ನಡಪ್ರಭ ದೀಪಾವಳಿ ಕಥಾಸ್ಪರ್ಧೆ ಸೇರಿದಂತೆ ಹಲವು ಪುರಸ್ಕಾರಗಳು ಲಭಿಸಿವೆ. ಸದ್ಯ ‘ಸಂಗಾತ’ ತ್ರೈಮಾಸಿಕ ಸಾಹಿತ್ಯ ಪತ್ರಿಕೆ ಸಂಪಾದಕ.
1 Post
ಟಿ.ಎಸ್. ಗೋಪಾಲ್
ತಿರು ಶ್ರೀನಿವಾಸಾಚಾರ್ಯ ಗೋಪಾಲ್ ಭಾಷೆ, ಸಾಹಿತ್ಯ, ವನ್ಯಜೀವನ, ವಿಜ್ಞಾನದ ಕುರಿತು ಲೇಖನಗಳನ್ನು, ಪುಸ್ತಕಗಳನ್ನು ಬರೆದಿದ್ದಾರೆ. ಅವರ 'ಕಾಡು ಕಲಿಸುವ ಪಾಠ' ಕೃತಿಗೆ ವಿಜ್ಞಾನ ವಿಷಯದಲ್ಲಿ ೨೦೧೩ರ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ದೊರೆತಿದೆ.
72 Posts
ಟಿ.ಜಿ. ಶ್ರೀನಿಧಿ
ಮಾಹಿತಿ ತಂತ್ರಜ್ಞಾನ ಕುರಿತು ಕನ್ನಡದಲ್ಲಿ ಬರೆಯುವ ಟಿ.ಜಿ. ಶ್ರೀನಿಧಿ ಬಿ.ಇ. ಪದವೀಧರರು. ವಿಜ್ಞಾನ ವಿಷಯಗಳ ಕುರಿತು ಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆಯುತ್ತಿದ್ದಾರೆ. ಹಾರುವ ಕನಸನು ಕಂಡವರು, ಅಂತರಿಕ್ಷದ ಅದ್ಭುತಗಳು, ಕಂಪ್ಯೂಟರ್ ಕನ್ನಡ ಮತ್ತು ಕೆ.ಪಿ.ರಾವ್ ಎಂಬ ಕೃತಿಗಳು ಸೇರಿದಂತೆ ಹದಿನೈದಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ 'ಶ್ರೇಷ್ಠ ಲೇಖಕ' ಪ್ರಶಸ್ತಿ ಅವರಿಗೆ ಸಂದಿದೆ.
1 Postಡಾ. ಅಶೋಕ್ ಕುಮಾರ್
ಶಸ್ತ್ರಚಿಕಿತ್ಸಾ ವೈದ್ಯರಾಗಿರುವ ಡಾ.ಅಶೋಕ್ ಕುಮಾರ್ ಅನುವಾದಸಾಹಿತ್ಯದಲ್ಲಿ ಆಸಕ್ತಿ ಉಳ್ಳವರು. ಮಲಯಾಳಂ ಮತ್ತು ತಮಿಳು ಭಾಷೆಗಳಿಂದ ಹಲವು ಅನುವಾದಗಳನ್ನು ಮಾಡಿದ್ದಾರೆ.ತಮ್ಮ ಅನುವಾದಕ್ಕಾಗಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬೆಂಗಳೂರು ವಾಸಿ.
1 Postಡಾ. ಆನಂದ್ ಋಗ್ವೇದಿ
ಡಾ. ಆನಂದ್ ಋಗ್ವೇದಿ ಮೂಲತಃ ಕುಕ್ಕುವಾಡದವರು. ಸಧ್ಯ ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಸಹಾಯಕ ಆಡಳಿತ ಅಧಿಕಾರಿ. ಜನ್ನ ಮತ್ತು ಅನೂಹ್ಯ ಸಾಧ್ಯತೆ, ಮಗದೊಮ್ಮೆ ನಕ್ಕ ಬುದ್ಧ( ಕಥಾ ಸಂಕಲನಗಳು), ಉರ್ವಿ (ನಾಟಕ), ನಿನ್ನ ನೆನಪಿಗೊಂದು ನವಿಲುಗರಿ, ತಥಾಗತನಿಗೊಂದು ಪದ್ಮ ಪತ್ರ ( ಕವನ ಸಂಕಲನಗಳು) ತಳಮಳದ ಹಾದಿ ಪೂರ್ವೋತ್ತರ ( ವಿಮರ್ಶಾ ಸಂಕಲನಗಳು) ಕಥಾ ಸ್ವರೂಪ, ಅನುಭವದ ಅಮೃತತ್ವ ( ಸಂಶೋಧನೆ) ಪ್ರಕಟಿತ ಕೃತಿಗಳು.
1 Postಡಾ. ಆನಂದ್ ಋಗ್ವೇದಿ ಡಾ. ಆನಂದ್ ಋಗ್ವೇದಿ
ಡಾ. ಆನಂದ್ ಋಗ್ವೇದಿಯವರು ಮೂಲತಃ…. ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಸಹಾಯಕ ಆಡಳಿತ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜನ್ನ ಮತ್ತು ಅನೂಹ್ಯ ಸಾಧ್ಯತೆ, ಮಗದೊಮ್ಮೆ ನಕ್ಕ ಬುದ್ಧ ( ಕಥಾ ಸಂಕಲನಗಳು), ಉರ್ವಿ (ನಾಟಕ), ನಿನ್ನ ನೆನಪಿಗೊಂದು ನವಿಲುಗರಿ, ತಥಾಗತನಿಗೊಂದು ಪದ್ಮ ಪತ್ರ (ಕವನ ಸಂಕಲನಗಳು) ತಳಮಳದ ಹಾದಿ, ಪೂರ್ವೋತ್ತರ (ವಿಮರ್ಶಾ ಸಂಕಲನಗಳು) ಕಥಾ ಸ್ವರೂಪ, ಅನುಭವದ ಅಮೃತತ್ವ ( ಸಂಶೋಧನೆ) ಇವರ ಪ್ರಕಟಿತ ಕೃತಿಗಳು. ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ ಮತ್ತು ಫೆಲೋಶಿಪ್ ಮತ್ತು ಕಡೆಂಗೋಡ್ಲು ಕಾವ್ಯ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಇವರಿಗೆ ದೊರೆತಿವೆ.
0 Posts
ಡಾ. ಎಂ. ವೇದಾಂತ ಏಳಂಜಿ
ಡಾ. ಎಂ.ವೇದಾಂತ ಏಳಂಜಿ ಇವರು ಕನ್ನಡ ವಿಶ್ವವಿದ್ಯಾಲಯ ‘ನವರತ್ನ ರಾಮರಾವ್ ಅವರ ಸಾಹಿತ್ಯಾಧ್ಯಯನ’ ಎಂಬ ವಿಷಯದ ಮೇಲೆ ಎಂ.ಫಿಲ್. ಪದವಿಯನ್ನು ಹಾಗೂ ‘ಕನ್ನಡ ಸಣ್ಣಕಥೆಗಳು: ಕಥನ ಮಾದರಿಗಳ ಅಧ್ಯಯನ’ ಎಂಬ ವಿಷಯದ ಮೇಲೆ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಬಳ್ಳಾರಿಯಲ್ಲಿ ಕನ್ನಡ ಅಧ್ಯಾಪಕರಾಗಿರುವ ಇವರು ಸಾಹಿತ್ಯ, ಸಂಶೋಧನೆ, ಸಂಸ್ಕೃತಿಗಳ ಓದು ಬರಹದಲ್ಲಿ ಆಸಕ್ತಿ ಹೊಂದಿದ್ದಾರೆ.
1 Postಡಾ. ಎಚ್ ಎಸ್ ಅನುಪಮಾ
ಉತ್ತರಕನ್ನಡ ಜಿಲ್ಲೆ ಹೊನ್ನಾವರದ ಬಳಿಯ ಕವಲಕ್ಕಿಯಲ್ಲಿ ವೈದ್ಯರಾಗಿದ್ಡಾರೆ. ಕವಿತೆ. ವೈಚಾರಿಕ ಚಿಂತನೆ ಮತ್ತು ವೈದ್ಯಕೀಯ ಬರಹಗಳು ಇವರ ವಿಶೇಷ.
5 Posts
ಡಾ. ಕೆ.ಬಿ. ಸೂರ್ಯಕುಮಾರ್
ಡಾ.ಕೆ.ಬಿ. ಸೂರ್ಯಕುಮಾರ್ ಅವರು ಹಿರಿಯ ವಿಧಿವಿಜ್ಞಾನ ತಜ್ಞರು. ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ 18 ವರ್ಷ ವಿಧಿವಿಜ್ಞಾನ ಪರಿಣತರಾಗಿ ಕೆಲಸ ಮಾಡಿದ್ದಾರೆ. ಕರ್ನಾಟಕ ಆರೋಗ್ಯ ಇಲಾಖೆಯಲ್ಲಿಯೂ ವಿಧಿವಿಜ್ಞಾನ ತಜ್ಞರಾಗಿ ತಮ್ಮ ತಜ್ಞ ಸಲಹೆ ನೀಡಿದ್ದಾರೆ. ಪ್ರಸ್ತುತ ಮಡಿಕೇರಿಯಲ್ಲಿ ವಾಸವಿರುವ ಇವರು ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜಿನಲ್ಲಿ ವಿಧಿ ವಿಜ್ಞಾನ ವಿಭಾಗದ ಪ್ರೊಫೆಸರ್. 'ವೈದ್ಯ ಕಂಡ ವಿಸ್ಮಯ' ಅವರು ಬರೆದ ಕೃತಿ.
20 Posts
ಡಾ. ಗೀತಾ ವಸಂತ
ಕವಯತ್ರಿ, ಕಥೆಗಾರ್ತಿ ಮತ್ತು ವಿಮರ್ಶಕಿ. ಹುಟ್ಟಿದ್ದು ಶಿರಸಿಯ ಎಕ್ಕಂಬಿ ಸಮೀಪದ ಕಾಡನಡುವಿನ ಒಂಟಿಮನೆ ಕಾಟೀಮನೆಯಲ್ಲಿ. ಈಗ ತುಮಕೂರು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿ. ‘ಚೌಕಟ್ಟಿನಾಚೆಯವರು’ ಇವರ ಪ್ರಮುಖ ಕಥಾ ಸಂಕಲನ. ‘ಪರಿಮಳದ ಬೀಜ’ ಕವನಸಂಕಲನ.
10 Postsಡಾ. ಜಿ. ಎಸ್. ಶಿವಪ್ರಸಾದ್
ಡಾ. ಜಿ.ಎಸ್. ಶಿವಪ್ರಸಾದ್ ವೃತ್ತಿಯಲ್ಲಿ ವೈದ್ಯರು. ಇಂಗ್ಲೆಂಡ್ ನ ಶೆಫ್ಪೀಲ್ಡ್ ನಲ್ಲಿ ನೆಲೆಸಿದ್ದಾರೆ. ಇವರ ಒಂದು ಕವನ ಸಂಕಲನ ಹಾಗೂ ಪ್ರವಾಸ ಕಥನ ಪ್ರಕಟವಾಗಿವೆ.
1 Post
ಡಾ. ಜ್ಯೋತಿ
ಜ್ಯೋತಿ, ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದು, ಪ್ರಸ್ತುತ ತುಮಕೂರು ವಿಶ್ವವಿದ್ಯಾನಿಲಯದ ಆಂಗ್ಲಭಾಷಾ ವಿಭಾಗದಲ್ಲಿ ಸಹಾಯಕ ಪ್ರಾದ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಇವರ ಬರಹಗಳು ಅನೇಕ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.
3 Posts
ಡಾ. ನಂದೀಶ್ವರ ದಂಡೆ
ಡಾ. ನಂದೀಶ್ವರ ದಂಡೆ ಹೊಸಪೇಟೆಯವರು. ಸಣ್ಣಕತೆ ಎಂದರೇನು, ಬಸವಣ್ಣ ಇವರ ಸಂಪಾದಿತ ಕೃತಿಗಳು. ಇವರ ಕತೆಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.
1 Postಡಾ. ನಾ. ಡಿಸೋಜ
ಹಿರಿಯ ಕಥೆಗಾರ, ಕಾದಂಬರಿಕಾರ, ಮಕ್ಕಳ ಸಾಹಿತಿ. ಸಾಗರದಲ್ಲಿ ವಾಸಿಸುತ್ತಿದ್ದಾರೆ. ಇವರ ಪೂರ್ಣ ಹೆಸರು ಡಾ.ನಾರ್ಬರ್ಟ್ ಡಿಸೋಜ.
2 Posts
ಡಾ. ನಾ. ದಾಮೋದರ ಶೆಟ್ಟಿ
ಡಾ.ನಾ.ದಾಮೋದರ ಶೆಟ್ಟಿ ನಿವೃತ್ತ ಕನ್ನಡ ಪ್ರಾಧ್ಯಾಪಕ. ರಂಗಭೂಮಿ, ಸಾಹಿತ್ಯರಂಗಗಳಲ್ಲಿ ದುಡಿಮೆ. ಅನುವಾದಕ್ಷೇತ್ರದಲ್ಲೂ ಸಾಧನೆ. ಅನುವಾದಕ್ಕಾಗಿ ಕೇಂದ್ರಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಭಾಷಾಭಾರತಿ ಸನ್ಮಾನ್ ಪಡೆದಿದ್ದಾರೆ. ಕರ್ನಾಟಕ ನಾಟಕ ಅಕಾಡೆಮಿಯ ಗೌರವ ಫೆಲೋಶಿಪ್ ಗೆ ಭಾಜನರಾಗಿದ್ದಾರೆ. 'ಗೆರೆ' ಇವರ ಇತ್ತೀಚೆಗಿನ ಕಾದಂಬರಿ.
1 Post
ಡಾ. ನಾ. ಮೊಗಸಾಲೆ
ಡಾ. ನಾ. ಮೊಗಸಾಲೆ ಕಾಸರಗೋಡು ತಾಲ್ಲೂಕಿನ ಕೋಳ್ಯೂರಿನ ಮೊಗಸಾಲೆಯವರು. ವೃತ್ತಿಯಲ್ಲಿ ಆಯುರ್ವೇದ ವೈದ್ಯರು. ಕಾವ್ಯದ ಜೊತೆ ಕಥೆ ಕಾದಂಬರಿಗಳನ್ನೂ ಬರೆದಿದ್ದಾರೆ. ವರ್ತಮಾನದ ಮುಖಗಳು, ಪಲ್ಲವಿ, ಪ್ರಭವ, ಕಾಮನ ಬೆಡಗು ಬೆಳಗು ಸೇರಿದಂತೆ ಹಲವು ಕವನ ಸಂಕಲನಗಳು, ಮಣ್ಣಿನ ಮಕ್ಕಳು, ಕನಸಿನ ಬಳ್ಳಿ, ಅನಂತ, ಧಾತು ಸೇರಿದಂತೆ ಹಲವು ಕಾದಂಬರಿಗಳು, ವ್ಯಕ್ತಿಚಿತ್ರಗಳ ಸಂಗ್ರಹ ಸೇರಿದಂತೆ ಇನ್ನೂ ಹಲವು ಕೃತಿಗಳನ್ನು ರಚಿಸಿದ್ದಾರೆ
4 Posts
ಡಾ. ಬಿ. ಜನಾರ್ದನ ಭಟ್
ಉಡುಪಿ ಜಿಲ್ಲೆಯ ಬೆಳ್ಮಣ್ಣಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದು, 2019 ರಲ್ಲಿ ನಿವೃತ್ತರಾಗಿದ್ದಾರೆ’ . ಕತೆ, ಕಾದಂಬರಿ, ಅನುವಾದ, ವಿಮರ್ಶೆ, ಮಕ್ಕಳ ಸಾಹಿತ್ಯ, ಸಂಪಾದಿತ ಗ್ರಂಥಗಳು ಅಲ್ಲದೇ ‘ಉತ್ತರಾಧಿಕಾರ’ , ‘ಹಸ್ತಾಂತರ’, ಮತ್ತು ‘ಅನಿಕೇತನ’ ಕಾದಂಬರಿ ತ್ರಿವಳಿ, ‘ಮೂರು ಹೆಜ್ಜೆ ಭೂಮಿ’, ‘ಕಲ್ಲು ಕಂಬವೇರಿದ ಹುಂಬ’, ‘ಬೂಬರಾಜ ಸಾಮ್ರಾಜ್ಯ’ ಮತ್ತು ‘ಅಂತಃಪಟ’ ಅವರ ಕಾದಂಬರಿಗಳು ಸೇರಿ ಜನಾರ್ದನ ಭಟ್ ಅವರ ಪ್ರಕಟಿತ ಕೃತಿಗಳ ಸಂಖ್ಯೆ 82.
79 Posts
ಡಾ. ಮಲರ್ ವಿಳಿ
ಡಾ. ಮಲರ್ ವಿಳಿ ಮೂಲತಃ ತಮಿಳುನಾಡಿನ ವೆಲ್ಲೂರಿನಲ್ಲಿ ಜನಿಸಿ ಬೆಂಗಳೂರಿನಲ್ಲಿ ಬೆಳೆದವರು. ಪ್ರಸ್ತುತ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. “ಮಾಸ್ತಿ ಮತ್ತು ಪುದುಮೈಪಿತ್ತನ್ ಸಣ್ಣ ಕಥೆಗಳ ಒಂದು ಅಧ್ಯಯನ” ಎಂಬ ಇವರ ಸಂಶೋಧನಾ ಪ್ರೌಢ ಪ್ರಬಂಧಕ್ಕೆ ಕುಪ್ಪಂನಲ್ಲಿರುವ ದ್ರಾವಿಡ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ. ಕಳೆದ ಎರಡು ದಶಕಗಳಿಂದ ಅನುವಾದ ಕ್ಷೇತ್ರದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾರೆ. ಕನ್ನಡ-ತಮಿಳು ಭಾಷೆಯ ಸೇತುವೆಯಾಗಿ ಕೆಲಸ ಮಾಡುತ್ತಿದ್ದಾರೆ. ತಮಿಳು ಸಾಹಿತ್ಯಕ್ಕೆ ಶ್ರೀಮಂತಿಕೆಯನ್ನು ತಂದುಕೊಟ್ಟಿರುವ ಸಂಗಂ ಸಾಹಿತ್ಯವನ್ನು ಕನ್ನಡಕ್ಕೆ ತರುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದಾರೆ. “ವೈರಮುತ್ತುರವರ 33 ಕವಿತೆಗಳು”, “ಒಂಭತ್ತನೆಯ ತಿರುಮುರೈ”,“ಧ್ಯಾನಲಿಂಗ ಗುರು ತಂದ ಗುರು” “ಪುದುಮೈಪಿತ್ತನ್” , ಡಾ. ಸಿದ್ದಲಿಂಗಯ್ಯನವರ “ಕನ್ನಡ ಕವಿಞರ್ ಸಿದ್ಧಲಿಂಗಯ್ಯವಿನ್ ನಾರ್ಪದು ಕನ್ನಡ ಕವಿದೈಗಳ್” ಜೊತೆಗೆ ಇನ್ನೂ ಹಲವಾರು ಕೃತಿಗಳನ್ನು ಅನುವಾದಿಸಿದ್ದಾರೆ.
1 Post
ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ
ಮೈತ್ರೇಯಿಣಿ ಗದಿಗೆಪ್ಪಗೌಡರ ಮೂಲತಃ ಹುಬ್ಬಳ್ಳಿಯವರು. ಸದ್ಯ ಬೆಳಗಾವಿಯ ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಕೆಲವು ಹನಿಗವಿತೆ ಮತ್ತಿತರ ಲೇಖನಗಳು ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ.
1 Postಡಾ. ಯು. ಆರ್ ಅನಂತಮೂರ್ತಿ
ಕನ್ನಡದ ಮೇರು ಕಥೆಗಾರ, ಚಿಂತಕ. ಜ್ಞಾನಪೀಠ ಪ್ರಶಸ್ತಿ ವಿಜೇತ ಬರಹಗಾರ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಅವರು ಹುಟ್ಟಿದ್ದು (೧೯೩೨, ಡಿಸೆಂಬರ್ ೨೧) ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮೇಳಿಗೆ ಎಂಬ ಹಳ್ಳಿಯಲ್ಲಿ.
1 Post
ಡಾ. ರಾಜೇಂದ್ರ ಚೆನ್ನಿ
ರಾಜೇಂದ್ರ ಚೆನ್ನಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಾಗರಗಾಳಿ ಗ್ರಾಮದವರು. ಕುವೆಂಪು ವಿ.ವಿ. ಸ್ನಾತಕೋತ್ತರ ಇಂಗ್ಲಿಷ್ ವಿಭಾಗದ ನಿವೃತ್ತ ಪ್ರಾಧ್ಯಾಪಕರು. ಕನ್ನಡ-ಇಂಗ್ಲಿಷ್ ಎರಡೂ ಭಾಷೆಯಲ್ಲಿ ವಿಮರ್ಶೆ, ಲೇಖನ ಹಾಗೂ ಕತೆಗಳನ್ನು ಬರೆಯುತ್ತಲೇ ಜನಪರ ಚಳವಳಿಗಳಲ್ಲಿ ಭಾಗವಹಿಸಿದ್ದಾರೆ. 2009ನೇ ಸಾಲಿನ ಪ್ರತಿಷ್ಠಿತ ಜಿ.ಎಸ್.ಎಸ್. ಪ್ರಶಸ್ತಿ ಪಡೆದಿದ್ದಾರೆ. ಇವರ ಮೊದಲ ವಿಮರ್ಶಾ ಕೃತಿ ಅಧ್ಯಯನಕ್ಕೆ 1987ರಲ್ಲಿ ಹಾಗೂ ಅಮೂರ್ತತೆ ಮತ್ತು ಪರಿಸರ (ವಿಮರ್ಶೆ-2003) ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ ಬಂದಿದೆ. ದೇಶೀವಾದ (1989), ಬೇಂದ್ರೆ ಕಾವ್ಯ ಸಂಪ್ರದಾಯ ಮತ್ತು ಸ್ವಂತಿಕೆ (1989), ಮಾಸ್ತಿ ಕತೆಗಳು: ಒಂದು ಅಧ್ಯಯನ(1991), ದೊಡ್ಡ ಮರ (ಕಥಾ ಸಂಕಲನ-1991), ಕರುಳ ಬಳ್ಳಿಯ ಸೊಲ್ಲು (2011) ನಡುಹಗಲಿನಲ್ಲಿ ಕಂದೀಲುಗಳು (ವಿಮರ್ಶೆ -2004), ಜಾಗತೀಕರಣ: ಒಂದು ಸಮಗ್ರ ಮಂಥನ (ಎಸ್.ಸಿರಾಜ್ ಅಹಮದ್ ಅವರೊಂದಿಗೆ ಸಂಪಾದಿತ) (2014), ಮಳೆಯಲ್ಲಿ ಬಂದಾತ (ಕಥಾ ಸಂಕಲನ-1999), ಇಂಗ್ಲಿಶ್: ಸ್ಟೀಕಿಂಗ್ ಫಾರ್ ಸಮ್ಒನ್ (ವಿಮರ್ಶೆ- 2004, ಆಫ್ ಮೆನಿ ವಲ್ಡ್೯ (ವಿಮರ್ಶೆ- 2007), ಮಡ್ ಟೌನ್ (ಕಾದಂಬರಿ-2007), ಟ್ರೆಡಿಷನ್ಸ್ ಆಫ್ ಮಾಡರ್ನಿಟಿ: ಎ ಕಂಪಾರೇಟೀವ್ ಸ್ಟಡಿಸ್ ಆಫ್ ಟಿ.ಎಸ್. ಎಲಿಯೆಟ್ ಆಂಡ್ ಗೋಪಾಲಕೃಷ್ಣ ಅಡಿಗ (2011) ಇವರ ಪ್ರಮುಖ ಕೃತಿಗಳಾಗಿವೆ.
1 Post
ಡಾ. ಲಕ್ಷ್ಮಣ ವಿ.ಎ
ಡಾ. ಲಕ್ಷ್ಮಣ ವಿ.ಎ ಮೂಲತಃ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಮೋಳೆ ಗ್ರಾಮದವರು. ಮಹಾಗಣಪತಿ ಆಯುರ್ವೇದ ಮಹಾವಿದ್ಯಾಲಯದಲ್ಲಿ ವೈದ್ಯಕೀಯ ಪದವಿ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಪಡೆದಿದ್ದಾರೆ. ಪ್ರಸ್ತುತ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಖಾಸಗೀ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
27 Postsಡಾ. ವಿ. ರಾಜೇಂದ್ರ
ಪ್ರಖ್ಯಾತ ಆಯುರ್ವೇದ ವೈದ್ಯರು. ಮೈಸೂರಿನ ಸರಕಾರಿ ಆಯುರ್ವೇದ ಕಾಲೇಜಿನ ಕಾಯಚಿಕಿತ್ಸಾ ವಿಭಾಗದ ಮುಖ್ಯಸ್ಥರು.
1 Post
ಡಾ. ವಿನತೆ ಶರ್ಮ
ಲೇಖಕಿ ಮತ್ತು ಬ್ಲಾಗ್ ಬರಹಗಾರ್ತಿ. ಮೂಲತಃ ಬೆಂಗಳೂರಿನವರು ಈಗ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಸಾಹಿತ್ಯ, ಹೊರಾಂಗಣ, ಶಿಕ್ಷಣ, ಮನಃಶಾಸ್ತ್ರ, ತಳಸಮುದಾಯಗಳ ಅಧ್ಯಯನ ಮತ್ತು ಊರುಸುತ್ತಾಟ ಇವರಿಗೆ ಇಷ್ಟದ ವಿಷಯಗಳು.
80 Posts
ಡಾ. ಶ್ರೀಪಾದ ಭಟ್
ಉತ್ತರ ಕನ್ನಡ ಜಿಲ್ಲೆಯ ರಂಗಭೂಮಿ ಎಂಬ ವಿಷಯದಲ್ಲಿ ಡಾಕ್ಟರೇಟ್ ಮಾಡಿರುವ ಶ್ರೀಪಾದ ಭಟ್, ಸಂಗೀತ, ಸಾಹಿತ್ಯ, ಶಿಕ್ಷಣ ಮತ್ತು ಜನಪದ ಕ್ಷೇತ್ರದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡವರು. ದೆಹಲಿಯ ಎನ್ ಎಸ್ ಡಿ ಆಯೋಜಿಸಿದ ರಂಗಭಾರತ ಮಹೋತ್ಸವದಲ್ಲಿ ಅವರು ನಿರ್ದೇಶಿಸಿದ ಕರ್ಣಭಾರ ಮತ್ತು ಚಿತ್ರಾ ನಾಟಕ ಪ್ರದರ್ಶನ ಕಂಡಿವೆ. 'ಪಾಪು ಬಾಪು' ಸಾವಿರಕ್ಕೂ ಹೆಚ್ಚು ಪ್ರದರ್ಶನ ಕಂಡ ನಾಟಕ. ಸದಾನಂದ ಸುವರ್ಣ ಪ್ರಶಸ್ತಿ, ಮಂಜುನಾಥ ಉದ್ಯಾವರ ಪ್ರಶಸ್ತಿ ಸೇರಿದಂತೆ ಅನೇಕ ಪುರಸ್ಕಾರಗಳು ಅವರನ್ನು ಅರಸಿಕೊಂಡು ಬಂದಿವೆ.
2 Posts
ಡಾ. ಸಿ. ಬಿ. ಐನಳ್ಳಿ
ಧಾರವಾಡದ ಕರ್ನಾಟಕ ಕಲಾ ಮಹಾವಿದ್ಯಾಲಯಲ್ಲಿ ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಸಿ. ಬಿ. ಐನಳ್ಳಿಯವರು ಮೂಲತಃ ಬಳ್ಳಾರಿ ಜಿಲ್ಲೆಯವರು. ಇಂಡಿಯನ್-ಅಮೇರಿಕನ್ ಲೇಖಕಿ ‘ಜುಂಪಾ ಲಾಹಿರಿಯ ಕೃತಿಗಳಲ್ಲಿ ವಸ್ತು ಮತ್ತು ತಂತ್ರಗಳ ಅಧ್ಯಯನ’ಕ್ಕಾಗಿ ಕರ್ನಾಟಕ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ಪಡೆದಿದ್ದಾರೆ.
2 Posts
ಡಾ. ಸುಜಾತ ಲಕ್ಷ್ಮೀಪುರ
ಡಾ. ಸುಜಾತ ಲಕ್ಷ್ಮೀಪುರ ಪ್ರಸ್ತುತ ಬೆಂಗಳೂರಿನ ಮಲ್ಲೇಶ್ವರಂ ಬಾಲಕಿಯರ ಸರ್ಕಾರಿ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಹಲವಾರು ಕವಿತೆ, ಲೇಖನಗಳು ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿದೆ.
5 Posts
ಡಾ. ಸುದರ್ಶನ ಪಾಟೀಲಕುಲಕರ್ಣಿ
ಡಾ|| ಸುದರ್ಶನ್ ಪಾಟೀಲಕುಲಕರ್ಣಿ, ಇವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಇಂಜಿನೀಯರಿಂಗ್ ಪದವಿ ಪಡೆದು, ನಂತರ ಅಮೇರಿಕೆಯ ಓಲ್ಡ್ ಡಾಮಿನಿಯನ್ ವಿಶ್ವ ವಿದ್ಯಾಲಯದಿಂದ ಇಲೆಕ್ಟ್ರಾನಿಕ್ಸ್ ವಿಷಯದಲ್ಲಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಜೆ.ಎಸ್. ಎಸ್. ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ವಿಜ್ಞಾನದ ಚರಿತ್ರೆ, ವಿಜ್ಞಾನದ ತತ್ವಶಾಸ್ತ್ರ, ಸಾಹಿತ್ಯ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಆಸಕ್ತಿಯನ್ನು ಹೊಂದಿದ್ದಾರೆ. ಇವರ "ಸಂಕೇತ, ವ್ಯವಸ್ಥೆ ಮತ್ತು ನಿಯಂತ್ರಣ" ಇ-ಪುಸ್ತಕ ಗೂಗಲ್ ಸ್ಟೋರ್-ನಲ್ಲಿ ಲಭ್ಯವಿದೆ.
1 Post
ಡಾ.ಎಲ್ .ಸಿ ಸುಮಿತ್ರಾ
<p dir="ltr">ಲೇಖಕಿ ಸುಮಿತ್ರ ಎಲ್.ಸಿ ತೀರ್ಥಹಳ್ಳಿ ತಾಲ್ಲೂಕಿನ ಲಕ್ಷ್ಮೀಪುರದವರು. ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ತುಂಗಾ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ನಿವೃತ್ತರಾಗಿದ್ದಾರೆ. ಬಕುಲದ ದಾರಿ (ಕಾವ್ಯ), ಪಿಂಜರ್(ಕಾದಂಬರಿ ಅನುವಾದ), ನಿರುಕ್ತ, ಕಾಡು ಕಡಲು, ವಿಭಾವ (ವಿಮರ್ಶೆ), ಗುಬ್ಬಿ ಹಳ್ಳದ ಸಾಕ್ಷಿಯಲ್ಲಿ(ಕಥಾ ಸಂಕಲನ) ಹೂ ಹಸಿರಿನ ಮಾತು (ಪಶ್ಚಿಮ ಘಟ್ಟದ ಹೂ ಸಸ್ಯಗಳ ಕುರಿತು) ಇವು ಸುಮಿತ್ರ ಅವರ ಪ್ರಕಟಿತ ಕೃತಿಗಳು.</p>
5 Posts
ಡಾ.ಕೆ. ಷರೀಫಾ
ಕೆ. ಷರೀಫಾ ಮೂಲತಃ ಗುಲಬರ್ಗಾದವರು. ಬಿಡುಗಡೆಯ ಕವಿತೆಗಳು, ನೂರೇನ್ಳ ಅಂತರಂಗ, ಪಾಂಚಾಲಿ, ಮುಮ್ರಾಜಳ ಮಹಲು, ಬುರ್ಖಾ ಪ್ಯಾರಡೈಸ್, ಸಂವೇದನೆ (ವಿಮರ್ಶೆ), ಮಹಿಳಾ ಮಾರ್ಗ (ಸಹ ಸಂಪಾದನೆ), ಆಧುನಿಕ ಕನ್ನಡ ಸಾಹಿತ್ಯದಲ್ಲಿ ಮುಸ್ಲಿಂ ಮಹಿಳಾ ಸಂವೇದನೆ (ಸಂಶೋಧನೆ), ಹೊಸ ಶತಮಾನದ ಕಾವ್ಯ (ಸಂಪಾದನೆ) ಅವರ ಪ್ರಕಟಿತ ಕೃತಿಗಳು.
1 Postಡಾ.ಗುರುಪ್ರಸಾದ್ ಕಾಗಿನೆಲೆ
ಹುಟ್ಟಿದ್ದು ಶಿವಮೊಗ್ಗ. ಸದ್ಯಕ್ಕೆ ಅಮೇರಿಕಾದ ರಾಚೆಸ್ಟರ್ನಲ್ಲಿ ಎಮರ್ಜೆನ್ಸಿ ಮೆಡಿಸಿನ್ ವಿಭಾಗದಲ್ಲಿ ವೈದ್ಯನಾಗಿ ಕೆಲಸ. ನಿರ್ಗುಣ, ಶಕುಂತಳಾ (ಕಥಾ ಸಂಗ್ರಹಗಳು), ಆಚೀಚೆಯ ಕಥೆಗಳು (ಸಂಪಾದಿತ ಕಥಾ ಸಂಕಲನ), ವೈದ್ಯ ಮತ್ತೊಬ್ಬ (ಲೇಖನ ಸಂಗ್ರಹ) ಅವರ ಹೊಸ ಕೃತಿ "ಬಿಳಿಯ ಚಾದರ".
3 Posts
ಡಾ.ನಿಂಗಪ್ಪ ಮುದೇನೂರು
ಲೇಖಕ, ಕವಿ ನಿಂಗಪ್ಪ ಮುದೇನೂರು ಅವರು ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಮುದೇನೂರು ಗ್ರಾಮದವರು ಮಗುವಿನ ಧ್ಯಾನದಲ್ಲಿ, ಮಣ್ಣಿನ ಕವಿತೆ, ಕಡಲ ಕವಿತೆ, ನನ್ನ ಗಾಂಧಿ’ ಅವರ ಪ್ರಮುಖ ಕವನ ಸಂಕಲನಗಳು. ಜೀ.ಶಂ.ಪ ರವರ 'ಜನಪದ ಖಂಡಕಾವ್ಯಗಳು’, ಕುವೆಂಪು ಅವರ 'ಶೂದ್ರ ತಪಸ್ವಿ', ಜಾಗತೀಕರಣ ಮತ್ತು ಗಾಂಧಿ, ಸಂಸ್ಕೃತಿ ದರ್ಶನ, ಅಕ್ಷರ ಮತ್ತು ಅರಿವು ಅವರ ವಿಮರ್ಶಾ ಕೃತಿಗಳು. ‘ಬುರ್ರಕಥಾ ಈರಮ್ಮ: ಅಲೆಮಾರಿಯ ಆತ್ಮಕಥನ’ ‘ಸೊಂಡೂರು ಕುಮಾರಸ್ವಾಮಿ’, ‘ಕನ್ನಡ ಜನಪದ ಮಹಾಕಾವ್ಯಗಳ ಸಾಂಸ್ಕೃತಿಕ ವೀರರು’ ಅವರ ಸಂಶೋಧನಾ ಕೃತಿಗಳು. ‘ಬಿಚ್ಚುಗತ್ತಿಯ ಎದೆಯಲ್ಲಿ’ ಅವರ ನಾಟಕ ಕೃತಿ. ‘ಕಾಡಿನ ಕೊಳಲಿಗೆ ನಾಡಿನ ಸ್ವರ’ ಎಂಬ ಕೃತಿಯನ್ನು ಸಂಪಾದಿಸಿದ್ದಾರೆ.
1 Postಡಾ.ಪ್ರೇಮಲತ
ಲೇಖಕಿ ಮತ್ತು ದಂತವೈದ್ಯೆ. ಮೂಲತಃ ತುಮಕೂರಿನವರು. ಕಳೆದ ಹದಿನೈದು ವರ್ಷಗಳಿಂದ ಇಂಗ್ಲೆಂಡ್ ನಿವಾಸಿ. ಬಾಲಕಿಯಾಗಿರುವಾಗಲೇ ಬರೆಯಲು ತೊಡಗಿದ್ದವರು ಈಗ ಇಂಗ್ಲೆಂಡಿನ ಕನ್ನಡಕೂಟಗಳ ಒಡನಾಟದಲ್ಲಿ ಮತ್ತೆ ಬರವಣಿಗೆ ಮುಂದುವರೆಸಿದ್ದಾರೆ.
29 Postsಡಾ.ರಾಜೇಂದ್ರ ಚೆನ್ನಿ
ಕನ್ನಡದ ಪ್ರಮುಖ ವಿಮರ್ಶಕರು ಮತ್ತು ಕಥೆಗಾರರು. ‘ನಡುಹಗಲಿನಲ್ಲಿ ಕಂದೀಲುಗಳು’ ಇವರ ವಿಮರ್ಶೆಗಳ ಸಂಕಲನ. ‘ಮಡ್ ಟೌನ್’ ಇಂಗ್ಲಿಷ್ ಕಾದಂಬರಿ. ಧಾರವಾಡ ಹುಟ್ಟೂರು. ಇರುವುದು ಶಿವಮೊಗ್ಗ. ನಿವೃತ್ತ ಇಂಗ್ಲಿಷ್ ಪ್ರಾದ್ಯಾಪಕರು.
5 Postsಡಿ.ಎಮ್. ನದಾಫ್
ಡಿ.ಎಮ್ ನದಾಫ್, ಕಲಬುರಗಿ ಜಿಲ್ಲೆಯ ಅಫಜಲಪುರದ ಮಾತೋಳಿ ಗ್ರಾಮದವರು. ಪ್ರೌಢಶಾಲಾ ಅಧ್ಯಾಪಕರಾಗಿದ್ದು, ಎರಡು ಕವನ ಸಂಕಲನ ಮತ್ತು ಅಫಜಲಪುರ ದರ್ಶನ (ಸ್ಥಳಪರಿಚಯ) ಪುಸ್ತಕ ಪ್ರಕಟಿಸಿದ್ದಾರೆ. ಹಲವು ಪತ್ರಿಕೆಗಳಲ್ಲಿ ಇವರ ಕತೆಗಳು ಪ್ರಕಟವಾಗಿವೆ.
1 Post
ಡಿ.ವಿ. ಪ್ರಹ್ಲಾದ್
ಡಿ. ವಿ. ಪ್ರಹ್ಲಾದ್ ಅವರು ಮೂಲತಃ ಬೆಂಗಳೂರಿನವರು. 'ಡೀಮರ್', 'ನಾಳೆಯಿಂದ', 'ದಯಾ... ನೀ ಭವಾ... ನೀ' - ಪ್ರಕಟಿತ ಕವನ ಸಂಕಲನ. 'ಅನುದಿನವಿದ್ದು' (ಅಗಲಿದ ಲೇಖಕರ ನೆನಪುಗಳ ಸಂಗ್ರಹ) ‘ಎ. ಕೆ. ರಾಮಾನುಜನ್ ಹೆಜ್ಜೆಗುರುತು', 'ಬಗೆ ತೆರೆದ ಬಾನು' (ಸಾಹಿತಿಗಳ ಸಂದರ್ಶನ ಸಂಕಲನ), 'ಮುಕ್ತ ಛಂದ'- ಶಾಂತಿನಾಥ ದೇಸಾಯಿ ವ್ಯಕ್ತಿ ಕುರಿತ ಅನೇಕ ಕೃತಿಗಳನ್ನು ಸಂಪಾದಿಸಿದ್ದಾರೆ. `ಸಂಚಯ’ ಸಾಹಿತ್ಯ ಪತ್ರಿಕೆಯ ಸಂಪಾದಕರಾಗಿದ್ದರು.
2 Posts
ತೇಜಾವತಿ ಎಚ್ ಡಿ
ತೇಜಾವತಿ ಎಚ್ ಡಿ ತುಮಕೂರು ಜಿಲ್ಲೆಯ ಹುಳಿಯಾರಿನವರು. ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಾಲಚಕ್ರ (2019), ಮಿನುಗುವ ತಾರೆ (2019), ಬಾ ಭವಿಷ್ಯದ ನಕ್ಷತ್ರಗಳಾಗೋಣ (2021) ಇವರ ಪ್ರಕಟಿತ ಕೃತಿಗಳು. ಸಾವಿತ್ರಿಬಾಯಿ ಫುಲೆ ಪ್ರಶಸ್ತಿ, ಉತ್ತಮ ಶಿಕ್ಷಕ ಪ್ರಶಸ್ತಿ, ದೆಹಲಿಯ ಪ್ರಜಾಪತಿ ಪತ್ರಿಕೆ ಕೊಡಮಾಡುವ ಕಾವ್ಯ ಸಮ್ಮಾನ್ ಹಾಗೂ ಸಿರಿ ಕಾವ್ಯ ಪ್ರಶಸ್ತಿ ಲಭಿಸಿವೆ.
3 Posts
ದಯಾ ಗಂಗನಘಟ್ಟ
<span class="im">ದಯಾ ಗಂಗನಘಟ್ಟ ( ದಾಕ್ಷಾಯಿಣಿ ) ಬೆಂಗಳೂರು ನಿವಾಸಿ. </span>ಪ್ರಸ್ತುತ 'ಜೇನುಗಿರಿ ' ಪತ್ರಿಕೆಗೆ ಅಂಕಣ ಬರೆಯುತ್ತಿದ್ದಾರೆ
1 Postದರ್ಶನ್ ಜೆ
ಮೂಲತಃ ಹೊಸದುರ್ಗದ ಹುಟ್ಟೂರಿನವರು. ಬೆಂಗಳೂರಿನ ( ಸೌದಿ ಅರೇಬಿಯಾ ಮೂಲದ) ಪೆಟ್ರೋಕೆಮಿಕಲ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. "ಪದ್ಯ ಸಿಕ್ಕಿತು" ಇವರ ಚೊಚ್ಚಲ ಕವನ ಸಂಕಲನ.
2 Posts
ದಾದಾಪೀರ್ ಜೈಮನ್
ಸಾಹಿತ್ಯ, ರಂಗಭೂಮಿ ಮತ್ತು ಸಿನಿಮಾ ಇವರ ಆಸಕ್ತಿಯ ಕ್ಷೇತ್ರಗಳು. ಇವರ ಹಲವು ಕವಿತೆಗಳು, ಕಥೆಗಳು ನಾಡಿನ ಪ್ರಮುಖ ಪತ್ರಿಕೆ ಮತ್ತು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಇಕ್ಬಾಲುನ್ನೀಸಾ ಹುಸೇನ್ ಅವರ 'ಪರ್ದಾ & ಪಾಲಿಗಮಿ' ಕಾದಂಬರಿಯನ್ನು ಕನ್ನಡಕ್ಕೆ ತಂದಿದ್ದಾರೆ. ಛoದ ಪುಸ್ತಕ ಪ್ರಕಾಶನ ಅದನ್ನು ಹೊರತಂದಿದೆ. Dmitrij Gawrisch ಅವರ 'ಬ್ಯಾರೆನ್ ಲ್ಯಾಂಡ್' ಎನ್ನುವ ಜರ್ಮನ್ ನಾಟಕವನ್ನು ಅನುವಾದ ಮಾಡಿದ್ದಾರೆ. ನೀಲಕುರಿಂಜಿ ಇವರ ಪ್ರಥಮ ಪ್ರಕಟಿತ ಕಥಾಸಂಕಲನ.
14 Posts
ದೀಪಾ ಫಡ್ಕೆ
ದೀಪಾ ಫಡ್ಕೆ ಬೆಂಗಳೂರು ನಿವಾಸಿ. ಹರಿದಾಸ ಸಾಹಿತ್ಯದಲ್ಲಿ ಅಧ್ಯಯನ ನಡೆಸಿ ಮೈಸೂರು ವಿಶ್ವವಿದ್ಯಾನಿಲಯದಿಂದ ಪಿಎಚ್ ಡಿ ಪದವಿ ಪಡೆದಿದ್ದಾರೆ. ದೀಪಾ ಚಂದನ ಮತ್ತು ಉದಯ ಟಿವಿಯಲ್ಲಿ ಹಲವು ವರ್ಷಗಳ ಕಾಲ ನಿರೂಪಕಿಯಾಗಿ ಕಾರ್ಯನಿರ್ವಹಿಸಿದ್ದರು.
2 Postsದೀಪ್ತಿ ಶ್ರೀಹರ್ಷ
ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು.ಈಗ ಭದ್ರಾವತಿಯಲ್ಲಿದ್ದಾರೆ. "ಅಹಲ್ಯೆಯ ಸ್ವಗತ" ಇವರ ಹೆಸರಾಂತ ಕವನ ಸಂಕಲನ.
1 Post
ದೇವೇಂದ್ರ ಅಬ್ಬಿಗೇರಿ
ದೇವೇಂದ್ರ ಅಬ್ಬಿಗೇರಿ ಮೂಲತಃ ಕೊಪ್ಪಳ ಜಿಲ್ಲೆಯವರು. ೨೦೧೧ ಸಾಲಿನ ಕೇಂದ್ರೀಯ ನಾಗರೀಕ ಸೇವಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ, Indian Audit & Accounts Department ಅಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
2 Postsಧನಪಾಲ ನಾಗರಾಜಪ್ಪ
ಧನಪಾಲ ನಾಗರಾಜಪ್ಪ ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯವರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ನೆಲವಾಗಿಲು ಗ್ರಾಮದ ನಿವಾಸಿಯಾಗಿರುವ ಇವರು ಭಾರತೀಯ ವಾಯು ಸೇನೆಗೆ ಸೇರ್ಪಡೆಯಾಗಿ, ವೈದ್ಯಕೀಯ ಸಹಾಯಕನಾಗಿ ಕೆಲಸ ಮಾಡುತ್ತಿದ್ದಾರೆ. ನಿವೇದನೆ (ಕವನ ಸಂಕಲನ), ಮಿತ್ರವಾಣಿ (ಪ್ರಧಾನ ಸಂಪಾದಕತ್ವದ ಕವನ ಸಂಕಲನ) ಕಾಡುವ ಕಥೆಗಳು (ಸಲೀಂ ಅವರ ತೆಲುಗು ಕಥೆಗಳ ಅನುವಾದ) ತಣ್ಣೀರ ಬಟ್ಟೆಯ ಬಿಸಿ (ಆಯ್ದ ತೆಲುಗು ಕಥೆಗಳ ಅನುವಾದ), ಜೀವನ್ಮೃತರು (ಅನುವಾದಿತ ಕಾದಂಬರಿ ), ಮೇಧ-017 (ಅನುವಾದಿತ ಕಾದಂಬರಿ), ಅಪರಾಜಿತ (ಅನುವಾದಿತ ಮಕ್ಕಳ ಕಾದಂಬರಿ) ಇವರ ಪ್ರಕಟಿತ ಕೃತಿಗಳು
1 Post
ನಂದಿನಿ ಹೆದ್ದುರ್ಗ
ನಂದಿನಿ ವಿಶ್ವನಾಥ ಹೆದ್ದುರ್ಗ ಕಾಫಿ ಬೆಳೆಗಾರ್ತಿ ಮತ್ತು ಕೃಷಿ ಮಹಿಳೆ. ಕಾವ್ಯ, ಸಾಹಿತ್ಯ ಮತ್ತು ಫೋಟೋಗ್ರಫಿ ಇವರ ಆಸಕ್ತಿಯ ವಿಷಯಗಳು.
2 Postsನದೀಮ್ ಸನದಿ
ನದೀಮ್ ಸನದಿ ಬೆಳಗಾವಿಯ ಶಿಂದೊಳ್ಳಿಯವರು. ವೃತ್ತಿಯಿಂದ ಅಭಿಯಂತರರಾಗಿದ್ದು ಸಧ್ಯಕ್ಕೆ ಬೆಳಗಾವಿಯ ಜೈನ್ ಅಭಿಯಾಂತ್ರಿಕ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಸಾಹಿತ್ಯದ ಓದು-ಬರಹದಲ್ಲಿ ವಿಶೇಷ ಆಸಕ್ತಿ.. ಚೊಚ್ಚಲ ಕವನ ಸಂಕಲನ "ಹುಲಿಯ ನೆತ್ತಿಗೆ ನೆರಳು" ಪುಸ್ತಕ ಪ್ರಾಧಿಕಾರದಿಂದ ಪ್ರಕಟಗೊಳ್ಳುತ್ತಿದೆ..
1 Postನಂದೀಶ್ ಬಂಕೇನಹಳ್ಳಿ
ಹವ್ಯಾಸಿ ಫೋಟೋಗ್ರಾಫರ್. ಕೊಟ್ಟಿಗೆ ಹಾರದಲ್ಲಿ ಪುಟ್ಟ ಅಂಗಡಿ ಇಟ್ಟುಕೊಂಡಿದ್ದಾರೆ. ‘ಮುಖವಾಡ’ ಇವರ ಕವನ ಸಂಕಲನ.
3 Postsನಯನ ಬಿಢೆ
<strong>ನಯನ ಬಿಢೆ ಅವರು ಮೂಲತಃ ದಕ್ಷಿಣ ಕನ್ನಡದವರು. ಹವ್ಯಾಸಿ ಬರಹಗಾರ್ತಿ, ಯಕ್ಷಗಾನ ಕಲಾವಿದೆ ಕೂಡ. ಚಾರಣವೆಂದರೆ ಅಚ್ಚುಮೆಚ್ಚು. ಬೆಂಗಳೂರಿನಲ್ಲಿ ಸದ್ಯಕ್ಕೆ ವಾಸ. </strong>
1 Postನರಸಿಂಹಮೂರ್ತಿ ಹಳೇಹಟ್ಟಿ
ನರಸಿಂಹಮೂರ್ತಿ ಹಳೇಹಟ್ಟಿ ಅವರು ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಹಳೇಹಟ್ಟಿ ಗ್ರಾಮದವರು. ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ 'ಸಮಕಾಲೀನ ಕನ್ನಡ ಕಾವ್ಯ: ಸ್ವರೂಪ ಮತ್ತು ಧೋರಣೆಗಳು'(2000-2010) ಎಂಬ ವಿಷಯ ಕುರಿತು ಸಂಶೋಧನೆ ಮಾಡಿದ್ದಾರೆ. ಕಾವ್ಯ, ವಿಮರ್ಶೆ, ಭಾಷಾಂತರ ಅಧ್ಯಯನ ಹಾಗೂ ಸಂಶೋಧನೆ ಇವರ ಆಸಕ್ತಿಯ ಕ್ಷೇತ್ರಗಳು. ಇವರ ಕೆಲವು ಲೇಖನಗಳು ವಿವಿಧ ಸಾಹಿತ್ಯ ಪತ್ರಿಕೆಗಳಲ್ಲಿ ಹಾಗೂ ಬ್ಲಾಗ್ ಗಳಲ್ಲಿ ಪ್ರಕಟಗೊಂಡಿವೆ.
1 Post
ನರೇಟರ್
ನರೇಟರ್ ಗಳ ಬಗ್ಗೆ ಹೆಚ್ಚಿಗಿ ಹೇಳೂದೇನೈತಿ ಬಿಡ್ರಿ. ಕಥಿ ಹೇಳೂದು, ಕಥಿ ಕೇಳೂದು ಮತ್ ಕಥಿ ಬರ್ಯೂದು.. ಇಷ್ಟ ನಮ್ ಹಾಡೂ ಪಾಡೂ...
1 Post
ನವೀನ ಗಣಪತಿ
ನವೀನ ಗಣಪತಿ ಹುಟ್ಟಿ ಬೆಳೆದಿದ್ದು ಮಲೆನಾಡಿನ ಹಳ್ಳಿ ಸಿದ್ಧಾಪುರದಲ್ಲಿ. ಸಧ್ಯಕ್ಕೆ ದಾವಣಗೆರೆಯಲ್ಲಿ ಫೈನಾನ್ಸಿಯಲ್ ಕಂಪನಿ ಯೊಂದರಲ್ಲಿ ಕನ್ಸಲ್ಟಂಟ್ ಆಗಿ ಕೆಲಸ. ಬರೆಯಲೇಬೇಕೆಂದೆನಿಸಿದಾಗ ಬರಹ.
2 Postsನವೀನ್ ಮಧುಗಿರಿ
ರಘುನಂದನ್ ವಿ. ಆರ್ ‘ನವೀನ್ ಮಧುಗಿರಿ ಎಂಬ ಕಾವ್ಯನಾಮದಿಂದ ಬರೆಯುತ್ತಾರೆ. ವೃತ್ತಿಯಲ್ಲಿ ಕೃಷಿಕರಾಗಿರುವ ನವೀನ್ ಅವರಿಗೆ ಕಥೆ, ಕವಿತೆ, ಹಾಯ್ಕು ಮತ್ತು ಶಿಶುಗವಿತೆಗಳನ್ನು ಬರೆಯುವುದರಲ್ಲಿ ಆಸಕ್ತಿ. ‘ರುಚಿಗೆ ತಕ್ಕಷ್ಟು ಪ್ರೀತಿ’ (ಕವಿತೆಗಳ ಸಂಕಲನ) ‘ಚಿಟ್ಟೆ ರೆಕ್ಕೆ’ (ಕಿರುಗವಿತೆಗಳ ಸಂಕಲನಗಳು) ಮತ್ತೆರಡು ಇವರ ಪ್ರಕಟಿತ ಕೃತಿಗಳು.
1 Postನಾ ದಿವಾಕರ್
ನಾ ದಿವಾಕರ, ಮೂಲತಃ ಕೋಲಾರ ಜಿಲ್ಲೆಯ ಬಂಗಾರಪೇಟೆಯವರು. ಕೆನರಾ ಬ್ಯಾಂಕಿನಲ್ಲಿ 35 ವರ್ಷದ ಸೇವೆಯ ಬಳಿಕ 2019ರ ಜನವರಿಯಲ್ಲಿ ಸ್ವಯಂ ನಿವೃತ್ತಿ. ಲೇಖನ ಬರಹ, ಅನುವಾದ ಮತ್ತು ಕವಿತೆ ರಚನೆ ಹವ್ಯಾಸ. ಇವರು ಬರೆದ ಇಪ್ಪತ್ತಕ್ಕೂ ಹೆಚ್ಚು ಪುಸ್ತಕಗಳು ಪ್ರಕಟವಾಗಿದ್ದು, ಪ್ರಥಮ ಕವನ ಸಂಕಲನ ಅಚ್ಚಿನಲ್ಲಿದೆ.
2 Postsನಾಗರಾಜ ವಸ್ತಾರೆ
ಕವಿ, ಆರ್ಕಿಟೆಕ್ಟ್ ಮತ್ತು ಕಥೆಗಾರ. ೨೦೦೨ರಲ್ಲಿ ದೇಶದ ಹತ್ತು ಪ್ರತಿಭಾನ್ವಿತ ಯುವ ವಿನ್ಯಾಸಕಾರರಾಗಿ ಆಯ್ಕೆಗೊಂಡವರಲ್ಲಿ ಇವರೂ ಒಬ್ಬರು.
26 Posts
ನಾಗರಾಜ್ ಹರಪನಹಳ್ಳಿ
ಹರಪನಹಳ್ಳಿ ಹುಟ್ಟೂರು. ಓದು ಧಾರವಾಡ. ಬದುಕು ಕಾರವಾರ. ವೃತ್ತಿಯಿಂದ ಪತ್ರಕರ್ತ. ಪ್ರಕೃತಿ ಜೊತೆ ಒಡನಾಟ, ಜನ ಸಾಮಾನ್ಯರ ಜೊತೆ ಹೆಚ್ಚು ಬೆರೆಯುವುದು, ಓದು, ಬರಹ, ಹಾಡು ಕೇಳುವುದು ಉಸಿರು. ದಿನಕ್ಕೊಮ್ಮೆ ಪಿ.ಲಂಕೇಶರನ್ನು ನೆನಪಿಸಿಕೊಳ್ಳುವುದು, ಅವರ ಬರಹಗಳನ್ನು ಓದುವುದು...
6 Posts
ನಾಗರೇಖಾ ಗಾಂವಕರ
ನಾಗರೇಖಾ ಗಾಂವಕರ ದಾಂಡೇಲಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿ. ‘ಏಣಿ’, ‘ಪದಗಳೊಂದಿಗೆ ನಾನು (ಕವನ ಸಂಕಲನಗಳು), ಪಾಶ್ಚಿಮಾತ್ಯ ಸಾಹಿತ್ಯ ಲೋಕ- (ಪರಿಚಯಾತ್ಮಕ ಲೇಖನಗಳ ಅಂಕಣ ಬರಹ)
6 Posts
ನಾಗಶ್ರೀ ಶ್ರೀರಕ್ಷ
ತನ್ನ ಮೂವತ್ತಮೂರನೆಯ ಎಳವೆಯಲ್ಲೇ ಗತಿಸಿದ ಕನ್ನಡದ ಅನನ್ಯ ಕವಯಿತ್ರಿ. ಮೂಲತಃ ಉಡುಪಿಯವರು. ಕೆಂಡಸಂಪಿಗೆ ಅಂತರ್ಜಾಲ ಪತ್ರಿಕೆಯಲ್ಲಿ ಸಹಾಯಕ ಸಂಪಾದಕಿಯಾಗಿದ್ದವರು. ‘ನಕ್ಷತ್ರ ಕವಿತೆಗಳು’ ಇವರ ಏಕೈಕ ಕವಿತಾ ಸಂಕಲನ.
14 Posts
ನಾರಾಯಣ ಯಾಜಿ
ನಾರಾಯಣ ಯಾಜಿಯವರು ಮೂಲತ ಉತ್ತರ ಕನ್ನಡದ ಯಕ್ಷಗಾನದ ಊರಾದ ಕೆರೆಮನೆ ಗುಣವಂತೆಯ ಸಮೀಪದ ಸಾಲೇಬೈಲಿನವರು. ಯಕ್ಷಗಾನ ತಾಳಮದ್ದಲೆಯಲ್ಲಿ ಹೆಸರು ಮಾಡುತ್ತಿರುವ ಅವರ ಆಸಕ್ತಿ ಯಕ್ಷಗಾನ, ಅರ್ಥಶಾಸ್ತ್ರ ಮತ್ತು ಮೈಕ್ರೊ ಫೈನಾನ್ಸಿಂಗ್. ಯಕ್ಷಗಾನ, ಅರ್ಥಶಾಸ್ತ್ರಕ್ಕೆ ಸಂಬಂಧಿಸಿದ ಅನೇಕ ಲೇಖನಗಳು ಕನ್ನಡದ ಮುಖ್ಯ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸದ್ಯ ವಿಜಯಪುರದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ (ಪ್ರಾದೇಶಿಕ ಕಛೇರಿ) ಸಹಾಯಕ ಮಹಾ ಪ್ರಬಂಧಕ.
17 Posts
ನಿವೇದಿತಾ ಎಚ್.
ನಿವೇದಿತಾ ಪ್ರಸ್ತುತ ಮೈಸೂರಿನ ಯುವರಾಜ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜೊತೆಗೆ ಮೈಸೂರು ಆಕಾಶವಾಣಿಯಲ್ಲಿ ನಿರೂಪಕಿಯಾಗಿದ್ದೇನೆ. ಹಲವು ಲೇಖನಗಳು, ವಿಮರ್ಶೆಗಳು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ನವಕರ್ನಾಟಕ ಪ್ರಕಾಶನ ಸಂಸ್ಥೆ ಯಿಂದ, Daniel Greenberg's Free at Last ಕೃತಿಯ ಕನ್ನಡಾನುವಾದ, 'ಗರಿಬಿಚ್ಚಿ ಗಗನೆದೆಡೆಗೆ' ಪ್ರಕಟವಾಗಿದೆ.
0 Postsನೀರ್ಕಜೆ ಮಹಾಬಲೇಶ್ವರ ಭಟ್
ಪ್ರಾಂಶುಪಾಲರಾಗಿ ನಿವೃತ್ತರಾಗಿದ್ದ ಇವರು ’ದೈತ್ಯ ದರ್ಶನ’ ಎಂಬ ಚೀನಾ ಪ್ರವಾಸ ಕಥನ, ’ಬೈರವ ನಡಿಗೆ’ ಎಂಬ ಅಮೆರಿಕಾ ಪ್ರವಾಸ ಕಥನ, `ಹಿಮಾಲಯ ಪರ್ವತ ಪರ್ಯಟನ' ಹಾಗೂ `ವಿಜ್ಞಾನ ಬೈರವ' ಎಂಬ ತಂತ್ರಶಾಸ್ತ್ರ ಕುರಿತ ಪುಸ್ತಕಗಳನ್ನು ಪ್ರಕಟಿಸಿದ್ದರು. ‘ಅವತಾರ’ ಇವರ ಆತ್ಮ ಕಥೆ. ಕೊಡಗಿನ ಮಡಿಕೇರಿಯ ಬಳಿಯ ಬಿಳಿಗೇರಿಯವರು.
1 Post
ನೀಲಕಂಠ ಕುಲಕರ್ಣಿ
ನೀಲಕಂಠ ಕುಲಕರ್ಣಿ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡದವರು. ಐಟಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಸಧ್ಯ ಬೆಂಗಳೂರು ವಾಸಿ. ಸಾಹಿತ್ಯ ಮತ್ತು ಲಲಿತಕಲೆಗಳಲ್ಲಿ ಆಸಕ್ತಿ ಹೊಂದಿದ್ದಾರೆ.
1 Post
ನೂತನ ದೋಶೆಟ್ಟಿ
ನೂತನ ದೋಶೆಟ್ಟಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದವರು. ಆಕಾಶವಾಣಿಯಲ್ಲಿ ಕಾರ್ಯಕ್ರಮ ನಿರ್ವಾಹಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಕಾಲವೆಂಬ ಮಹಾಮನೆ, ಭಾಗೀರತಿ ಉಳಿಸಿದ ಪ್ರಶ್ನೆಗಳು ಅವರ ಪ್ರಮುಖ ಸಂಕಲನಗಳು. ಯಾವ ವೆಬ್ಸೈಟಿನಲ್ಲೂ ಉತ್ತರವಿಲ್ಲ ಅವರ ಪ್ರಕಟಿತ ಕಥಾ ಸಂಕಲನ.
3 Posts
ಪ.ನಾ.ಹಳ್ಳಿ ಹರೀಶ್ ಕುಮಾರ್
ಹರೀಶ್ ಕುಮಾರ್ ವೃತ್ತಿಯಲ್ಲಿ ವಿಜ್ಞಾನ ಶಿಕ್ಷಕರು. ಇವರ ಹಲವಾರು ಮಕ್ಕಳ ಕಥೆಗಳು, ಕವಿತೆಗಳು ಮತ್ತು ವೈಜ್ಞಾನಿಕ ಲೇಖನಗಳು ಹಲವಾರು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಬಾಲಮಂಗಳದಲ್ಲಿ ಅಂಕಣಕಾರರಾಗಿ ಸಾಕಷ್ಟು ಬರಹಗಳನ್ನು ಬರೆದಿದ್ದಾರೆ. ಮಕ್ಕಳ ಕಥಾ ಸಂಕಲನ ಹಾಗೂ ಶಿಶುಗೀತೆಗಳ ಸಂಕಲನಗಳು ಪ್ರಕಟಗೊಂಡಿವೆ.
2 Posts
ಪದ್ಮಶ್ರೀ ಎಂ
ಪದ್ಮಶ್ರೀ ಎಂ. ಮೂಲತಃ ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನವರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದಲ್ಲಿ ಸಂಶೋಧನಾರ್ಥಿ. ಪ್ರಸ್ತುತ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕೆಎಲ್ಇ ಸಂಸ್ಥೆಯ ಎಸ್ ಎಸ್ ಎಂ ಎಸ್ ಪದವಿ ಮಹಾವಿದ್ಯಾಲಯದಲ್ಲಿ ಕನ್ನಡ ಉಪನ್ಯಾಸಕಿ.
1 Postಪರಿಮಳ ಜಿ. ಕಮತರ್
ಕವಯಿತ್ರಿ, ಕಥೆಗಾರ್ತಿ ಮತ್ತು ಅನುವಾದಕಿ. ಕಲಬುರ್ಗಿ ಕೇಂದ್ರೀಯ ವಿಶ್ವವಿದ್ಯಾನಿಲಯದ ಆಂಗ್ಲ ಭಾಷಾ ವಿಭಾಗದಲ್ಲಿ ಸಂಶೋಧನೆ ನಡೆಸುತ್ತಿದ್ದಾರೆ. ‘ ಈ ಹೂವ ಹೆಸರು ನಿಮ್ಮಿಚ್ಚೆಯಂತೆ’ ಇವರ ಕವಿತಾ ಸಂಕಲನದ ಹೆಸರು.
1 Post
ಪಾಲಹಳ್ಳಿ ವಿಶ್ವನಾಥ್
ಬೆಂಗಳೂರಿನವರಾದ ಪಾಲಹಳ್ಳಿ ವಿಶ್ವನಾಥ್ ಭೌತಶಾಸ್ತ್ರ ಪ್ರಾಧ್ಯಾಪಕರು. ಕ್ಯಾಲಿಫೋರ್ನಿಯಾ, ಮೇರಿಲ್ಯಾಂಡ್ ವಿಶ್ವವಿದ್ಯಾಲಯಗಳಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದರು. ಅಮೆರಿಕದ ಫರ್ಮಿಲ್ಯಾಬ್, ಲಾಸ್ ಅಲಮೋಸ್ ಲ್ಯಾಬ್ , ಗೊಡಾರ್ಡ್ ಸ್ಪೇಸ್ ಸೆಂಟರ್ ಗಳಲ್ಲಿ ಅವರು ಸಂಶೋಧನೆಗಳನ್ನು ಮಾಡಿದ್ದಾರೆ. ವಿಜ್ಞಾನ ಬರಹಗಾರರಾದ ಅವರ ಕೃತಿಗಳು, ಆಕಾಶದಲ್ಲೊಂದು ಮನೆ, ಕಣಕಣ ದೇವಕಣ, ಭೂಮಿಯಿಂದ ಬಾನಿನತ್ತ, ಪಾಪ ಪ್ಲೂಟೊ.
8 Posts
ಪಿ. ನಂದಕುಮಾರ್
ಪಿ. ನಂದಕುಮಾರ್ ಮೂಲತಃ ಸುರಪುರ ತಾಲೂಕಿನ ಕಕ್ಕೇರಾದವರು. ಸಧ್ಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಡಾ. ಅಪ್ಪಗೆರೆ ಸೋಮಶೇಖರ್ ಅವರ ಮಾರ್ಗದರ್ಶನದಲ್ಲಿ "ದಲಿತ ಚಳವಳಿಯ ಅನುಭವ ಕಥನ" ಎಂಬ ವಿಷಯದ ಬಗ್ಗೆ ಸಂಶೋಧನೆ ಕೈಗೊಂಡಿದ್ದಾರೆ.
1 Postಪಿ.ಎಚ್. ವಿಶ್ವನಾಥ್
ಪಂಚಮವೇದ,’ ‘ಅತಿಮಧುರ ಅನುರಾಗ, ಶ್ರೀಗಂಧ, ಮುಂಜಾನೆಯ ಮಂಜು, ಮುಸುಕು, ಅರಗಿಣಿ , ಅಂಡಮಾನ್, ಅರುಣೋದಯ’ ಅಲ್ಲದೆ ತಮಿಳಿನಲ್ಲಿ ‘ನದಿಯೋರ ಗೀತಂಗಳ್’ ಮುಂತಾದ ಚಿತ್ರಗಳು ಅವರ ನಿರ್ದೇಶನದಲ್ಲಿ ಬಂದವು. ಹಲವಾರು ರಾಜ್ಯ ಪ್ರಶಸ್ತಿಗಳನ್ನೂ ಗೆದ್ದುವು. ಈಗ ಬಿಡುಗಡೆಗೆ ಸಿದ್ಧವಾಗಿರುವುದು ಮಕ್ಕಳ ಚಿತ್ರ ‘ಕಿನ್ನರಬಾಲೆ’.
0 Posts
ಪೂರ್ಣಿಮಾ ಸುರೇಶ್
ಕವಯತ್ರಿ ಪೂರ್ಣಿಮಾ ಸುರೇಶ್ ಅವರು ಮೂಲತಃ ಉಡುಪಿಯವರು. ರಂಗ ಮತ್ತು ಧಾರಾವಾಹಿಯ ಕಲಾವಿದೆಯೂ ಆಗಿರುವ ಪೂರ್ಣಿಮಾ ಅವರಿಗೆ ಸಾಹಿತ್ಯದಲ್ಲೂ ಅಪಾರ ಆಸಕ್ತಿ.
1 Postಪ್ಯಾಪಿಲಾನ್
`ಪ್ಯಾಪಿಲಾನ್' ಎನ್ನುವುದು ಆಫ್ರಿಕಾ ಖಂಡದ ಆಗ್ನೇಯ ಕರಾವಳಿ ಮಡಗಾಸ್ಕರ್ ನಲ್ಲಿ ರುವ ತರುಣ ಕನ್ನಡಿಗರೊಬ್ಬರ ಕಾವ್ಯನಾಮ
4 Posts
ಪ್ರಜ್ಞಾ ಮತ್ತಿಹಳ್ಳಿ
ಪ್ರಜ್ಞಾ ಮತ್ತಿಹಳ್ಳಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಧಾರವಾಡದಲ್ಲಿ ವಾಣಿಜ್ಯಶಾಸ್ತ್ರ ವಿಷಯದಲ್ಲಿ ಸಹ ಪ್ರಾಧ್ಯಾಪಕರು. ಸಾಹಿತ್ಯ ರಂಗಭೂಮಿ ಮತ್ತು ಯಕ್ಷಗಾನಗಳು ಇವರ ಆಸಕ್ತಿಯ ಕ್ಷೇತ್ರಗಳು. ಕವಿತೆ, ಕತೆ, ಪ್ರಬಂಧ. ನಾಟಕ, ಪ್ರವಾಸ ಕಥನ ಈ ಎಲ್ಲ ಪ್ರಕಾರಗಳೂ ಸೇರಿದಂತೆ ಎಂಟು ಪುಸ್ತಕಗಳು ಪ್ರಕಟಗೊಂಡಿವೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯೂ ಒಳಗೊಂಡಂತೆ ಅನೇಕ ಕಡೆ ಇವರ ಬರಹಗಳು ಗುರುತಿಸಿಕೊಂಡಿವೆ.
5 Postsಪ್ರತೀಕ್ ಮುಕುಂದ
ಹೊಸ ತಲೆಮಾರಿನ ಕಥೆಗಾರ ಮತ್ತು ಛಾಯಾಚಿತ್ರಗ್ರಾಹಕ. ಆಸ್ಟ್ರೇಲಿಯಾದಲ್ಲಿರುವ ಸಾಫ್ಟ್ವೇರ್ ಉದ್ಯೋಗಿ.
1 Postಪ್ರದೀಪ್ ಕುಮಾರ್ ಶೆಟ್ಟಿ ಕೆಂಚನೂರು
ಸಿನಿಮಾ, ಚರಿತ್ರೆ, ರಾಜಕೀಯ ತತ್ವಶಾಸ್ತ್ರ,ಚಿತ್ರಕತೆ ರಚನೆ ಮತ್ತು ಕಲೆ ಇವರ ಆಸಕ್ತಿಯ ಕ್ಷೇತ್ರಗಳು. ಸಿನಿಮಾ ರಸಗ್ರಹಣ ಕುರಿತು ಪುಣೆಯ ಫಿಲ್ಮ್ ಆಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಮೂಲಕ ಶಿಕ್ಷಣವನ್ನು ಪಡೆದಿರುತ್ತಾರೆ.ಪ್ರಸ್ತುತ ಸರಕಾರಿ ಪದವಿ ಪೂರ್ವ ಕಾಲೇಜು ಬೈಂದೂರು ಇಲ್ಲಿ ಚರಿತ್ರೆ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತಿದ್ದಾರೆ.
6 Posts
ಪ್ರಭಾಕರ ರಾವ್
<strong>ತುಮಕೂರು ಮೂಲದ ಪ್ರಭಾಕರ ರಾವ್ ಅವರು ಎಂ.ಎ ಸಂಸ್ಕೃತ ಹಾಗೂ ಎಂ.ಕಾಂ ಪದವಿಗಳನ್ನು ಪಡೆದಿದ್ದು ರಂಗಭೂಮಿಯಲ್ಲಿ ನಟನೆ ನಿರ್ದೇಶನ ಹಾಗೂ ಬರವಣಿಗೆಯಲ್ಲಿ ತೊಡಗಿಸಿಕೊಂಡಿದ್ದಾರೆ. </strong>
1 Postಪ್ರಶಾಂತ ಆಡೂರ
ಹುಟ್ಟಿದ್ದು ಶಿವಮೊಗ್ಗದೊಳಗ. ಮುಂದೆ ಕಲತಿದ್ದು ಬೆಳದಿದ್ದು ಬಲತಿದ್ದು ಎಲ್ಲಾ ಹುಬ್ಬಳ್ಳಿ ಒಳಗ. ಒಂದ ಆರ ವರ್ಷದಿಂದ ತಿಳದಾಗೊಮ್ಮೆ, ಟೈಮ ಸಿಕ್ಕಾಗೊಮ್ಮೆ ಕನ್ನಡ ಹಾಸ್ಯ ಲೇಖನಗಳನ್ನ ಬರಿಲಿಕತ್ತೇನಿ. ಉತ್ತರ ಕರ್ನಾಟಕದ ಆಡು ಭಾಷೆಯೊಳಗ ಬರೇಯೊದು ನನ್ನ ಲೇಖನಗಳ ವಿಶೇಷತೆ.
48 Posts
ಪ್ರಶಾಂತ್ ಬೀಚಿ
ಪ್ರಶಾಂತ್ ಬೀಚಿ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನವರು. ಶಿವಮೊಗ್ಗ ಮತ್ತು ಬೆಂಗಳೂರಿನಲ್ಲಿ ವಿದ್ಯಾಭ್ಯಾಸ. ತಾಂಜಾನಿಯಾ (ಪೂರ್ವ ಆಫ್ರಿಕಾ), ಯೂಕೆ ಯಲ್ಲಿ ಕೆಲವು ವರುಷ ಇದ್ದು ಸದ್ಯಕ್ಕೆ ಕೆನಡಾದಲ್ಲಿ ನೆಲೆಸಿದ್ದಾರೆ. ‘ಲೇರಿಯೊಂಕ’ (ಅನುವಾದಿತ ಕಾದಂಬರಿ) ಮತ್ತು ‘ಕಿಲಿಮಂಜಾರೋ’ ಪ್ರಕಟಿತ ಪುಸ್ತಕಗಳು. ವಸುದೇವ ಭೂಪಾಲಂ ದತ್ತಿ, ದ ರಾ ಬೇಂದ್ರೆ ಮತ್ತು ಪರಮೇಶ್ವರ ಭಟ್ಟ್ ಪ್ರಶಸ್ತಿಗಳು ದೊರೆತಿವೆ.
22 Posts
ಪ್ರಸನ್ನ ಆಡುವಳ್ಳಿ
ಪ್ರಸನ್ನ ಆಡುವಳ್ಳಿ ಚಿಕ್ಕಮಗಳೂರು ಜಿಲ್ಲೆಯವರು. ಸದ್ಯ ಮಧ್ಯಪ್ರದೇಶದ ಭೋಪಾಲವಾಸಿ. ವನ್ಯಜೀವಿಗಳ ಬಗ್ಗೆ ಸಂಶೋಧನೆ, ಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿದ್ದಾರೆ
1 Post
ಪ್ರಸಾದ್ ಶೆಣೈ ಆರ್. ಕೆ.
ಪ್ರಸಾದ್ ಶೆಣೈ ಹೊಸ ತಲೆಮಾರಿನ ಪ್ರತಿಭಾವಂತ ಕಥೆಗಾರ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಇವರ ಕಥೆಗಳಿಗೆ 2019 ರ ಕನ್ನಡ ಕ್ರೀಯಾಶೀಲ ಬರವಣಿಗೆಯಲ್ಲಿ ಟೋಟೋ ಫಂಡ್ಸ್ ಆಫ್ ಆರ್ಟ್ ನ ಟೋಟೋ ಪುರಸ್ಕಾರ ಲಭಿಸಿದೆ. “ಲೂಲು ಟ್ರಾವೆಲ್ಸ್” (ಕಥಾ ಸಂಕಲನ) "ಒಂದು ಕಾಡಿನ ಪುಷ್ಟಕ ವಿಮಾನ"(ಪರಿಸರ ಕಥಾನಕ) ಇವರ ಪ್ರಕಟಿತ ಕೃತಿಗಳು.
24 Posts
ಪ್ರಿಯಾ ಕೆರ್ವಾಶೆ
<div id=":pf" class="ii gt"> <div id=":o3" class="a3s aiL "> <div dir="auto"> <p dir="ltr">ಪ್ರಿಯಾ ಕಾರ್ಕಳ ಸಮೀಪದ ಕೆರ್ವಾಶೆಯವರು. ಈಗಿರುವುದು ಬೆಂಗಳೂರು. ವೃತ್ತಿಯಲ್ಲಿ ಪತ್ರಕರ್ತೆ. ಸಾಹಿತ್ಯ ಅಂದರೆ ಪ್ರೀತಿ. ಚಾರಣ, ರಂಗಭೂಮಿಯಲ್ಲಿ ಆಸಕ್ತಿ.</p> </div> </div> </div>
1 Post
ಪ್ರಿಯಾ ಭಟ್ ಕಲ್ಲಬ್ಬೆ
ಪ್ರಿಯಾ ಭಟ್ ಕಲ್ಲಬ್ಬೆ ಅಂಕೋಲಾ ತಾಲೂಕಿನ ಹಳವಳ್ಳಿಯವರು. ಕುಮಟಾ ಪೇಟೆಯಲ್ಲಿ ಸ್ವಂತ ಉದ್ಯೋಗ. ಅದರೊಂದಿಗೆ ‘ಸ್ವಸ್ತಿ ಪ್ರಕಾಶನ’ ಎಂಬ ಪ್ರಕಾಶನ ಸಂಸ್ಥೆಯನ್ನು ನಡೆಸುತ್ತಿದ್ದು ಇದೂವರೆಗೂ ಇವರ ಮೂರು ಕೃತಿಗಳು ಪ್ರಕಟವಾಗಿವೆ.
3 Posts
ಪ್ರೊ. ಪುರುಷೋತ್ತಮ ಬಿಳಿಮಲೆ
ಸಮಕಾಲೀನ ಆಗುಹೋಗುಗಳಿಗೆ ಸಕಾರಣವಾಗಿ ಸ್ಪಂದಿಸುವ ಪ್ರೊ. ಪುರುಷೋತ್ತಮ ಬಿಳಿಮಲೆ ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಪಂಜ ಎಂಬ ಊರಿನವರು. ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜು, ಮಂಗಳೂರು ವಿಶ್ವವಿದ್ಯಾಲಯ, ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿದ್ದಾರೆ. 1994ರಿಂದ ದೆಹಲಿಯ ಅಮೆರಿಕನ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯನ್ ಸ್ಟಡೀಸ್ ನ ನಿರ್ದೇಶಕರಾಗಿ, 2015ರಿಂದ ದೆಹಲಿಯ ಜವಾಹರಲಾಲ ನೆಹರೂ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಪೀಠದಲ್ಲಿ ಪ್ರಾಧ್ಯಾಪಕರಾಗಿ, ಪ್ರಸ್ತುತ ನಿವೃತ್ತಿ ಹೊಂದಿದ್ದಾರೆ. ಮೆಕೆಂಜಿ ಕೈಫಿಯತ್ತುಗಳು, ಲಿಂಗರಾಜನ ಹುಕುಂನಾಮೆ, ದಲಿತ ಜಗತ್ತು, ಬಂಡಾಯ ದಲಿತ ಸಾಹಿತ್ಯ, ಶಿಷ್ಟ ಪರಿಶಿಷ್ಟ, ಕರಾವಳಿ ಜಾನಪದ, ಕೂಡುಕಟ್ಟು, ಜನಸಂಸ್ಕೃತಿ, ಬಹುರೂಪ, ಮೆಲುದನಿ, ಕನ್ನಡ ಕಥನಗಳು, ವಲಸೆ, ಸಂಘರ್ಷ ಮತ್ತು ಸಮನ್ವಯ ಇವರ ಪ್ರಮುಖ ಕೃತಿಗಳು. ‘ಕಾಗೆ ಮುಟ್ಟಿದ ನೀರು’ ಅವರ ಆತ್ಮಕತೆ.
1 Postಫಕೀರ್ ಮುಹಮ್ಮದ್ ಕಟ್ಪಾಡಿ
ಖ್ಯಾತ ಕತೆಗಾರರು,ಸೂಫಿ ಚಿಂತಕರು. ಮೂಲತಃ ಉಡುಪಿಯ ಕಟ್ಪಾಡಿಯರು. ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.
7 Posts
ಫಾತಿಮಾ ರಲಿಯಾ
ಇನ್ನೂ ಅರ್ಥವಾಗದ ಬದುಕಿನ ಬಗ್ಗೆ ತೀರದ ಬೆರಗನ್ನಿಟ್ಟುಕೊಂಡೇ ಕರಾವಳಿಯ ಪುಟ್ಟ ಹಳ್ಳಿಯಲ್ಲಿ ಬೆಳೆಯುತ್ತಿರುವವಳು ನಾನು, ಬದುಕು ಕಲಿಸುವ ಪಾಠಗಳನ್ನು ಶ್ರದ್ಧೆಯಿಂದ ಕಲಿಯುವಷ್ಟು ವಿಧೇಯ ವಿದ್ಯಾರ್ಥಿನಿ. ಪುಸ್ತಕಗಳೆಂದರೆ ಪುಷ್ಕಳ ಪ್ರೀತಿ. ಓದು ಬದುಕು, ಬರಹ ಗೀಳು ಅನ್ನುತ್ತಾರೆ ಫಾತಿಮಾ.
13 Postsಬದರಿ ರೂಪನಗುಡಿ
ಅನುವಾದಕರು. ತೆಲುಗಿನಿಂದ ಕನ್ನಡಕ್ಕೆ ಹಾಗೂ ಕನ್ನಡದಿಂದ ತೆಲುಗಿಗೆ ಸಮರ್ಥವಾಗಿ ಅನುವಾದಿಸಬಲ್ಲವರು.ಇತ್ತೀಚೆಗಷ್ಟೆ ಅಭಿಯಂತರರಾಗಿ ನಿವೃತ್ತರಾಗಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ.
1 Post
ಬಾಬು ಹಿರಣ್ಣಯ್ಯ
ರಂಗಭೂಮಿ, ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಪ್ರಸಿದ್ಧ ನಟರು; ಓದಿದ್ದು ಅಭಿಯಂತರ ಪದವಿ. ಆದರೆ ಆರಿಸಿಕೊಂಡ ವೃತ್ತಿ, ತಮ್ಮ ತಾತ ಕೆ. ಹಿರಣ್ಣಯ್ಯನವರು ಸ್ಥಾಪಿಸಿ, ತಂದೆ ಮಾಸ್ಟರ್ ಹಿರಣ್ಣಯ್ಯನವರು ಮುಂದುವರಿಸಿದ ‘ಹಿರಣ್ಣಯ್ಯ ಮಿತ್ರ ಮಂಡಳಿ’ ಯಲ್ಲಿ ಪೂರ್ಣ ಪ್ರಮಾಣದ ವೃತ್ತಿಪರ ನಟ. ಹದಿನಾಲ್ಕನೇ ವಯಸ್ಸಿಗೇ ‘ ದೇವದಾಸಿ’ ನಾಟಕದಲ್ಲಿನ ನಾಜೂಕಯ್ಯನ ಪಾತ್ರ ನಿರ್ವಹಿಸಿ ಸೈ ಅನಿಸಿಕೊಂಡವರು. ನಟನೆ, ನಿರ್ದೇಶನದಲ್ಲಿ ಸಕ್ರಿಯ. ಕಿರುತೆರೆಯಲ್ಲಿನ ಧಾರಾವಾಹಿಗಳಲ್ಲಿ ತಮ್ಮ ನಟನೆಗೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
1 Postಬಿ.ಆರ್.ಜೋಯಪ್ಪ
ಕನ್ನಡ ಮತ್ತು ಅರೆಭಾಷೆ ಎರಡರಲ್ಲೂ ಬರೆಯಬಲ್ಲ ಲೇಖಕರು. 'ಯಾರ ಬೇಟೆ ಮತ್ತು ಇತರ ಪ್ರಸಂಗಗಳು' ಎಂಬುದು ಬೇಟೆಯ ಕುರಿತಾದ ಇವರ ಪುಸ್ತಕ. ಕೊಡಗಿನ ಮದೆನಾಡಿನ ವಾಸಿ.
1 Postಬಿ.ಕೆ. ಸುಮತಿ
ಬಿ.ಕೆ. ಸುಮತಿ ಆಕಾಶವಾಣಿಯಲ್ಲಿ ನಿರೂಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಿರೂಪಣೆ, ಭಾಷೆ, ಸಾಹಿತ್ಯ ಕುರಿತ ಹಲವು ಲೇಖನಗಳನ್ನು ಬರೆದಿದ್ದಾರೆ.. ‘ನಿರೂಪಣೆ, ಮಾತಲ್ಲ ಗೀತೆ’ ಇವರ ಪ್ರಕಟಿತ ಪುಸ್ತಕ.
1 Post
ಬೇಲೂರು ರಘುನಂದನ್
ಬೇಲೂರು ರಘುನಂದನ್ ಹಾಸನ ಜಿಲ್ಲೆಯ ಬೇಲೂರಿನವರು. ಮೂರು ಚಿನ್ನದ ಪದಕಗಳೊಂದಿಗೆ ಕನ್ನಡದಲ್ಲಿ ಎಂ.ಎ.ಪದವಿ, ಎಂ.ಫಿಲ್ ಪದವಿಯನ್ನುಕನ್ನಡ ವಿಶ್ವವಿದ್ಯಾಲಯದಲ್ಲಿ ಪಡೆದು ಪ್ರಸ್ತುತ ಅದೇ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಸಂಶೋಧನೆಯಲ್ಲಿ ತೊಡಗಿದ್ದಾರೆ. ಕವಿ ಹಾಗೂ ನಾಟಕಕಾರರಾಗಿ ಗುರುತಿಸಿಕೊಂಡಿರುವ ರಘುನಂದನ್ ಅವರ ಹಲವು ಕಾವ್ಯ ಸಂಕಲನ, ಕಟ್ಟುಪದಗಳ ಗುಚ್ಛ, ಮಕ್ಕಳ ಕತಾ ಸಾಹಿತ್ಯ, ಪ್ರವಾಸ ಸಾಹಿತ್ಯ ಹಾಗೂ 8 ನಾಟಕ ಪುಸ್ತಕಗಳು ಪ್ರಕಟಗೊಂಡಿವೆ. 2017 ರಲ್ಲಿ ಕರ್ನಾಟಕ ನಾಟಕ ಅಕಾಡೆಮಿಗೆ ಸದಸ್ಯರಾಗಿ ಆಯ್ಕೆಗೊಂಡ ಬೇಲೂರು ಅವರಿಗೆ ಕುವೆಂಪು ಯುವಕವಿ ಪುರಸ್ಕಾರ, ಬೇಂದ್ರೆಗ್ರಂಥ ಬಹುಮಾನ, ಸಾಲು ಮರದತಿಮ್ಮಕ್ಕ ಹಸುರು ಪ್ರಶಸ್ತಿ, ಎಚ್.ಎಸ್.ವಿ. ಪುಟಾಣಿ ಸಾಹಿತ್ಯ ಪುರಸ್ಕಾರ, ತೇಜಸ್ವಿ ಕಟ್ಟೀಮನಿ ಯುವ ಪುರಸ್ಕಾರ, ರಾಷ್ಟ್ರಕವಿ ಕುವೆಂಪು ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ದೊರೆತಿವೆ.
4 Postsಭಾಗ್ಯಶ್ರೀ ಎಂ.ಎಸ್
ಭಾಗ್ಯಶ್ರೀ ಮೂಲತಃ ಮೈಸೂರಿನವರು. ಪ್ರಸ್ತುತ ಆಂಗ್ಲಭಾಷಾ ಸಹಾಯಕ ಪ್ರಾಧ್ಯಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಾಹಿತ್ಯದಲ್ಲಿ ಅಪಾರ ಆಸಕ್ತಿ ಇದ್ದು, ಓದು-ಬರಹ ಮತ್ತು ಫೋಟೋಗ್ರಫಿ ಇವರ ನೆಚ್ಚಿನ ಹವ್ಯಾಸಗಳು. ಹಳೆಗನ್ನಡ ಹಾಗೂ ಜನಪದ ಸಾಹಿತ್ಯ ಕೃತಿಗಳ ಮೇಲೆ ಅಧ್ಯಯನ ನಡೆಸುತ್ತಿದ್ದಾರೆ.
1 Post
ಭಾರತಿ ಬಿ.ವಿ.
ಹುಟ್ಟಿದ್ದು ಕೊಳ್ಳೇಗಾಲದಲ್ಲಿ. ಬೆಂಗಳೂರಿನಲ್ಲಿ ವಾಸ. ಕವನ, ಪ್ರಬಂಧ, ಪ್ರವಾಸ ಕಥನ, ನಾಟಕ ಇವುಗಳನ್ನು ಬರೆಯಲು ಆಸಕ್ತಿ. ಕವನಗಳ ಅನುವಾದ ಇತ್ತೀಚೆಗೆ ಹಿಡಿದಿರುವ ಹುಚ್ಚು. ನಾಟಕ ನೋಡುವುದು ಊರೂರು ಸುತ್ತುವುದು ಅತ್ಯಂತ ಪ್ರೀತಿಯ ಹವ್ಯಾಸಗಳು.`ಜಸ್ಟ್ ಮಾತ್ ಮಾತಲ್ಲಿ' ಮತ್ತು 'ಕಿಚನ್ ಕವಿತೆಗಳು' ಇವರ ಇತ್ತೀಚೆಗಿನ ಪುಸ್ತಕಗಳು
12 Posts
ಭಾರತಿ ಹೆಗಡೆ
ಪತ್ರಕರ್ತೆ, ಕವಯತ್ರಿ, ಊರು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ. ಈಗ ಬೆಂಗಳೂರಿನಲ್ಲಿ ವಾಸ. ಮೊದಲ ಪತ್ನಿಯ ದುಗುಡ (ಸಿನಿಮಾದಲ್ಲಿನ ಮಹಿಳಾ ಪಾತ್ರಗಳ ವಿಶ್ಲೇಷಣೆ), ಸೀತಾಳೆ ದಂಡೆಯ ಸದ್ದಿಲ್ಲದ ಕಥೆಗಳು(ಕಥಾ ಸಂಕಲನ), ಮಣ್ಣಿನ ಗೆಳತಿ(ಕೃಷಿ ಮಹಿಳೆಯರ ಅನುಭವ ಕಥನ)ಪುಸ್ತಕಗಳು ಪ್ರಕಟವಾಗಿವೆ.
26 Postsಮ ಶ್ರೀ ಮುರಳಿ ಕೃಷ್ಣ
ಮ ಶ್ರೀ ಮುರಳಿ ಕೃಷ್ಣ ಬರಹಗಾರ ಹಾಗೂ ಸಾಮಾಜಿಕ ಕಾರ್ಯಕರ್ತ. ಸಿನಿಮಾದಲ್ಲಿ ಆಸಕ್ತಿ ಹಾಗೂ ಸಿನಿಮಾ ಕುರಿತ ಲೇಖನ ಬರವಣಿಗೆ ಹವ್ಯಾಸ.
1 Post
ಮಚ್ಚೇಂದ್ರ ಪಿ ಅಣಕಲ್
ಮಚ್ಚೇಂದ್ರ ಪಿ ಅಣಕಲ್ ಮೂಲತಃ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಶರಣನಗರ (ಕಿಣ್ಣಿ) ಗ್ರಾಮದವರು. ಯಾದಗಿರಿ ಜಿಲ್ಲೆಯ ಮಾವಿನಹಳ್ಳಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಕಥೆಗಳಿಗೆ ಹಲವು ಪ್ರಶಸ್ತಿಗಳು ದೊರಕಿವೆ. ಬದುಕುತ್ತೇನೆ ಕತ್ತಲೆ ಮೊಟ್ಟೆಯೊಡೆದು (ಕವನಸಂಕಲನ), ಜ್ಞಾನ ಸೂರ್ಯ (ಸಂಪಾದಿತ ಕಾವ್ಯ), ಜನಪದ ವೈದ್ಯರ ಕೈಪಿಡಿ (ಸಂಪಾದನೆ), ಲಾಟರಿ (ಕಥಾಸಂಕಲನ), ಮೊದಲ ಗಿರಾಕಿ (ಕಥಾಸಂಕಲನ), ಹಗಲುಗಳ್ಳರು (ಕಥಾಸಂಕಲನ) ಇವರ ಪ್ರಕಟಿತ ಕೃತಿಗಳು.
2 Posts
ಮಂಜಯ್ಯ ದೇವರಮನಿ, ಸಂಗಾಪುರ
ಮಂಜಯ್ಯ ದೇವರಮನಿ ರಾಣೇಬೆನ್ನೂರಿನವರು. ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 'ಕರಿಜಾಲಿ ಮರ' ಪ್ರಕಟಿತ ಕಥಾಸಂಕಲನ. ಚಾರಣ ಮತ್ತು ಚಿತ್ರಕಲೆ ಇವರ ಹವ್ಯಾಸಗಳು.
1 Postಮಂಜುನಾಥ್ ಲತಾ
ಹುಟ್ಟಿದ್ದು, ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿ. ಕನ್ನಡದ ಹಲವಾರು ಪತ್ರಿಕೆಗಳಲ್ಲಿ ಹಿರಿಯ ಉಪ ಸಂಪಾದಕನಾಗಿ ಕೆಲಸ ನಿರ್ವಹಣೆ. ಸದ್ಯಕ್ಕೆ ಹವ್ಯಾಸಿ ಪತ್ರಕರ್ತ, ಕಲಾವಿದರಾಗಿ ಸ್ವಯಂ ಉದ್ಯೋಗ. ‘ತೆಂಕಲಕೇರಿ’ (2003), ‘ಸನ್ ಆಫ್ ಸಿದ್ದಪ್ಪಾಜಿ’(2008), ಕತೆ ಎಂಬ ಇರಿವ ಈ ಅಲಗು (2011) ಕಥಾ ಸಂಕಲನಗಳು. ‘ಪರದೇಸಿ ಮಗನ ಪದವು’ (2006), 'ಆಹಾ ಅನಿಮಿಷ ಕಾಲ' ‘ಸೋಜಿಗದ ಸೂಜಿ ಮಲ್ಲಿಗೆ’ (2008) ಕವನ ಸಂಕಲನಗಳು. ‘ಪಲ್ಲಂಗ’ ಕಾದಂಬರಿ(2008), ‘ಜನಪದ ಕಲಾರೂಪ ಡಾ.ರಾಜ್ಕುಮಾರ್’ (ಜೀವನ ಚಿತ್ರಣ) ಇದುವರೆಗಿನ ಪ್ರಕಟಿತ ಕೃತಿಗಳು. ಡಾ. ಬೆಸಗರಹಳ್ಳಿ ರಾಮಣ್ಣ ಕಥಾ ಪ್ರಶಸ್ತಿ, ಕುಂ.ವೀರಭದ್ರಪ್ಪ ಕಥಾ ಪ್ರಶಸ್ತಿ, ಸೇರಿದಂತೆ ಹಲವು ಪುರಸ್ಕಾರಗಳು ದೊರೆತಿವೆ
1 Postಮಂಜುನಾಯಕ ಚಳ್ಳೂರು
ಮಂಜುನಾಯಕ ಮೂಲತಃ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಚಳ್ಳೂರಿನವರು. ಸದ್ಯ ಬೆಂಗಳೂರಿನ ನಿವಾಸಿ. ಪತ್ರಿಕೋದ್ಯಮದಲ್ಲಿ ಪದವಿ ಪಡೆದಿರುವ ಮಂಜುನಾಯಕ ಪ್ರಸ್ತುತ ಕಲರ್ಸ್ ಸೂಪರ್ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರ ಕತೆಗಳಿಗೆ 2017ರ ಸಾಲಿನ ಟೋಟೋ ಪುರಸ್ಕಾರ ಲಭಿಸಿದೆ.
3 Posts
ಮಂಜುಳ ಡಿ
ಮಂಜುಳ ಡಿ. ಬೆಂಗಳೂರು ವಾಸಿ. ಇವರ ಒಂದು ಕವನ ಸಂಕಲನ ಹಾಗೂ ಎರಡು ಅಂಕಣ ಬರಹಗಳ ಪುಸ್ತಕ ಪ್ರಕಟವಾಗಿವೆ.
2 Posts
ಮಂಜುಳಾ ಸುಬ್ರಹ್ಮಣ್ಯ
ಮಂಜುಳಾ ಸುಬ್ರಹ್ಮಣ್ಯ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದವರು. ಸಾಂಪ್ರದಾಯಿಕ ನಾಟ್ಯ ಹಾಗೂ ಆಧುನಿಕ ಸಂವೇದನೆಯ ರಂಗಭೂಮಿ ಈ ಎರಡೂ ಕ್ಷೇತ್ರಗಳಲ್ಲಿ ಅನುಸಂಧಾನ ನಡೆಸಿದವರು. ದೂರದರ್ಶನದ ಬಿ ಗ್ರೇಡ್ ಕಲಾವಿದೆಯಾಗಿರುವ ಅವರು, ತುಳುನಾಡ ಜನಪದ ಕುಣಿತ ಹಾಗೂ ಅಭಿಜಾತ ನೃತ್ಯ ಪ್ರಕಾರದ ಆನ್ವಯಿಕ ಸಾಧ್ಯತೆ ಎಂಬ ವಿಷಯದ ಕುರಿತು ನಡೆಸಿದ ಅಧ್ಯಯನಕ್ಕಾಗಿ ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದ ಫೆಲೋಶಿಪ್ ಗೌರವ ಪಡೆದಿದ್ದಾರೆ.
6 Posts
ಮಂಡಲಗಿರಿ ಪ್ರಸನ್ನ
ಮಂಡಲಗಿರಿ ಪ್ರಸನ್ನ ಮೂಲತಃ ರಾಯಚೂರಿನವರು. ಓದಿದ್ದು ಇಂಜಿನಿಯರಿಂಗ್. ಹಲವು ವರ್ಷಗಳ ಕಾಲ ಬಹುರಾಷ್ಟ್ರೀಯ ಕಂಪೆನಿಯೊಂದರಲ್ಲಿ `ಪ್ರಾಜೆಕ್ಟ್ ಮತ್ತು ಮಾರ್ಕೆಟಿಂಗ್’ ವಿಭಾಗದ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ಈಗ ಸ್ವಯಂ ನಿವೃತ್ತಿ ಪಡೆದಿದ್ದಾರೆ. ಕನಸು ಅರಳುವ ಆಸೆ(ಕವಿತೆ), ಅಮ್ಮ ರೆಕ್ಕೆ ಹಚ್ಚು(ಮಕ್ಕಳ ಕವಿತೆ), ನಿನ್ನಂತಾಗಬೇಕು ಬುದ್ಧ(ಕವಿತೆ), ಏಳು ಮಕ್ಕಳ ನಾಟಕಗಳು(ಮಕ್ಕಳ ನಾಟಕ), ಪದರಗಲ್ಲು (ಸಂಪಾದನೆ), ನಾದಲಹರಿ(ಸಂಪಾದನೆ-2010) ಸೇರಿ ಒಟ್ಟು ಒಂಭತ್ತು ಕೃತಿಗಳು ಪ್ರಕಟವಾಗಿವೆ
6 Posts
ಮಧು ಗಣಪತಿರಾವ್ ಮಡೆನೂರು
ಮಧುಗಣಪತಿರಾವ್ ಮೂಲತಃ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಮಡೆನೂರಿನವರು. ಕಂದಾಯ ಇಲಾಖೆಯಲ್ಲಿ ಅಧಿಕಾರಿಯಾಗಿ ನಿವೃತ್ತಿ ಹೊಂದಿದ್ದಾರೆ. ಚೇತನ, ಶ್ರಾವಣ (ಕವನ ಸಂಕಲನಗಳು), ಸಂಶೋಧನಾ ಕೃತಿ-ಕರ್ನಾಟಕದ ದೀವರು (ಒಂದು ಐತಿಹಾಸಿಕ ಅಧ್ಯಯನ) ಇವರ ಪ್ರಕಟಿತ ಕೃತಿಗಳು
1 Postಮಧುಸೂದನ್ ವೈ ಎನ್
ಮಧುಸೂಧನ್ ವೈ ಎನ್ ಮೂಲತಃ ತುಮಕೂರು ಜಿಲ್ಲೆ ಸಿರಾ ತಾಲೂಕಿನ ಯರಗುಂಟೆ ಗ್ರಾಮದವರು. ವೃತ್ತಿ ಸಾಫ್ಟವೇರ್ ಎಂಜಿನಿಯರ್. ಬೆಂಗಳೂರಿನಲ್ಲಿ ವಾಸ. ಸಾಹಿತ್ಯದ ಓದು, ವಿಶ್ವ ಸಿನಿಮಾಗಳ ವೀಕ್ಷಣೆ ಹವ್ಯಾಸವಿರುವ ಇವರಿಗೆ ತತ್ವಶಾಸ್ತ್ರದಲ್ಲಿಯೂ ಆಸಕ್ತಿ. ಇವರ “ಕಾರೇಹಣ್ಣು” ಕಥಾ ಸಂಕಲನಕ್ಕೆ ಈ ಹೊತ್ತಿಗೆಯ ಪ್ರಶಸ್ತಿ ಲಭಿಸಿದೆ.
14 Posts
ಮಹಾಂತೇಶ ನವಲಕಲ್
ಮಹಾಂತೇಶ ನವಲಕಲ್ ಸಿರವಾರ ತಾಲ್ಲೂಕಿನ ನವಲಕಲ್ನವರು ನೀರಿನ ನೆರಳು, ಭಾರತ ಭಾಗ್ಯವಿದಾತ (ಕಥಾ ಸಂಕಲನಗಳು), ಒರೆಗಲ್ಲು ಸಂಪಾದಿತ ಕೃತಿ. ಪ್ರಜಾವಾಣಿ ಕಥಾ ಸ್ಪರ್ಧೆ(ಪ್ರಥಮ), ಬೆಸಗರಹಳ್ಳಿ ರಾಮಣ್ಣ ಪ್ರಶಸ್ತಿ ಗು.ವಿ.ವಿ ಎರಡು ಸಲ ಚಿನ್ನದ ಪದಕ ( ಆಕ್ರಾಂತ ಹಾಗು ದಂಡಿ ಕತೆಗೆ) ಗು.ವಿ.ವಿ ಪುಸ್ತಕ ಬಹುಮಾನ, ಪಾಪು ಪುರಸ್ಕಾರ, ಅಮ್ಮ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ದೊರೆತಿವೆ.
1 Postಮಹಾಂತೇಶ ಹೊದ್ಲೂರ
ಮಹಾಂತೇಶ ಹೊದ್ಲೂರ ಬಾಗಲಕೋಟೆಯವರು. ಪ್ರಸ್ತುತ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ಎಂ. ಎ. ದ್ವೀತಿಯ ವರ್ಷದ ವಿದ್ಯಾರ್ಥಿ. 'ಏನೆಂದು ಹೇಳಲಿ' (ಹನಿಗವನ ಸಂಕಲನ) ಹಾಗೂ 'ಮುಸ್ಸಂಜೆ ಪಯಣ' ಎನ್ನುವ (ಕವನ ಸಂಕಲನ) ಪ್ರಕಟಿತ ಕೃತಿಗಳು.
1 Postಮಹೇಶ್ ಹೆಗಡೆ ಕಲ್ಲರೆ
ಮಹೇಶ್ ಹೆಗಡೆ ಕಲ್ಲರೆ ಮೂಲತಃ ಉತ್ತರ ಕನ್ನಡದ ಹೊನ್ನಾವರದವರು. ಸದ್ಯ ಬೆಂಗಳೂರಿನಲ್ಲಿ ವಾಸ. ಎಂಬಿಎ ಪದವೀಧರರಾದ ಅವರು ಮಾರ್ಕೆಟಿಂಗ್ ಮತ್ತು ಕಾರ್ಪೋರೇಟ್ ಮಾಧ್ಯಮ ಕ್ಷೇತ್ರದಲ್ಲಿ ಉದ್ಯೋಗದಲ್ಲಿದ್ದಾರೆ.
0 Posts
ಮಾಲಿನಿ ಗುರುಪ್ರಸನ್ನ
ಬೆಂಗಳೂರು ವಾಸಿಯಾದ ಮಾಲಿನಿ ಗುರುಪ್ರಸನ್ನ ಗೃಹಿಣಿ ಮತ್ತು ಲೇಖಕಿ. ಸಾಹಿತ್ಯದಲ್ಲಿ ಅಪಾರ ಆಸಕ್ತಿ ಹೊಂದಿದ್ದಾರೆ.
5 Postsಮಿತ್ರಾ ವೆಂಕಟ್ರಾಜ
ಹೆಸರಾಂತ ಕಥೆಗಾರ್ತಿ. ಮೂಲತಃ ಕುಂದಾಪುರದವರು. ಈಗ ಮುಂಬೈ ವಾಸಿ. “ಮಾಯಕದ ಸತ್ಯ”, “ರುಕುಮಾಯಿ” ಮತ್ತು “ಹಕ್ಕಿ ಮತ್ತು ಅವಳು” ಇವರ ಕಥಾಸಂಕಲನಗಳು. “ಪಾಚಿಕಟ್ಟಿದ ಪಾಗಾರ” ಕಾದಂಬರಿ.
2 Posts
ಮೀರಾ ಪಿ.ಆರ್.
<div>ಭಾಷಾವಿಜ್ಞಾನದಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ ಸ್ನಾತಕ್ಕೋತ್ತರ ಪದವಿ ಪಡೆದಿರುವ ಮೀರಾ, ಈಗ ಸಧ್ಯಕ್ಕೆ ನ್ಯೂಜೆರ್ಸಿಯಲ್ಲಿ ನೆಲೆಸಿದ್ದಾರೆ. `ದೂರಸಾಗರ' ಮತ್ತು `ಗುಬ್ಬಿಗೂಡು'(ಸಂಪಾದನೆ) ಇವರ ಪ್ರಕಟಿತ ಕೃತಿಗಳು. ತಮ್ಮದೇ ಸಂಗೀತ ಶಾಲೆಯೊಂದನ್ನು ನಡೆಸುತ್ತಿರುವ ಮೀರಾ, ಹತ್ತು ಹಲವು ಆಸಕ್ತಿಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.</div>
1 Postಮೀರಾ ರಾಜಗೋಪಾಲ್
ಭಾಷಾ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವೀಧರೆ. ಊರು ಮೈಸೂರು. ಈಗ ಇರುವುದು ಅಮೇರಿಕಾದ ನ್ಯೂಜರ್ಸಿಯಲ್ಲಿ. ‘ನಿಶುಮನೆ’ ಇವರ ಬ್ಲಾಗ್. ‘ದೂರ ಸಾಗರ’ ಇವರು ಕೆಂಡಸಂಪಿಗೆಗೆ ಬರೆಯುತ್ತಿದ್ದ ಅಂಕಣಗಳ ಮಾಲಿಕೆ.
5 Postsಮೀರಾ ಸಂಪಿಗೆ, ಬೆಳ್ಳೂರ್
ಮೀರಾ ಸಂಪಿಗೆ ಮೈಸೂರಿನವರು. ಹದಿನೇಳು ವರ್ಷ ಅಮೇರಿಕಾದಲ್ಲಿದ್ದವರು ಮತ್ತೀಗ ವಾಪಸ್ಸು ತಮ್ಮೂರಿಗೆ ಮರಳಿದ್ದಾರೆ. ಪ್ರಪಂಚ ಸುತ್ತುವುದು ತೀವ್ರ ಖುಷಿಯ ವಿಷಯ ಮತ್ತು ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.
1 Post
ಮುನವ್ವರ್, ಜೋಗಿಬೆಟ್ಟು
ಊರು ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಜೋಗಿಬೆಟ್ಟು. . “ಮೊಗ್ಗು” ಇವರ ಪ್ರಕಟಿತ ಕವನ ಸಂಕಲನ. ಪರಿಸರ, ವಿಜ್ಞಾನ, ಪ್ರಾಣಿ ಪ್ರಪಂಚದ ಬಗ್ಗೆ ಕಾಳಜಿ ಮತ್ತು ಆಸಕ್ತಿ. ಬೆಂಗಳೂರಲ್ಲಿ ಉದ್ಯೋಗ. ಇತ್ತೀಚೆಗಷ್ಟೇ “ಇಶ್ಕಿನ ಒರತೆಗಳು” ಎಂಬ ಎರಡನೇ ಕವನಸಂಕಲನ ಲೋಕಾರ್ಪಣೆಗೊಂಡಿದೆ..
41 Postsಮುರ್ತುಜಾಬೇಗಂ ಕೊಡಗಲಿ
ಮುರ್ತುಜಾಬೇಗಂ ಕೊಡಗಲಿ ಇಳಕಲ್ಲಿನವರು. ಪ್ರೌಢಶಾಲೆಯ ಆಂಗ್ಲಭಾಷಾ ಶಿಕ್ಷಕಿಯಾಗಿ 17ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ‘ಮೊನ್ನೆ ಬಂದ ಮಳೆಗೆ’ ಮತ್ತು ‘ಭಾವ ಬದುಕು’ ಇವರ ಪ್ರಕಟಿತ ಕೃತಿಗಳು. ದ. ರಾ ಬೇಂದ್ರೆ ಗ್ರಂಥ ಬಹುಮಾನ, ಪಿ ಲಂಕೇಶ ಪ್ರಶಸ್ತಿ, ಸಂಚಯ ಕಾವ್ಯ ಪ್ರಶಸ್ತಿ, ಪಿ.ಸುಶೀಲಾ ಸ್ಮಾರಕ ಕಾವ್ಯ ಪ್ರಶಸ್ತಿ ಇವರಿಗೆ ಲಭಿಸಿವೆ.
2 Postsಮೆಹಬೂಬ ಮುಲ್ತಾನಿ
ಮೆಹಬೂಬ ಮುಲ್ತಾನಿ ಬೆಳಗಾವಿಯವರು. ಚಿಕ್ಕದಿನಕೊಪ್ಪದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಂಗ್ಲಭಾಷಾ ಶಿಕ್ಷಕರು. ಕತೆ, ಕವಿತೆ ಬರೆಯುವುದು ಮತ್ತು ಅನುವಾದ ಇವರ ಆಸಕ್ತಿಗಳು.
1 Postಮೇಘಾ ಯಲಿಗಾರ್
ಮೇಘಾ ಯಲಿಗಾರ್ ಮೂಲತಃ ಗದಗ ಜಿಲ್ಲೆಯ ಮುಂಡರಗಿಯವರು. ಎಂಎಸ್ಸಿ ಮಾಸ್ ಕಮ್ಯೂನಿಕೇಶನ್ ಪದವೀಧರೆ. ಸಧ್ಯಕ್ಕೆ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಕಂಪನಿಯೊಂದರ ಉದ್ಯೋಗಿ. ಸಿನಿಮಾ ಮತ್ತು ಸಾಹಿತ್ಯದಲ್ಲಿ ಆಸಕ್ತಿ.
1 Post
ಮೊಗಳ್ಳಿ ಗಣೇಶ್
ಕಥೆಗಾರ, ಕವಿ ಮತ್ತು ಕಾದಂಬರಿಕಾರ. ಹಂಪಿ ಕನ್ನಡ ವಿಶ್ವವಿದ್ಯಾಲಯದ ಜಾನಪದ ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದಾರೆ.
30 Posts
ಮೋಹನ್ ಮಂಜಪ್ಪ
ಮೋಹನ್ ಮಂಜಪ್ಪ ಮೂಲತಃ ಚಿಕ್ಕಮಗಳೂರಿನವರು. ಬದುಕಿನ ಬಂಡಿ ಎಳೆಯುತ್ತಿರುವುದು ಬೆಂಗಳೂರಿನಲ್ಲಿ. ವೃತ್ತಿಯಿಂದ IBM ನಲ್ಲಿ ಸಾಫ್ಟ್ವೇರ್ ಉದ್ಯೋಗಿ. ಸಾಹಿತ್ಯದಲ್ಲಿ ಆಸಕ್ತಿ ಹೊಂದಿದ್ದಾರೆ.
1 Post
ಯೋಗೀಂದ್ರ ಮರವಂತೆ
ಇಂಗ್ಲೆಂಡ್ ನ ಬ್ರಿಸ್ಟಲ್ ನಗರದ "ಏರ್ ಬಸ್" ವಿಮಾನ ಕಂಪನಿಯಲ್ಲಿ ವಿಮಾನ ಶಾಸ್ತ್ರ ತಂತ್ರಜ್ಞ. ಬರವಣಿಗೆ, ಯಕ್ಷಗಾನ ಆಸಕ್ತಿಯ ವಿಷಯಗಳು. ಮೂಲತಃ ಕನ್ನಡ ಕರಾವಳಿಯ ಮರವಂತೆಯವರು. “ಲಂಡನ್ ಡೈರಿ-ಅನಿವಾಸಿಯ ಪುಟಗಳು” ಇವರ ಪ್ರಕಟಿತ ಬಿಡಿಬರಹಗಳ ಗುಚ್ಛ.
58 Postsರಜನಿ ಗರುಡ
ಮೂಲತಃ ಶಿರಸಿಯವರು. ಈಗ ಧಾರವಾಡದಲ್ಲಿ ನೆಲಸಿದ್ದಾರೆ. ನೀನಾಸಂ ರಂಗಶಿಕ್ಷಣ ಪಡೆದು ರಂಗಭೂಮಿಯ ಕೆಲಸಗಳಲ್ಲಿ ಸಕ್ರಿಯರಾಗಿದ್ದಾರೆ. ಗೊಂಬೆಮನೆ ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ. ಸಂಗೀತ, ನೃತ್ಯ, ನಟನೆ, ನಿರ್ದೇಶನ, ರಂಗತರಬೇತಿ ಶಿಬಿರಗಳು, ಗೊಂಬೆ ತಯಾರಿಕೆ ಮತ್ತು ಪ್ರದರ್ಶನ ಹೀಗೆ ಹಲವು ಆಸಕ್ತಿಯ ಕ್ಷೇತ್ರಗಳು. ಹವ್ಯಾಸಿ ಬರಹಗಾರರು.
5 Posts
ರಂಜಾನ್ ದರ್ಗಾ
ಕನ್ನಡದ ಹಿರಿಯ ಲೇಖಕರು ಮತ್ತು ಪತ್ರಕರ್ತರು. ಬಂಡಾಯ ಕಾವ್ಯದ ಮುಂಚೂಣಿಯಲ್ಲಿದ್ದವರು. ‘ಕಾವ್ಯ ಬಂತು ಬೀದಿಗೆ’ ಅಪಾರ ಖ್ಯಾತಿ ತಂದುಕೊಟ್ಟಿದ್ದ ಇವರ ಕವಿತಾ ಸಂಕಲನ. ಬಸವಣ್ಣನವರ ದೇವರು, ಬಸವ ಧರ್ಮದ ವಿಶ್ವ ಸಂದೇಶ, ನಡೆ ನುಡಿ ಸಿದ್ದಾಂತ, ವಚನ ವಿವೇಕ ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಪುರಸ್ಕಾರಗಳು ಸಂದಿವೆ.
37 Posts
ರಟ್ಟೀಹಳ್ಳಿ ರಾಘವಾಂಕುರ
ರಟ್ಟೀಹಳ್ಳಿ ರಾಘವಾಂಕುರ ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ಗ್ರಾಮದವರು. ಸಧ್ಯ ಕನ್ನಡ ವಿಶ್ವವಿದ್ಯಾಲಯದ ದ್ರಾವಿಡ ಸಂಸ್ಕೃತಿ ಅಧ್ಯಯನ ವಿಭಾಗದಲ್ಲಿ ಪಿಎಚ್.ಡಿ ಅಧ್ಯಯನ.<span style="font-family: sans-serif"> </span>ಪ್ಲಾಟ್ ಫಾರಂ ನಂ 3(ಕಿರುಕಾದಂಬರಿ) ಹಾಗೂ ಹಿಂಗಂದ್ರ ಹ್ಯಾಂಗ(ಕವನ ಸಂಕಲನ) ಪ್ರಕಟಿತ ಕೃತಿಗಳು. ಫೋಟೋಗ್ರಫಿ, ಸಾಹಿತ್ಯ, ಸಿನಿಮಾ, ಮುಖಪುಟ ವಿನ್ಯಾಸ ಆಸಕ್ತಿ ಕ್ಷೇತ್ರಗಳು.
4 Postsರಮೇಶ್ ನಾಯಕ್
ಕೆಂಡಸಂಪಿಗೆಗಾಗಿಯೇ ಲಂಬಾಣಿ ಜೀವನದ ವಿವರಗಳನ್ನು ಕನ್ನಡದಲ್ಲಿ ಬರೆಯಲು ತೊಡಗಿದವರು. ಈಗ ಮೈಸೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ ಹಿಂದಿ ಉಪನ್ಯಾಸಕರಾಗಿದ್ದಾರೆ.ಮೂಲತ: ವಿಜಯಪುರದ ರಾಮತೀರ್ಥ ಲಂಬಾಣಿ ತಾಂಡದವರು.
2 Posts
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಮೂಲತಃ ಉಡುಪಿಯವರು. ಈಗ ಮಂಗಳೂರು ವಾಸಿ ಮುಸುಕು ತೆರೆದು, ತೂಗುದೀಪ, ಇರುವುದೆಲ್ಲವ ಬಿಟ್ಟು ಇವರ ಪ್ರಕಟಿತ ಕವನ ಸಂಕಲನಗಳು. ಪ್ರೇಮದ ಶರಧಿಗೆ, ಆಕಾಶಬುಟ್ಟಿ, ಒಲವ ಶ್ರಾವಣ ಇವರ ಭಾವಗೀತೆ ಸಿ ಡಿ ಗಳು
2 Postsರಹಮತ್ ತರೀಕೆರೆ
ಹೊಸ ತಲೆಮಾರಿನ ತೀಕ್ಷ್ಣ ಒಳನೋಟಗಳ ಲೇಖಕರು. ಸಂಸ್ಕೃತಿ ವಿಮರ್ಶೆ ಮತ್ತು ತಿರುಗಾಟ ಇವರ ಪ್ರೀತಿಯ ವಿಷಯಗಳು. ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕ.
53 Posts
ರಾಘವೇಂದ್ರ ಪಾಟೀಲ
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿಯ ಅನಾಥ ಸೇವಾಶ್ರಮ ಸಂಸ್ಥೆಯ ಆಡಳಿತಾಧಿಕಾರಿಯಾಗಿ ಕೆಲಸ ಮಾಡಿದ ರಾಘವೇಂದ್ರ ಪಾಟೀಲರು, ಸಂವಾದ ಸಾಹಿತ್ಯ ಪತ್ರಿಕೆಯ ಸಂಪಾದಕರು. ಒಡಪುಗಳು, ಪ್ರತಿಮೆಗಳು, ದೇಸಗತಿ, ಮಾಯಿಯ ಮುಖಗಳು ರಾಘವೇಂದ್ರ ಪಾಟೀಲರು ಬರೆದ ಕಥಾ ಸಂಕಲನಗಳು; ಬಾಳವ್ವನ ಕನಸುಗಳು, ತೇರು, ಗೈರ ಸಮಜೂತಿ ಕಾದಂಬರಿಗಳು. ಪ್ರವಾಸ ಸಾಹಿತ್ಯ, ಸಂಪಾದಿತ ಕೃತಿಗಳು, ವ್ಯಕ್ತಿ ಚಿತ್ರ, ವಿಮರ್ಶಾ ಕೃತಿಗಳನ್ನೂ ಅವರು ಬರೆದಿದ್ದಾರೆ. ತೇರು ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಚದುರಂಗ ಪ್ರಶಸ್ತಿ, ಗೊರೂರು ಪ್ರತಿಷ್ಠಾನ ಪ್ರಶಸ್ತಿ ಸೇರಿದಂತೆ ಅನೇಕ ಪುರಸ್ಕಾರಗಳು ಅವರಿಗೆ ಸಂದಿವೆ.
1 Postರಾಜೀವ ನಾರಾಯಣ ನಾಯಕ
ಉತ್ತರ ಕನ್ನಡದ ಅಂಕೋಲಾ ತಾಲ್ಲೂಕಿನ ವಾಸರೆ ಗ್ರಾಮದವರು. ಸದ್ಯ ಮುಂಬೈನಲ್ಲಿ ಸರ್ಕಾರಿ ಉದ್ಯೋಗದಲ್ಲಿದ್ದಾರೆ.
3 Posts
ರಾಜೇಶ್ವರಿ ತೇಜಸ್ವಿ
ಲೇಖಕರಾಗಿ ಅಪರಿಚಿತರಾಗಿದ್ದ ಶ್ರೀಮತಿ ರಾಜೇಶ್ವರಿಯವರು ಪೂರ್ಣಚಂದ್ರ ತೇಜಸ್ವಿಯವರ ಪತ್ನಿ. ಕೆಂಡಸಂಪಿಗೆಯ ಮೂಲಕ ತಮ್ಮ ಊರಿನ ಬದುಕಿನ ಚಿತ್ರ ಕಟ್ಟಿಕೊಡುತ್ತಿದ್ದಾರೆ.
8 Posts
ರೂಪ ಹಾಸನ
ಕಾವ್ಯ ಮತ್ತು ರೇಖಾಚಿತ್ರ ಪ್ರಮುಖ ಅಭಿವ್ಯಕ್ತಿ ಮಾಧ್ಯಮ. ಒಂದು ಕಿರುಪದ್ಯಗಳ ಸಂಕಲನವೂ ಸೇರಿ ಐದು ಕವನ ಸಂಕಲನಗಳು ಪ್ರಕಟವಾಗಿವೆ. ಹಲವು ಭಾಷೆಗಳಿಗೆ ಕವಿತೆಗಳು ಭಾಷಾಂತರಗೊಂಡಿವೆ. ಮಹಿಳೆ ಮಕ್ಕಳು ಶಿಕ್ಷಣ ಪರಿಸರ ಸಂಬಂಧಿತ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಮೂಲತಃ ಮೈಸೂರಿನವರು, ಸದ್ಯದ ನೆಲೆ ಹಾಸನ.
4 Posts
ರೂಪಶ್ರೀ ಕಲ್ಲಿಗನೂರ್
ಚಿತ್ರ ಕಲಾವಿದೆ, ಕವಯತ್ರಿ ಹಾಗೂ ಪತ್ರಕರ್ತೆ. ಚಿತ್ರಕಲೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 'ಕಾಡೊಳಗ ಕಳದಾವು ಮಕ್ಕಾಳು' ಮಕ್ಕಳ ನಾಟಕ . 'ಚಿತ್ತ ಭಿತ್ತಿ' ವಿಭಾ ಸಾಹಿತ್ಯ ಪ್ರಶಸ್ತಿ ಪಡೆದ ಕವನ ಸಂಕಲನ. ಹುಟ್ಟಿದ್ದು ಸವಣೂರಿನಲ್ಲಿ. ಈಗ ಬೆಂಗಳೂರು. ‘ಕೆಂಡಸಂಪಿಗೆ’ ಯಲ್ಲಿ ಸಹಾಯಕ ಸಂಪಾದಕಿ.
32 Posts
ರೋಹಿತ್ ರಾಮಚಂದ್ರಯ್ಯ
ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯವರಾದ ರೋಹಿತ್ ಸದ್ಯ ಬೆಂಗಳೂರು ನಿವಾಸಿ. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಸಾಹಿತ್ಯ, ಅನುವಾದ ಹಾಗೂ ಸಿನೆಮಾ ವೀಕ್ಷಣೆಯಲ್ಲಿ ಆಸಕ್ತಿ ಹೊಂದಿದ್ದಾರೆ.
1 Postಲಕ್ಷ್ಮೀಶ ತೋಳ್ಪಾಡಿ
ವೇದ,ಉಪನಿಷತ್,ಮಹಾಕಾವ್ಯ,ಪರಿಸರ,ಸೌಂದರ್ಯ ಹಾಗೂ ಮಾನವ ಜೀವನದ ಕುರಿತು ಆಳವಾಗಿ, ಸ್ಪಷ್ಟವಾಗಿ ಮಾತನಾಡಬಲ್ಲ, ಬರೆಯಬಲ್ಲ ಲಕ್ಷ್ಮೀಶ ತೋಳ್ಪಾಡಿ ಕನ್ನಡದ ಈ ತಲೆಮಾರಿನ ಬಹಳ ಒಳ್ಳೆಯ ವಿದ್ವಾಂಸರಲ್ಲಿ ಒಬ್ಬರು.
3 Posts
ವಸುಂಧರಾ ಕದಲೂರು
<h5 style="text-align: right">ಮಂಡ್ಯ ಮೂಲದ ಕೆ.ಎಂ ವಸುಂಧರಾ ಬೆಂಗಳೂರು ವಾಸಿ. ಕರ್ನಾಟಕ ಸರ್ಕಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ‘ಮರೆತು ಬಿಟ್ಟದ್ದು’ ಇವರ ಪ್ರಕಟಿತ ಕವನ ಸಂಕಲನ. ಬರವಣಿಗೆ,ಓದು, ಪ್ರವಾಸ, ಚಾರಣ ಇವರ ಹವ್ಯಾಸಗಳು.</h5>
1 Post
ವಾಸುದೇವ ಕೃಷ್ಣಮೂರ್ತಿ
ವಾಸುದೇವ ಕೃಷ್ಣಮೂರ್ತಿ ಬೆಂಗಳೂರು ನಿವಾಸಿ. ಎಲೆಕ್ಟ್ರಾನಿಕ್ ಎಂಜಿನಿಯರ್ ಆಗಿರುವ ಇವರು ಖಾಸಗಿ ಕಂಪೆನಿಯ ಐಟಿ ಉದ್ಯೋಗಿ. ಸಾಹಿತ್ಯದಲ್ಲಿ ಆಸಕ್ತಿ. ಓದುವುದು, ಬರೆಯುವುದು, ಚಿತ್ರಕಲೆ, ಸ೦ಗೀತ, ಪ್ರವಾಸ ಮತ್ತು ಛಾಯಗ್ರಹಣ ಇವರ ಹವ್ಯಾಸಗಳು.
2 Posts
ವಾಸುದೇವ ನಾಡಿಗ್
ವಾಸುದೇವ ನಾಡಿಗ್ ಮೂಲತಃ ಶಿವಮೊಗ್ಗದ ಭದ್ರಾವತಿಯವರು. ಕುವೆಂಪು ವಿವಿಯಿಂದ ಕನ್ನಡ ಸ್ನಾತಕೋತ್ತರ ಪದವಿ ಹಾಗೂ ತುಮಕೂರು ಸಿದ್ದಗಂಗಾ ಶಿಕ್ಷಣ ಮಹಾವಿದ್ಯಾಲಯ ದಲಿ ಬಿ. ಎಡ್. ಪದವಿ ಪಡೆದಿದ್ದಾರೆ. ೨೦ ವರ್ಷಗಳಿಂದ ಜವಾಹರ ನವೋದಯ ವಿದ್ಯಾಲಯದಲಿ ಕನ್ನಡ ಅಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವೃಷಭಾಚಲದ ಕನಸು, ಹೊಸ್ತಿಲು ಹಿಮಾಲಯದ ಮಧ್ಯೆ, ಭವದ ಹಕ್ಕಿ, ನಿನ್ನ ಧ್ಯಾನದ ಹಣತೆ, ವಿರಕ್ತರ ಬಟ್ಟೆಗಳು, ಅಲೆ ತಾಕಿದರೆ ದಡ, ಅವನ ಕರವಸ್ತ್ರ ಅನುಕ್ತ ( ಈವರೆಗಿನ ಕವಿತೆಗಳು) ಇವರ ಪ್ರಕಟಿತ ಕವನ ಸಂಕಲನಗಳು. ಬೇಂದ್ರೆ ಅಡಿಗ, ಕಡೆಂಗೋಡ್ಲು ಶಂಕರಭಟ್ಟ, ಮುದ್ದಣ, ಜಿ ಎಸ್ ಎಸ್ ಕಾವ್ಯ ಪ್ರಶಸ್ತಿ ಇವರಿಗೆ ದೊರೆತಿವೆ.
7 Posts
ವಿಕಾಸ ಹೊಸಮನಿ
ವಿಕಾಸ ಹೊಸಮನಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರು. ಸದ್ಯ ಅರ್ಥಶಾಸ್ತ್ರ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಘವೇಂದ್ರ ಪಾಟೀಲರ "ಗೈರ ಸಮಜೂತಿ" ಕಾದಂಬರಿಯ ಕುರಿತ ವಿಮರ್ಶಾ ಲೇಖನಗಳ ಸಂಕಲನ "ಹೃದಯದ ಹಾದಿ" ಮತ್ತು "ನಾ. ಮೊಗಸಾಲೆ ಸಾಹಿತ್ಯ ವಾಚಿಕೆ" ಕೃತಿಗಳನ್ನು ಸಂಪಾದಿಸುತ್ತಿದ್ದಾರೆ. "ಮಹತಿ" ಎಂಬ ವಿಮರ್ಶಾ ಲೇಖನಗಳ ಸಂಕಲನವೊಂದು ಶೀಘ್ರದಲ್ಲಿಯೇ ಪ್ರಕಟವಾಗಲಿದೆ.
1 Postವಿಕ್ರಂ ಹತ್ವಾರ್
ಕವಿ, ಕಥೆಗಾರ. ವೃತ್ತಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್. ಊರು ಕುಂದಾಪುರ. ಇರುವುದು ಬೆಂಗಳೂರು. `ಜೀರೋ ಮತ್ತು ಒಂದು' ಇವರಿಗೆ ಹೆಸರು ತಂದುಕೊಟ್ಟ ಕಥಾಸಂಕಲನ.
1 Post
ವಿಜಯಶ್ರೀ ಹಾಲಾಡಿ
ವಿಜಯಶ್ರೀ ಹಾಲಾಡಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಾಲಾಡಿಯ ಮುದೂರಿಯವರು. ಓದು, ಬರೆಹ, ನಿಸರ್ಗ, ಹಕ್ಕಿಗಳನ್ನು ಗಮನಿಸುವುದು, ಫೋಟೋಗ್ರಫಿ, ಕಾಡಿನ ತಿರುಗಾಟ ಇವರ ಆಸಕ್ತಿಗಳು. ಬೀಜ ಹಸಿರಾಗುವ ಗಳಿಗೆ(ಕವಿತೆ), ಓತಿಕ್ಯಾತ ತಲೆಕುಣ್ಸಿ(ಮಕ್ಕಳ ಕವಿತೆ), ಅಲೆಮಾರಿ ಇರುಳು(ಕಿರುಕವಿತೆ), ಪಪ್ಪುನಾಯಿಯ ಪೀಪಿ(ಮಕ್ಕಳ ಕವಿತೆ), ಸೂರಕ್ಕಿ ಗೇಟ್(ಮಕ್ಕಳ ಕಾದಂಬರಿ), ಜಂಬಿಕೊಳ್ಳಿ ಮತ್ತು ಪುಟ್ಟವಿಜಿ(ಮಕ್ಕಳಿಗಾಗಿ ಅನುಭವಕಥನ) ಪ್ರಕಟಿತ ಕೃತಿಗಳು
7 Posts
ವಿಜಯಾ ಮೋಹನ್
ವಿಜಯಾ ಮೋಹನ್ ಮಧುಗಿರಿಯವರು. “ತಬ್ಬಲಿ ಸಾರು”, “ಕಣ್ಣಿ”, “ಜಾತಿ”, “ಓಟು” (ಕಥಾ ಸಂಕಲನಗಳು), “ನೀರು” (ಮಿನಿ ಕಾದಂಬರಿ) ಇವರ ಪ್ರಕಟಿತ ಕೃತಿಗಳು. ತ್ರಿವೇಣಿ ದತ್ತಿನಿಧಿ ಪ್ರಶಸ್ತಿ, ಡಾ. ಬೆಸಗರಹಳ್ಳಿ ರಾಮಣ್ಣ ಪ್ರಶಸ್ತಿ ಜೊತೆ ಹಲವು ಪ್ರಶಸ್ತಿಗಳು ಇವರಿಗೆ ದೊರೆತಿವೆ.
2 Posts
ವಿನಾಯಕ ಅರಳಸುರಳಿ
<div dir="auto">ವಿನಾಯಕ ಅರಳಸುರಳಿ ತೀರ್ಥಹಳ್ಳಿ ತಾಲೋಕಿನ ಅರಳಸುರಳಿ ಗ್ರಾಮದವರು. 'ನವಿಲುಗರಿ ಮರಿ ಹಾಕಿದೆ' ಇವರ ಚೊಚ್ಚಲ ಪ್ರಕಟಿತ ಲಲಿತ ಪ್ರಬಂಧಗಳ ಸಂಕಲನ.</div>
1 Post
ವಿನೋದ್
ವಿನೋದ್ ವೃತ್ತಿಯಲ್ಲಿ ಮೆಕಾನಿಕಲ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಹ್ರೇನ್ ನಲ್ಲಿ ಇವರ ವಾಸ. ಬರವಣಿಗೆ ಇವರ ಹವ್ಯಾಸ.
0 Posts
ವಿಶ್ವನಾಥ ಎನ್ ನೇರಳಕಟ್ಟೆ
ವಿಶ್ವನಾಥ ನೇರಳಕಟ್ಟೆ ಮೂಲತಃ ದಕ್ಷಿಣ ಕನ್ನಡದ ಬಂಟ್ವಾಳದವರು. ಬಂಟ್ವಾಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಉಪನ್ಯಾಡಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೊದಲ ತೊದಲು (ಕವನ ಸಂಕಲನ), ಕಪ್ಪು-ಬಿಳುಪು (ಕಥಾ ಸಂಕಲನ), ಹರೆಯದ ಕೆರೆತಗಳು (ಚುಟುಕು ಸಂಕಲನ), ಸಾವಿರದ ಮೇಲೆ (ನಾಟಕ) ಇವರ ಪ್ರಕಟಿತ ಕೃತಿಗಳು. "ಡಾ. ನಾ ಮೊಗಸಾಲೆಯವರ ಸಾಹಿತ್ಯದಲ್ಲಿ ಪ್ರಾದೇಶಿಕತೆ" ವಿಷಯದಲ್ಲಿ ಪಿಎಚ್.ಡಿ. ಸಂಶೋಧನೆ ಮಾಡಿದ್ದಾರೆ.
3 Postsವೀಣಾ ಶಾಂತೇಶ್ವರ
ಕನ್ನಡದ ಪ್ರಮುಖ ಲೇಖಕಿ. ‘ಗಂಡಸರು’ ಮತ್ತು ‘ಶೋಷಣೆ, ಬಂಡಾಯ ಇತ್ಯಾದಿ’ ಎಂಬ ಎರಡು ಕಾದಂಬರಿಗಳ ಮೂಲಕ ಕನ್ನಡ ಬರಹ ಲೋಕದಲ್ಲಿ ಹೊಸ ಅಲೆಗಳನ್ನ ಎಬ್ಬಿಸಿದವರು.ಹುಟ್ಟೂರು ಮತ್ತು ಈಗ ಇರುವುದು ಧಾರವಾಡ.
2 Posts
ವೀರಣ್ಣ ಮಡಿವಾಳರ
ಇಂಗ್ಲಿಷ್ ಸಾಹಿತ್ಯವನ್ನು ಅಧ್ಯಯನ ಮಾಡಿರುವ ವೀರಣ್ಣ ಮಡಿವಾಳರ ಅವರು ಕವಿ, ನಾಟಕಕಾರ. ಹಂಪಿ ಕನ್ನಡ ವಿಶ್ವವಿದ್ಯಾನಿಲಯದಿಂದ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಬೆಳಗಾವಿ ಜಿಲ್ಲೆಯ ರಾಯಭಾಗದ ಬಳಿ ನಿಡಗುಂದಿ ಎಂಬಲ್ಲಿ ಕನ್ನಡ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಧಾನ ಗುರುಗಳು. ನೆಲದ ಕರುಣೆಯ ದನಿ ಅವರು ಬರೆದ ಕವನ ಸಂಕಲನ.ಎಲ್ಲೋ ಹಾಳಾಗಿ ಹೋಗಿದ್ದಾನೆ ವಸಂತ -ಖಂಡಕಾವ್ಯ ತೆರೆಯದ ಪುಟ - ನಾಟಕ ಕರ್ನಾಟಕ ನಾಟಕ ಅಕಾಡೆಮಿಯಿಂದ ಪ್ರದರ್ಶನಕ್ಕೆ ಆಯ್ಕೆಯಾಗಿ ನಾಡಿನಾದ್ಯಂತ ಪ್ರದರ್ಶನ ಕಂಡಿದೆ.
2 Postsವೆಂಕಟರಂಗ ಮೈಸೂರು
ಮೈಸೂರಿನವರು. ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದಾರೆ.ಸಾಹಿತ್ಯ,ಕ್ರಿಕೆಟ್ ಮತ್ತು ಪ್ರವಾಸ ಇವರ ಆಸಕ್ತಿಯ ವಿಷಯಗಳು.
2 Postsವೈ.ಎಸ್. ಹರಗಿ
ವೈ.ಎಸ್. ಹರಗಿ ಮೂಲತಃ ರೋಣ ತಾಲ್ಲೂಕಿನ ಹುಲ್ಲೂರಿನವರು. ೧೯೯೯ನೇ ಸಾಲಿನಲ್ಲಿ ಕೆ. ಪಿ. ಎಸ್. ಸಿ. ಮುಖಾಂತರ ನೇರ ನೇಮಕಾತಿ ಹೊಂದಿ ನಂಜನಗೂಡು ಮೈಸೂರು ಜಿಲ್ಲೆಯಲ್ಲಿ ಅಧಿಕಾರಿಯಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಇವರ “ಉರಿವ ಜಲ” ಕಾದಂಬರಿಗೆ ೨೦೧೪ರ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ(ಚದುರಂಗ ದತ್ತಿ ನಿಧಿ)ಯ ಜೊತೆ ಹಲವು ಪ್ರಶಸ್ತಿಗಳು ದೊರೆತಿವೆ. ಕವಡೆಪುರದ ಕೌರವರು (ಕಾದಂಬರಿ), ಕವಡೆಪುರದ ಕೌರವರು(ಕಾದಂಬರಿ), ಮೂಕ ಹಕ್ಕಿ ನಕ್ಕಾಗ (ಕಥಾ ಸಂಕಲನ), ಬಾರಪ್ಪಾ ಬಾರೋ ಮಳೆರಾಯ (ಕಥಾಸಂಕಲನ) ದೇವ್ರು ಬರ್ತಾನೆ ದಾರಿಬಿಡಿ (ಕಥಾ ಸಂಕಲನ), ಸ್ವಪ್ನಗೆಜ್ಜೆ (ಕಾದಂಬರಿ), ಕವಡೆಪುರದ ಕೌರವರು (ಕಾದಂಬರಿ), ಮ್ಯಾಕ್ಸ್ ಮುಲ್ಲರ್ (ಜೀವನ ಚರಿತ್ರೆ) ಕಲ್ಲರಳಿ ಹೂವಾಗಿ ಇವರ ಪ್ರಕಟಿತ ಕೃತಿಗಳು.
1 Postವೈಶಾಲಿ ಹೆಗಡೆ
ಊರು, ಪಿಯುಸಿವರೆಗಿನ ಓದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ. ಈಗ ಅಮೇರಿಕಾದ ಪ್ರತಿಷ್ಠಿತ ಟೆಲಿಕಾಂ ಕಂಪನಿಯೊಂದರಲ್ಲಿ ಕೆಲಸ. ಇರುವುದು ಬಾಸ್ಟನ್ ನ ಉತ್ತರದ ಊರೊಂದರಲ್ಲಿ. 'ಒದ್ದೆ ಹಿಮ.. ಉಪ್ಪುಗಾಳಿ' ಇವರ ಪ್ರಬಂಧ ಸಂಕಲನ.
14 Postsಶರಣಬಸವ ಕೆ ಗುಡದಿನ್ನಿ
ಶರಣಬಸವ ಕೆ ಗುಡದಿನ್ನಿ ರಾಯಚೂರು ಜಿಲ್ಲೆಯ ವೃತ್ತಿಯಲ್ಲಿ ಪ್ರಾಥಮಿಕ ಶಿಕ್ಷಕ. ಕತೆ ಇವರ ಆಸಕ್ತಿಯ ಕ್ಷೇತ್ರ. ಸತತ ಎರಡು ವರ್ಷ ವಿಜಯ ಕರ್ನಾಟಕ ಯುಗಾದಿ ಕಥಾ ಸ್ಪರ್ದೆಯ ಟಾಪ್-25 ಕತೆಗಳಲ್ಲಿ ಇವರ ಕಥೆಗಳು ಆಯ್ಕೆಯಾಗಿವೆ.
1 Postಶಾಂತಿ ಕೆ. ಅಪ್ಪಣ್ಣ
ಕನ್ನಡದ ಹೊಸ ತಲೆಮಾರಿನ ಕಥೆಗಾರ್ತಿ. ಇವರ ‘ಮನಸು ಅಭಿಸಾರಿಕೆ’ ಸಣ್ಣ ಕತೆಗಳ ಚೊಚ್ಚಲ ಸಂಕಲನ ಹಲವು ಪ್ರಶಸ್ತಿಗಳಿಗೆ ಬಾಜನವಾಗಿದೆ. ಮೂಲತಃ ಕೊಡಗಿನವರು. ಈಗ ಕೆಲಸದ ನಿಮಿತ್ತ ಚೆನ್ನೈನಲ್ಲಿ ವಾಸವಾಗಿದ್ದಾರೆ.
1 Post
ಶಾಲಿನಿ ನೂತನ್
ಶಾಲಿನಿ ಬಳ್ಳಾರಿ ಜಿಲ್ಲೆಯ ಹಂಪಾಪಟ್ಟಣದವರು. ಪ್ರಸ್ತುತ ಕೃಷಿಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ಶಾಲಿನಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಾಹಿತ್ಯ ಅಧ್ಯಯನ ಮತ್ತು ಬರವಣಿಗೆ ಇವರ ಹವ್ಯಾಸಗಳು.
1 Postಶುಭಾ ಎ.ಆರ್.
ಶುಭಾ ಎ. ಆರ್. ಮೂಲತಃ ಬೆಂಗಳೂರಿನವರು. ಇವರ ಕತೆ, ಕವನ, ಪ್ರಬಂಧಗಳು ಹಲವಾರು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸರ್ಕಾರಿ ಪ್ರೌಢಶಾಲೆಯಲ್ಲಿ ಗಣಿತ ವಿಜ್ಞಾನ ಶಿಕ್ಷಕಿಯಾಗಿರುವ ಇವರು ವಿಜ್ಞಾನ ಪಠ್ಯಪುಸ್ತಕವೂ ಸೇರಿದಂತೆ ಶಿಕ್ಷಣ ಇಲಾಖೆಯಲ್ಲಿ ಹಲವಾರು ಪುಸ್ತಕಗಳ ರಚನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ರಾಜಾಜಿನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ವಿಜ್ಞಾನ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಕ್ಕಳಿಗಾಗಿ "ಧರೆಯನುಳಿಸುವ ಬನ್ನಿರಿ" ಎಂಬ ವೈಜ್ಞಾನಿಕ ನಾಟಕಗಳ ಪುಸ್ತಕ ಪ್ರಕಟಿಸಿದ್ದು, ‘ತುಂಡು ಭೂಮಿ- ತುಣುಕು ಆಕಾಶ’,(ಕಥಾ ಸಂಕಲನ), ‘ತುಟಿ ಬೇಲಿ ದಾಟಿದ ನಗು’ (ಕವನ ಸಂಕಲನ) ಸದ್ಯದಲ್ಲೇ ಬಿಡುಗಡೆಯಾಗಲಿವೆ.
1 Post
ಶೇಣಿ ಮುರಳಿ
ಪತ್ರಕರ್ತರಾಗಿರುವ ಶೇಣಿ ಮುರಳಿ ಅವರು, ಕಲಾವಲಯದ ಕಡೆಗೆ ಹೆಚ್ಚು ಆಸಕ್ತಿ ಹೊಂದಿದವರು. ಕಪ್ಪು ಬಿಳುಪು ಛಾಯಾಗ್ರಹಣದಲ್ಲಿ ಆಸಕ್ತಿ. ಮೂರು ಕಲಾತ್ಮಕ ಸಾಕ್ಷ್ಯ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಸಂಗೀತ ಕ್ಷೇತ್ರದಲ್ಲಿ ಆಸಕ್ತಿ ಇರುವ ಅವರು, ಗಾಯನ ಮಾತ್ರವಲ್ಲದೆ ಮೃದಂಗ ಮತ್ತು ಮದ್ದಳೆ ವಾದನದಲ್ಲಿಯೂ ನಿಪುಣರು.
5 Posts
ಶೇಷಾದ್ರಿ ಗಂಜೂರು
ಶೇಷಾದ್ರಿ ಗಂಜೂರು ಕೆಲ ವರ್ಷಗಳ ಕಾಲ ಬಿಹಾರದ ಕಲ್ಲಿದ್ದಲು ಗಣಿಗಳಲ್ಲಿ ಕೆಲಸಮಾಡಿ, ನಂತರ ದಶಕಗಳ ಕಾಲ ಅಮೆರಿಕದಲ್ಲಿ ನೆಲೆಸಿ, ಈಗ ಸದ್ಯಕ್ಕೆ ಕೆನಡಾದಲ್ಲಿ ಕಾಗ್ನಿಟಿವ್ ಕಾಂಪ್ಯೂಟಿಂಗ್ ವಿಷಯದಲ್ಲಿ ಸಂಶೋಧನೆಯಲ್ಲಿ ತೊಡಗಿರುವ ನ್ಯೂರೋಸೈನ್ಸಿನಲ್ಲಿ ಆಸಕ್ತಿಯುಳ್ಳ ವಿಜ್ಞಾನಿ.
39 Postsಶ್ಯಾಮಲಾ ಮಾಧವ
ಕಥೆಗಾರ್ತಿ ಮತ್ತು ಅನುವಾದಕಿ. ಹುಟ್ಟಿದ್ದು ಮಂಗಳೂರು. ಈಗ ಮುಂಬೈ ವಾಸಿ. ರಫಿಯಾ ಮಂಜೂರುಲ್ ಅಮೀನ್ ಬರೆದ ಉರ್ದು ಕಾದಂಬರಿ , ’ ಆಲಂಪನಾ ’ದ ಕನ್ನಡ ಅನುವಾದ ಇವರ ಮಹತ್ವದ ಕೃತಿ.
1 Post
ಶ್ರೀ ತಲಗೇರಿ
ಶ್ರೀ ತಲಗೇರಿ ಉತ್ತರ ಕನ್ನಡ ಜಿಲ್ಲೆಯ ತಲಗೇರಿ ಎನ್ನುವ ಪುಟ್ಟ ಹಳ್ಳಿಯವರು. ಸದ್ಯಕ್ಕೆ ಬೆಂಗಳೂರಿನ ನಿವಾಸಿ. ಸಾಫ್ಟ್ವೇರ್ ಉದ್ಯೋಗಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
2 Postsಶ್ರೀಕಾಂತ್ ಪ್ರಭು
ಲೇಖಕ ಮತ್ತು ಕಿರುಚಿತ್ರ, ಸಾಕ್ಷ್ಯಚಿತ್ರಗಳ ನಿರ್ಮಾಪಕ. ಚಿತ್ರ ಸಮಾಜ ಚಳುವಳಿಯೊಂದಿಗೆ ಬೆಳೆದವರು.
2 Posts
ಶ್ರೀದೇವಿ ಕೆರೆಮನೆ
ಕವಯತ್ರಿ ಶ್ರೀದೇವಿ ಕೆರೆಮನೆ ಕಾರವಾರದ ಚಿತ್ತಾಕುಲ ಸರಕಾರಿ ಪ್ರೌಢಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕಿ. ಇವರ ಒಟ್ಟೂ ಹದಿಮೂರು ಪುಸ್ತಕಗಳು ಪ್ರಕಟಗೊಂಡಿವೆ. ಬರೆಹ, ಅದಕ್ಕಿಂತ ಓದು ಇವರ ನೆಚ್ಚಿನ ಹವ್ಯಾಸ.
18 Posts
ಶ್ರೀನಿವಾಸ ಜೋಕಟ್ಟೆ
ಸಾಹಿತಿ ಪತ್ರಕರ್ತ ಶ್ರೀನಿವಾಸ ಜೋಕಟ್ಟೆ ಮುಂಬಯಿ ನಿವಾಸಿ. 'ಕ್ಷಮಿಸಿ ಈ ಚಿತ್ರಕ್ಕೆ ಹೆಸರಿಲ್ಲ' (ಕವನ ಸಂಕಲನ) 'ಮಾಯಾಲೋಕದ ಒಳಗುಟ್ಟುಗಳು' (ಲೇಖನ ಸಂಕಲನ) 'ಕೊನೆಯ ಸದ್ದು' (ಕಥಾಸಂಕಲನ), 'ಮಾವೋವಾದಿಗಳ ಹಿಂದೂ ರಾಷ್ಟ್ರ ನೇಪಾಳ' (ಪ್ರವಾಸ ಕೃತಿ), 'ಮುಂಬಯಿ ಅಂಡರ್ ವರ್ಲ್ಡ್' ಸೇರಿದಂತೆ ನಲ್ವತ್ತು ಕೃತಿಗಳನ್ನು ರಚಿಸಿದ್ದಾರೆ.
1 Post
ಶ್ರೀಮತಿ ದೇವಿ
ಹಿಂದೂಸ್ತಾನಿ ಗಾಯಕಿ. ಮುಂಬೈನ ವಿ.ಅಪೂರ್ವಾ ಗೋಖಲೆ ಅವರ ಬಳಿ ಅಭ್ಯಾಸ ಮಾಡುತ್ತಿದ್ದಾರೆ. ಕರ್ನಾಟಕದ ಹಲವೆಡೆ ಕಾರ್ಯಕ್ರಮಗಳನ್ನು ನೀಡಿದ್ದಾರೆ. ತಮ್ಮ ಗುರುಗಳಾದ ನಾರಾಯಣ ಪಂಡಿತ್ ಅವರು ರಚಿಸಿದ 100 ಬಂದಿಶ್ ಗಳನ್ನು ಹಾಡಿ, youtube ನಲ್ಲಿ ಪ್ರಕಾಶಿಸಿದ್ದಾರೆ. ಇಂಗ್ಲಿಷ್ ಎಂ ಎ ಪದವೀಧರೆ. ಕನ್ನಡದ ದಿನ ಪತ್ರಿಕೆಗಳು ಮತ್ತು ಸಂಗೀತದ ಪತ್ರಿಕೆಗಳಲ್ಲಿ ಹಲವಾರು ಲೇಖನಗಳನ್ನು ಬರೆದಿದ್ದಾರೆ.
2 Posts
ಶ್ರೀಹರ್ಷ ಸಾಲಿಮಠ
ಶ್ರೀಹರ್ಷ ಎಂ ಟೆಕ್ ಪದವೀಧರ. ವೃತ್ತಿಯಿಂದ ಸಾಫ್ಟ್ ವೇರ್ ಇಂಜಿನಿಯರ್. ಬಾಲ್ಯ ಮತ್ತು ಇಂಜಿನಿಯರಿಂಗ್ ಪದವಿಯವರೆಗೆ ಓದಿದ್ದು ದಾವಣಗೆರೆಯಲ್ಲಿ. ಸಧ್ಯಕ್ಕೆ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ವೃತ್ತಿ ಮತ್ತು ವಾಸ. ಹವ್ಯಾಸಗಳು, ಓದು, ಸುತ್ತಾಟ, ಸಂಗೀತ.
14 Postsಸಚಿನ್ ಅಂಕೋಲಾ
ಸಚಿನ್ ಅಂಕೋಲಾ, ಮೂಲತಃು ಅಂಕೋಲಾದವರು. ವಾಸ ಉಡುಪಿ. ಸಿವಿಲ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. “ನಾನೂ ಹೆಣ್ಣಾಗಬೇಕಿತ್ತು” ಇವರ ಪ್ರಕಟಿತ ಕವನ ಸಂಕಲನ
0 Posts
ಸಚೇತನ ಭಟ್
ಸಚೇತನ ಭಟ್ ಮೂಲತಃ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಚಿಕ್ಕ ಹಳ್ಳಿ ಶೇಲೂರಿನವರು. ಓದಿದ್ದು ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ. ಬೆಂಗಳೂರ ವಾಸಿ. ಸಾಫ್ಟ್ವ್ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಸಚೇತನ ಅವರಿಗೆ ಓದುವುದರಲ್ಲಿ ಅಪಾರ ಆಸಕ್ತಿ.
4 Posts
ಸದಾಶಿವ ಸೊರಟೂರು
ಸದಾಶಿವ ಸೊರಟೂರು ಅವರು ಹುಟ್ಟಿದ್ದು ಬೆಳೆದಿದ್ದು ಹೊನ್ನಾಳಿ ತಾಲ್ಲೂಕಿನ ಸೊರಟೂರು ಗ್ರಾಮದಲ್ಲಿ. ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಮಲೇಬೆನ್ನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ಕನ್ನಡ ಪಾಠ ಹೇಳುವ ಮೇಷ್ಟ್ರು. ಇವರ ಹಲವಾರು ಲೇಖನಗಳು, ಕತೆ, ಕವನ, ಪ್ರಬಂಧಗಳು ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. 'ಹೆಸರಿಲ್ಲದ ಬಯಲು' ಮತ್ತು ' ತೂತು ಬಿದ್ದ ಚಂದಿರ' (ಕವನ ಸಂಕಲನ) ಹಾಗೂ ಕನಸುಗಳಿವೆ ಕೊಳ್ಳುವವರಿಲ್ಲ ಭಾಗ ೧ ಮತ್ತು ಭಾಗ ೨. ಹೊಸ್ತಿಲಾಚೆ ಬೆತ್ತಲೆ (ಪ್ರಕಟಿತ ಲೇಖನಗಳ ಕೃತಿಗಳು) ಇವರ ಪ್ರಕಟಿತ ಕೃತಿಗಳು.
3 Postsಸಂಧ್ಯಾದೇವಿ
ಕನ್ನಡದ ಕವಯಿತ್ರಿ. `ಮಾತು ಚಿಟ್ಟೆ ಬೆಂಕಿ ಬೆರಳು ಮುರಿದ ಮುಳ್ಳಿನಂತೆ ಜ್ಞಾನ' ಇವರ ಕವಿತಾ ಸಂಕಲನ. ಊರು ಪುತ್ತೂರು
1 Post
ಸಂಧ್ಯಾರಾಣಿ
ಲೇಖಕಿ, ಅನುವಾದಕಿ, ಪತ್ರಕರ್ತೆ ಮತ್ತು ಚಿತ್ರ ಸಾಹಿತಿ . ‘ಯಾಕೆ ಕಾಡುತಿದೆ ಸುಮ್ಮನೆ’ ( ಅಂಕಣ ಬರಹ) ‘ತುಂಬೆ ಹೂ’ ( ಜೀವನ ಚರಿತ್ರೆ) ‘ಪೂರ್ವಿ ಕಲ್ಯಾಣಿ’ ಮತ್ತು ‘ನನ್ನೊಳಗಿನ ಹಾಡು ಕ್ಯೂಬಾ’ (ನಾಟಕ) ಇವರ ಕೃತಿಗಳು. ಊರು ಬಂಗಾರಪೇಟೆ, ಇರುವುದು ಬೆಂಗಳೂರು.
17 Postsಸರಿತಾ ನವಲಿ
ಸರಿತಾ ನವಲಿ ಮೂಲತಃ ಉತ್ತರ ಕರ್ನಾಟಕದವರು. ಕಾಲೇಜು ಮತ್ತು ಸ್ನಾತಕೋತ್ತರ ಪದವಿಯನ್ನು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಪಡೆದು, ಸದ್ಯ ನ್ಯೂ ಜೆರ್ಸಿಯಲ್ಲಿ ನೆಲೆಸಿದ್ದಾರೆ. ಇವರ ಬರಹಗಳು ಕನ್ನಡದ ದಿನಪತ್ರಿಕೆಗಳಲ್ಲಿ ಪ್ರಕಟವಾಗಿವೆ. ’ಆವನಾವನು ಕಾಯ್ವ’ ಇವರ ಮೊದಲ ಕಥಾಸಂಕಲನ.
2 Posts
ಸರೋಜಿನಿ ಪಡಸಲಗಿ
ಸರೋಜಿನಿ ಪಡಸಲಗಿ ಬೆಂಗಳೂರು ವಾಸಿ. ಕವಿತೆ, ಕತೆ ಪ್ರಬಂಧಗಳನ್ನು ಬರೆಯುವುದು ಜೊತೆಗೆ ಕವನಗಳಿಗೆ ರಾಗ ಸಂಯೋಜನೆ ಮಾಡಿ ಹಾಡುವುದೂ ಇವರ ಹವ್ಯಾಸ.
3 Posts
ಸಹನಾ ಕಾಂತಬೈಲು
ಲೇಖಕಿ ಸಹನಾ ಕಾಂತಬೈಲು ಸಂಪಾಜೆಯ ದಬ್ಬಡ್ಕದವರು. ಕೃಷಿ ಮಹಿಳೆ. ಇವರ ಮತ್ತೊಂದು ಕೃತಿ ‘ಇದು ಬರಿ ಮಣ್ಣಲ್ಲ’ ಲಲಿತ ಪ್ರಬಂಧಗಳ ಸಂಕಲನ ಅಹರ್ನಿಶಿ ಪ್ರಕಾಶನದಿಂದ ಪ್ರಕಟವಾಗಿದೆ.
5 Posts
ಸಹ್ಯಾದ್ರಿ ನಾಗರಾಜ್
<div>ಊರು, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ನಂದಿ. ಓದಿದ್ದೆಲ್ಲ ಶಿವಮೊಗ್ಗ. ಬದುಕು ಕಟ್ಟಿಕೊಂಡದ್ದು ಬೆಂಗಳೂರಿನಲ್ಲಿ. ಒಂದಷ್ಟು ಕಾಲ ಪತ್ರಕರ್ತ. ಸದ್ಯ, ಗಿಡ-ಮರ, ಹೂವಿನೊಟ್ಟಿಗೆ ಸರಾಗ ಉಸಿರಾಡುತ್ತಿರುವ ಗಾರ್ಡನ್ ಡಿಸೈನರ್. ಪ್ರವಾಸ, ಗಾರೆ ಕೆಲಸ, ಸಿನಿಮಾ, ಫೋಟೊಗ್ರಫಿ ಹುಚ್ಚು. ಕ್ರೈಸ್ಟ್ ಕಾಲೇಜು ಕನ್ನಡ ಸಂಘದಿಂದ ಐದು ಬಾರಿ ಕವಿತೆಗೆ, ಎರಡು ಬಾರಿ ಕತೆಗೆ ಬಹುಮಾನ.</div>
15 Posts
ಸಿದ್ಧಲಿಂಗ ಪಟ್ಟಣಶೆಟ್ಟಿ
ಧಾರವಾಡ ಬಳಿ<span style="color: #444444">ಯ ಯಾದವಾಡದಲ್ಲಿ ಜನಿಸಿದ ಸಿದ್ಧಲಿಂಗ ಪಟ್ಟಣಶೆಟ್ಟಿ ಕನ್ನಡ ಕಾವ್ಯಲೋಕದ ಬಗ್ಗೆ ಅದಮ್ಯ ಪ್ರೀತಿಯಿ</span><span style="color: #444444">ಟ್ಟುಕೊಂಡವರು. </span><span style="color: #444444">ನೀನಾ, ಮತ್ತೆ ಬಂದಿದ್ದಾಳ, ಅಪರಂಪಾರ, ಕುಲಾಯಿ ಇರಲಿ ನನ್ನಲ್ಲಿಯೇ ಎಂಬುದು ಅವರ ಕವನಸಂಕಲನಗಳು. ನಾಟಕಗಳನ್ನು, ಅನುವಾದಿತ ಕೃತಿಗಳನ್ನೂ ಅವರು ಬರೆದಿದ್ದಾರೆ. ಅಂಕಣಕಾರರಾಗಿ ಗುರುತಿಸಿಕೊಂಡಿದ್ದಾರೆ. ಸಂಕ್ರಮಣ ಸಾಹಿತ್ಯ ಪತ್ರಿಕೆಯನ್ನು ರೂಪಿಸಿದವರಲ್ಲಿ ಒಬ್ಬರು</span><span style="color: #000000">. </span><span style="color: #000000"> ಆಷಾಢದ ಒಂದು ದಿನ, ಸೂಯ್ಯಾಸ್ತದಿಂದ ಸೂಯ್ಯೋದಯದ ವರೆಗೆ, ಚೋರ ಚರಣದಾಸ, ಮುದ್ರಾರಾಕ್ಷಸ ಅವರ ಅನುವಾದಿತ ನಾಟಕಗಳು. ಆಧುನಿಕ ಕನ್ನಡ ಹಿಂದೀ ಕಾವ್ಯ ರಂಗಾಯಣ, ಪರಿಭಾವನ- ವೈಚಾರಿಕ ಪ್ರಬಂಧ ಸಂಕಲನಗಳು. ಅವರ ಸಾಹಿತ್ಯ ಕೃಷಿಯನ್ನರಸಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯೂ ಸೇರಿದಂತೆ ಅನೇಕ ಗೌರವಗಳು ಅವರನ್ನು ಅರಸಿ ಬಂದಿವೆ. </span>
1 Postಸಿಂಧು
ಹುಟ್ಟಿದ್ದು ಶಿವಮೊಗ್ಗದ ಸಾಗರದಲ್ಲಿ. ವೆಬ್ ಡಿಸೈನಿಂಗ್ ಡಿಪ್ಲೊಮಾ ಮತ್ತು ಇಂಗ್ಲಿಷ್ ಎಂ.ಎ ಮಾಡಿ, ಬೆಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನ ಸಂಸ್ಥೆಯೊಂದರ, ತರಬೇತಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ
8 Posts
ಸಿರಿ ಹುಲಿಕಲ್
<div dir="auto">ಸಿರಿ ಹಾಸನದ ಹುಲಿಕಲ್ಲಿನವರು. ಹನ್ನೊಂದು ವರ್ಷ ಸೌದಿಯ ರಿಯಾದ್ ವಾಸದ ನಂತರ ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. "ನಡೆದಷ್ಟು ದಾರಿ ದೂರ" ಇವರ ಪ್ರಕಟಿತ ಕಥಾ ಸಂಕಲನ. ಓದೋದು ಇಷ್ಟದ ಹವ್ಯಾಸ.</div>
1 Postಸೀಮಾ ಎಸ್ ಹೆಗಡೆ
ಹುಟ್ಟಿದ್ದು ಬೆಳೆದದ್ದು ಮಲೆನಾಡಿನ ಹಳ್ಳಿಯ ರೈತ ಕುಟುಂಬವೊಂದರಲ್ಲಿ. ಓದಿದ್ದು ಅರ್ಥಶಾಸ್ತ್ರ. ಈಗ ಇರುವುದು ನೆದರ್ಲ್ಯಾಂಡ್ಸ್ ನ ಆಮ್ಸ್ಟೆರ್ಡಾಮ್ ನಲ್ಲಿ.
11 Posts
ಸೀಮಾ ಸಮತಲ
ಸೀಮಾ ಕುವೆಂಪು ವಿಶ್ವವಿದ್ಯಾನಿಲಯದಿಂದ ಆಂಗ್ಲ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಓದು, ಬರಹ, ಸುತ್ತಾಟ, ಭಾಷಾಂತರದಲ್ಲಿ ಆಸಕ್ತಿ. ಸದ್ಯ ಹೈದರಾಬಾದಿನ ನಿವಾಸಿ.
4 Posts
ಸುಜಯ್ ಪಿ.
ಸುಜಯ್ ಮೂಲತಃ ಪುತ್ತೂರಿನವರು. ಸದ್ಯ ಮೈಸೂರಿನಲ್ಲಿ ಕೆಲಸ. ಓದು ಮತ್ತು ಸುತ್ತಾಟ ಇವರಿಗೆ ಖುಷಿಕೊಡುವ ಸಂಗತಿಗಳು.
2 Postsಸುಜಾತಾ ಎಚ್.ಆರ್
ಲೇಖಕಿ ಮತ್ತು ಅಂಕಣಗಾರ್ತಿ. ಇವರ ಇತ್ತೀಚೆಗಿನ 'ನೀಲಿ ಮೂಗಿನ ನತ್ತು’ ಕೃತಿ ಅಮ್ಮ ಪ್ರಶಸ್ತಿ ಪಡೆದಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಪಠ್ಯಪುಸ್ತಕದಲ್ಲೂ ಸೇರಿದೆ. ಮಕ್ಕಳ ರಂಗಭೂಮಿ ಮತ್ತು ಪತ್ರಿಕೋದ್ಯಮದ ಅನುಭವವೂ ಇದೆ.
35 Postsಸುದರ್ಶನ್
ಆಸ್ಟ್ರೇಲಿಯಾದ ನಿವಾಸಿಯಾಗಿರುವ ಅನಿವಾಸಿ ಕನ್ನಡ ಬರಹಗಾರ, ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ.ನಾಟಕ, ಕಿರುಚಿತ್ರ, ಸಾಕ್ಷ್ಯ ಚಿತ್ರ ಹಾಗು ಚಲನಚಿತ್ರ ಕ್ಷೇತ್ರಗಳಲ್ಲಿ ಅತೀವ ಆಸಕ್ತಿ ಉಳ್ಳವರು. ‘ಮುಖಾಮುಖಿ’ ಹಾಗೂ ‘ತಲ್ಲಣ’ ಇವರಿಗೆ ಹೆಸರು ತಂದುಕೊಟ್ಟ ಚಲನಚಿತ್ರಗಳು.
78 Posts
ಸುಧಾ ಆಡುಕಳ.
ಸುಧಾ ಆಡುಕಳ ಮೂಲತಃ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಆಡುಕಳದವರು. ಪ್ರಸ್ತುತ ಉಡುಪಿಯಲ್ಲಿ ಗಣಿತ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಾಹಿತ್ಯದಲ್ಲಿ ಆಸಕ್ತಿ. ಬಕುಲದ ಬಾಗಿಲಿನಿಂದ’ ಎಂಬ ಅಂಕಣ ಬರಹವನ್ನು ಬಹುರೂಪಿ ಪ್ರಕಟಿಸಿದೆ. ಅನೇಕ ಕಥೆ, ಕವನಗಳು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.
8 Postsಸುಧಾ ಚಿದಾನಂದಗೌಡ
ಕಥೆಗಾರ್ತಿ, ಕವಯಿತ್ರಿ. ‘ಬಯಲ ಧ್ಯಾನ’ ಇವರ ಕವಿತಾ ಸಂಕಲನ. ಬಳ್ಳಾರಿ ಜಿಲ್ಲೆ ಹರಪನಹಳ್ಳಿಯವರು. ಆಂಗ್ಲ ಭಾಷಾ ಉಪನ್ಯಾಸಕಿಯಾಗಿದ್ದಾರೆ.
1 Post
ಸುನಂದಾ ಪ್ರಕಾಶ ಕಡಮೆ
ಕಥೆಗಾರ್ತಿ ಸುನಂದಾ ಕಡಮೆ ಉತ್ತರ ಕನ್ನಡ ಜಿಲ್ಲೆ, ಅಂಕೋಲಾ ತಾಲ್ಲೂಕಿನ ಅಲಗೇರಿ ಗ್ರಾಮದವರು. ಸದ್ಯ ಹುಬ್ಬಳ್ಳಿ ನಿವಾಸಿ. ಪುಟ್ಟ ಪಾದದ ಗುರುತು, ಗಾಂಧಿ ಚಿತ್ರದ ನೋಟು, ಕಂಬಗಳ ಮರೆಯಲ್ಲಿ, ತುದಿ ಮಡಚಿಟ್ಟ ಪುಟ ಇವರ ಪ್ರಕಟಿ ನಾಲ್ಕು ಕಥಾಸಂಕಲನಗಳು. ಬರೀ ಎರಡು ರೆಕ್ಕೆ, ದೋಣಿ ನಡೆಸೊ ಹುಟ್ಟು, ಹೈವೇ ನಂ. 63, ಎಳೆನೀರು (ಕಾದಂಬರಿಗಳು). ಪಿಸುಗುಡುವ ಬೆಟ್ಟಸಾಲು, ಪಡುವಣದ ಕಡಲು, ಕತೆಯಲ್ಲದ ಕತೆ ಇವು ಮೂರು ಪ್ರಬಂಧ ಸಂಕಲನಗಳು ಹಾಗೂ ಸೀಳುದಾರಿ ಎಂಬ ಕವನ ಸಂಕಲನಗಳೂ ಪ್ರಕಟವಾಗಿವೆ.
4 Posts
ಸುನಿತಾ ಮೂರಶಿಳ್ಳಿ
ಸುನಿತಾ ಮೂರಶಿಳ್ಳಿ ಮೂಲತಃ ಧಾರವಾಡದವರು. ಇವರಿಗೆ ಸಂಗೀತ ಹಾಗೂ ಶರಣ ಸಾಹಿತ್ಯದಲ್ಲಿ ಅಭಿರುಚಿ. ಚಿದ್ಬಯಲು, ಸಿಡಿಗಳಲಿ ಶರಣರ ವಚನಗಳಿಗೆ ಧ್ವನಿ ನೀಡಿದ್ದಾರೆ. "ಅರಿವಿನತ್ತ ಎನ್ನ ಚಿತ್ತ" ಎಂಬ ಶರಣ ಸಾಹಿತ್ಯದ ಲೇಖನಗಳ ಸಂಗ್ರಹ ಪ್ರಕಟವಾಗಿದೆ.
1 Post
ಸುನೈಫ್ ವಿಟ್ಲ
ಊರು ದಕ್ಷಿಣ ಕನ್ನಡದ ವಿಟ್ಲ. ಹೊಟ್ಟೆಪಾಡು ಕೇರಳದ ಕಲ್ಲಿಕೋಟೆಗೆ ಕಟ್ಟಿ ಹಾಕಿದೆ. ಖಾಸಗಿ ಕಂಪೆನಿಯೊಂದರಲ್ಲಿ ಅಸಿಸ್ಟಂಟ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ. ಹವ್ಯಾಸಿ ಬರಹಗಾರ
4 Posts
ಸುಬ್ರಾಯ ಚೊಕ್ಕಾಡಿ
ಹಿರಿಯ ಕವಿ ಸುಬ್ರಾಯ ಚೊಕ್ಕಾಡಿಯವರು ಸುಳ್ಯ ತಾಲ್ಲೂಕಿನ ಚೊಕ್ಕಾಡಿಯವರು. ತೆರೆ, ಬೆಟ್ಟವೇರಿದ ಮೇಲೆ, ನಿಮ್ಮವೂ ಇರಬಹುದು, ಮೊನ್ನೆ ಸಿಕ್ಕವರು, ಇದರಲ್ಲಿ ಅದು, ಇನ್ನೊಂದು ಬೆಳಗು, ಮಾಗಿಯ ಕೋಗಿಲೆ(ಕವನ ಸಂಕಲನಗಳು) ಕಾವ್ಯ ಸಮೀಕ್ಷೆ, ಕೃತಿಶೋಧ, ಒಳಹೊರಗು (ವಿಮರ್ಶಾ ಕೃತಿಗಳು) ಸಂತೆಮನೆ (ಕಾದಂಬರಿ) ಇವಲ್ಲದೇ ಹಲವು ಸಂಪಾದಿತ ಕೃತಿಗಳೂ ಪ್ರಕಟಗೊಂಡಿವೆ
1 Postಸುಮಂಗಲಾ
ಕತೆಗಾರ್ತಿ ಮತ್ತು ಅನುವಾದಕಿ. ಶಿವಮೊಗ್ಗ ಜಿಲ್ಲೆ ಸಾಗರದವರು. ಈಗ ಬೆಂಗಳೂರು ವಾಸಿ. ಸೀತಾಳೆ ಹೂ ಮತ್ತು ಇತರ ಕತೆಗಳು, ಜುಮುರು ಮಳೆ, ಕಾಲಿಟ್ಟಲ್ಲಿ ಕಾಲುದಾರಿ ಮತ್ತು ಹನ್ನೊಂದನೇ ಅಡ್ಡರಸ್ತೆ, ಅವರ ಪ್ರಕಟಿತ ಕಥಾಸಂಕಲನಗಳು. ‘ಚರ್ನೋಬಿಲ್ ಪ್ರಾರ್ಥನೆ’ , ಸಬಾಸ್ಟಿಯನ್ & ಸನ್ಸ್ ಅನುವಾದಿತ ಕೃತಿಗಳು.
3 Posts
ಸುಮತಿ ಮುದ್ದೇನಹಳ್ಳಿ
<div><span dir="ltr">ಅಮೆರಿಕಾದ ಒಹಾಯೋ ರಾಜ್ಯದಲ್ಲಿ ವಾಸಿಸುತ್ತಿರುವ ಸುಮತಿ ಮುದ್ದೇನಹಳ್ಳಿ </span>ಇ೦ಗ್ಲಿಷ್ ಸಾಹಿತ್ಯದಲ್ಲಿ ಸ್ನಾತ್ತಕೋತ್ತರ ಪದವಿ ಪಡೆದವರು. ವೃತ್ತಿಯಲ್ಲಿ ಮಾನಸಿಕ ಆರೋಗ್ಯ ಸಮಾಲೋಚಕರು. ಪ್ರವೃತ್ತಿಯಲ್ಲಿ, ಪರಿಸರ ಸ್ನೇಹಿ ಜೀವನ ವಿಧಾನಗಳಲ್ಲಿ ಆಸಕ್ತಿ, ಅದರ ಕಲಿಕೆ, ಮತ್ತು ಪ್ರಯೋಗ. 'ಅವರವರ ಭಕುತಿಗೆ' ಕೃತಿಯ ಸಹ ಸ೦ಪಾದಕಿ ಮತ್ತು ಲೇಖಕಿ.</div>
2 Posts
ಸುಮನಾ ಲಕ್ಷ್ಮೀಶ್
<div dir="auto">ಸುಮನಾ ಲಕ್ಷ್ಮೀಶ ಹಿರಿಯ ಪತ್ರಕರ್ತರು. ನಾಡಿನ ವಿವಿಧ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈಗ ಅಪ್ಪಟ ಕೃಷಿಕರು. ಸಾಹಿತ್ಯ ಓದು- ಕವನ ಬರೆಯುವುದು ಹವ್ಯಾಸ. ಸಂಗೀತ, ರಂಗಭೂಮಿ ಆಸಕ್ತಿಯ ವಿಷಯಗಳು. ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ವಾಸ.</div>
1 Post
ಸುಮಾವೀಣಾ
ವೃತ್ತಿಯಿಂದ ಉಪನ್ಯಾಸಕಿ. ಹಲವಾರು ಪತ್ರಿಕೆಗಳಲ್ಲಿ ಇವರ ಲೇಖನಗಳು ಪ್ರಕಟವಾಗಿವೆ. ‘ನಲವಿನ ನಾಲಗೆ’ (ಪ್ರಬಂಧ ಸಂಕಲನ) ‘ಶೂರ್ಪನಖಿ ಅಲ್ಲ ಚಂದ್ರನಖಿ’(ನಾಟಕ) ‘ಮನಸ್ಸು ಕನ್ನಡಿ’ ಪ್ರಕಟಿತ ಕೃತಿಗಳು. ‘ಲೇಖ ಮಲ್ಲಿಕಾ’,’ವಿಚಾರ ಸಿಂಧು’ ಪುಸ್ತಕಗಳು ಅಚ್ಚಿನಲ್ಲಿವೆ.
8 Posts
ಸುವರ್ಣ ಚೆಳ್ಳೂರು
ಸುವರ್ಣ ಚೆಳ್ಳೂರು ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಚೆಳ್ಳೂರು ಗ್ರಾಮದವರು. ಪ್ರಸ್ತುತ 'ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಸಾಹಿತ್ಯದ ಸ್ನಾತಕೋತ್ತರ ಪದವಿ ಪಡೆಯುತ್ತಿರುವ ವಿದ್ಯಾರ್ಥಿ.
3 Postsಸೃಜನ್
ಕಲಾವಿದ ಮತ್ತು ಅನುವಾದಕ. ಓದಿದ್ದು ಸಂಡೂರು ಹಾಗು ಬಳ್ಳಾರಿ . ವೃತ್ತಿಯಿಂದ ಸಿವಿಲ್ ಇಂಜಿನೀಯರ್ . ರಾಮ್ ಗೋಪಾಲ್ ವರ್ಮ ' ನನ್ನಿಷ್ಟ' ಮೊದಲ ಅನುವಾದ. 'ಪಚ್ಚೆ ರಂಗೋಲಿ' ಮೊದಲ ಅನುವಾದ ಕಥೆ. ಸದ್ಯ ಅನುವಾದ ಮತ್ತು ಪೈಂಟಿಂಗ್ಸ್ ಗಳಲ್ಲಿ ಬ್ಯುಸಿ .
3 Posts
ಸ್ಮಿತಾ ಅಮೃತರಾಜ್ ಸಂಪಾಜೆ
ಸ್ಮಿತಾ ಅಮೃತರಾಜ್ ಕೊಡಗಿನ ಸಂಪಾಜೆ ಬಳಿಯ ಚೆಂಬುವಿನ ನಿವಾಸಿ. ಗೃಹಿಣಿ, ಕೃಷಿಕ ಮಹಿಳೆ. 'ಕಾಲ ಕಾಯುವುದಿಲ್ಲ', 'ತುಟಿಯಂಚಿನಲ್ಲಿ ಉಲಿದ ಕವಿತೆಗಳು' ಸೇರಿದಂತೆ ಮೂರು ಕವನ ಸಂಕಲನ ಹಾಗೂ ಮೂರು ಲಲಿತ ಪ್ರಬಂಧಗಳು ಪ್ರಕಟವಾಗಿವೆ.
2 Posts
ಸ್ಮಿತಾ ಮಾಕಳ್ಳಿ
ಸ್ಮಿತಾ ಮಾಕಳ್ಳಿ ಮೂಲತಃ ತಿಪಟೂರಿನವರು, ಸದ್ಯ ಬೆಂಗಳೂರಿನಲ್ಲಿ ವಾಸ. ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಇಂಗ್ಲಿಷ್ ಸಾಹಿತ್ಯದಲ್ಲಿ ಎಂ.ಎ ಮತ್ತು ಭಾಷಾಂತರ ಡಿಪ್ಲೋಮಾ ಪದವಿ. ಸದ್ಯ ಅದೇ ವಿಶ್ವವಿದ್ಯಾನಿಲಯದಲ್ಲಿ ಪಿ.ಹೆಚ್.ಡಿ. ಮಾಡುತ್ತಿದ್ದಾರೆ. ‘ಕೈಗೆಟಕುವ ಕೊಂಬೆʼ ಇವರ ಪ್ರಕಟಿತ ಕೃತಿ.
8 Posts
ಸ್ಮಿತಾ ರಾಘವೇಂದ್ರ
ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಕಲ್ಲೇಶ್ವರ ಗ್ರಾಮದವರಾದ ಸ್ಮಿತಾ ರಾಘವೇಂದ್ರ ಭಟ್ ಗೃಹಿಣಿ. ಬರವಣಿಗೆ ಇವರ ಹವ್ಯಾಸ. "ಕನಸು ಕನ್ನಡಿ" ಇವರ ಪ್ರಕಟಿತ ಗಜಲ್ ಸಂಕಲನ.
3 Postsಹಟ್ಟಿ ಸಾವಿತ್ರಿ ಪ್ರಭಾಕರ ಗೌಡ
ಗದಗಿನ ಲಕ್ಕುಂಡಿ ಮೂಲದ ಸಾವಿತ್ರಿ, ತುಮಕೂರು ಜಿಲ್ಲೆಯ ನಾಗಸಂದ್ರ ಗ್ರಾಮದಲ್ಲಿ ಶಿಕ್ಷಕಿ. ಏಳೂವರೆ ವರ್ಷ ಅನುವಾದಕಿಯಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣ ಮಕ್ಕಳಿಗೆ ಶಿಕ್ಷಣ ನೀಡುವುದು ಇವರ ಕನಸು. ಓದು, ಪ್ರಯಾಣ, ಸಣ್ಣ ಕಥೆ ಮತ್ತು ಪ್ರಬಂಧ ಬರವಣಿಗೆ ಇವರ ಹವ್ಯಾಸ.
1 Postಹೃಷಿಕೇಶ್ ಬಹದ್ದೂರ್ ದೇಸಾಯಿ
ಮೂಲ ಊರು ಅಗಡಿ.ಹುಟ್ಟಿದ್ದು ಹುಬ್ಬಳ್ಳಿಯಲ್ಲಿ. ಅಗಡಿ, ಹಾನಗಲ್ಲು, ಪಣಜಿ, ಹುಬ್ಬಳ್ಳಿ ಹಾಗೂ ಬೆಂಗಳೂರು ಗಳಲ್ಲಿ ಓದು. ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಬೀದರ್ ನ ನಂತರ ಈಗ ಕೆಲಸ ಮಾಡುತ್ತಿರುವುದು ಬೆಳಗಾವಿಯಲ್ಲಿ. ಓದಿದ್ದು ಆಂಗ್ಲ ಸಾಹಿತ್ಯ. ಜಾಹಿರಾತು ಕಂಪನಿಗಳಲ್ಲಿ ಕಾಪಿ ರೈಟಿಂಗ್ ಮಾಡಬೇಕೆಂದು ಹೊರಟವನು ಪತ್ರಕರ್ತ ನಾಗಿದ್ದು ಅಚಾನಕ್.
3 Posts
ಹೇಮಾ .ಎಸ್
ಕನ್ನಡ ಉಪನ್ಯಾಸಕಿ.ಇಂಗ್ಲೀಷ್ ಹಾಗೂ ಹಿಂದಿಯಿಂದ ಲೇಖನ, ಕತೆ ಹಾಗೂ ಕವನಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಇವರ ಅನುವಾದಗಳು ಹಲವು ಪತ್ರಿಕೆಯಲ್ಲಿ ಪ್ರಕಟಗೊಂಡಿವೆ. ಇರಾನಿನ ಚಲನಚಿತ್ರ ನಿರ್ದೇಶಕ ಅಬ್ಬಾಸ್ ಕಿರಸ್ತೋಮಿಯ ಕಿರುಪದ್ಯಗಳ ಅನುವಾದ 'ಹೆಸರಿಲ್ಲದ ಹೂ' ಪ್ರಕಟಿತ ಸಂಕಲನ..
37 Postsಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಓದುಗರ ಮೆಚ್ಚು
ನಮ್ಮ ಫೇಸ್ ಬುಕ್
ನಮ್ಮ ಟ್ವಿಟ್ಟರ್
https://t.co/BHh68rarO7 ಯೋಗೀಂದ್ರ ಮರವಂತೆ ಬರೆಯುವ ‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಸರಣಿಯ ಹೊಸ ಬರಹ
https://t.co/OvzePxk5ro ‘ಅಬ್ದುಸ್ ಸಲಾಮ್ ಅವರ ವಿಚಾರಣೆ’ ನಾಟಕದ ಕುರಿತು ಡಾ. ಸುದರ್ಶನ ಪಾಟೀಲಕುಲಕರ್ಣಿ ಬರಹ
ನಮ್ಮ ಬರಹಗಾರರು
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಪುಸ್ತಕ ಸಂಪಿಗೆ
ಪ್ರಗತಿಶೀಲತೆಯ ಪ್ರಬಲ ಧ್ವನಿ ‘ಕಾರಾವಾನ್’
ರೈಲಿನಲ್ಲಿ ಪ್ರಯಾಣಿಸುವಾಗ ನಿರೂಪಕನ ಕಣ್ಣಿಗೆ ಬಿದ್ದ ಸಂಸಾರವನ್ನು ‘ಕಣ್ಣೀರ ಸಂಸಾರ’ ಎಂದೇ ಬಿಂಬಿಸುವುದರ ಮೂಲಕ ಅಂದಿನ ವಾಸ್ತವ ಪ್ರಪಂಚವನ್ನು ಓದುಗರಿಗೆ ಅರ್ಥೈಸಲು ಈ ಕೃತಿಯು ಪ್ರಯತ್ನಿಸುತ್ತದೆ. ಸ್ವಾತಂತ್ರ್ಯ...
Read Moreಬರಹ ಭಂಡಾರ
- June 2022
- May 2022
- April 2022
- March 2022
- February 2022
- January 2022
- December 2021
- November 2021
- October 2021
- September 2021
- August 2021
- July 2021
- June 2021
- May 2021
- April 2021
- March 2021
- February 2021
- January 2021
- December 2020
- November 2020
- October 2020
- September 2020
- August 2020
- July 2020
- June 2020
- May 2020
- April 2020
- March 2020
- February 2020
- January 2020
- December 2019
- November 2019
- October 2019
- September 2019
- August 2019
- July 2019
- June 2019
- May 2019
- April 2019
- March 2019
- February 2019
- January 2019
- December 2018
- November 2018
- October 2018
- September 2018
- August 2018
- July 2018
- June 2018
- May 2018
- April 2018
- March 2018
- February 2018
- January 2018
- December 2017
- November 2017
- October 2017
- September 2016
- August 2016
- July 2016
- June 2016
- May 2016
- April 2016
- March 2016
- February 2016
- January 2010
- June 2008
ಹಳೆಯವನ್ನು ಹುಡುಕಿ
ಇತ್ತೀಚಿನ ಬರಹಗಳು
-
ಆಯಾ, ಮೇಂಸಾಹಿಬ್ ಮತ್ತು ಮಕ್ಕಳುJun 28, 2022 | ದಿನದ ಅಗ್ರ ಬರಹ
-
-
ಸೃಜನಶೀಲತೆಯ ಬೆಳಕಿನಲ್ಲಿ ವಿಜ್ಞಾನವೂ ಸಿದ್ಧಾಂತವೂJun 28, 2022 | ಸಂಪಿಗೆ ಸ್ಪೆಷಲ್
-
ತೈವಾನಿನ ಕವಿ ಡಾ. ಟ್ಜೆಮಿನ್ ಇಶನ್ ತ್ಸೈ ಅವರ ಕವಿತೆಗಳುJun 28, 2022 | ದಿನದ ಕವಿತೆ
-