Advertisement

Category: ಅಂಕಣ

ಕೊಡು ಶಿವನೆ ಕುಡುಕನಲ್ಲದ ಗಂಡನ: ಸುಧಾ ಆಡುಕಳ ಅಂಕಣ

ಮಗುವನ್ನು ನೋಡಿದ ಮಾದೇವಿ ತನ್ನ ಬ್ಯಾಗಿನಲ್ಲಿದ್ದ ಅದೆಂಥದ್ದೋ ಪುಡಿಯನ್ನು ನೀರಿನಲ್ಲಿ ಕರಗಿಸಿ, ಇಷ್ಟಿಷ್ಟೇ ಮಗುವಿನ ಬಾಯಿಗೆ ಹಾಕುತ್ತ ಅವಳು ಎಚ್ಚರಗೊಳ್ಳುವಂತೆ ಮಾಡಿದ್ದಳು. ಅದೇನೋ ಮಾಯಕವಿತ್ತೋ ಆ ಬಿಳಿಯ ಪುಡಿಯಲ್ಲಿ! ಕಮಲಿಯ ಮಗನಿಗೆ ಇದ್ದಕ್ಕಿದ್ದಂತೆ ರಾತ್ರಿ ಜ್ವರ ಬಂದು ತಲೆಗೇರಿ ಏನೇನೋ ಬಡಬಡಾಯಿಸುತ್ತಿರುವಾಗಲೂ ಹಾಗೆ, ಅದೇನೋ ಮಾತ್ರೆಯ ತುಂಡೊಂದನ್ನು ಕುಡಿಸಿ, ರಾತ್ರಿಯಿಡೀ ತಲೆಗೆ ತಣ್ಣೀರ ಪಟ್ಟಿಯಿಟ್ಟು ಜ್ವರವನ್ನು ಓಡಿಸಿದ್ದಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಗ್ರೀನ್ ಕಾರ್ಡ್ ಎನ್ನುವ ದೇವರು: ಎಂ.ವಿ. ಶಶಿಭೂಷಣ ರಾಜು ಅಂಕಣ

ಎಷ್ಟೋ ಸಲ ಸ್ವದೇಶಕ್ಕೆ ಹಿಂತಿರುಗುವ ಎನ್ನುವ ಅನಿಸಿಕೆ ಮೂಡುತ್ತದೆ, ಅದೊಂದು ಅನಿಸಿಕೆ ಅಷ್ಟೆ. ಅಮೇರಿಕಾದ ಜೀವನ ಶೈಲಿ, ಉತ್ತಮ ಜೀವನ, ತಮ್ಮ ಪಾಡಿಗೆ ತಾವು ಜೀವಿಸಲು ಇರುವ ಪ್ರಾಮುಖ್ಯತೆ, ಸರ್ಕಾರಿ ಕಚೇರಿಗಳಲ್ಲಿ ಇರದ ಲಂಚದ ಹಾವಳಿ, ಗುಣಮಟ್ಟದ ಆಹಾರ, ಎಲ್ಲಕಿಂತ ಹೆಚ್ಚಾಗಿ ತವರಲ್ಲಿ ಸಿಗುವ ಗೌರವ ಮುಂತಾದುವುಗಳನ್ನು ಬಿಡಲು ಮನಸಾಗದೆ ಅಮೆರಿಕೆಯಲ್ಲಿಯೇ ಕೊನೆಯವರೆಗೂ ಜೀವನ ಸಾಗುವುದು.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ”

Read More

ಎಷ್ಟು ಬೆರಗು ಈ ಪ್ರಕೃತಿಯಲಿ…: ಆಶಾ ಜಗದೀಶ್ ಅಂಕಣ

ನಾವೆಲ್ಲಾ ನೀರಿನಲ್ಲಿ ನುಣುಪಾದ ಕಲುಗಳನ್ನು ಎಸೆಯುತ್ತಾ ಆಡುತ್ತೇವೆ. ಚಪ್ಪಟೆಯಾದ ನುಣುಪುಗಲ್ಲುಗಳನ್ನು ಒಂದರ ಮೇಲೆ ಒಂದರಂತೆ ಜೋಡಿಸಿ, ಅದಕ್ಕೇನೋ ಶಕ್ತಿ ಬಂತೆಂದು ಭಾವಿಸಿ, ‘ನಾವು ಆದಷ್ಟು ಬೇಗ ತಲೆ ಮೇಲೊಂದು ಸೂರು ಮಾಡಿಕೊಳ್ಳುವಂತಾಗಲಿ ಶಕ್ತಿಯೇ’ ಎಂದು ಬೇಡಿ, “ಮತ್ತೊಮ್ಮೆ ಬರುವವರೆಗೂ ಹೀಗೆ ಇರಲಿ” ಎಂದು ಕೇಳಿಕೊಂಡು ಪ್ರಾರ್ಥನೆಯನ್ನು ಕೊನೆಗೊಳ್ಳಿಸಿಕೊಳ್ಳುತ್ತೇವೆ.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಬರಹ ನಿಮ್ಮ ಓದಿಗೆ

Read More

ಯುಗಾದಿ ಹಬ್ಬ; ಶರತ್ಕಾಲದ ಚುಂಬಕ: ವಿನತೆ ಶರ್ಮ ಅಂಕಣ

ಅಮೆರಿಕಕ್ಕೆ ಹೋಲಿಸಿದರೆ ಅಷ್ಟೊಂದು ಸಂಪತ್ತು, ಸಿರಿತನವಿಲ್ಲದಿದ್ದರೂ ಅದೇ ಮಟ್ಟದ ಶ್ರದ್ಧೆ ಮತ್ತು ಆಸಕ್ತಿಗಳನ್ನು ಇಟ್ಟುಕೊಂಡೆ ಬ್ರಿಟನ್ನಿನ ಕನ್ನಡ ಸಂಘಗಳು ಭಾರತೀಯ ಹಬ್ಬಗಳ ಜೊತೆ ಭಾಷೆ-ಸಂಸ್ಕೃತಿಯನ್ನೂ ಸೇರಿಸಿಕೊಂಡು ಕಾರ್ಯಕ್ರಮಗಳನ್ನು ನಡೆಸಿ ಮಿಂಚುತ್ತವೆ. ಈ ಹಿರಿಯಕ್ಕಂದಿರ ಹಿಂದೆ ಸೇರುವುದು ಮತ್ತೆಲ್ಲಾ ದೇಶಗಳ ಕನ್ನಡ ಸಂಘಗಳು ಮತ್ತು ಅವುಗಳ ಆಚರಣೆಗಳು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ಅಂಕಣ

Read More

ಅಮೃತವಾಹಿನಿಯೊಂದು ಹರಿಯುತಿದೆ: ಸುಧಾ ಆಡುಕಳ ಅಂಕಣ

ಅಮ್ಮನ ಮಾತು ಕೇಳಿ ಭಾವುಕಳಾದ ಅವಳು, “ಕಷ್ಟ ಬಂದಾಗಲೇ ನಮ್ಮೋರು, ತಮ್ಮೋರು ಯಾರಂತ ಗೊತ್ತಾಗೂದು ಅಮ್ಮಾ. ತನ್ನ ದಣಿ ಮಾತು ಅಂದ್ರೆ ಶಾಸ್ನ ಅಂತ ಹೇಳ್ತಾನೇ ಇವ್ರು ಜೈಲಿಗೋದ್ರು. ದಣಿ ಈಗ ಗುರುತೇ ಇಲ್ಲದೋರ ಹಾಗೆ ಕಾರಲ್ಲಿ ಬರ‍್ರ ಹೋಯ್ತರೆ. ಬದುಕೇ ಮುಗದೋಯ್ತು ಅಂದ್ಕಂಡು ಹೊಳೆದಾಟಿ ಬಂದೆ.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಏಳನೆಯ ಕಂತು ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ