Advertisement

Category: ದಿನದ ಪುಸ್ತಕ

ಗಾಯಗೊಂಡ ಸಾಲುಗಳು… : ದೀಪಾ ಗೋನಾಳ ಬರಹ

ಕವಿಯಾದವನಿಗೆ ತನ್ನ ಪದಗಳ ಗೊಡವೆ ಬೇಡ, ಅದು ಯಾರದ್ದೊ ನೋವು, ಆರ್ತನಾದ ಮಾತ್ರ ನನ್ನದು ಎನ್ನುವ ದೈನ್ಯತೆ ಎಂದಿಗೂ ಬೇಕು. ಅದು ನನ್ನ ಮಿತ್ರನ ಕವಿತೆಗಳಲಿ ತುಂಬಿ ಹೋಗಿದೆ. ಹೀಗಾಗಿಯೇ ಈ ಸಂಕಲನ ‘ಗಾಯಗೊಂಡ ಸಾಲುಗಳು‌’ ಎಂಬ ಹಣೆಪಟ್ಟಿ ಹೊತ್ತು ಹೊರಬಂದಿವೆ. ಗಾಯಗೊಂಡ ಪದಗಳನೇ ಹೆಣೆದು ಬ್ಯಾಂಡೇಜು ಕಟ್ಟಿದ ಪದಗಳಿವು. ಯಾರೂ ಮೂಸದ ಸರ್ಕಾರಿ ಆಸ್ಪತ್ರೆಯ ಕಟ್ಟೆಯ ಮೇಲೆ ಕೂತ ಅನಾಥ ವೃದ್ಧನಂತೆ ಇಲ್ಲಿನ ಕವಿತೆಗಳು ಕಾಣಿಸತೊಡಗುತ್ತವೆ.
ಸದಾಶಿವ ಸೊರಟೂರು ಕವನ ಸಂಕಲನ “ಗಾಯಗೊಂಡ ಸಾಲುಗಳು” ಕುರಿತು ದೀಪಾ ಗೋನಾಳ ಬರಹ

Read More

ಬೆರಳಿಗಂಟಿದ ರಕ್ತ ಹಾಗೇ ಇತ್ತು..: “ಕಲ್ಯಾಣ ಕೆಡುವ ಹಾದಿ”ಯ ಕೆಲವು ಪುಟಗಳು

ತಹಸಿಲ್ದಾರರು ಹೊರಟ ನಂತರ ದಲಿತರ ಮೇಲೆ ಹಲ್ಲೆ ಮಾಡಿದ ಮುನಿಪಾಪಣ್ಣನ ಕಡೆಯವರು, ಅವನಿಗೆದುರಾಗಿ ಯಾರ್ಯಾರು ಅರ್ಜಿಯಲ್ಲಿ ಎಡ ಹೆಬ್ಬೆಟ್ಟು ಒತ್ತಿದ್ದಾರೆ ಎಂದು ಖಾತ್ರಿ ಪಡಿಸಿಕೊಂಡಿದ್ದಾರೆ. ನಂತರ ಆತ ಮತ್ತು ಆತನ ಮಕ್ಕಳು ಆ ಐದು ಜನರನ್ನೂ ಹಿಡಿದು, ಅವರೆಲ್ಲರ ಹೆಬ್ಬೆಟ್ಟುಗಳನ್ನೂ ಕತ್ತರಿಸಿ, ‘ಈಗ ಡಿಸಿ ಸಾಹೇಬರಿಗೆ ಹೇಗೆ ಅರ್ಜಿ ಕೊಡುತ್ತೀರೋ ನೋಡೋಣ!’ ಎಂದು ಕೂಗಾಡಿದ್ದಾರೆ. ಆ ಐದೂ ದಲಿತರೂ ಬ್ಯಾಂಡೇಜ್ ತೆಗೆದು, ನನ್ನ ಮುಂದೆ ತಮ್ಮ ಎಡಗೈ ಚಾಚಿದರು.
ಎನ್.‌ ಸಂಧ್ಯಾರಾಣಿ ಅನುವಾದಿಸಿರುವ ರೆಬೆಲ್‌ ಐಎಎಸ್ ಅಧಿಕಾರಿ ವಿ. ಬಾಲಸುಬ್ರಮಣಿಯನ್‌ ಅವರ ಆತ್ಮಕಥನ “ಕಲ್ಯಾಣ ಕೆಡುವ ಹಾದಿ”ಯ ಕೆಲವು ಪುಟಗಳು

Read More

ಸುತ್ತಾಡಿದ ದೇಶಗಳ ಒಳಗೂ-ಹೊರಗೂ: ಕೆ.ಎನ್.ಲಾವಣ್ಯ ಪ್ರಭಾ ಬರಹ

ಒಮ್ಮೆ ಎಸ್ಕಲೇಟರಿನಲ್ಲಿ ಲೇಖಕಿ ಹೋಗುವಾಗ ಅಕಸ್ಮಾತ್ತಾಗಿ ಅವರ ಸೀರೆ ಸಿಕ್ಕಿಕೊಂಡು ಮೊಣಕಾಲಿನವರೆಗೂ ಹರಿದುಹೋಗುತ್ತಿದ್ದರೂ ಅಕ್ಕಪಕ್ಕದ ಜನ ತಮಗೆ ಸಂಬಂಧವೇ ಇಲ್ಲದವರಂತೆ ತಮ್ಮ ಪಾಡಿಗೆ ಹೋಗುವುದು, ಬಸ್‌ನಲ್ಲಿ ಕೂತಾಗ ಸಿಂಗಪುರದ ವಿದ್ಯಾರ್ಥಿನಿಯಿಂದಾದ ವರ್ಣಭೇದದ ಅನುಭವದಿಂದ ಲೇಖಕಿಯ ಮನಸ್ಸು ಮುದುಡುವುದು, ಹದಿನಾಲ್ಕು ಅಂತಸ್ತಿನ ತಮ್ಮ ಮಗನ ಮನೆಯಲ್ಲಿ ಲೇಖಕಿ ಒಬ್ಬರೇ ಇರುವಾಗ ಅದೇ ಕಟ್ಟಡದ ಒಂದು ಮಹಡಿಯ ಮನೆಗೆ ಬೆಂಕಿ ಬಿದ್ದು ಫೈರ್ ಇಂಜಿನ್ ಬಂದು ಬೆಂಕಿ ಆರಿಸುವಾಗಲೂ ಸುತ್ತಮುತ್ತಲಿನ ಜನ ಕಿಂಚಿತ್ತೂ ಗಮನ ಹರಿಸದೆ ಕಣ್ಣೆತ್ತಿಯೂ ನೋಡದೆ ಹೋಗುವುದು…. ಇದೆಂಥಾ ಮುಂದುವರಿದ ದೇಶ ಮಾರ್ರೆ?
ಶಾಂತಾ ನಾಗರಾಜ್‌ ಪ್ರವಾಸ ಕಥನ “ಯಾನ ಸಂಸ್ಕೃತಿ” ಕೃತಿಯ ಕುರಿತು ಕೆ.ಎನ್.‌ ಲಾವಣ್ಯ ಪ್ರಭಾ ಬರಹ

Read More

ಸಾಮಾಜಿಕ ಸಾಮರಸ್ಯದ ಸೂಚಕ ‘ಭರಮದೇವರು’: ತೇಜಾವತಿ ಡಿ.ಎಸ್.‌ ಬರಹ

ಪುರಾಣ ಕಥೆಗಳು ನಮ್ಮ ಪೂರ್ವಜರ ಕಥೆಗಳೆಂದು ನಂಬಿರುವ ಜನಪದರು ಅವುಗಳನ್ನು ತಮ್ಮ ಜ್ಞಾನ ಮಾರ್ಗಗಳೆಂದು ಒಪ್ಪಿಕೊಂಡಿದ್ದಾರೆ. ಬಹುತೇಕ ಇವು ಮತ ಧರ್ಮಗಳನ್ನಾಧರಿಸಿ ಬೆಳೆಯುತ್ತವೆ. ಬಹು ಸಂಸ್ಕೃತಿಯ ದೇಶವಾಗಿರುವ ನಮ್ಮಲ್ಲಿ ಸೃಷ್ಟಿ ಸ್ಥಿತಿ ಲಯದ ರೂಪಗಳಾದ ತ್ರಿಮೂರ್ತಿಗಳ ಕುರಿತು ಅನೇಕ ಪುರಾಣ ಕಥೆಗಳಿವೆ. ಅದರಲ್ಲಿ ಬ್ರಹ್ಮನನ್ನು ಕುರಿತು ಅವನ ಹುಟ್ಟು, ಶಿರಶ್ಚೇದನ, ಸ್ತ್ರೀ ಸಂಬಂಧ ಆಪಾದನೆಗಳು ಬಹಳಷ್ಟು ಇದ್ದು ಬ್ರಹ್ಮನಿಗೆ ಪೂಜೆ ಸಲ್ಲದಿರಲಿ ಎಂಬ ಶಾಪವಿದೆ. ಇವೆಲ್ಲವೂ ಆಯಾ ಕಾಲಮಾನಕ್ಕೆ ತಕ್ಕಂತೆ ಬ್ರಹ್ಮನ ಪ್ರಸಿದ್ಧಿಯನ್ನು ಕಡಿಮೆ ಮಾಡುವ ಹುನ್ನಾರದಿಂದ ಹುಟ್ಟಿಕೊಂಡ ಕಥೆಗಳಾಗಿ ನಮಗೆ ತೋರುತ್ತವೆ.
ಶ್ರೀರಾಮ ಇಟ್ಟಣ್ಣವರ ಬರೆದ “ಭರಮದೇವರು” ಕೃತಿಯ ಕುರಿತು ತೇಜಾವತಿ ಡಿ.ಎಸ್.‌ ಬರಹ

Read More

ಭಾವನೆಗಳ ಬಿರುಕ ಹೊಲಿಯಲಾರ ಸಿಂಪಿಗ: ಚಂದ್ರಶೇಖರ ಪೂಜಾರ ಬರಹ

ಪ್ರೇಮ ಮೋಹ ವ್ಯಾಮೋಹಗಳ ನಡುವೆ ಇದ್ದ ಗಜ಼ಲ್ ಕಾಲ ಹೊರಳಿದಂತೆ ಜೀವನದ ಎಲ್ಲ ಆಯಾಮಗಳನ್ನು ಹೊಂದಿ ಬದುಕಿನ ಸಮಗ್ರ ಕಾವ್ಯವಾಯಿತು. ಗಜ಼ಲ್ ಬರಿ ಶಬ್ಧಾಲಂಕಾರಗಳ ಸರಪಳಿಯಲ್ಲ, ಅಲ್ಲೊಂದು ಕಾವ್ಯದ ಗುಣವಿರಬೇಕು. ಪ್ರತಿಮೆ, ರೂಪಕಗಳ ಮೂಲಕ ಮಾತನಾಡಬೇಕು. ಬೇಟೆಗೆ ಸಿಲುಕಿದ ಜಿಂಕೆಯ ಆಕ್ರಂದನದಂತೆ ಕಾಣುವ ಗಜ಼ಲ್ ಹೃದಯದ ಬಡಿತವಾಗಬೇಕು. ಓದಿದ ಕೂಡಲೇ ಹೃದಯವನ್ನು ಚಕಿತಗೊಳಿಸುವ ಗುಣ, ಓದುಗನೊಬ್ಬನಿಗೆ ನಿಲುಕದ ಅನುಭವಗಳನ್ನು ಒಂದುಗೂಡಿಸುವ ಶಕ್ತಿ ಪಡೆದಿರಬೇಕು. ವ್ಯಕ್ತಿಯೊಬ್ಬನ ಯೋಚನಾ ಲಹರಿಯನ್ನೇ ಬದಲಿಸುವ ಗುಣವನ್ನು ಅದು ಒಳಗೊಂಡಿರಬೇಕು.
ಶಿವಕುಮಾರ ಮೋ. ಕರನಂದಿ ಗಜ಼ಲ್‌ ಸಂಕಲನ “ನೆರಳಿಗಂಟಿದ ನೆನಪು” ಕುರಿತು ಚಂದ್ರಶೇಖರ ಯ. ಪೂಜಾರ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ