Advertisement

Category: ದಿನದ ಪುಸ್ತಕ

ಹೊಸ ಸ್ವರೂಪಕ್ಕೆ ಕಾಯುತ್ತಿರುವ ಪ್ರವಾಸ ಕಥನ

ಎರಡು ಮೂರು ದಶಕಗಳ ಹಿಂದೆ ವಿದೇಶಗಳ ಬಗ್ಗೆ ಇದ್ದಷ್ಟು ಕುತೂಹಲ ಈಗ ಭಾರತದಲ್ಲಾಗಲಿ, ಮೂರನೆ ಜಗತ್ತಿನ ದೇಶಗಳಲ್ಲಾಗಲಿ ಇಲ್ಲ. ಜಾಗತೀಕರಣವೂ ಸೇರಿದಂತೆ ಬೇರೆ ಬೇರೆ ಕಾರಣಗಳಿಗಾಗಿ, ಉದ್ಯೋಗ, ವ್ಯಾಪಾರ, ಪ್ರವಾಸಗಳಿಗೆ ಬೇರೆ ದೇಶಗಳಿಗೆ ಹೋಗಿ ಬರುವವರ ಸಂಖ್ಯೆ ಹೆಚ್ಚಾಗಿದೆ. ಹೆಚ್ಚು ಅವಕಾಶಗಳು ಕೂಡ ತೆರೆದಿವೆ. ಉದಾಹರಣೆಗೆ ಕರ್ನಾಟಕದ ಪ್ರತಿ ಜಿಲ್ಲೆಯಿಂದ ಕನಿಷ್ಠ ಹತ್ತು ಕುಟುಂಬಗಳ ಸದಸ್ಯರಾದರೂ, ಬಂಧುಗಳಾದರೂ ಈಗ ಹೊರದೇಶಗಳೊಡನೆ ಬೇರೆ ಬೇರೆ ರೀತಿಯಲ್ಲಿ ಸಂಪರ್ಕ, ಒಡನಾಟ ಇಟ್ಟುಕೊಂಡಿರುತ್ತಾರೆ.
ಕೆ. ಸತ್ಯನಾರಾಯಣ ಪ್ರವಾಸ ಕಥನ “ಅಮೆರಿಕದಲ್ಲಿ ಬಸವನಗುಡಿ”ಯ ಒಂದು ಬರಹ ನಿಮ್ಮ ಓದಿಗೆ

Read More

‘ಹೂಧೂಳಿ’ ಮುಹೂರ್ತ…..

ಚಾಂದಿನಿಯವರ ಈ ಕವಿತೆಗಳ ಮುಖ್ಯ ಧಾಟಿ ಬಿಗುಮಾನವಿಲ್ಲದ ನಿವೇದನೆಯದು, ಅವರ ಅನುಭವಜನ್ಯ ಕವಿತೆಗಳಾದ “ಕ್ಲಾಸ್ ರೂಂ”, “ಅವನಾರು”, “ನನ್ನ ಬಾಲ್ಯ”, “ಅಣ್ಣ ಬರಲಿಲ್ಲ”-ಗಳ ಜೀವಂತಿಕೆ ಅನುಭವ ಮೂಲದಿಂದಲೇ ಬರುತ್ತದೆ. ಮುಂದಿನ ಸಾಲಿನ ಮತ್ತು ಹಿಂದಿನ ಸಾಲಿನ ಖಾಲಿ ಬೆಂಚುಗಳ ಲಕ್ಷಣಗಳು “ಕ್ಲಾಸ್ ರೂಂ” ಕವಿತೆಯನ್ನು ರೂಪಿಸಿದ ರೀತಿ, ಬಾಲ್ಯದ ಅನುಭವಗಳು ಹೊಳೆಯಲ್ಲಿ ಹಿಡಿದು ಅಲ್ಲೇ ಸುಟ್ಟು ತಿಂದ ಏಡಿಯಷ್ಟೆ ತಾಜಾ ಆಗಿ ಬರುವ ರೀತಿ ಆಪ್ತವಾಗಿದೆ. “ಅಣ್ಣ ಬರಲಿಲ್ಲ” ಕವಿತೆಗೆ ತಂತಾನೆ ಬಂದಂತಿರುವ ಜನಪದೀಯ ಗುಣ ಅದರ ವಿಷಾದಕ್ಕೆ, ಆತ್ಮಮರುಕವನ್ನು ಮೀರುವ ಸ್ಪರ್ಶವನ್ನು ಕೊಟ್ಟಿದೆ.
ಚಾಂದಿನಿ ಖಲೀದ್‌ ಕವನ ಸಂಕಲನ “ಸೂಜಿಮೊಗದ ಸುಂದರಿ”ಕ್ಕೆ ಜಯಂತ ಕಾಯ್ಕಿಣಿ ಬರೆದ ಮುನ್ನುಡಿ

Read More

ನಮ್ಮದೇ ಎನ್ನಿಸುವ ಕತೆಗಳು…

ವಿಹಾರ’ಕ್ಕಿಂತ ‘ಹದ್ದು ಹಾರುವ ಹೊತ್ತು’ ಇನ್ನೂ ವಿಸ್ತಾರವಾದ ಕ್ಯಾನ್ವಾಸ್ ಹೊಂದಿರುವ ಕತೆ. ಊರಿಗೆ ಹೊಸತಾಗಿ ಬಂದು ಹೊರವಲಯದಲ್ಲಿ ಬಾಡಿಗೆ ಮನೆ ಮಾಡಿರುವ ಈ ಕತೆಯ ನಿರೂಪಕನು ಬಡಾವಣೆಯ ಪರಿಸರವನ್ನು ತಿಳಿದುಕೊಳ್ಳುವ ಹವಣಿಕೆಯಲ್ಲಿ ಕೇಳಿಸಿಕೊಂಡಿದ್ದೆಲ್ಲ ಕತೆಯ ಪ್ರಥಮಾರ್ಧವಾದರೆ ಉತ್ತರಾರ್ಧದ ಘಟನೆಗಳಿಗೆ ಆತ ಸಾಕ್ಷಿಯಾಗುತ್ತಾನೆ. ಹೀಗೆ ಹೊರಗಿನವನಾದ, ಆದರೆ ಒಂದು ಮಟ್ಟದಲ್ಲಿ ಭಾಗಿಯೂ ಆಗಿರುವ ನಿರೂಪಕನಿಗೆ ಎಲ್ಲಾ ಪಾತ್ರ ಮತ್ತು ಘಟನೆಗಳನ್ನು ಸನಿಹದಿಂದ, ಆದರೆ ವಸ್ತುನಿಷ್ಠವಾಗಿ, ನಿರೀಕ್ಷಿಸುವ ಅನುಕೂಲತೆ ಇದೆ.
ಎ.ಎನ್. ಪ್ರಸನ್ನ ಕಥಾ ಸಂಕಲನ “ದಾಸವಾಳ”ಕ್ಕೆ ಎಂ. ಜಿ. ಹೆಗಡೆ ಬರೆದ ಮುನ್ನುಡಿ

Read More

ವಿಜ್ಞಾನದೊಂದಿಗೆ ಅಧ್ಯಾತ್ಮವೂ ಮಿಳಿತವಾಗುವ ಹೊತ್ತು…

ಕ್ಯಾನ್ಸರ್ ಸುʼನ ದೇಹವನ್ನು ತಿಂದುಹಾಕುವಾಗ ಬಹಳಷ್ಟು ಕೃಶನಾಗುವುದಲ್ಲದೇ ಅಂತಹ ತೀವ್ರ ಗಂಭೀರ ಸ್ಥಿತಿಯಲ್ಲೂ ಸಹಾ “ತಾನು ಯಾರು? ಇಲ್ಲಿ ಯಾಕಿದ್ದೇನೆ?” ಎಂಬ ಆತ್ಮವಿಮರ್ಶೆಗೆ ತೊಡಗಿಕೊಂಡು ಕೊನೆಗೆ ತಾನು ಇಡೀ ವಿಶ್ವಕ್ಕೆ ಸೇರಿದವ, ಬ್ರಹ್ಮಾಂಡದ ಅವಿಭಾಜ್ಯ ಅಂಗ. ಬ್ರಹ್ಮಾಂಡವನ್ನು ನಿಯಂತ್ರಿಸುವ ಶಕ್ತಿಯೇ ನನ್ನನ್ನೂ ನಿಯಂತ್ರಿಸುತ್ತಿದೆ ಎಂಬಂತಹ ಆಲೋಚನೆಗಳು ಉಪನಿಷತ್ತಿನಲ್ಲಿ ಬರುವ “ಯಾವ ಒಂದೇ ದಾರದ ಎಳೆಗಳಿಂದ ಬಟ್ಟೆಗಳು ತಯಾರಾಗುತ್ತದೋ ಅದೇ ತರಹ ಒಂದೇ ಶಕ್ತಿ ಇಡೀ ಸೃಷ್ಟಿಯ ಚರಾಚರದಲ್ಲೂ ಇದೆ” ಎಂಬಂತಹ ಬೌದ್ಧಿಕ ಸ್ತರದಲ್ಲಿ ತನ್ನಾತ್ಮವನ್ನು ವಿಶ್ವಾತ್ಮದೊಂದಿಗೆ ಬೆಸೆದುಕೊಳ್ಳುವ ಚಿಂತನೆಗಳು ಅವನನ್ನು ದಾರ್ಶನಿಕನೆನಿಸುತ್ತದೆ.
ಡಾ. ಪ್ರಸನ್ನ ಸಂತೇಕಡೂರು ಕಾದಂಬರಿ “ಸು” ಕುರಿತು ಕೆ.ಎನ್. ಲಾವಣ್ಯ ಪ್ರಭಾ ಬರಹ

Read More

ನಡು ಮಧ್ಯಾಹ್ನದ ಕಣ್ಣಿನ ಹೊಳಪು…

ಸ್ತ್ರೀ ಬದುಕಿನ ಅಗಾಧತೆ ಮತ್ತು ಸ್ತ್ರೀಯ ಇತಿಮಿತಿಯೊಳಗಿನ ಬದುಕು ಅನಾವರಣಗೊಳ್ಳುವ ಕವಿತೆಗಳಾದ ಹೂವಿಡುವಷ್ಟೆ ನಿಧಾನವಾಗಿ, ನಾವು ಸ್ವಲ್ಪ ಹೀಗೆ, ಆಸೀಫಾ, ಅವಳು, ಅಡುಗೆಯಾಟದ ಹುಡುಗಿ ಮುಂತಾದ ಕವಿತೆಗಳು ಮಹಿಳೆಯ ಅಂತರಂಗವನ್ನು ಬಿಂಬಿಸುತ್ತವೆ. ಕವಯತ್ರಿ ಆಶಾ ಅಭಿಮಾನದಿಂದ ಅಭಿವ್ಯಕ್ತಿ ಪಡಿಸಿದ ಸ್ತ್ರೀಯ ಬಗೆಗಿನ ಈ ಸಾಲು ಪ್ರತಿ ಹೆಂಗಳೆಯರ ಹೆಮ್ಮೆ. “ಹೋಗಲಿ ಬಿಡಿ ನೀವವಳನ್ನು ಆಪಾದ ಮಸ್ತಕವೇ/ ನೋಡಿದುದು ಸರಿಯೇ ಏಕೆಂದರೆ/ ದೇವತೆಯನ್ನು ಹಾಗೆಯೇ ನೋಡಬೇಕಂತೆ”
ಆಶಾ ಜಗದೀಶ್‌ ಕವನ ಸಂಕಲನ “ನಡು ಮಧ್ಯಾಹ್ನದ ಕಣ್ಣು” ಕುರಿತು ಸಂಗೀತ ರವಿರಾಜ್‌ ಚೆಂಬು ಬರಹ

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ