Advertisement

Category: ದಿನದ ಪುಸ್ತಕ

ಕೊನೆ ಮೊದಲಿಲ್ಲದ ದಾರಿಗಳೊಳಗೆ

ಇಲ್ಲಿನ ಮುಖ್ಯ ಕವಿತೆಗಳೆಲ್ಲವೂ ಪ್ರಕೃತಿಯ ವರ್ಣ ರಂಜಿತ ನಿಲುವನ್ನು ಎತ್ತಿ ತೋರಿಸುತ್ತದೆ. ಹೆಣ್ಣಿನೆದೆಗೆ ಮೊದಲು ತಾಕುವುದೆ ಪ್ರಕೃತಿ ಪ್ರೇಮ ಎಂಬುದು ನಮಗಿಲ್ಲಿ ನಿರೂಪಿತವಾಗುತ್ತದೆ. ಪ್ರಕೃತಿಯೆಂದರೆ ಕೋಗಿಲೆ ಬೇಕು, ಚಂದಿರನಿರಬೇಕು, ನೀಲಿಯಾಕಾಶ, ಕರಿ ಮುಗಿಲು, ಆಷಾಡದ ಮೋಡ, ಸುಖದ ಮಳೆ, ನಿತ್ಯ ಪುಷ್ಪ, ಪಾರಿಜಾತ, ಕಲ್ಪವೃಕ್ಷ, ಸೂರ್ಯ, ಚಂದ್ರ, ನಕ್ಷತ್ರ ಎಲ್ಲವೂ ಇಲ್ಲಿನ ಕವಿತೆಗಳಲ್ಲಿದೆ. ಏನೋ ಒಂದು ತಿಳಿಯಲು ಆಗದಂತಹ ಆಧ್ಯಾತ್ಮಕತೆಯ ದಿವ್ಯ ಸಾನಿಧ್ಯದ ಸೆಳವು ಇಲ್ಲಿನ ಕವಿತೆಗಳು ಎದ್ದು ತೋರಿಸುತ್ತವೆ.
ಕೆ. ಎನ್. ಲಾವಣ್ಯಪ್ರಭ ಕವನ ಸಂಕಲನ “ಸ್ಪರ್ಶ ಶಿಲೆ”ಯ ಕುರಿತು ಸಂಗೀತ ರವಿರಾಜ್‌ ಚೆಂಬು ಬರಹ

Read More

‘ಮುಂಬಯಿ ಕನ್ನಡ ಲೋಕʼದ ಅನಾವರಣ

ಮುಂಬಯಿ ಬದುಕಿನ ವಿವಿಧ ವಿನ್ಯಾಸಗಳು ಕನ್ನಡ ಕಾವ್ಯದಲ್ಲಿ ಮೂಡಿ ಬಂದಿರುವ ಬಗೆಯನ್ನು ‘ಮುಂಬಯಿ ಕವಿಗಳು ಕಂಡ ಮುಂಬಯಿ’ ಭಾಗದಲ್ಲಿ ಕಟ್ಟಿಕೊಡಲಾಗಿದೆ. ಇಲ್ಲಿ ಲೇಖಕರು ಜಿ.ಎಸ್.ಎಸ್. ಅವರ ‘ಮುಂಬಯಿ ಜಾತಕ’ವನ್ನು ಮೊದಲ್ಗೊಂಡು, ಜಯಂತ ಕಾಯ್ಕಿಣಿ, ಕರುಣಾಕರ ಶೆಟ್ಟಿ, ಗಿರಿಜಾ ಶಾಸ್ತ್ರಿ, ಸಾ.ದಯಾ, ಅರವಿಂದ ನಾಡಕರ್ಣಿ, ಸನದಿ, ತುಳಸಿ ವೇಣುಗೋಪಾಲ್, ಕೆ.ವಿ. ಕಾರ್ನಾಡ್, ಗೋಪಾಲ್ ತ್ರಾಸಿ, ಜಿ.ಪಿ. ಕುಸುಮಾ ಮೊದಲಾದವರ ಕವಿತೆಗಳಲ್ಲಿ ಮುಂಬಯಿ ವಿಭಿನ್ನ ರೀತಿಯಲ್ಲಿ ಅನಾವರಣಗೊಂಡಿರುವುದನ್ನು ಲೇಖಕರು ಕಂಡು ಕೊಂಡಿದ್ದಾರೆ.
ಡಾ. ಕೆ. ರಘುನಾಥ್‌ ಬರೆದ ‘ಮುಂಬಯಿ ಕನ್ನಡ ಲೋಕʼ ಕೃತಿಯ ಕುರಿತು ದಯಾನಂದ ಸಾಲ್ಯಾನ್‌ ಬರಹ

Read More

ತೆರೆಮರೆಯ ಅಂತರಂಗದ ಕಥೆ…

ಅಪ್ಪ ಮೌನವಾಗಿ ಒಂದು ಓರೆಗೆ ಕೂತಿದ್ದರು. ಅರವಿಂದ ಅದೆಲ್ಲಿ ಅಲೆಯೋಕ್ಕೆ ಹೋಗಿದ್ದನೋ ಏನೋ… ಅವನೊಬ್ಬ ಶುದ್ಧ ಪೋಕರಿ ತಮ್ಮ. ಏನಾಯಿತೆಂದು ವಿಚಾರಿಸಿದರೆ, ಅಮ್ಮ, ‘ಚಿಕ್ಕಮ್ಮನಿಗೆ ಸ್ವಲ್ಪ ಹೊಟ್ಟೆನೋವು ಕಾಣಿಸಿಕೊಂಡಿತ್ತು ಅಷ್ಟೆ. ಈಗ ಹುಷಾರಾಗಿದ್ದಾಳೆ’ ಎಂದರು. ಹುಂ… ಮಕ್ಕಳಿಗೆ ಇದೆಲ್ಲಾ ಗೊತ್ತಾಗಬಾರದು ಅಂತ ದೊಡ್ಡವರು ಹೀಗೆ ಸುಳ್ಳು ಹೇಳೋದು ಸಹಜವಲ್ಲವೇ..? ಚಿಕ್ಕಮ್ಮನನ್ನು ಡಿಸ್ಚಾರ್ಜ್ ಮಾಡಿಸಿಕೊಂಡು ಮನೆಗೆ ಕರೆದುಕೊಂಡು ಬಂದ ಕೆಲದಿನಗಳಲ್ಲಿ, ಮನೆಯಲ್ಲಿ ನಡೀತಾ ಇದ್ದ ಮಾತುಕತೆಗಳಿಂದಲೇ ತಿಳಿಯಿತು ಚಿಕ್ಕಮ್ಮ ಆತ್ಮಹತ್ಯೆಗೆ ಯತ್ನಿಸಿದ್ದರು ಅಂತ! ಯಾರೋ ಬಸ್ ಕಂಡೆಕ್ಟರ್ ಅಂತೆ.. ಗಾಢವಾಗಿ ಪ್ರೀತಿಸಿದ್ರಂತೆ..
ಆಶಾ ರಘು ಹೊಸ ಕಾದಂಬರಿ “ಚಿತ್ತರಂಗ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಬದುಕೆಂದರೆ ಹೀಗೇನೆ….

ಮನೆ ಭಾಗವಾದಾಗ ಮಧ್ಯಕ್ಕೆ ಪೂರ್ತಿ ಗೋಡೆ ಕಟ್ಟದೆ ಅಟ್ಟದವರೆಗೆ ಮಾತ್ರ ಕಟ್ಟಿದ್ದರಿಂದ‌ ಅಟ್ಟ ಎಲ್ಲರಿಗೂ ಒಂದೆ ಇತ್ತು ಹಾಗಾಗಿ ಪಕ್ಕದ ಮನೆಯಲ್ಲಿ ಮಾತಾಡುವುದೆಲ್ಲ ಪಕ್ಕದಲ್ಲೆ ಮಾತಾಡಿದಷ್ಟು ಸ್ಪಷ್ಟವಾಗೆ ಕೇಳುತ್ತಿತ್ತು. ಸಾವಿ ನಿದ್ದೆ ಬಾರದೆ ಗಂಡನನ್ನು ಹೇಗಾದರು ಮಾಡಿ ಸೂಳೆ ಸಹವಾಸ ಬಿಡಿಸಿ ನನ್ನ ಕಡೆ ಸೆಳೆಯಬೇಕೆಂದು ಯೋಚಿಸುತ್ತಿದ್ದಳು. ಪಕ್ಕದ ಮನೆಯಲ್ಲಿ ಮಾವ ಅಕ್ಕಂದಿರು ತನ್ನ ಗಂಡನ ಬಗ್ಗೆ ಪಿಸುಗುಡುವುದು ಗೊತ್ತಾಗುತಿತ್ತು. ಸಾವಿತ್ರಿ ತನಗರಿವಿಲ್ಲದೆ ಶೋಕಿಸುತ್ತ ಮಗಳು ಕನಕಳನ್ನು ತಬ್ಬಿ ಕಣ್ಣು ಮಿಟುಕಿಸಿದಾಗ ಕಣ್ತುಂಬಿದ್ದ ಅಶ್ರು ದಳದಳನೆ ಇಳಿದು ಎಣ್ಣೆ ಜಿಡ್ಡು ಮೆತ್ತಿ ಕೊಳಕಾಗಿದ್ದ ತಲೆದಿಂಬು ಸಹ ಅದನ್ನು ಹೀರದೆ ಕೆಳಕ್ಕೆ ಹರಿದವು.
ನಗೋಲತೆ ಬರೆದ “ಬೆದ್ಲು ಬದ್ಕು” ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಸಿಕಾಡ- ಕೀಟಲೋಕದ ಸಂಗೀತಸಾಮ್ರಾಟ

ಸಾಮಾನ್ಯವಾಗಿ ಹಾಡುವುದು ಗಂಡು ಸಿಕಾಡಗಳೇ; ಇವು ಹಲವಾರು ಹೆಣ್ಣು ಸಿಕಾಡಗಳ ಮಧ್ಯೆ ಒಂದು ಹೆಣ್ಣು ಸಿಕಾಡವನ್ನು ಆರಿಸಿ, ಅದಕ್ಕೆ ಸಂಗಾತಿಯಾಗೆಂದು ಆಹ್ವಾನವೀಯುವಾಗ ಹಾಡುವ ಹಾಡೇ ಬೇರೆ; ಆ ಹೆಣ್ಣುಸಿಕಾಡವು ಈ ಆಹ್ವಾನವನ್ನು ಒಪ್ಪಿ ಬಳಿಬಂದರೆ ಆಗ ಗಂಡು ಸಿಕಾಡವು ಹಾಡುವ ಹಾಡೇ ಬೇರೆ, ಅಕಸ್ಮಾತ್ ಆ ಆಹ್ವಾನ ತಿರಸ್ಕೃತಗೊಂಡರೆ ಮತ್ತೊಂದು ಶೋಕರಾಗವನ್ನು ಹೊರಡಿಸುತ್ತದೆ ಗಂಡು ಸಿಕಾಡ.
ಕ್ಷಮಾ ವಿ. ಭಾನುಪ್ರಕಾಶ್‌ ಬರೆದ ವಿಜ್ಞಾನ ಲೇಖನಗಳ ಸಂಕಲನ “ಜೀವಿವಿಜ್ಞಾನ”ದಿಂದ ಆಯ್ದ ಲೇಖನ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ