Advertisement

Category: ದಿನದ ಪುಸ್ತಕ

ತಳಮಳಗಳ `ಮೌನದೊಡಲ ಮಾತು’

ಗಜಲ್ ಮೂಲತಃ ಮನುಷ್ಯ ಸಹಜ ಪ್ರೀತಿ, ಪ್ರೇಮ, ಪ್ರಣಯ, ವಿರಹ, ವೇದನೆ, ಏಕಾಂಗಿತನ, ನೋವು, ಹತಾಶೆ, ವಿಪ್ರಲಂಭನ, ಬೇಗುದಿ, ತಳಮಳಗಳನ್ನು ಅಭಿವ್ಯಕ್ತಿಗೊಳಿಸುವ ಕಾವ್ಯವಾದರೂ, ಅದರಾಚೆಯ ವರ್ತಮಾನದ ಸಂಗತಿಗಳನ್ನೂ ಅದು ಪ್ರತಿಧ್ವನಿಸುತ್ತದೆ. ಇಂತಹ ಹಲವು ದೃಷ್ಟಿಕೋನಗಳನ್ನಿಟ್ಟುಕೊಂಡು ಇಲ್ಲಿ ಕೆಲ ಗಜಲ್‌ಗಳು ಮೈದಾಳಿವೆ. ಅಂಬಮ್ಮ ಅವರ ಗಜಲ್‌ಗಳಲ್ಲಿ ಪ್ರೇಮ ನಿವೇದನೆ ಇದೆ, ನೋವುಂಡ ಹೃದಯಾಂತರಾಳದ ಯಾತನೆ ಇದೆ. ಜೊತೆಗೆ ಕೆಲವೆಡೆ ಚಡಪಡಿಕೆ, ಕಾತರತೆ, ಆರ್ದ್ರತೆ, ಮನದ ತಾಕಲಾಟಗಳ ತಳಮಳವೂ ಇದೆ.
ಅಂಬಮ್ಮ ಪ್ರತಾಪ್‌ ಸಿಂಗ್‌ ಗಜಲ್‌ ಸಂಕಲನ “ಮೌನದೊಡಲ ಮಾತು” ಕುರಿತು ಮಂಡಲಗಿರಿ ಪ್ರಸನ್ನ ಬರಹ

Read More

ಅಪೂರ್ಣವಲ್ಲ… ಪೂರ್ಣತೆಯೆಡೆಗೆ ಸಾಗುವ ದಾರಿ

ಕೊನೆಗೌಡ ಮತ್ತು ಪ್ರೀತಿ ಎಂಬ ಕಥೆ ವಿಶಿಷ್ಟವಾದದ್ದು. ಪ್ರೀತಿ ಎನ್ನುವುದು ಕೇವಲ ಮೇಲ್ವರ್ಗದ ಸೊತ್ತಲ್ಲ, ಪ್ರೀತಿಯ ನಿಜವಾದ ರೂಪ ಕಾಣಿಸುವುದು ಸಂಸಾರ ಆರಂಭವಾದ ಮೇಲೆ ಎಂಬುದನ್ನು ಸುಂದರವಾಗಿ ತಿಳಿಸಿಕೊಡುವ ಕಥೆ. ಅನಾಥನಾಗಿದ್ದ ಕಥಾನಾಯಕ ಹೆಂಡತಿಯನ್ನೇ ಸರ್ವಸ್ವವೆಂದು ಬಗೆದು ಅವಳಿಗೆ ಪ್ರೀತಿಯನ್ನು ಧಾರೆಯೆರೆಯುವ ಪರಿ ಮನೋಜ್ಞವಾಗಿ ಚಿತ್ರಿತವಾಗಿದೆ. ವೃದ್ಧಾಪ್ಯದಲ್ಲೂ ಪ್ರೀತಿ ಬಾಡದೆ ಮಾಗುತ್ತದೆ ಎಂಬುದನ್ನು ಲೇಖಕಿ ಸಮರ್ಥವಾಗಿ ನಿರೂಪಿಸಿದ್ದಾರೆ. ಕಾಲವು ಬರುವುದು ಒಂದು ದಿನ ಎಂಬ ಕೊನೆಯ ಕಥೆ ಸಾಮಾಜಿಕ ಸುಧಾರಣೆಯನ್ನು ಮಾಡಹೋಗಿ ಬಹಿಷ್ಕಾರಕ್ಕೆ ಒಳಗಾದವನ ಕಥೆ.
ಸುಧಾ ಎಂ. ಚೊಚ್ಚಲ ಕಥಾ ಸಂಕಲನ “ಅಪೂರ್ಣವಲ್ಲ” ಕುರಿತು ಮಹಾಬಲ ಭಟ್‌ ಅವರ ಬರಹ

Read More

ಉತ್ತಮ ಪೂರ್ವಜರಾಗುವುದು ಹೇಗೆ?

ನಮ್ಮಲ್ಲಿ ಅರಣ್ಯ ವಿಸ್ತೀರ್ಣ ಹೆಚ್ಚಾಗಿದೆ ಎಂದು ಉಪಗ್ರಹ ಚಿತ್ರಗಳ ಆಧರಿಸಿ ಸರಕಾರಿ ಅಂಕಿ ಅಂಶಗಳ ಘೋಷಣೆಯಾಗುತ್ತದೆ. ಅಂಥ ಅರಣ್ಯದಲ್ಲಿ ಜೀವಾವಾಸ ನಿಜಕ್ಕೂ ಹೆಚ್ಚಾಗಿದೆಯೆ, ಪಶುಪಕ್ಷಿಗಳ ಸಂಖ್ಯೆ, ದುಂಬಿ-ಜೇನ್ನೊಣಗಳ ಸಾಂದ್ರತೆ ಹೆಚ್ಚಿದೆಯೆ, ನದಿ ಕೊಳ್ಳಗಳಲ್ಲಿ ಜಲಚರಗಳ ಸಂಖ್ಯೆ ಹೆಚ್ಚಾಗಿದೆಯೆ, ಅದು ಗೊತ್ತಿರುವುದಿಲ್ಲ. ಮಳೆ ಚೆನ್ನಾಗಿ ಸುರಿದಾಗ ಎಲ್ಲ ಕೆರೆಕಟ್ಟೆಗಳಲ್ಲೂ ನೀರು ತುಂಬಿ ಹೊರಕ್ಕೆ ಹರಿಯುತ್ತದೆ; ಆದರೆ ಅಂಥ ಕೆರೆಗಳಲ್ಲಿ ಹೂಳು ಎಷ್ಟು ತುಂಬಿದೆ ಎಂಬುದು ಲೆಕ್ಕಕ್ಕೆ ಬರುವುದೇ ಇಲ್ಲ.
ಪರಿಸರವಾದಿ ನಾಗೇಶ ಹೆಗಡೆಯವರ ಹೊಸ ಕೃತಿ “ಅಪಾಯ ಬಂದಿದೆ: ಅಡಗಲು ಸ್ಥಳವೆಲ್ಲಿ?”ಯ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ದಿನ ದಿನದ ಕಥನ

ಅವರ ಕತೆಗಳಲ್ಲಿ ಸಂಭಾಷಣೆಗಿಂತ ನಿರೂಪಣೆಯೇ ಮುನ್ನೆಲೆಗೆ ಬರುತ್ತದೆ. ಹೀಗಾಗಿ ಕತೆಯ ಪೂರ್ಣ ಹೆಣಿಗೆ ಆಡುಮಾತಿನಲ್ಲೇ ಇರುತ್ತದೆ. ಆಡುವ ನುಡಿಯಂತೆಯೇ ಬರವಣಿಗೆಯೂ ಇರುತ್ತಾ, ನಿರೂಪಣೆಯಲ್ಲೇ ‘ಹ’ಕಾರ ‘ಅ’ಕಾರಗಳ ಅದಲು ಬದಲುಗಳೂ ಸೇರಿಕೊಂಡು ಇತರ ಸ್ಥಳೀಯ ಪದಗಳ ಬಳಕೆಯೂ ಹಾಗೇ ದಾಖಲಾಗುತ್ತದೆ. ಇದು ಕೆಲವೊಮ್ಮೆ ಭಾಷೆಯ ಬಳಕೆಯ ಬಗೆಗೆ ‘ಮಡಿವಂತಿಕೆ’ ಹೊಂದಿದ್ದು, ತಮ್ಮದೇ ಸರಿ ಕನ್ನಡ, ಇದೆಲ್ಲ ‘ಅಶುದ್ಧ’ ಕನ್ನಡ ಎಂದುಕೊಳ್ಳುವವರಿಗೆ ಇರಿಸು ಮುರಿಸು ಮಾಡಬಹುದು. ಆದರೆ ಇವು ಆಡುಕನ್ನಡದ ಒಂದು ಟಿಸಿಲು ಎಂದು ಅರಿತರೆ ಸಮಸ್ಯೆ ಅನ್ನಿಸದು.
ವಿಜಯಾ ಮೋಹನ್‌ ಕಥಾ ಸಂಕಲನ “ಮೇವು”ಗೆ ಡಾ. ಸಬಿತಾ ಬನ್ನಾಡಿ ಬರೆದ ಮುನ್ನುಡಿ

Read More

“ದೀಡೆಕರೆ ಜಮೀನು”ನಲ್ಲಿರುವ ಸಂಕಟದ ಕಥೆಗಳು

ನಾನು ಈ ಮೊದಲು ಇವರ “ಆಲದ ಮರ” ಎಂಬ ಕತೆಯನ್ನು ಮಯೂರ ಪತ್ರಿಕೆಯಲ್ಲಿ ಓದಿದ್ದೆ. ಆವಾಗಲೇ ಓಹ್! ಸರ್ ಚೆನ್ನಾಗಿ ಕಥೆ ಬರೀತಾರಲ್ಲ ಎಂದು ಉದ್ಗರಿಸಿದ್ದೆ. “ಭಜಿ ಅಂಗಡಿ ಮಲ್ಲಕ್ಕ” ಮತ್ತು “ತಪ್ದಂಡ” ಇವೆರಡು ಕಥೆಗಳನ್ನು ಬಿಟ್ಟರೆ ಉಳಿದೆಲ್ಲವೂ ನೋವು, ಹತಾಶೆ ಅಸಹಾಯಕತೆಯಿಂದ ಕೂಡಿವೆ. ಕೊನೆವರೆಗೂ ಹೋರಾಡುವ “ಆಲದ ಮರ”ದ ಅಜ್ಜ, “ತಲ್ಲಣ”ದಲ್ಲಿರುವ ಮಕ್ಕಳ ಸಾವು, “ಮಹಾಪೂರ”ದಲ್ಲಿಯ ರಾಜಕೀಯ ನಾಟಕ, “ದಿವ್ಯ ಮೌನದ ಸಂತ”ನಲ್ಲಿ ಅಮಾಯಕನ ಕೊಲೆ, “ಋಣಮುಕ್ತ”ದಲ್ಲಿಯ ವ್ಯಕ್ತಿ ಅನ್ಯಾಯವಾಗಿ ನೋವು ಪಡುವ ದೃಶ್ಯಗಳು ಓದುಗನನ್ನು ಹಿಂಸಿಸುತ್ತವೆ.
ಮಲ್ಲಿಕಾರ್ಜುನ್ ಶೆಲ್ಲಿಕೇರಿಯವರ “ದೀಡೆಕರೆ ಜಮೀನು” ಕಥಾ ಸಂಕಲನದ ಕುರಿತು ಮಾಲಾ ಮ. ಅಕ್ಕಿಶೆಟ್ಟಿ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ