ಮಿಲ್ಟ್ರಿ ಟ್ರಂಕೊಳಗಿನ ಕಥೆಗಳು….
ಇಲ್ಲಿ ಅಧಿಕಾರ ಕೇಂದ್ರವಿರುವ ದಕ್ಷಿಣದ ಕರ್ನಾಟಕದ ಎದುರು, ಉತ್ತರ ಕರ್ನಾಟಕ ವಿಶಿಷ್ಟವಾದ ಭಾಷೆಯನ್ನಾಗಲಿ ಅನುಭವವನ್ನಾಗಲಿ ವೈಭವೀಕರಿಸುವುದಿಲ್ಲ, ಇಲ್ಲವೇ ಕೀಳೀಕರಿಸುವುದಿಲ್ಲ. ತನ್ನ ಪಾಲಿಗೆ ಕನ್ನಡ ನಾಡಿನ ಬದುಕೆಲ್ಲ ಒಂದೇ ಎಂಬ ಸಮದರ್ಶಿಯಾದ ದೃಷ್ಟಿಕೋನವು ಇಲ್ಲಿ ಕೆಲಸಮಾಡುತ್ತದೆ. ಹೀಗಾಗಿ ಇಲ್ಲಿನ ಸ್ಮೃತಿಚಿತ್ರಗಳು ರೋಚಕವಾದ ಅನುಭವವನ್ನು ಮಂಡಿಸಿ ಓದುಗರನ್ನು ರಂಜಿಸುವುದಕ್ಕೆ ಉತ್ಸುಕವಾಗುವುದಿಲ್ಲ. ಎಲ್ಲ ಭಾಗದ ಜೀವನದಲ್ಲಿರುವ ವಿಷಾದಕರ ದುರಂತಗಳನ್ನು ದಾಖಲಿಸುತ್ತವೆ. ಜನರ ಹಸಿವು ಬಡತನ ದುಡಿಮೆ ಹೋರಾಟ ಜೀವಂತಿಕೆಗಳನ್ನು ತಾಳ್ಮೆಯಿಂದ ಘನತೆಯಿಂದ ಕಾಣಿಸುತ್ತವೆ.
ಡಾ. ಲಕ್ಷ್ಮಣ ವಿ.ಎ. ಬರಹಗಳ ಸಂಕಲನ “ಮಿಲ್ಟ್ರಿ ಟ್ರಂಕು”ಕ್ಕೆ ರಹಮತ್ ತರೀಕೆರೆ ಬರೆದ ಮುನ್ನುಡಿ