Advertisement

Category: ದಿನದ ಪುಸ್ತಕ

ಸಿನಿಲೋಕದಲ್ಲಿ ವಿಹರಿಸುತ್ತಾ….

ಜಗತ್ತಿನಲ್ಲಿ ಮೂಡಿದ ಎಲ್ಲ ವಿಪ್ಲವಗಳಿಗೆ ಪ್ರತಿಸ್ಪಂದಿಸುತ್ತಾ ಬಂದ ಜಾಗತಿಕ ಸಿನಿಮಾ ಇಪ್ಪತ್ತೊಂದನೆಯ ಶತಮಾನದ ಬೆಳವಣಿಗೆಗೆ ಹೇಗೆ ಪ್ರತಿಕ್ರಿಯಿಸುತ್ತಿದೆ ಎನ್ನುವುದನ್ನು ಈ ನಲವತ್ತು ಸಿನಿಮಾಗಳು ದಾಖಲಿಸುತ್ತವೆ. ಹಾಗಾಗಿ ಈ ಲೇಖನಗಳು ಒಂದು ಸಾರ್ಥಕ ಪ್ರಯತ್ನ ಎಂದು ನನ್ನ ಅನಿಸಿಕೆ. ಹೀಗೆ ಹೇಳುತ್ತಲೇ ಕಳೆದೆರಡು ದಶಕಗಳಲ್ಲಿ ಜಾಗತಿಕ ಸಿನಿಮಾಗಳಲ್ಲಿ ಮೂಡಿಬಂದ ಹೊಸಾ ಶೈಲಿಯಾದ ʻಸ್ಲೋ ಸಿನಿಮಾ ಚಳುವಳಿʼಯ ಒಂದೆರಡು ಕೃತಿಗಳನ್ನು ಪರಿಚಯಿಸಿದ್ದರೆ ಸಾಂದರ್ಭಿಕವಾಗಿ ಇನ್ನಷ್ಟು ಉಪಯುಕ್ತತೆ ಬರುತ್ತಿತ್ತೇನೋ. ಹಾಲಿವುಡ್ ಉದ್ದಿಮೆಯ ಜನಪ್ರಿಯ ಸಿದ್ಧಸೂತ್ರಕ್ಕೆ ಪರ್ಯಾಯವಾಗಿ ಮೂಡಿಬಂದದ್ದೇ ʻಸ್ಲೋ ಸಿನಿಮಾ ಚಳುವಳಿʼ.
ಎ.ಎನ್. ಪ್ರಸನ್ನರವರ ಆಯ್ದ ಜಾಗತಿಕ ಸಿನಿಮಾಗಳ ಕುರಿತ ಲೇಖನಗಳ ಸಂಕಲನ “ಸಿನಿ ಲೋಕ 21”ಕ್ಕೆ ಗಿರೀಶ್‌ ಕಾಸರವಳ್ಳಿ ಬರೆದ ಮುನ್ನುಡಿ

Read More

ಅನೇಕಾನೇಕ ಹೊಳಹುಗಳು….

ಯಾರೂ ಇಲ್ಲದೇ ಇರುವ ಸ್ಥಳದಲ್ಲಿ ತನ್ನದೇ ಹೆಜ್ಜೆಯನ್ನು ಇನ್ಯಾರದೋ ಎಂದು ನೋಡುವುದು ಒಂಟಿತನ ಸ್ಥಿರವಲ್ಲ ಕಷ್ಟ ಎಂಬುದನ್ನು ಅರ್ಥೈಸುತ್ತದೆ. ವಿಶಾಲ ಬದುಕಿನಲ್ಲಿ ಆಸೆ ಇರಿಸಿಕೊಂಡವನು ಇರುವ ಚಾಕುವಿನಲ್ಲಿಯೇ ಬೇಟೆಯಾಡುವ ಅಭ್ಯಾಸ ಪ್ರಾರಂಭಿಸುತ್ತಾನೆ ಪ್ರಯೋಗಕ್ಕೂ ಅಭ್ಯಾಸಬಲವಿರಬೇಕು ಎಂಬುದು ಇಲ್ಲಿ ಸಾಬೀತಾಗುತ್ತದೆ. ಅಂತರಾಷ್ಟ್ರೀಯ ಗುಪ್ತಚರ ಬಳಗದವನು ನಾನು ಹಾಗೆ….! ನಾನು ಹೀಗೆ….!
ಕೆ.ವಿ. ತಿರುಮಲೇಶರ “ಅನೇಕ” ಕಾದಂಬರಿಯ ಕುರಿತು ಸುಮಾವೀಣಾ ಬರಹ

Read More

ಓದುಗರೊಟ್ಟಿಗೆ ಮಾತನಾಡುವ ಕಥೆಗಳು…

ಮುಗ್ಧ ಮಗು ಸಚ್ಚಿದಾನಂದನನ್ನು ಭವಿಷ್ಯದ ಪೀಠಾಧಿಪತಿಯನ್ನಾಗಿ ಮಾಡಬೇಕೆನ್ನುವ ತಂದೆ- ತಾಯಿಗಳ ಆಸೆ, ಅಧಿಕಾರ ಲಾಲಸೆ, ಆಶ್ರಮದಲ್ಲಿನ ಅನೈತಿಕ ಚಟುವಟಿಕೆಗಳನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸುವ ಪರಿ, ದೇವರ ಸನ್ನಿಧಾನ, ದೇವರ ಸೇವೆ ಮುಗ್ಧ ಮಗುವಿನ ಕಣ್ಣಲ್ಲಿ ಕಾಣುತ್ತವೆ. ಸಮಾಜವನ್ನು ತಿದ್ದುವ, ಆದರ್ಶ ವಟುಗಳನ್ನು ಬೆಳೆಸುವ ಸನ್ನಿಧಾನಗಳೇ ದುರ್ಮಾರ್ಗ ಹಿಡಿದಿರುವುದು ‘ದೇವರ ಮಗು’ ಕತೆಯಲ್ಲಿ ವ್ಯಕ್ತವಾಗಿದೆ. ‘ಮುಳ್ಳು’ ಕಥೆಯಲ್ಲಿ ಬಶೀರನ ಮನಸ್ಸಿನ ತೊಳಲಾಟವನ್ನು ಅತ್ಯಂತ ಮಾರ್ಮಿಕವಾಗಿ ಕಟ್ಟಿಕೊಟ್ಟಿದ್ದಾರೆ.
ದಯಾನಂದ ಅವರ ಕಥಾ ಸಂಕಲನ “ಬುದ್ಧನ ಕಿವಿ”ಯ ಕುರಿತು ಮಂಜಯ್ಯ ದೇವರಮನಿ ಬರಹ

Read More

ಗೋಕುಲದ ನಾಯಕರು ನಾವು….

ನಾನು ಒಂಟಿಯಾಗುತ್ತಿದ್ದಂತೆ ಮೊನ್ನೆಯ ಸಮುದ್ರ ತೀರದ ಹತ್ಯಾಕಾಂಡ ನೆನಪಾಯಿತು, ವಿಷಾದವಾಯಿತು. ಒಂದು ಕ್ಷಣ ಅರಮನೆಗೆ ಹೋಗಿಬಿಡಲೇ ಎನ್ನಿಸಿತು. ಅಲ್ಲಿ ಇನ್ನು ನನಗೇನು ಕೆಲಸ? ಎಂಬ ಪ್ರಶ್ನೆ ಮೂಡಿತು. ನಿನ್ನೆಯ ಹತ್ಯಾಕಾಂಡದ ಆರಂಭವನ್ನು ನೋಡಿದರೆ, ಬಹುಶಃ ಯಾದವ ಮುಖ್ಯರಲ್ಲಿ ಯಾರೂ ಬದುಕಿರಲಾರರು. ನಗರದಲ್ಲಿ, ಅರಮನೆಯಲ್ಲಿ ನನಗಿಂತ ಮುದುಕರಾದ ಕೆಲವರಿರಬಹುದು. ಈಗ ನಾನು ಮಾಡಬೇಕಾದ ಮಹತ್ವದ ಕರ‍್ಯ ಯಾವುದೂ ಇಲ್ಲ, ಸಾಧಿಸಬೇಕಾದ ಯಾವ ಆದರ್ಶವೂ ಇಲ್ಲ. ಅಂಥ ಶಕ್ತಿ, ಉತ್ಸಾಹಗಳೂ ದೇಹದಲ್ಲಿ ಉಳಿದಿಲ್ಲ.
ಸು. ರುದ್ರಮೂರ್ತಿ ಶಾಸ್ತ್ರಿ ಬರೆದ ಹೊಸ ಕಾದಂಬರಿ “ಶ್ರೀಕೃಷ್ಣ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಎಚ್.ಎಸ್. ಅನುಪಮಾ ಕಾದಂಬರಿಯಲ್ಲಿ “ಅಕ್ಕ”

ಅಕ್ಕಮಹಾದೇವಿಯದು ಅಭಾವ ವೈರಾಗ್ಯಅಲ್ಲ. ಅವಳದು ಸ್ವಭಾವ ವೈರಾಗ್ಯ ಎಲ್ಲ ಇದ್ದು ಅದರ ಕುರಿತು ಆಕರ್ಷಣೆ ಇಲ್ಲದಿರುವುದು ಅವಳ ವ್ಯಕ್ತಿತ್ವವೇ ವಿಶಿಷ್ಟ ಚೈತನ್ಯ ಉಳ್ಳದ್ದು. ಮಠದ ಗುರು ಲಿಂಗ ಶರಣರು ಅವಳಿಗೆ ಲಿಂಗ ದೀಕ್ಷೆ ನೀಡುತ್ತಾರೆ. ದಿಗಂಬರ ಸನ್ಯಾಸಿಗಳನ್ನು ನೋಡಿ ಎಲ್ಲವನ್ನು ಕಳಚಿ ಇರುವುದರ ಕುರಿತು ಯೋಚಿಸುತ್ತಾಳೆ. ಲಿಂಗ ಶರಣರು ಕಲ್ಯಾಣಕ್ಕೆ ಹೋಗಿ ಬಂದು ಬಸವಣ್ಣನ ಮಹಾಮನೆಯ ವಿಷಯ ಹೇಳುತ್ತಾರೆ. ಕಸಪಯ್ಯ ರಾಯ ಇವನ ಗುಡಿ ಕಟ್ಟಿಸುವಾಗ ಅವನ ಸತಿಗೂ ಗುಡಿ ಕಟ್ಟಲು ಹೇಳುತ್ತಾಳೆ.
ಡಾ. ಎಚ್.ಎಸ್. ಅನುಪಮಾ ಅವರ ಹೊಸ ಕಾದಂಬರಿ “ಬೆಳಗಿನೊಳಗು” ಕುರಿತು ಡಾ. ಎಲ್.ಸಿ. ಸುಮಿತ್ರಾ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ