Advertisement

Category: ದಿನದ ಪುಸ್ತಕ

ಮುಳುಗಡೆಯ ವಿದ್ಯಮಾನಗಳಿಗೆ ಹಿಡಿದ ಕೈಗನ್ನಡಿ: ಕೆ.ಆರ್.ಉಮಾದೇವಿ ಉರಾಳ ಬರಹ

ಪರಿಹಾರದ ಹಣ ಕೈಗೆ ಬರುತ್ತಲೇ ಕೆಲವರು ಕೃಷಿ ವಿಚಾರ ಕೈಬಿಟ್ಟು ಬಸ್ ಅಂಗಡಿ ಹೋಟೆಲ್ ತೆರೆದಿದ್ದು ಅಭ್ಯಾಸವಿಲ್ಲದ ಈ ಉದ್ಯಮಗಳಲ್ಲಿ ಕೈಸುಟ್ಟುಕೊಂಡಿದ್ದರು. ಬಡ್ಡಿ ಆಸೆಗೆ ಬಿದ್ದು ಇದ್ದ ಹಣವನ್ನೆಲ್ಲ ಕಳೆದುಕೊಂಡಿದ್ದರು. ಕೆಲವರು ಅಂದಾದುಂದಿ ವೆಚ್ಚಮಾಡಿ ಸಾಲಗಾರರಾಗಿ ಬರಿಗೈಯಾದರು. ಇಷ್ಟಾಗಿಯೂ ನಾಲ್ಕು ದಶಕಗಳ ನಂತರವೂ ಇನ್ನೂ ಪರಿಹಾರದ ಹಣ ಬರದಿರುವ ಪ್ರಸಂಗಗಳೆಷ್ಟೋ ಇವೆ ಎನ್ನುತ್ತಾರೆ ಲೇಖಕರು.
ಎಂ. ಎಂ. ಪ್ರಭಾಕರ ಕಾರಂತ್ ಬರೆದ “ಮುಳುಗಡೆ ಒಡಲಾಳ” ಕೃತಿಯ ಕುರಿತು ಕೆ.ಆರ್.ಉಮಾದೇವಿ ಉರಾಳ ಬರಹ ನಿಮ್ಮ ಓದಿಗೆ

Read More

ಆಧುನಿಕ ಮನೋಧರ್ಮದ ಭರತನ ಚರಿತ್ರೆ: ಚಂದ್ರಮತಿ ಸೋಂದಾ ಬರಹ

ಪಿತೃಪ್ರಧಾನ ವ್ಯವಸ್ಥೆಯ ದೌರ್ಬಲ್ಯಗಳನ್ನು ಸೂಕ್ಷ್ಮವಾಗಿ ಎತ್ತಿ ತೋರಿಸುತ್ತಲೇ ಅದಕ್ಕೆ ವಿಭಿನ್ನವಾದ ಇನ್ನೊಂದು ಮುಖವೂ ಸಾಧ್ಯವಿದೆ ಎನ್ನುವ ಪಿಸುನುಡಿಯೊಂದಿಗೆ ಹೊರಡುವ ಕೃತಿ ನಿಧಾನವಾಗಿ ಅದರ ಸಾಧ್ಯತೆಯನ್ನು ಅನಾವರಣಗೊಳಿಸುತ್ತ, ಸರಿಯಾದ ದಾರಿ ಹೀಗಿರಬೇಕು ಎನ್ನುವಂತೆ ಮುಂದುವರಿಯುತ್ತದೆ. ರಾಜಸತ್ತೆಯಲ್ಲಿ ಹಿರಿಮಗನಿಗೆ ಪಟ್ಟಗಟ್ಟಿದ ಮೇಲೆ ಉಳಿದ ಅಣ್ಣತಮ್ಮಂದಿರು, ಪರಿವಾರದವರು ರಾಜನನ್ನು ಅವಲಂಬಿಸಿಯೇ ಇರಬೇಕೆನ್ನುವ ತಥಾಗತ ನಂಬಿಕೆಯಲ್ಲಿ ಉಳಿದವರ ಮನಃಸ್ಥಿತಿ ಏನಿದ್ದೀತು? ಹೇಗಿದ್ದೀತು?
ಡಾ. ಆರ್ ಸುನಂದಮ್ಮ ಬರೆದ “ಭರತಕಲ್ಪ” ಕೃತಿಯ ಕುರಿತು ಡಾ. ಚಂದ್ರಮತಿ ಸೋಂದಾ ಬರಹ ನಿಮ್ಮ ಓದಿಗೆ

Read More

ಒಂದು ಆಕಾಶ, ಹಲವು ಏಣಿಗಳು: ಯೋಗೀಂದ್ರ ಮರವಂತೆ ಬರಹ

ವಿಮಾನಗಳ ಚರಿತ್ರೆಯನ್ನು ಬರೆದವರು ಬೇರೆಬೇರೆ ಕಾಲಘಟ್ಟದಿಂದ ಸ್ಥಳದಿಂದ ಘಟನೆಗಳಿಂದ ತಮ್ಮ ಅಧ್ಯಯನ, ಪುರಾವೆ ಹಾಗು ಅಂದಾಜುಗಳನ್ನು ವಿಶದೀಕರಿಸುವುದಿದೆ. ಆಕಾಶಕ್ಕೆ ನೆಗೆಯಬೇಕು ಎನ್ನುವ ಉತ್ಕಟ ಆಸೆ ಮನುಷ್ಯರಿಗೆ ಎಂದು ಬಂತೋ ಕರಾರುವಕ್ಕಾಗಿ ಹೇಳಿದವರಿಲ್ಲವಾದರೂ ಬಾನಿನಲ್ಲಿ ಸ್ವಚ್ಛಂದವಾಗಿ ಹಾರಿ ಇಳಿಯುವ ಹಕ್ಕಿಗಳನ್ನು ನೋಡಿ ನಮಗೂ ಹಾರುವ ಕನಸು ಹುಟ್ಟಿತು. ಮತ್ತೆ ಆ ನಿಟ್ಟಿನಲ್ಲಿ ಪ್ರಯತ್ನಗಳು ನಿರಂತರವಾಗಿ ಸಾಗಿದವು ಎನ್ನುವ ಉಲ್ಲೇಖಗಳು ಓದಿನಲ್ಲಿ ಸಿಗುತ್ತವೆ.
ಯೋಗೀಂದ್ರ ಮರವಂತೆ ಬರೆದ ವಿಮಾನ ಲೋಕದ ಅಚ್ಚರಿ, ಅನುಭವಗಳ ಕುರಿತ ಹೊಸ ಕೃತಿ “ಏರೋ ಪುರಾಣ”ದ ಒಂದು ಬರಹ ನಿಮ್ಮ ಓದಿಗೆ

Read More

ಮೊಟ್ಟೆಕೋಳಿಯೇ ಬೇಕೆಂದ ಅಳಿಯರು!: ಸೂರ್ಯಕೀರ್ತಿ ಪ್ರಬಂಧ

‘ಏನೇ ನಿಮ್ಮವ್ವ ಅಳಿಯಂದ್ರ ನೋಡೋ ಹುಟ್ಟೇನೆ ಇದು, ಇದೊಂದು ಬಾಳಾಟ ಅಂತ ನಾನು ಅಂದುಕೊಂಡಿರಲಿಲ್ಲ, ಅಕ್ಕಪಕ್ಕದವರೆಲ್ಲ ಎಷ್ಟು ಚೆಂದವಾಗಿ ಅಳಿಯರನ್ನು ಕರ್ದು ಕಳಿಸ್ತಾರೆ ಅನ್ನೋದ್ನ ನೋಡಿ ಕಲಿಬೇಕು’ ಎಂದೆಲ್ಲ ಅಂದಿದ್ದನ್ನು ನೋಡಿ. ಮೇಯಲು ಹೋದ ಕೋಳಿಗಳ ಬಿಡದೆ ಅಟ್ಟಾಡಿಸಿಕೊಂಡು ಹಿಡಿದು ಕೂಯ್ದು ತಿಂದು ತಮ್ಮ ಹೆಂಡತಿಯರ ಜೊತೆ ಹೊರಟು ನಿಂತರು. ಅಜ್ಜಿ ಮಕ್ಕಳ ಖುಷಿಯ ನೋಡಿ ತನ್ನೆರಡು ಕೈಗಳ ಎತ್ತಿ ಆಶೀರ್ವಾದದ ಜೊತೆ ಒಂದಿಷ್ಟು ಕಣ್ಣೀರು ಹಾಕಿದಳು. ಎಲ್ಲರಿಗೂ ತಿಂಡಿ ತಿನಸುಗಳ ಕಟ್ಟಿ ‘ಜೋಪಾನ’ ಎಂದು ಹೇಳಿದಳು.
ಇತ್ತೀಚೆಗೆ ಬಿಡುಗಡೆಯಾದ ಸೂರ್ಯಕೀರ್ತಿ ಅವರ ಪ್ರಬಂಧಗಳ ಸಂಕಲನ “ಮಳೆ”ಯ ಒಂದು ಪ್ರಬಂಧ ನಿಮ್ಮ ಓದಿಗೆ

Read More

ಲಂಡನ್‌ ಮತ್ತು ಟಿಪ್ಪೂ ಸುಲ್ತಾನ್: ಜೆ. ಬಾಲಕೃಷ್ಣ ಬರಹ

ಬ್ರಿಟಿಷರಿಗೆ ಆ `ವ್ಯಾಘ್ರಸ್ವಪ್ನ’ ಎಷ್ಟು ನಿದ್ರೆ ಕೆಡಿಸಿತ್ತೆಂದರೆ ಅವರು ಆ ಸಿಟ್ಟನ್ನು ಕಾಡಿನಲ್ಲಿನ ನಿಜವಾದ ಹುಲಿಗಳನ್ನು ಕೊಂದು ಅವುಗಳ ಮೇಲೆ ಕಾಲನ್ನಿಟ್ಟು ಫೋಟೊ ತೆಗೆಸಿಕೊಂಡು ಗರ್ವದಿಂದ ಬೀಗುತ್ತಿದ್ದರು. ಟಿಪ್ಪು ಹುಲಿಯೊಂದಿಗೆ ಸೆಣಸುತ್ತಿರುವ ಹಲವಾರು ಚಿತ್ರಗಳು ಟಿಪ್ಪೂನ ಕಾಲದ ನಂತರ ರಚಿತವಾಗಿವೆ. ಟಿಪ್ಪೂ ನಿಜವಾಗಿ ಹುಲಿಯೊಂದಿಗೆ ಸೆಣಸಿದ ದಾಖಲೆಗಳಿಲ್ಲವೆನ್ನುತ್ತಾರೆ ಚರಿತ್ರಕಾರರು. ಆದರೆ, ಟಿಪ್ಪೂನ ಕಾಲದ್ದೇ ಆದ ದಂತ ಕತೆಯೊಂದರಲ್ಲಿ ಹೈದರಾಲಿ ಟಿಪ್ಪೂನನ್ನು ಹೈದರಾಬಾದ್‌ಗೆ ಒಪ್ಪಂದವೊಂದರೆ ವಿಚಾರಕ್ಕೆ ಕಳುಹಿಸಿದ್ದಾಗ ಅಲ್ಲಿನ ಕಾಡೊಂದರಲ್ಲಿ ಹುಲಿಯೊಂದನ್ನು ಎದುರಿಸಿದ್ದನಂತೆ.
ಡಾ. ಜೆ. ಬಾಲಕೃಷ್ಣ ಅವರ ಹೊಸ ಕೃತಿ “ನಡೆದಷ್ಟು ದೂರ” ಪ್ರವಾಸ ಕಥನದ ಬರಹ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ