Advertisement

Category: ದಿನದ ಪುಸ್ತಕ

ಚಂದ್ರಶೇಖರ ಕಂಬಾರರ ಕಾವ್ಯಲೋಕ

ಜಗತ್ತಿನ ಬದಲಾಗಿ ಸಿಕ್ಕ ಭಾಷೆ-ಕಂಬಾರರ ಮಟ್ಟಿಗೆ ಹೇಳುವದಾದರೆ ಅವರಿಗೆ ದೊರೆತ ಜಾನಪದ ಕತೆ, ಕಾವ್ಯ, ಪುರಾಣಗಳು-ಅನೇಕ ಸಂಭಾವ್ಯತೆಗಳಿಂದ ಕೂಡಿರುತ್ತದೆ. ‘ಹೇಳತೇನ ಕೇಳ’ ಕವಿತೆಯ ಶಿವಾಪುರದಲ್ಲಿ ಹಳೆಯ ಗೌಡ ಗೌಡತಿಯರ ಆಳಿಕೆ ಮುಗಿಯುವಂತಾಗಿ ಹೊಸ ಜೀವನ ವ್ಯವಸ್ಥೆ ತಲೆಯೆತ್ತುತ್ತದೆ. ಹೊರಗಿನಿಂದ ಬಂದ ರಾಕ್ಷಸ ಗೌಡನನ್ನು ಕೊಂದು ತಾನೇ ಗೌಡನಾಗಿ ಊರಿನೊಳಗೆ ತಿರುಗಿ ಬರುತ್ತಾನೆ. ದೂರ ದೂರದವರೆಗೆ ಬೇರು ಬಿಳಲುಗಳನ್ನು ಚಾಚಿದ್ದ ಮರವನ್ನು ಕಡಿದು ಅದರ ಸ್ಥಳದಲ್ಲಿ ಹೊಸ ಶಾಲೆಯನ್ನು ಕಟ್ಟಿಸುತ್ತಾನೆ.
ಕೀರ್ತಿನಾಥ ಕುರ್ತಕೋಟಿಯವರು ಬರೆದಿದ್ದ “ಕಂಬಾರರ ಕಾವ್ಯ ಮತ್ತು ನಾಟಕಗಳು” ವಿಮರ್ಶಾ ಸಂಕಲನ ನಾಳೆ ಬಿಡುಗಡೆಯಾಗಲಿದ್ದು ಆ ಕೃತಿಯ ಒಂದು ಲೇಖನ ನಿಮ್ಮ ಓದಿಗೆ

Read More

ಮಕ್ಕಳಾಟವನ್ನು ಭಗವಂತ ಕೂಡ ಆಡಲಾರನು

ಬೆಕ್ಕಿನ ಮರಿ, ಗುಬ್ಬಿಯ ಧ್ವನಿ, ಮ್ಯಾಚಿಂಗ್ ರಿಬ್ಬನ್ ಎಂಬೆಲ್ಲಾ ಬಣ್ಣದ ಲೋಕದೊಂದಿಗೆ ಬದುಕಿನ ಸತ್ಯವನ್ನು ಪರಿಚಯಿಸುವ ಸರಳ ಕವಿತೆಗಳನ್ನು ಬರೆದಿರುವ ಕೆ.ವಿ. ತಿರುಮಲೇಶ್ ಅವರು ಮಕ್ಕಳ ಮನೋಲೋಕದೊಳಗೆ ಸದ್ದಿಲ್ಲದೆ ಹೆಜ್ಜೆಯಿರಿಸಿದ್ದಾರೆ.
“ಚಿಕ್ಕಣಿ ರಾಜ” ಎಂಬ ಬಣ್ಣದ ಚಿತ್ರಗಳಿರುವ ಸುಂದರ ಕವಿತಾ ಸಂಕಲನದ ಅನನ್ಯತೆಯ ಕುರಿತು ಸುಮವೀಣಾ ಅವರು ಬರೆದ ಟಿಪ್ಪಣಿ ಇಲ್ಲಿದೆ.

Read More

ಕನ್ನಡಿಯ ಮುಂದೆ ಆವರಣ ಕಳಚಿಕೊಳ್ಳುತ್ತ…..

ಸೈದ್ಧಾಂತಿಕ ಹಠಮಾರಿತನವು ಚೌಕಟ್ಟುಗಳನ್ನು ನಿರ್ಮಿಸುತ್ತದೆ. ಆ ಚೌಕಟ್ಟಿನಾಚೆ ಯೋಚಿಸುವ ಸಹನೆಯನ್ನೇ ಅದು ಕಳೆದುಕೊಳ್ಳುತ್ತದೆ. ತನ್ನ ಚೌಕಟ್ಟಿಗೆ ಒಗ್ಗದವರನ್ನು ಅದು ‘ಅನ್ಯ’ವಾಗಿಸುತ್ತ ಆ ‘ಅನ್ಯ’ವನ್ನು ದ್ವೇಷಿಸುತ್ತ ನಡೆಯುತ್ತದೆ. ಬಲಪಂಥ, ಎಡಪಂಥಗಳೆಂಬ ಚೌಕಟ್ಟುಗಳೂ ಹಾಗೆಯೇ ಕಾಣಿಸುತ್ತಿವೆ. ಅನೇಕರು ಬರಹಗಾರರನ್ನು ನಿರ್ದೇಶಿಸುವ ಪರಿ ಹೇಗಿದೆಯೆಂದರೆ, “ನೀವು ಆ ಚೌಕಟ್ಟಿನಲ್ಲಾದರೂ ಕುಳಿತುಕೊಳ್ಳಿ, ಈ ಚೌಕಟ್ಟಿನಲ್ಲಾದರೂ ಕುಳಿತುಕೊಳ್ಳಿ. ಸರಿಯಾಗಿ ನೀವದಕ್ಕೆ ಫಿಟ್ ಆಗದಿದ್ದರೆ ನಿಮ್ಮ ರೆಕ್ಕೆಗಳನ್ನು ಕತ್ತರಿಸಿಕೊಳ್ಳಿ. ಚೌಕಟ್ಟಿಗೆ ತಕ್ಕಂತೆ ಮುದುರಿಕೊಳ್ಳಿ. ಆದರೆ ಚೌಕಟ್ಟು ಮಾತ್ರ ಅಲುಗಾಡಬಾರದು!” ಮನುಷ್ಯರಿಗಿಂತ ಚೌಕಟ್ಟುಗಳೇ ಮುಖ್ಯವಾಗುವ ವಿಪರ್ಯಾಸವಿದು.
ಇಂದು ಬಿಡುಗಡೆಯಾಗಲಿರುವ ಡಾ. ಗೀತಾ ವಸಂತ ಅವರ “ಅವಳ ಅರಿವು” ಅಂಕಣ ಬರಹಗಳ ಸಂಕಲನದ ಒಂದು ಲೇಖನ ನಿಮ್ಮ ಓದಿಗೆ

Read More

ಇದು ಆಗುವುದೂ ಇಲ್ಲ, ಹೋಗುವುದೂ ಅಲ್ಲ…

ಹಾಗೆ ಆಡುವಾಗ ಅವನಲ್ಲಿ ಅಮ್ಮನಿಗೆ ತಾನು ಸುಳ್ಳು ಹೇಳುತ್ತಿದ್ದೇನೆ ಎಂಬ ಪಾಪಪ್ರಜ್ಞೆ ಇತ್ತು. ಅವನು ಆ ದಿನ ಮಧ್ಯಾಹ್ನ ಗೋವಿಂದಾಚಾರ್ಯರಲ್ಲಿ ಊಟ ಮುಗಿಸಿ ಒಂದರ್ಧ ಗಂಟೆ ಹರಟೆ ಹೊಡೆಯುತ್ತಾ ಕುಳಿತಾಗ ‘ಭಾವ, ನಾನು ಮಧ್ಯಾಹ್ನವೇ ಮನೆಗೆ ಊಟಕ್ಕೆ ಹೋಗಬೇಕಿತ್ತು. ಇನ್ನು ತಡಮಾಡಿದರೆ ಅಪ್ಪ ಅಮ್ಮನ ಮಾತು ಕೇಳುವುದು ಕಷ್ಟ’ ಎಂದು ಸುಮಾರು ಎರಡೂವರೆ ಗಂಟೆಯ ಸುಮಾರಿಗೇ ಗೋವಿಂದಾಚಾರ್ಯರ ಮನೆಯಿಂದ ಹೊರಟಿದ್ದ. ಹಾಗೆ ಹೊರಟವನು ನೇರವಾಗಿ ಮನೆಗೆ ಹೋಗದೆ ಮೇರಿಯ ಮನೆಗೆ ಹೋಗಿದ್ದ.
ಡಾ. ನಾ. ಮೊಗಸಾಲೆಯವರ “ಇದ್ದೂ ಇಲ್ಲದ್ದು” ಹೊಸ ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಮೋಹಕ ಚಿತ್ರಕ ಶಕ್ತಿಯ ʻಪರವಶʼದ ಕತೆಗಳು

ಕುಮಾರ ಬೇಂದ್ರೆ ಅವರ ಕತೆಗಳ ವಿಶೇಷತೆ ಎಂದರೆ ಬಹಳ ಸುಲಭವಾಗಿ ಓದಿಸಿಕೊಳ್ಳುವಂತಹ ಗುಣ. ಓದುಗನಿಗೆ ಸಂವಹನದ ದೃಷ್ಟಿಯಿಂದ ಹೆಚ್ಚು ಸರಾಗವಾಗಿ, ಹೆಚ್ಚು ತೊಂದರೆ ಕೊಡದೇ ಓದಿಸಿಕೊಳ್ಳುವ ಗುಣ ಅವರ ಎಲ್ಲ ಕತೆಗಳಲ್ಲೂ ಇದೆ. ಇದನ್ನು ಒಂದು ಗುಣ ಎಂದೇ ಹೇಳಲು ನಾನು ಬಯಸುತ್ತೇನೆ. ಯಾಕೆಂದರೆ ಸರಳತೆ ಎನ್ನುವಂಥದ್ದು ಸುಲಭವಲ್ಲ, ಅದನ್ನು ಎಟಕಿಸಿಕೊಳ್ಳುವುದೂ ಕೂಡ ಸುಲಭವಲ್ಲ. ಸರಳವಾಗಿ ಬರೆಯುವುದು ಮತ್ತು ಸರಳವಾಗಿ ಸಂವಹನ ಮಾಡುವುದು ಯಾವಾಗಲೂ ಒಂದು ಸವಾಲು.
ಕುಮಾರ ಬೇಂದ್ರೆಯವರ “ಪರವಶ” ಕಥಾಸಂಕಲನದ ಕುರಿತು ರಘುನಾಥ ಚ.ಹ. ಅವರ ಮಾತುಗಳು

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ