ಚಲಂ ಆತ್ಮಕತೆಯ ಒಂದಿಷ್ಟು ಪುಟಗಳು
ಬಂದಾಗಿನಿಂದ ಸತ್ಯವತಿ, ರತ್ನಮ್ಮ ನನ್ನನ್ನು ಹಿಡಿದುಕೊಂಡು ನೇತಾಡುತ್ತಿದ್ದಾರೆ. ಮದ್ರಾಸ್ನಲ್ಲಿರುವ ವೊಯ್ಯಿಯನ್ನು ನೆನಪಿಸಿಕೊಂಡ ಮಾತ್ರಕ್ಕೆ ನನ್ನ ಮನಸು ಪರವಶ ವಾಗುತ್ತಿತ್ತು. ನಾನು ದೈವವನ್ನು ಕಾಂಕ್ಷೆ ಮಾಡಿದಷ್ಟೂ ಕಾಲ, ಎಲ್ಲದಕ್ಕಿಂತ ಆತನೇ ವಾಂಚನಿಯ ನನಗೆ ಆತನೇ ಶರಣ್ಯ. ಆ ಈಶ್ವರನ ಕುರಿತು ಯಾವಾಗ ಅನುಮಾನಗಳು ಮೂಡಿದವೊ, ಅಂದಿನಿಂದ ಸ್ತ್ರೀಯೇ ನನ್ನ ದೈವವಾಯಿತು. ಆಕೆಯಲ್ಲಿಯೆ ನನ್ನ ಜೀವನಕ್ಕೆ ಸಾಫಲ್ಯ. ಅದಕ್ಕಿಂತ ಈ ಲೋಕದಲ್ಲಿ ಬಯಸುವಂತಹದು ಏನೂ ಇಲ್ಲ. ಇದಕ್ಕಿಂತ ಯಾವುದೂ ತೃಪ್ತಿ ಕೊಡುವುದಿಲ್ಲ.
ತೆಲುಗು ಬರಹಗಾರ “ಚಲಂ” ಅವರ ಆತ್ಮಕತೆಯನ್ನು ಕನ್ನಡದ ಕವಿ ಲಕ್ಕೂರು ಆನಂದ್ ಕನ್ನಡಕ್ಕೆ ತಂದಿದ್ದು ಅದರ ಕೆಲವು ಪುಟಗಳು ನಿಮ್ಮ ಓದಿಗೆ ಇಲ್ಲಿವೆ.