Advertisement

Category: ಪ್ರವಾಸ

ಕಾವಿಧಾರಿಗಳೊಂದಿಗೆ ಕಳೆದ ಕಾಲದ ಮೆಲುಕುಗಳು…

ಜಿಪ್ಸಿಯಂತಿದ್ದ ಆತ ಎಲ್ಲರೊಡನೆ ಚಕ್ಕಲ್ಮಟ್ಟ್ಕೆ ಹಾಕಿಕೊಂಡು ಊಟ ಮಾಡುತ್ತಿದ್ದರು. ನನ್ನ ಕ್ಯಾಮೆರ ಲೆನ್ಸ್ ಆತನನ್ನು ನೋಡುತ್ತಿದ್ದದ್ದು ಗಮನಕ್ಕೆ ಬಂದೊಡನೆ ಒಂದು ನಗು ಒಂದು ಜ್ಞಾನ ಮುದ್ರೆಯನ್ನು ನನ್ನೆಡೆಗೆ ಬಿಸ್ಹಾಕಿದರು. ಈ ಮೇಳದ ಜಾಗದಲ್ಲಿ ಸ್ವಲ್ಪ ಹಳೇ ಹುಲಿಯಂತೆಯೇ ಕಂಡರವರು. ಕ್ಯಾಮೆರ ಮತ್ತು ಮೀಡಿಯಾವನ್ನು ಆಕರ್ಷಿಸಲು ಬೇಕಾದ ಹಾವಭಾವ ಅವರಲ್ಲಿತ್ತು ಅನ್ನಿಸಿತು.. ಮಾತು ಬೆಳೀತಾ ಬೆಳೀತಾ ಗೊತ್ತಾಯ್ತು ಆತ ಅಮೆರಿಕೆಯ ಅಲೆಮಾರಿ ಅಂತ. ಹಾಡು ನಟನೆ ಪ್ಯಾಷನ್. ಅದರಲ್ಲೇ ಜೀವನ ಕಂಡುಕೊಳ್ಳಲು ಸಾಕಷ್ಟು ಪರಿಶ್ರಮ ಹಾಕಿದರೂ ಉಹುಂ, ಯಶಸ್ಸು ಒಲ್ಲೆ ಅಂತ ಹಠ ಹಿಡಿದಿತ್ತು. ಅಂಜಲಿ ರಾಮಣ್ಣ ಬರಹ

Read More

ಬಯೊಲುಮಿನಿಸೆನ್ಸ್ ಎಂಬ ಬೆಳಕಿನ ಮಾಯಾಲೋಕ

ಅಷ್ಟಷ್ಟೇ ವೇಗವನ್ನು ಹೆಚ್ಚಿಸಿಕೊಳ್ಳುತ್ತಾ, ಜಾರುವ ಸೂರ್ಯನೊಂದಿಗೆ ಪೈಪೋಟಿ ನಡೆಸುತ್ತ ನಮ್ಮ ದೋಣಿ ಕರಿಬಿಯನ್ ನೀಲ ಕಡಲನ್ನು ಸೀಳಿಕೊಂಡು ಸುತ್ತಲ ಅಂದವನ್ನೆಲ್ಲ ಉಣಿಸುತ್ತ ಸಾಗುತ್ತಿತ್ತು. ಅಂಚಲ್ಲಿ ಕಾಣುವ ಮನೆ, ತೋಟಗಳ ಇತಿಹಾಸ ಇತ್ಯಾದಿ ವಿವರಣೆ ನೀಡುತ್ತಾ ನಮ್ಮ ಗೈಡ್ ಅಲ್ಲದೆ ಚಾಲಕನೂ ಆದ ಮ್ಯಾಟ್ ಹರಟುತ್ತಿದ್ದ. ಪೋರ್ತೋರಿಕನ್ ಮೂಲದವನೇ ಆದ ಮ್ಯಾಟ್ ನಡುವೆ ಒಂದಷ್ಟು ವರುಷ ಫ್ಲರಿಡಾದಲ್ಲಿದ್ದು, ನೆಲದ ಕರೆಯ ಸೆಳೆತಕ್ಕೆ ಹಿಂತಿರುಗಿ ಬಂದು ಇಲ್ಲಿಯೇ ನೆಲೆಯೂರಿದ್ದ.
ʻಜಗದ ಜಗಲಿಯಲಿ ನಿಂತುʼ ಪ್ರವಾಸ ಬರಹಗಳ ಸಾಲಿನಲ್ಲಿ ಲಾ ಪ್ಯಾರ್ಗೇರದ ಬಯೊಲುಮಿನಿಸೆನ್ಸ್ ಮಾಯಾಲೋಕದ ಕುರಿತು ಬರೆದಿದ್ದಾರೆ ವೈಶಾಲಿ ಹೆಗಡೆ

Read More

ಮಾರ್ಕೋನಿ ಬೀಚ್: ತೆರೆಯ ಮೇಲಣ ತರಂಗಾಂತರಂಗ

ಸಾಮಾನ್ಯ ಜನರು ಮಾರ್ಕೋನಿ ರಿಸೀವರ್‌ಗಳನ್ನು ಕೊಂಡು ಬೇರೆ ಬೇರೆ ತರಂಗಗಳನ್ನು ಕೈಯಲ್ಲಿ ಕಟ್ಟಿ ಹಾಕಿ ಆಲಿಸುವ ತಂತ್ರಜ್ಞಾನ ಹುಟ್ಟಿದ್ದು ಇಲ್ಲೇ, ಈ ವೆಲ್ಫ್ಲೀಟ್ ಎಂಬ ಚಿಕ್ಕ ಊರಿನಲ್ಲಿ. ರೇಡಿಯೋ ತರಂಗಗಳು ಹುಟ್ಟುಹಾಕಿದ ಕ್ರಾಂತಿ ಅದೆಷ್ಟು ಬೇಗ ಹಬ್ಬಿತೆಂದರೆ ಎಲ್ಲ ಹಡಗುಗಳಲ್ಲೂ ಮಾರ್ಕೋನಿ ಉಪಕರಣವಿತ್ತು. ಸುಪ್ರಸಿದ್ಧ ಟೈಟಾನಿಕ್ ಹಡಗು ಕೂಡ ಮುಳುಗುವ ಮೊದಲು ಮಾರ್ಕೊನಿ ಉಪಕರಣದ ಮೂಲಕ “SOS” ಸಂದೇಶ ಕಳಿಸಿತ್ತು.
ವೈಶಾಲಿ ಹೆಗಡೆ ಬರೆಯುವ ಪ್ರವಾಸ ಲೇಖನ ಮಾಲೆ

Read More

ನೆದರ್ಲ್ಯಾಂಡ್ಸ್ ನೆನಪು: ಕಂದಪುಷ್ಪದ ಕಥೆ

ಟುಲಿಪ್ ಹೂವು ಒಂದು ಪದರದ ಹೂವು. ಮೊಗ್ಗಾಗಿದ್ದಾಗ ಅಷ್ಟು ವಿಶೇಷವಾಗಿ ಕಾಣುವುದಿಲ್ಲ. ಪೂರ್ಣ ಅರಳಿ, ದಳಗಳು ತೆರೆದರೂ ಅಷ್ಟು ವಿಶೇಷ ಅನ್ನಿಸುವುದಿಲ್ಲ. ಅರಳುವ ಹಂತಗಳಲ್ಲಿ ಬಹಳ ಸುಂದರವಾಗಿ ಕಾಣುವುದು ಇವೆರಡರ ಮಧ್ಯದ “ಬಲ್ಬ್” ಹಂತ. ಟುಲಿಪ್ ಬಲ್ಬ್ ಗಳ ಅವಧಿ ಎರಡರಿಂದ ಮೂರೂ ವಾರಗಳು ಅಷ್ಟೇ. ಸಂಪೂರ್ಣ ಅರಳುವ ಪ್ರಕ್ರಿಯೆ ಆಯಾ ವರ್ಷದ ಚೈತ್ರ ಕಾಲದ ಹವಾಮಾನಕ್ಕೆ ತಕ್ಕಂತೆ ಒಂದೆರೆಡು ವಾರ ಅತ್ತಿಂದಿತ್ತ ಬದಲಾಗುತ್ತಿರುತ್ತದೆ.
“ದೂರದ ಹಸಿರು” ಸರಣಿಯಲ್ಲಿ ಗುರುದತ್ ಅಮೃತಾಪುರ ಬರಹ

Read More

ದಂಡಕಾರಣ್ಯದ ಆದಿವಾಸಿಗಳ ದೇವ-ದೇವಿಯರು

ಶಿವ ಶಕ್ತಿಯ ಸಂಗಮವು ನಾನಾರೀತಿಯಲ್ಲಿ ನಮ್ಮ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿದೆ ಮತ್ತು ವಿಸ್ಮಯವೆನಿಸುವ ರೀತಿಗಳಲ್ಲಿ ಅದು ಅಭಿವ್ಯಕ್ತಿ ಹೊಂದಿದೆ. ಬುಡಕಟ್ಟಿನವರ ದೇವಲೋಕವೂ ಇದಕ್ಕೆ ಹೊರತಾಗಿಲ್ಲ. ನದಿಯ ನಡುವೆ ಒಂದು ಕಲ್ಲಿದೆ. ಅಲ್ಲಿ ತ್ರಿಶೂಲದ ಹಾಗೂ ಒಂದು ಪಾದದ ಗುರುತಿದೆ. ದಂತೇಶ್ವರಿ ಮತ್ತು ಭೈರವರು ಕಣ್ಣಾಮುಚ್ಚಾಲೆ ಆಟ ಆಡುತ್ತಿದ್ದಾಗ ದೇವಿಯು ಶಿವ ಮೋಸ ಮಾಡಿದ ಎಂದು ಕೋಪದಿಂದ ಅವನ ಮೇಲೆ ಎಸೆದ ತ್ರಿಶೂಲ ಅಲ್ಲಿ ಸಿಕ್ಕಿಕೊಂಡಿದೆ ಎನ್ನುವುದು ನಂಬಿಕೆ. ಅದಕ್ಕೇ ತಪ್ಪಿಸಿಕೊಂಡು ಹೋದ ಭೈರವನ ದೇವಾಲಯ ನದಿಯ ಆಚೆ ದಡದಲ್ಲಿದೆ.
ಗಿರಿಜಾ ರೈಕ್ವ ಬರೆಯುವ ಅಂಕಣ ‘ದೇವಸನ್ನಿಧಿ’

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ