Advertisement

Category: ಸಂಪಿಗೆ ಸ್ಪೆಷಲ್

ನೂರಡಿ ರಸ್ತೆಯ ಸಾಹಸಗಳು

ಇಬ್ಬರು ಗೆಳೆಯರು ಸುಂದರೇಶ್ ಮುಂದೆ ಶ್ರೀರಾಂ ಹಿಂದೆ ರಸ್ತೆ ದಾಟುತ್ತಿರಬೇಕಾದರೆ ನಡುವಯಸ್ಸಿನ ಹೆಂಗಸೊಬ್ಬಳು ಬಂದು ಲಪ್ಪೆಂದು ಬಿಗಿಯಾಗಿ ಸುಂದರೇಶ್ ಕೈ ಹಿಡಿದಳು. ಇಬ್ಬರು ಗೆಳೆಯರು ಅನಿರೀಕ್ಷಿತ ನಡವಳಿಕೆಯಿಂದ ತತ್ತರಿಸಿದರು. ಆಗ ಶ್ರೀರಾಂ ಅಕ್ಷರಶಃ ಅವಳ ಕೈ ಕಿತ್ತು ಹಾಕಿ ನೋಡಿದರೆ ಸುಂದರೇಶ್ ಮುಖವೆಲ್ಲ ಕೆಂಪೇರಿ ಬೆವರುತ್ತಿದ್ದರಂತೆ. ಅಲ್ಲದೆ ಸರ ಸರನೆ ರಸ್ತೆ ದಾಟುತ್ತಿದ್ದಾರೆ ! ಇದಕ್ಕೂ ಮೀರಿ “ನನ್ನ ಮರೆತು ಬಿಟ್ರಾ ಅಣ್ಣಾ” ಎಂದು ಬೊಬ್ಬಿಡುತ್ತಾ ಓಡೋಡಿ ಬಂದು ಅವಳು ಸಮೀಪಿಸುತ್ತಿದ್ದಾಳೆ. ಇದೇನೋ ವಿಚಿತ್ರ ಪ್ರಸಂಗವಿರಬೇಕೆಂದು ಅರಿತ ಶ್ರೀರಾಂ ಶೀಘ್ರ ಕಾರ್ಯೋನ್ಮುಖರಾದರು.
ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರಹ.

Read More

‘ತವರಿಗೂ ಒಂದು ತವರು ಹಿಂಬಾಗಿಲು’

ಆಧುನಿಕ ಮನೆಗಳಲ್ಲಿ ಹಿಂಬಾಗಿಲಿಗೆ ಜಾಗವೇ ಇರುವುದಿಲ್ಲ. ಒಂದುವೇಳೆ ಹಿಂಬಾಗಿಲು ಇದ್ದರೂ, ಅದರ ವಿನ್ಯಾಸದಲ್ಲಿ ಎಷ್ಟೊಂದು ಒಪ್ಪ ಓರಣ ಇರುತ್ತದೆ. ಕಾಲ ಬದಲಾದಂತೆ ಹಿಂಬಾಗಿಲ ಅವಶ್ಯಕತೆಯೂ ಇಲ್ಲವಾಗಿದೆ. ಆದರೆ ಹಿಂದಿನ ಕಾಲದ ಮನೆಗಳಲ್ಲಿ ಒಪ್ಪ ಓರಣಕ್ಕೆ ಆದ್ಯತೆಯಿಲ್ಲದ ಹಿಂಬಾಗಿಲುಗಳ ಬಳಿಯೇ ಹೃದಯ ಬಿಚ್ಚಿ ಮಾತನಾಡುವ ‘ತಾವು’ ಇರುತ್ತಿತ್ತು. ಹಿಂಬಾಗಿಲುಗಳ ಈ ಲೋಕವು…

Read More

ತೇಜಸ್ವಿ ನೆನಪು ಮಧುರ 

ಪ್ರೆಸ್ಸು ಮ್ಯಾಗಝಿನೂ ಗಗನಕುಸುಮದಂತೆ ಬಲುದೂರದಲ್ಲಿ ಮಿನುಗಿ ಹೋಗಿದ್ದು ಇವರ ಪ್ರಜ್ಞೆಯ ಪರಧಿಯ ಮೇಲೆ ದಾಖಲಾದ ಅನುಭವ ಇವರನ್ನು ಕಂಗೆಡಿಸಿತ್ತು. ಡಿಗ್ರಿ ಮುಗಿಸಿ ಹತ್ತಿರತ್ತಿರ ನಾಲ್ಕು ವರ್ಷಗಳಾದರೂ ಹೊಟ್ಟೆಪಾಡಿಗಾಗಿ ದುಡಿಮೆ ಮಾಡಲಿಲ್ಲವೆಂದು ಕೊರಗುತ್ತಿದ್ದರು. ಕುಂಟನೋ, ಕುರುಡನೋ, ಹೆಳವನೋ ಆಗಿರುವವನಂತೆ ಇನ್ನೊಬ್ಬರಿಗೆ ಭಾರವಾಗಿ ಕುಳಿತಿರುವೆನಲ್ಲ ಎಂದು ಬೇಜಾರು ಮಾಡಿಕೊಳ್ಳುತ್ತಿದ್ದರು. ‘ನಿರುದ್ಯೋಗದ ಮುದ್ದೆಯಾಗಿ ಹೋಗಿದ್ದೇನೆ. ತೋಟ ಮಾಡಿಯೇ ತೀರುವೆ’ ಎಂದು ನಿರ್ಧರಿಸಿದರು.’ಮೂಡಿಗೆರೆ ಹ್ಯಾಂಡ್ ಪೋಸ್ಟ್’ ನಲ್ಲಿ ರಾಜೇಶ್ವರಿ ತೇಜಸ್ವಿ ಬರಹ.

Read More

ರಾಜೇಶ್ವರಿ ತೇಜಸ್ವಿ ಎಂಬ ‘ಧೀ ಶಕ್ತಿ’ಯ ನೆನಪಿನಲ್ಲಿ..

‘ನನ್ನ ತೇಜಸ್ವಿ’ ಪುಸ್ತಕದಲ್ಲಿ ತೇಜಸ್ವಿ-ರಾಜೇಶ್ವರಿಯರ ನಡುವಿನ ಪ್ರೇಮನಿವೇದನೆಯ ಸನ್ನಿವೇಶ ಸುಂದರವಾಗಿ ಮೂಡಿಬಂದಿದೆ. ಸಿನೆಮಾದ ಸನ್ನಿವೇಶ ಎಂಬಂತೆ ಮೇಲ್ನೋಟಕ್ಕೆ ಕಾಣಬಂದರೂ, ಸಂವೇದನಾಶೀಲ ಓದುಗರಿಗೆ ಇದರಲ್ಲಿ ಕಂಡುಬರುವುದು ಆಕೆಯ ಸ್ಥೈರ್ಯ! ಸಾಂಪ್ರದಾಯಿಕವಾಗಿ ಪುರುಷನೇ ಪ್ರೇಮನಿವೇದನೆ ಮಾಡಿಕೊಳ್ಳುವುದನ್ನು ಹೆಚ್ಚಾಗಿ ಕಾಣುತ್ತೇವೆ. ಆದರೆ ಆ ಕಾಲದಲ್ಲಿಯೇ ರಾಜೇಶ್ವರಿ ಅವರು ದಿಟ್ಟತನದಿಂದ, ತಮ್ಮ ಪ್ರೇಮನಿವೇದನೆ ಮಾಡಿಕೊಂಡಿದ್ದರು. 

Read More

ಆನೆಗಳಿಗೆ ತೇಜಸ್ವಿ ತೋಟಾನೇ ಯಾಕೆ ಬೇಕಾಯ್ತು? 

ಕಾಫಿ ಬೆಳೆಗಾರರು ತೋಟಗಳನ್ನು ವಿಸ್ತರಿಸುವುದಲ್ಲದೆ ಹೊರರಾಜ್ಯಗಳಿಂದ ಉದ್ಯೋಗಗಳನ್ನರಸಿ ಬರುವವರು- ಇದ್ದಿಲು ಸುಡಲು, ನಾಟ ಕೊಯ್ಯಲು, ಬಿದಿರು ಕಡಿದು ಲೋಡು ಮಾಡಲು ಬಂದವರೆಲ್ಲಾ ಕಾಡೊಳಗೆ ಹೂಡಿದ ತಮ್ಮ ತಾತ್ಕಾಲಿಕ, ಬಿಡಾರಗಳನ್ನೇ ಶಾಶ್ವತ ಮಾಡಿಕೊಂಡು ರಾಜಕೀಯ ಪಕ್ಷಗಳ ಆಶ್ರಯದಲ್ಲಿ ಓಟಿನ ಬಲದಿಂದ ಕುಳಿತು ಬಿಡುತ್ತಾರೆ. ಓಟಿನ ಬಲವಿಲ್ಲದ ಮರಗಳು ಕೇವಲ ನಾಟಾಗಳಾಗಿ ನೆಲಕ್ಕುರುಳುತ್ತವೆ. ಕಾಡಿನ ಪ್ರಾಣಿ ಸಮುದಾಯಗಳಿಗಂತೂ ಬದುಕುವುದೇ ಸವಾಲಾಗಿದೆ. ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರಹ 

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ