ಜೈಲು ಮತ್ತು ಮಳೆ: ಕೆ. ಸತ್ಯನಾರಾಯಣ ಸರಣಿ
ದೂರದೃಷ್ಟಿಯುಳ್ಳ ಆಡಳಿತಗಾರರ ಲೆಕ್ಕಾಚಾರವನ್ನೂ ಮೀರಿ ಅಪರಾಧಿಗಳು, ಪಾಪಿಗಳ ಸಂಖ್ಯೆ ಮಿತಿಮೀರಿ ಹೆಚ್ಚುತ್ತಲೇ ಇತ್ತು. ನಗರವು ಬೆಳೆದಂತೆ, ಎಲ್ಲ ವರ್ಗದ ಜನರು, ತಂತ್ರಜ್ಞರು, ಪೋಲೀಸರು ಕೂಡ ಹೆಚ್ಚಾಗುತ್ತಾರೆ ಎಂಬುದು ನಿಜವಾದರೂ, ಅಪರಾಧಿಗಳ ಸಂಖ್ಯೆಯ ಬೆಳವಣಿಗೆಯ ದರ ಎಲ್ಲ ಅನುಪಾತಗಳನ್ನೂ ಮೀರಿತ್ತು. ಪೋಲೀಸರ ದಕ್ಷತೆ, ನಾಗರಿಕರ ಸಮಾಜಪ್ರಜ್ಞೆಯಿಂದಾಗಿ ಎಲ್ಲ ಠಾಣೆಗಳಲ್ಲೂ ಹೆಚ್ಚು ಹೆಚ್ಚು ದೂರುಗಳು ಬರುತ್ತಿದ್ದವು, ದಾಖಲಾಗುತ್ತಿದ್ದವು. ಕಳ್ಳರು, ಕೊಲೆಗಡುಕರು ಕೂಡ ಬೇಗ ಬೇಗ ಸಿಕ್ಕಿಹಾಕಿಕೊಳ್ಳುತ್ತಿದ್ದರು.
ಕೆ. ಸತ್ಯನಾರಾಯಣ ಬರೆಯುವ “ಜೈಲು ಕತೆಗಳು” ಸರಣಿಯ ಐದನೆಯ ಬರಹ ನಿಮ್ಮ ಓದಿಗೆ