Advertisement

Category: ಸರಣಿ

ನೆನಪುಗಳ ಬುತ್ತಿ “ನನ್ನ ಮನೆ”: ಮಾರುತಿ ಗೋಪಿಕುಂಟೆ ಸರಣಿ

ಮನೆ ನೆನೆದರೆ ಸಾಕು ಬಾಲ್ಯದ ಸಿಹಿ ಕಹಿ ಘಟನೆಗಳೆಲ್ಲ ನಮ್ಮ ಕಣ್ಣ ಮುಂದೆ ಹಾದುಹೋಗುತ್ತವೆ. ನಮ್ಮದು ಹಳೆಯ ಕಾಲದ ನಮ್ಮ ತಾತ ಕಟ್ಟಿಸಿದ ಜಂತಿಮನೆ ಮೊದಮೊದಲು ಅದು ಸಗಣಿಯಿಂದ ಶೃಂಗಾರವಾಗುತ್ತಿದ್ದದ್ದು ಕ್ರಮೇಣ ಅದಕ್ಕೆ ಗಾರೆ ಹಾಕಲಾಯಿತು. ಮರಳು ಮತ್ತು ಸುಣ್ಣವನ್ನು ಒಟ್ಟಿಗೆ ಅರೆದು ಕಲಸಿ ಅದನ್ನು ಹಾಸುನೆಲಕ್ಕೆ ನುಣುಪಾದ ಕಲ್ಲಿನಿಂದ ಉಜ್ಜಿ ಉಜ್ಜಿ ನೆಲಕ್ಕೆ ಅಂಟುವಂತೆ ಮಾಡುತ್ತಿದ್ದರು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಮಾಗಿ ಮಾವ ಬಂದ ಮಂಜು ಗಿಂಜು ತಂದ: ಚಂದ್ರಮತಿ ಸೋಂದಾ ಸರಣಿ

ಉಳಿದ ದಿನಗಳಲ್ಲಿ ಸ್ನಾನಮಾಡಲು ಹಿಂದೇಟು ಹಾಕುತ್ತಿದ್ದ ನಾವು ಚಳಿಗಾಲದಲ್ಲಿ ಮಾತ್ರ ಸ್ನಾನ ಮಾಡಲು ನಾಮುಂದು ತಾಮುಂದು ಎಂದು ಓಡುತ್ತಿದ್ದೆವು. ಮೈ ಮೇಲೆ ಬಿಸಿನೀರು ಸುರಿದುಕೊಳ್ಳುವುದು ಬಹಳ ಆಪ್ಯಾಯಮಾನ ಎನಿಸುತ್ತಿತ್ತು. ʻಅದೆಷ್ಟು ಹೊತ್ತು? ನಿಂದೊಳ್ಳೆ ಊರ್ಮಿಳೆ ಸ್ನಾನ ಆಯ್ತುʼ ಅಂಥ ಅಮ್ಮನಿಂದ ಮಂತ್ರಾಕ್ಷತೆ ಸಿಗುವುದೂ ಇತ್ತು. ಚಿಕ್ಕವರಿರುವಾಗ ಇದರ ಅರ್ಥ ಗೊತ್ತಿರಲಿಲ್ಲ, ಆಮೇಲೆ ತಿಳಿಯಿತು. ರಾಮಲಕ್ಷ್ಮಣರು ಸೀತೆಯೊಂದಿಗೆ ವನವಾಸಕ್ಕೆ ಹೋಗುವಾಗ ಊರ್ಮಿಳೆ ಸ್ನಾನ ಮಾಡುತ್ತಿದ್ದಳಂತೆ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಹನ್ನೆರಡನೆಯ ಕಂತು

Read More

ಜೈಲು ಮತ್ತು ಮಳೆ: ಕೆ. ಸತ್ಯನಾರಾಯಣ ಸರಣಿ

ದೂರದೃಷ್ಟಿಯುಳ್ಳ ಆಡಳಿತಗಾರರ ಲೆಕ್ಕಾಚಾರವನ್ನೂ ಮೀರಿ ಅಪರಾಧಿಗಳು, ಪಾಪಿಗಳ ಸಂಖ್ಯೆ ಮಿತಿಮೀರಿ ಹೆಚ್ಚುತ್ತಲೇ ಇತ್ತು. ನಗರವು ಬೆಳೆದಂತೆ, ಎಲ್ಲ ವರ್ಗದ ಜನರು, ತಂತ್ರಜ್ಞರು, ಪೋಲೀಸರು ಕೂಡ ಹೆಚ್ಚಾಗುತ್ತಾರೆ ಎಂಬುದು ನಿಜವಾದರೂ, ಅಪರಾಧಿಗಳ ಸಂಖ್ಯೆಯ ಬೆಳವಣಿಗೆಯ ದರ ಎಲ್ಲ ಅನುಪಾತಗಳನ್ನೂ ಮೀರಿತ್ತು. ಪೋಲೀಸರ ದಕ್ಷತೆ, ನಾಗರಿಕರ ಸಮಾಜಪ್ರಜ್ಞೆಯಿಂದಾಗಿ ಎಲ್ಲ ಠಾಣೆಗಳಲ್ಲೂ ಹೆಚ್ಚು ಹೆಚ್ಚು ದೂರುಗಳು ಬರುತ್ತಿದ್ದವು, ದಾಖಲಾಗುತ್ತಿದ್ದವು. ಕಳ್ಳರು, ಕೊಲೆಗಡುಕರು ಕೂಡ ಬೇಗ ಬೇಗ ಸಿಕ್ಕಿಹಾಕಿಕೊಳ್ಳುತ್ತಿದ್ದರು.
ಕೆ. ಸತ್ಯನಾರಾಯಣ ಬರೆಯುವ “ಜೈಲು ಕತೆಗಳು” ಸರಣಿಯ ಐದನೆಯ ಬರಹ ನಿಮ್ಮ ಓದಿಗೆ

Read More

ಅಡಕತ್ತರಿಯಲ್ಲಿ ನಿಂತು…: ಗುರುಪ್ರಸಾದ ಕುರ್ತಕೋಟಿ ಸರಣಿ

ಬಂದು ಆಗಲೇ ಮೂರು ದಿನಗಳಾಗಿತ್ತು. ನಾನು ತಾಳ್ಮೆ ಕಳೆದುಕೊಳ್ಳತೊಡಗಿದೆ. ಇನ್ನೂ ಎಲ್ಲಿ ಕೆಲಸಕ್ಕೆ ಹೋಗಬೇಕು ಅಂತ ನನ್ನ ದಾಸ್ ಬಾಸ್ ಯಾಕೆ ಹೇಳುತ್ತಿಲ್ಲ ಅಂತ ದಿಗಿಲು ಉಂಟಾಯಿತು. ಫೋನಾಯಿಸಿ ಕೇಳಿದೆ ಕೂಡ. ಇರಿ ಇವತ್ತು ಸಂಜೆ ನಿಮ್ಮ ಹೊಟೇಲ್ ಹತ್ತಿರ ಸಿಗುವೆ ಅಂದರು ದಾಸ್. ಸಂಜೆ ಸ್ವಲ್ಪ ತಡವಾಗಿಯೇ ಆದರೂ ಬಂದರು. ಚಳಿ ಈಗಾಗಲೇ ಶುರುವಾಗಿತ್ತು. ಹೀಗಾಗಿ ಅವರ ಕಾರ್ ಅನ್ನು ಶುರು ಇಟ್ಟುಕೊಂಡೆ ಅದರ ಒಳಗಡೆಯೇ ಮಾತಾಡಲು ಕೂತೆವು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ

Read More

ಬಾಲ್ಯದ ಅಟ, ಆ ಮೊಂಡಾಟ ಇನ್ನೂ ಮರೆತಿಲ್ಲ!: ಬಸವನಗೌಡ ಹೆಬ್ಬಳಗೆರೆ ಸರಣಿ

ನಮ್ಮ ಮನೆಯಲ್ಲೋ ರಾಗಿ ಮುದ್ದೆ ಊಟ ಇರುತ್ತಿತ್ತು. ಅದು ಕಪ್ಪಾಗಿ ಇರುತ್ತಿದ್ದರಿಂದ ಉಣ್ಣೋಕೆ ಅಳುತ್ತಿದ್ದೆ. ಅಜ್ಜಿ‌ ಮನೆಯಲ್ಲಿ ಜೋಳದ ಮುದ್ದೆ ಬೆಳ್ಳಗೆ ಇರುತ್ತಿದ್ದರಿಂದ ಅದನ್ನು ಉಣ್ಣುತ್ತಿದ್ದೆ‌. ಒಮ್ಮೆ ಅಮ್ಮನ ಒತ್ತಾಯಕ್ಕೆ ಊಟ ಮಾಡಿ, ಕಕ್ಕಸ್ಸು ಕಪ್ಪಾದಾಗ ಬಹಳ ಬೇಸರವಾಗಿ ಮತ್ತೆ ಅಮ್ಮ ಉಣಿಸೋಕೆ ಬಂದಾಗ ಬಾಯೇ ತೆರೆಯದೇ ಊಟ ಮಾಡೋಕೆ ಹಠ ಮಾಡಿದ್ದೆ. ಅನ್ನಕ್ಕೆ ತತ್ವಾರ ಇದ್ದ ಕಾಲವದು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಮೂರನೆಯ ಕಂತು

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನಮ್ಮನ್ನೂ ಮನುಷ್ಯರಂತೆ ಕಾಣಿ: ಈರಣ್ಣ ಬೆಂಗಾಲಿ ಕಾದಂಬರಿಯ ಪುಟಗಳು

“ನಾವೂ ಮನುಷ್ಯರೇ, ದಯಮಾಡಿ ನೀವು ನಮ್ಮನ್ನು ಮನುಷ್ಯರಂತೆ ಕಾಣಿ” ಎಂದು ಕೇಳಿಕೊಳ್ಳುತ್ತಾನೆ. ಇದನ್ನು ಕೇಳಿದ ಯಜಮಾನನಿಗೆ ತೀವ್ರ ಮುಜುಗರವಾಗುತ್ತದೆ. ಒಳ್ಳೆಯವರು, ಕೆಟ್ಟವರು ಎಂಬುದು ಅವರ ಜಾತಿಯಿಂದಲ್ಲ, ಬದಲಾಗಿ…

Read More

ಬರಹ ಭಂಡಾರ