Advertisement

Category: ಸಾಹಿತ್ಯ

ಅಲಕಾ ಕಟ್ಟೆಮನೆ ಬರೆದ ಈ ಭಾನುವಾರದ ಕತೆ

‘ನಮ್ಜಯು ಜಾಣೆ; ಮನೆ ಕೆಲಸಾನೂ ಮಾಡಿ, ಅಂಗಡೀನೂ ನಿಭಾಯಿಸ್ತಾಳೆ’ ಎಂದು ಮನೆಮಂದಿಯೆಲ್ಲಾ ಕೊಂಡಾಡಿದವರೇ, ಮೆಚ್ಚಿ ಮುದ್ದಾಡಿದವರೇ… ಎಲ್ಲವೂ ಸರಿಯಿದ್ದಾಗ. ಮೊದಲ ಬಾರಿಯ ಲಾಕ್ಡೌನ್ ಹೇಗೋ ಕಳೆಯಿತು. ಎರಡನೇ ಬಾರಿ ಲಾಕ್ಡೌನ್ ಆಗುವುದಕ್ಕೆ ಒಂದು ವಾರ ಮೊದಲೇ, ಸಹಾಯಕ್ಕಿದ್ದ ಹುಡುಗಿಗೆ ಎರಡು ತಿಂಗಳ ಮುಂಗಡ ಹಣ ನೀಡಿ, ಬುಟಿಕ್ ಬಾಗಿಲು ಹಾಕಿದ್ದೆ. ಆದರೆ ಮುಂದಿನ ನಾಲ್ಕೇ ದಿನದಲ್ಲಿ ಜ್ವರ ಆರಂಭವಾಗಿತ್ತು.

Read More

ಎಂ.ಜಿ. ಶುಭಮಂಗಳ ಅನುವಾದಿಸಿದ ನಕ್ಷತ್ರಂ ವೇಣುಗೋಪಾಲ್ ತೆಲುಗು ಕತೆ

ನಿಜ ಹೇಳಬೇಕೆಂದರೆ ಎಲ್ಲಿಕಾಟ್ ಸಿಟಿಯಲ್ಲಿ ಮನೆ ತೆಗೆದುಕೊಳ್ಳೋಣವೆಂದು ಪ್ರಸಾದ್ ಹೇಳಿದಾಗ ರಾಧಿಕಳೇ ಬೇಡ ಅದು ಮಿನಿ ಭಾರತ, ಎಲ್ಲಿ ನೋಡಿದರೂ ಮುಖ್ಯವಾಗಿ ತೆಲುಗಿನವರೇ. ಪ್ರತಿಯೊಂದಕ್ಕೂ ಮಕ್ಕಳು, ಮಹಿಳೆಯರು, ಗಂಡಸರ ನಡುವೆ ಅನಗತ್ಯ ಸ್ಪರ್ಧೆ. ಅದಕ್ಕೇ ಭಾರತೀಯರು ಕಡಿಮೆ ಇರುವ ಪ್ರದೇಶದಲ್ಲಿ ಮನೆ ತೆಗೆದುಕೊಳ್ಳೋಣ ಎಂದು ಪಟ್ಟುಹಿಡಿದು ಇಲ್ಲಿಗೆ ಬಂದಿದ್ದಾರೆ.

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಾ. ಹು. ಚಾನ್‍ಪಾಷ ಬರೆದ ಕತೆ

ಅವ್ರು ಮಾಡ್ತಿರೋದು ಸರೀನಾ! ಇವ್ನು ಮಾಡ್ತಿರೋದು ಸರೀನಾ!.. ಬೀಜ-ವೃಕ್ಷದ ಪ್ರಶ್ನೆ ಇದ್ದಹಾಗೆ ಇದು ಬಿಡಿಸಲಾಗದ ಪ್ರಶ್ನೆ ಎನಿಸಿತು. ಪ್ರತಿ ತಂದೆ-ತಾಯಿಗಳೂ ಸಹ ಮೊದಲು ಮಕ್ಕಳಾಗಿರುತ್ತಾರೆ ತಾನೆ!… ‘ಬೆಳೆದ ಪರಿಸರ, ಪಡೆದ ಸಂಸ್ಕಾರಗಳೇ ಮುಖ್ಯ ಅದೇ ಎಲ್ಲದಕ್ಕೂ ಮೂಲ’ ಎಂದು ಹೇಳುತ್ತಿದ್ದ ರಿಯಾಜ್‌ನ ಮಾತು ನೂರಕ್ಕೆ ನೂರು ಸತ್ಯ ಎನಿಸಿತು. ಏನು ಹೇಳಬೇಕು ಎಂದು ನನಗೆ ತೋಚಲಿಲ್ಲ. ಅವನೂ ಸಹ ಏನೂ ಆಡಲಿಲ್ಲ.

Read More

ದೀಪಾ ಫಡ್ಕೆ ಬರೆದ ಈ ಭಾನುವಾರದ ಕಥೆ

ಬೀಡಾಡಿ ದನವೊಂದು ನೆಟ್ಟಿದ್ದ ತರಕಾರಿ ಸಾಲಿಗೇ ಬಾಯಿ ಹಾಕಿ ಕುತ್ತಿಗೆ ಆಡಿಸುತ್ತಾ ಮೇಯುತ್ತಿದ್ದುದನ್ನು ನೋಡಿ ಅಲ್ಲೇ ಬಿದ್ದಿದ್ದ ಕೋಲೊಂದನ್ನು ತೆಗೆದುಕೊಂಡು `ಹೋಯ್ ಹೋಯ್’ ಎಂದು ಬೊಬ್ಬೆ ಹೊಡೆದುಕೊಂಡು ದಣಪೆಯಿಂದ ಹೊರಗಟ್ಟಲು ಪ್ರಯತ್ನಿಸಿದಳು. ನಾಲಗೆಯಿಂದ `ಹಡಬೆ ದನ’ ಎನ್ನುವ ಬೈಗಳೂ ಸುಲಭವಾಗಿ ಬಂದು ಹೋಯ್ತು. ಇಡೀ ಅಂಗಳ ಓಡಾಡಿಸಿಕೊಂಡು ನೆಟ್ಟಿದ್ದ ಪ್ರೀತಿಯ ಅಬ್ಬಲಿಗೆ ಸಾಲನ್ನೂ ಮೆಟ್ಟಿಕೊಂಡು ಗಿಡಗಳನ್ನು ಧರಾಶಾಯಿಯಾಗಿಸುತ್ತಾ ಕೊನೆಗೂ ದಣಪೆಯಿಂದ ಹೊರಗೆ ಹೋದಾಗ ಅದರ ಬೆನ್ನಿಗೆ…

Read More

ಚಂದ್ರಪ್ರಭ ಕಠಾರಿ ಬರೆದ ಈ ಭಾನುವಾರದ ಕಥೆ

ಬೆಣ್ಣೆಯಲ್ಲಿ ಕೂದಲು ತೆಗೆದಂತೆ, ವಿನಯವೇ ಮೂರ್ತಿವೆತ್ತಂತೆ ಗಿಳಿ ಮಾತಾಡುವ ಜಿನೇಶನಲ್ಲಿ ಇಂಥ ರಾಕ್ಷಸನಿರುವ ಸಾಧ್ಯತೆ, ಈ ಆರದ ಗಾಯದ ಸಾಕ್ಷಿ ಇರದಿದ್ದರೆ ನಂಬಲು ಸಾಧ್ಯವಾಗುತ್ತಿರಲಿಲ್ಲ. ಅವಳ ಬಾಳು ಕನಸಲ್ಲಿ ನಡೆದಂತೆ ಸುಸೂತ್ರವಾಗಿ ಸೌಖ್ಯದಿಂದಿದೆ ಎಂದು ಭಾವಿಸಿದ್ದರೆ ಅದೆಷ್ಟು ನೋವುಗಳನ್ನು ಒಡಲಲ್ಲಿಟ್ಟು ಬೇಯುತ್ತಿದ್ದಾಳೆ ಎನಿಸಿ ಸುಮಾಳ ಹೊಟ್ಟೆಗೆ ಬೆಂಕಿ ಬಿದ್ದು, ಕಣ್ಣಲ್ಲಿ ನೀರು ತುಂಬಿತು.
ಚಂದ್ರಪ್ರಭ ಕಠಾರಿ ಬರೆದ ಈ ಭಾನುವಾರದ ಕಥೆ “ಹಾಡು ಗುಬ್ಬಿ ಪಾಡು!”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ