Advertisement

Category: ವಾರದ ಕಥೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೇಶವ ಮಳಗಿ ಬರೆದ ಕತೆ

ಭಾಳ ಸಿಹಿಸುದ್ದಿಯೇನೂ ಅಲ್ಲ. ಆದರೂ, ಕಹಿಯಂತೂ ಅಲ್ಲಲ. ತೇರಿಗೆ ಹೂವುಹಣ್ಣು ಹಾಕವರಿದ್ರ ಇವತ್ತೇ ತಗೊಂಡು ತಯಾರಾಗ್ರಿ. ನಾಳೆ ಶಿಗತಾವೋ ಇಲ್ಲೋ. ಭಯಂಕರ ತುಟ್ಟಿನು ಇರತಾವು. ಬಿಸಿಲು ಏರಾಕ ಹೊಂಟೈತಿ. ಜರಾ ಚಹಾ ಕುಡೀತಿರೇನು ನೋಡ್ರಿ, ಹೇಳುತ್ತ ತಾನೂ ಹಗುರಾದಂತೆ ಬೋಲ್ಡಿ ಬಾಬಾ ಕೊಳವೆಗೆ ತಂಬಾಕು ತುಂಬಿ ಕಿಡಿ ಹಚ್ಚಿದ. ರುಕುಮವ್ವ, ಚಂದ್ರವ್ವಳನ್ನು ಕೈಯಿಂದ ಎಳೆದುಕೊಳ್ಳುತ್ತ ಬೆನ್ನು ಸವರಿ, ಸಮಾಧಾನ ಆತಿಲ್ಲವಾ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೇಶವ ಮಳಗಿ ಬರೆದ ಕಥೆ

Read More

ಜೆಸ್ಸಿ ಪಿ.ವಿ. ಪುತ್ತೂರು ಬರೆದ ಈ ಭಾನುವಾರದ ಕಥೆ

ಏನಾಗುತ್ತಿದೆಯೆಂದು ಅವರಿಗೆ ಅರ್ಥವಾಗುವ ಮೊದಲೇ ಬೆಂಕಿ ಅರ್ಧದಷ್ಟು ತೋಟಕ್ಕೆ ವ್ಯಾಪಿಸಿತ್ತು. ಅನಿರೀಕ್ಷಿತವಾಗಿ ಘಟಿಸಿದ ಅನಾಹುತ ಕಂಡು ಮಾತುಹೊರಡದೇ ನಿಂತಿದ್ದ ಅಂಬಿಕಾ ಈಗ ಜೋರಾಗಿ ಕಿರುಚಲಾರಂಭಿಸಿದರು. “ಅಯ್ಯೋ, ಯಾರಾದರೂ ಓಡಿ ಬನ್ನಿ.. ನಮ್ಮನ್ನು ಕಾಪಾಡಿ… ಯಾರಾದರೂ ಬನ್ನಿ, ಬೆಂಕಿ ನಂದಿಸಿ….” ನೆರೆಮನೆಯಿಂದ ಕೇಳಿದ ಆರ್ತನಾದ, ಎತ್ತರದಲ್ಲಿ ಕಾಣುತ್ತಿರುವ ಬೆಂಕಿಯ ಕೆನ್ನಾಲಿಗೆ, ಆಗಿರಬಹುದಾದ ಅನಾಹುತದ ಚಿತ್ರಣವನ್ನು ಶಂಕರಣ್ಣನಿಗೆ ಕಟ್ಟಿಕೊಟ್ಟಿತು.
ಜೆಸ್ಸಿ ಪಿ.ವಿ. ಪುತ್ತೂರು ಬರೆದ ಈ ಭಾನುವಾರದ ಕಥೆ “ಹೊರಗಿನ ಬೆಂಕಿ ಮತ್ತು ಒಳಗಿನ ಕಳೆ” ನಿಮ್ಮ ಓದಿಗೆ

Read More

ಎ.ಬಿ. ಪಚ್ಚು ಕುಟ್ಟಿದಪಲ್ಕೆ ಬರೆದ ಈ ಭಾನುವಾರದ ಕಥೆ

ಮೇಕೆಗಳೆಲ್ಲವೂ ರಸ್ತೆ ದಾಟಿದ ಮೇಲೆ ಲಾರಿ ಮುಂದಕ್ಕೆ ಚಲಿಸಲು ಆರಂಭಿಸಿತು. ಅದರದ್ದು ಈಗಲೂ ಒಂದೇ ವೇಗ. ನಿಂತುಕೊಂಡಿದ್ದವನು ಮತ್ತೆ ಲಾರಿಯಲ್ಲಿ ಕುಳಿತೆ. ಇನ್ನೊಮ್ಮೆ ನಾಯಿ ಕಡೆಗೆಯೇ ನೋಡಿದೆ. ಆಕಾಶದೆಡೆಗೆ ನೋಡುತ್ತಿದ್ದ ನಾಯಿ ತನ್ನ ಕಣ್ಣಿನಲ್ಲಿ ಏನನ್ನು ತುಂಬಿಕೊಳ್ಳುತಿತ್ತೋ, ಅದರ ಅಂತರಾತ್ಮ ಅದರೊಳಗಿನ ಪರಮಾತ್ಮ ಅದಕ್ಕೆ ಬದುಕಿನ ಯಾವ ದಿವ್ಯ ರಹಸ್ಯವನ್ನು ಹೇಳುತ್ತಿತ್ತೋ ಆ ಮೂಲಕ ಅದು ನನಗೆ ಏನನ್ನು ಪರೋಕ್ಷವಾಗಿ ತಿಳಿಸಲು ಪ್ರಯತ್ನ ಪಡುತ್ತಿದೆಯೋ ಎನ್ನುವುದು ನನಗೆ ಒಂಚೂರೂ ಗೊತ್ತಾಗಲಿಲ್ಲ.
ಎ.ಬಿ. ಪಚ್ಚು ಕುಟ್ಟಿದಪಲ್ಕೆ ಬರೆದ ಈ ಭಾನುವಾರದ ಕಥೆ “ಮೇಘ ಮಲ್ಹಾರ”

Read More

ಶಾಂತಿ ಕೆ. ಅಪ್ಪಣ್ಣ ಈ ಭಾನುವಾರದ ಕಥೆ

ಅದು ವಿಷಯ! ಅಲ್ಲಿಗೆ ವಯಸ್ಸಾಗಿರುವುದು ಯಾವುದಕ್ಕೆ? ದೇಹಕ್ಕೆ ಮಾತ್ರವೇ? ಮನಸು ಪಕ್ವವಾಗುವುದು ಅನ್ನುತ್ತಾರಲ್ಲ ಅದೇನದು? ಆಯ್ಕೆಗಳನ್ನೆಲ್ಲ ಬದಿಗೊತ್ತಿ, ಹೆಚ್ಚು ತಕರಾರು ಮಾಡದೆ, ಇರುವುದನ್ನು ಒಪ್ಪಿಕೊಂಡು, ಒಪ್ಪಲಾಗದಿದ್ದರೂ ಒಪ್ಪಿಸಿಕೊಂಡು, ಅಪ್ಪಿಕೊಂಡು, ದಬ್ಬಿಸಿಕೊಂಡು ಹೇಗಾದರೊಂದು ಬದುಕುವುದೆ? ಅಥವಾ ಪರಿಸ್ಥಿತಿಗೆ ತಲೆಬಾಗಿ ಸ್ಥಿತಪ್ರಜ್ಞೆಯನ್ನು ಆರೋಪಿಸಿಕೊಂಡು ಒಳಗೊಳಗೇ ಬೇಯುತ್ತ, ಬೇಯುವಿಕೆಯ ಕಮಟು ವಾಸನೆ ಹೊರಗೆ ತೋರದಂತೆ ಕಾಯುತ್ತ, ಹೀಗೆ ಬೇಯುವುದೇ ಜೀವನದ ಸಾರ್ಥಕತೆಯೆಂದುಕೊಂಡು ಸುಳ್ಳೇ ನಂಬಿಸಿಕೊಳ್ಳುವುದೆ?
ಶಾಂತಿ ಕೆ. ಅಪ್ಪಣ್ಣ ಬರೆದ ಈ ಭಾನುವಾರದ ಕಥೆ “ಚಿತ್ರಕಾರನ ಬೆರಳು”

Read More

ರಘುನಾಥ್‌ ಕೆ. ಅನುವಾದಿಸಿದ ಭೂಮಿಕಾ ರಾಜನ್‌ ಕಥೆ

ಅವಳು ಕಿರುನಿದ್ದೆಯಿಂದ ಎದ್ದಾಗ ಈಗಾಗಲೇ ಅಜ್ಜಯ್ಯನ ಅಂಗಡಿಗೆ ಸಾಮಾನಗಳ ಪಟ್ಟಿ ಕೊಟ್ಟು ನಾಲ್ಕು ಗಂಟೆಗಳಾದ ನೆನಪು ಆಯಿತು. ಮೊದಲು ತಡವಾಗಬಹುದೆಂದು ಅಮ್ಮನಿಗೆ ಬೇಕಾದ ಅಕ್ಕಿಯನ್ನು ತರಲು ಚೀಲ ಒಯ್ಯುವುದು ಎಂದುಕೊಂಡಳು. ಅಂಗಡಿಯವನು ಇನ್ನೊಂದು ಗಂಟೆಯಲ್ಲಿ ಸಾಮಾನು ತಂದುಕೊಡುವುದಾಗಿ ಹೇಳಿದ್ದರಿಂದ ಆ ಯೋಚನೆ ಕೈಬಿಟ್ಟಳು. ಕಿರಿಕಿರಿ ಉಂಟಾಗಿ ಅಂಗಡಿಗೆ ಫೋನ್ ಮಾಡಿದಳು “ತಲುಪಲು ಸಾಧ್ಯವಾಗುತ್ತಿಲ್ಲ” ಎಂಬ ಉತ್ತರ ಬಂದಿತು.
ರಘುನಾಥ್‌ ಕೆ. ಅನುವಾದಿಸಿದ ಭೂಮಿಕಾ ರಾಜನ್‌ ಕಥೆ “ಶಾಹೀನಳ ದುಃಸ್ವಪ್ನ” ನಿಮ್ಮ ಈ ಭಾನುವಾರದ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ