Advertisement

Category: ವಾರದ ಕಥೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಲ್ಲೇಶ್‌ ಕುಂಬಾರ್ ಬರೆದ ಕತೆ

ಪೂಜೇರಿ ಸಂಗಪ್ಪನ ಸಾವಿನಿಂದಾಗಿ ಕಂಗೆಟ್ಟಿದ್ದ ಕಪಿಲೆ, ಚಪ್ಪರದಿಂದ ಎದ್ದು ಹೋಗಿ ಆತನ ಮನೆಯ ಮುಂದೆ ನಿಂತಿತು. ಆಗ, ಹೊರಗೆ ಮನೆ ಮುಂದೆ ಗದಕಟ್ಟು ಕಟ್ಟಿ ಕೂಡ್ರಿಸಿದ್ದ ಪೂಜೇರಿ ಸಂಗಪ್ಪನ ಹೆಣವನ್ನು ಕಂಡು, ದುಃಖ ತಡೆಯಲಾಗದೆ ನೆರೆದ ಜನರ ನಡುಕ ತೂರಿಕೊಂಡು ಮುಂದೆ ಹೋಗಿ ಆತನನ್ನು ಮೂಸಿ ನೋಡಿ ತನ್ನ ಮರುಕ ವ್ಯಕ್ತಪಡಿಸಿತು. ಆಮೇಲೆ, ಅದು ಹಂಗೇ ಹಿಂದೆ ಸರಿದು ಜನರತ್ತ ಬಂದು ನಿಂತಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಲ್ಲೇಶ್‌ ಕುಂಬಾರ ಬರೆದ ಕತೆ “ಕಪಿಲೆ” ನಿಮ್ಮ ಈ ಭಾನುವಾರದ ಓದಿಗೆ

Read More

ಇಲ್ಲಿ ಎಲ್ಲವೂ ಸರಿ ಇದ್ಯಾ…?

ವಿನಯ ಅಲಿಶಾಳಿಗೆ ಪ್ರಪೋಸ್ ಮಾಡಿದ ಎಂಬ ಸುದ್ದಿ ಕೇಳಿದ ಮೂರು ದಿನಕ್ಕೇ ಅರವಿಂದನಿಗೆ ಲಘು ಹೃದಯಾಘಾತವಾಗಿತ್ತು. ಶಿಕಾಗೋದಿಂದ ಓಡಿಬಂದಿದ್ದರು, ವಿನಯ ಮತ್ತು ಅಲಿಶಾ ಇಬ್ಬರೂ. ಮನಸ್ಸಿನ ವ್ಯಾಪಾರವೇ ವಿಚಿತ್ರ. ವಿನಯ ಅಲಿಶಾಳನ್ನು ಮದುವೆ ಮಾಡಿಕೊಳ್ಳುವುದು ಗ್ಯಾರಂಟಿ ಎಂದು ಗೊತ್ತಿದ್ದರೂ ವಿನಯನ ಪ್ರಪೋಸಲ್ಲಿಗೂ, ಅರವಿಂದನ ಹಾರ್ಟ್ ಅಟ್ಯಾಕಿಗೂ ಕಾರ್ಯಕಾರಣ ಸಂಬಂಧ ಹುಡುಕಲು ವೈದ್ಯಕೀಯ ಪುರಾವೆಗಳ ಸಾಥ್ ಕೇಳಿದ್ದಳು, ಸುಕನ್ಯಾ.
ಗುರುಪ್ರಸಾದ್‌ ಕಾಗಿನೆಲೆ ಬರೆದ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್”ನ ಎರಡನೆಯ ಕಂತು ನಿಮ್ಮ ಓದಿಗಾಗಿ

Read More

ಗುರುಪ್ರಸಾದ್‌ ಕಾಗಿನೆಲೆ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್‌” ಇಂದಿನಿಂದ ಶುರು

‘ಥ್ಯಾಂಕ್ಸ್ ಗಿವಿಂಗ್’ ಈ ನೀಳ್ಗತೆಯನ್ನು ಬರೆದು ಸುಮಾರು ಎಂಟುವರ್ಷಗಳೇ ಆಗಿವೆ. ‘ಹಿಜಾಬ್’ ಕಾದಂಬರಿಯ ಬರವಣಿಗೆ ನನ್ನನ್ನು ಬಸವಳಿಸಿತ್ತು. ಕೆಲವೊಮ್ಮೆ ಏನೂ ಬರೆಯಲಾರೆ ಅನ್ನಿಸಿತ್ತು. ತಿಂಗಳುಗಟ್ಟಲೆ ಬರವಣಿಗೆಯನ್ನು ನಿಲ್ಲಿಸಿದ್ದೆ. ಅದನ್ನು ಮರು ಉದ್ದೀಪನಗೊಳಿಸಿಕೊಳ್ಳಲು ಅದಕ್ಕೆ ವಸ್ತು, ವಿಷಯ ಮತ್ತು ನಿರೂಪಣೆಯಲ್ಲಿ ಸಂಪೂರ್ಣ ಬೇರೆಯಾಗಿರುವುದನ್ನು ಬರೆಯಬೇಕೆನ್ನಿಸಿತು.
ಗುರುಪ್ರಸಾದ್‌ ಕಾಗಿನೆಲೆ ಬರೆದ ಹೊಚ್ಚಹೊಸ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್” ಕೆಂಡಸಂಪಿಗೆಯಲ್ಲಿ ಕೆಲವು ಕಂತುಗಳಲ್ಲಿ ಪ್ರತಿ ಶನಿವಾರ ಪ್ರಕಟವಾಗಲಿದೆ

Read More

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ತಂದೆ ಏಕೆ ಹೀಗಾದರೂ ಅಂತ ಈವತ್ತಿಗೂ ನನಗೆ ಗೊತ್ತಾಗುತ್ತಿಲ್ಲ. ಸ್ನಾನ, ಸಂಧ್ಯಾವಂದನೆ, ಪೂಜೆ, ಅಚರಣೆ, ಯಾವುದನ್ನೂ ತಂದೆ ತಪ್ಪಿಸಿದವರಲ್ಲ. ಅವರ ತಂದೆಯ ಭಯದಲ್ಲೇ ಬೆಳೆದಿದ್ದರು. ತಂದೆ ಸತ್ತು ಹೋದ ಮೇಲೆ ಹೀಗೆಲ್ಲ ಆದದ್ದು. ನಿನ್ನ ಹತ್ತಿರ ಏನು ಮುಚ್ಚು ಮರೆ. ನಮ್ಮ ತಾತನದು ಕೂಡ ಇದೇ ರೀತಿಯ ರಂಪವಂತೆ. ಆತ ಇಟ್ಟುಕೊಂಡಿದ್ದವಳೊಬ್ಬಳನ್ನು ಮನೆಗೇ ಕರೆದುಕೊಂಡು ಬಂದು ಮಂಚದ ಮೇಲೆ ಮಲಗಿಸಿಕೊಳ್ಳುತ್ತಿದ್ದರಂತೆ. ನಮ್ಮಜ್ಜಿ ಅವಳ ಎಂಜಲು ತಟ್ಟೆ ತೊಳೆಯುವುದರಿಂದ ಹಿಡಿದು ಪ್ರತಿಯೊಂದು ಸೇವೆಯನ್ನೂ ಮಾಡಬೇಕಾಗುತ್ತಿತ್ತಂತೆ.
ಕೆ. ಸತ್ಯನಾರಾಯಣ ಬರೆದ ಕಥೆ “ಪ್ರೀತಿ ಬೇಡುವ ರೀತಿ” ‌

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಾದಂಬಿನಿ ಬರೆದ ಕತೆ

ಅಲಾ.. ಒಂದ್ ಜಾಕೀಟ್ ಬಟ್ಟೆ ಅರ‍್ಸಕ್ಕೆ ವರ್ಸ ಪೂರ‍್ತಿ ದುಡ್ ವಟ್ಮಾಡಿ ಬಟ್ಟೆ ಅಂಗ್ಡಿಗ್ ವೋಗಿದೀನಿ. ಕದಿಯದಾಗಿದ್ರೆ ಇಷ್ಟು ಕಸ್ಟ ತಗೀಬೇಕಾ? ಆ ದೇವ್ರೂ ಈ ಅನ್ಯಾಯ ನೋಡ್ಕ್ಯಂತ ಸುಮ್ಕಿದಾನಾ ಅಂಗಾರೆ? ಅಲಾ ಈ ಸೀರೆ ವಯರ್ ಬುಟ್ಟಿಲಿ ಯಾವಾಗ್ ಬಂದ್ ಸರ‍್ಕಂತು ಅಂತ? ಬವುಶ್ಯ ನನ್ ಇಂದ್ಗಡೀಕೇ ನಿಂತ್ಕಂದಿದ್ನಲ್ಲ ಇವ್ನು.. ಇವ್ನೇ ಎಲ್ಲಾರೂ.. ಇವ್ನೇ ಇವ್ನೇ! ಇನ್ಯಾರ್ ಇಂತಾ ಕ್ಯಲ್ಸ ಮಾಡ್ತರೆ? ಅಲಾ.. ಅದ್ಯಾ ಮಾಯ್ಕದಲ್ಲಿ ವಯರ್ ಬುಟ್ಟಿಗೆ ಸೀರೆ ತಗ್ದು ಆಕಿಬುಟ್ಟಿದ್ನೋ ಅಂತ!
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಾದಂಬಿನಿ ಬರೆದ ಕಥೆ “ತಲೆ ಮ್ಯಾಕೆ ವೂದ ನೀರು” ನಿಮ್ಮ ಈ ಭಾನುವಾರದ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ