Advertisement

Category: ವಾರದ ಕಥೆ

ಎಸ್. ಗಂಗಾಧರಯ್ಯ ಬರೆದ ಈ ಭಾನುವಾರದ ಕಥೆ

ಈ ನಡುವೆ ಪಾತ್ಲಿಂಗಪ್ಪ ಹಾಗೂ ಚಿತ್ಲಿಂಗ ಮತ್ಮತ್ತೆ ಭೇಟಿಯಾಗುತ್ತಿದ್ದದ್ದು ತಿಳಿದು ಮಗಳು ಕುದ್ದು ಹೋಗಿ ವರ್ಷದ ಹಿಂದೆ ಅಪ್ಪನಿಗೆ ಲಾಯರ್‌ ನೋಟೀಸ್‌ ಕಳಿಸಿದ್ದಳು. ಇದು ಪಾತ್ಲಿಂಗಪ್ಪನನ್ನು ಕುಗ್ಗಿಸಿತ್ತು. ತನ್ನದೆಲ್ಲವನ್ನೂ ಕಿತ್ತುಕೊಂಡು ಬೀದಿಗೆ ತಳ್ಳುವ ಹುನ್ನಾರದಂತೆ ಕಂಡಿತ್ತು. ಹಂಗಾಗಿ ಅದು ಆ ವಿಚಾರದಲ್ಲಿ ಅವನನ್ನು ಮತ್ತಷ್ಟು ಬಿಗಿಯಾಗುವಂತೆ ಮಾಡಿತ್ತು. ಅದರೊಟ್ಟಿಗೆ ಅವನೊಳಗೆ ತಾನು ತಮ್ಮನ ಮಗನಿಗೆ ಮಾಡಿದ್ದ ಅನ್ಯಾಯದ ಪಾಪಪ್ರಜ್ಞೆ ಬೆಳೆಯತೊಡಗಿತ್ತು.
ಎಸ್. ಗಂಗಾಧರಯ್ಯ ಬರೆದ ಈ ಭಾನುವಾರದ ಕಥೆ “ಸೋಲು” ನಿಮ್ಮ ಓದಿಗೆ

Read More

ಸೌರಭಾ ಕಾರಿಂಜೆ ಬರೆದ ಈ ಭಾನುವಾರದ ಕಥೆ

ಬೆಳಿಗ್ಗೆ ತುಂಬಿಸಿಕೊಂಡ ದೋಸೆ ಡಬ್ಬಿ ಹಾಗೇ ಇದೆ ಎಂಬುದು ನೆನಪಾಯಿತು ಅವಳಿಗೆ. ಕೊಟ್ಟು ಬಿಡಲೇ ಅನಿಸಿತು ಒಮ್ಮೆ. ಮನೆಗೆ ಹೋಗಿ ತಿನ್ನಬಹುದು ತಾನು. ಆದರೆ ಇವನಿಗೆ ಬೇಕಾದದ್ದು ದುಡ್ಡು, ಊಟ ಅಲ್ಲ, ಆ ದುಡ್ಡನ್ನು ಕಬಳಿಸಲು ನಮೂನೆ ನಮೂನೆಯ ಪ್ರಯತ್ನ ಅನ್ನಿಸಿ ಮನಸ್ಸೆಲ್ಲಾ ಕಹಿಯಾಯಿತು. ಜೊತೆಗೆ ಬಾಯಿಯೂ ಕಹಿಯಾಯಿತು. ಬಾಯಿಯಲ್ಲಿ ತುಂಬಿಕೊಂಡಿದ್ದ ಎಂಜಲನ್ನು ನುಂಗಲು ಅಸಹ್ಯವಾಗಿ ಉಗುಳುವ ಒತ್ತಡ ಉಂಟಾಯಿತು. ಯಾವತ್ತೂ ರಸ್ತೆಯಲ್ಲಿ ಉಗುಳಿದವಳಲ್ಲ. ಮುಜುಗರ ಒತ್ತಿ ಬಂತು.
ಸೌರಭಾ ಕಾರಿಂಜೆ ಬರೆದ ಕಥೆ “ಹಣಾಹಣಿ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಮುನವ್ವರ್‌ ಜೋಗಿಬೆಟ್ಟು ಬರೆದ ಈ ಭಾನುವಾರದ ಕಥೆ

ಬಟ್ಟೆ ತೊಳೆಯಲು ಹೋಗಿದ್ದ ಉಮ್ಮ ಬಂದು ಹಿತ್ತಲಿಗೆ ತಲುಪಿದ್ದಳು. ಹೊರಳಾಡುತ್ತಿರುವ ಝುಮೈರ್‌ನನ್ನು ಸಮಾಧಾನ ಮಾಡುವ ಶತ ಪ್ರಯತ್ನ ಮಾಡ ತೊಡಗಿದಳು. ವಿಶಣ್ಣನಾಗಿ ಅಬ್ಬ ಮಗನ ರೋಧನೆಯನ್ನು ನೋಡುತ್ತಾ ಕುಳಿತಿದ್ದ. ಹೇಗೋ ಸಮಧಾನಿಸಿ ಮನೆಯೊಳಗೆ ಕರೆದುಕೊಂಡು ಹೋದಳು ಉಮ್ಮ. ಮಗ ಎಷ್ಟೇ ಸಮಾಧಾನ ಮಾಡಿದರೂ ಅವನ ದುಃಖ ಇಳಿಯುವುದಿಲ್ಲವೆಂದು ಉಮ್ಮನಿಗೆ ಖಾತ್ರಿಯಾಯಿತು. ರಾತ್ರಿ ಊಟ ಮಾಡದೆ ಮಲಗಿದ್ದ ಮಗನ ಬಳಿಗೆ ಬಂದವಳು “ಐವತ್ತು ರೂಪಾಯಿ ನಾನು ಕೊಡ್ತೇನೆ.
ಮುನವ್ವರ್‌ ಜೋಗಿಬೆಟ್ಟು ಬರೆದ ಕಥೆ “ಶಾಲಾ ಮಕ್ಕಳ ಪ್ರವಾಸಕ್ಕೆ ಜಯವಾಗಲಿ” ನಿಮ್ಮ ಓದಿಗೆ

Read More

ಹಮೀರ್‌ ಮುಗಿಲು ಕೆ.ಎಲ್. ಬರೆದ ಈ ಭಾನುವಾರದ ಕಥೆ

ಹೊರಗಾಳಿಯ ತಾಜಾತನವನ್ನು, ಮಧ್ಯಾಹ್ನ ಮೂರುಗಂಟೆಯ ಬಿಸಿಲನ್ನು ಸೇವಿಸಿದೆ. ರೋಡು ದೊಡ್ಡ ಮಾಡಿದಾಗ ಕಡಿದ, ಈಗ ರೊಡಿನ ಸೈಡಲ್ಲಿ ಮಹಾ ಬಂಡೆಗಳ ತರ ಅಥವಾ ರಾಮಲಕ್ಷ್ಮಣರೋ, ಪಾಂಡವರೊ ಸಾಯಿಸಿ ಕೊಚ್ಚಿಹಾಕಿದ ಉಗ್ರ ರಾಕ್ಷಸ ಜನಾಂಗದ ಹೆಣಗಳ ಹಾಗೆ ಬಿದ್ದಿರೊ ಮೂರ್ನಾಲ್ಕು ಶತಮಾನಗಳಷ್ಟು ಪುರಾತನವಾಗಿರಬಹುದಾದ ಮರಗಳ ಬುಡಗಳು ಕಣ್ಣಿಗೆ ಬಿದ್ದವು. ಆ ತಾಜಾತನದ ಸಹಾಯದಿಂದಲೋ ಏನೋ ಇಲ್ಲಿಯತನಕ ಸಿಗದ ಪರಿಹಾರವು ಸಿಕ್ಕಿತು, ಅಥವಾ ಉತ್ಪತ್ತಿಯಾಯಿತು, ಆಥವಾ ನನ್ನ ಸುಪ್ತಪ್ರಜ್ಞಾ ಮನಸ್ಸು ಸಂಶ್ಲೇ಼ಷಣೆ ಮಾಡಿತು.
ಹಮೀರ್‌ ಮುಗಿಲು ಕೆ.ಎಲ್. ಬರೆದ ಈ ಭಾನುವಾರದ ಕಥೆ “ಹಿಂದಿನದು” ನಿಮ್ಮ ಓದಿಗೆ

Read More

ಆಕರ್ಷ ಕಮಲ ಬರೆದ ಈ ಭಾನುವಾರದ ಕತೆ

ಪಜಲ್ ಪೀಸ್‌ಗಳನ್ನು ಕೆಳಕ್ಕಿರಿಸಿ ಕೀಲಿಕೈಗಳ ಗೊಂಚಲನ್ನು ಚರಂಡಿಗೆ ಎಸೆಯಲು ನಿರ್ಧರಿಸಿದ್ದನೇನೋ ಎನ್ನುವಷ್ಟೇ ವೇಗವಾಗಿ ಎಲಿವೇಟರ್‌ಗಳ ಕಡೆಗೆ ಓಡಿದ. ಹದಿಮೂರನೇ ಮಹಡಿಯಿಂದ ಗ್ರೌಂಡ್ ಫ್ಲೋರ್ ಲಾಬಿಗೆ ಬರುವಷ್ಟರಲ್ಲಿ ಕಚೇರಿಯಿಂದ ಹೊರನಡೆಯುವಾಗ ತನ್ನ ಹೆಸರು ನೆನಪಿಲ್ಲದ ಕಾವಲುಗಾರನಿಗೆ ಏನು ಹೇಳಬಹುದು, ಮನಸ್ಸನ್ನು ನೋಯಿಸದೆ ಪೊಲಿಟಿಕಲಿ ಕರೆಕ್ಟ್ ಆಗಿ ಹೇಗೆ ಮಾತನಾಡಬಹುದು ಎಂದೆಲ್ಲ ಯೋಚಿಸಿದ. ಆಕ್ಸೆಸ್ ಕಾರ್ಡ್ ಇಲ್ಲದೆಯೇ ಮತ್ತೆ ಕಚೇರಿಗೆ ಬರಲೇಬೇಕು.
ಆಕರ್ಷ ಕಮಲ ಬರೆದ ಕತೆ “ಆಯತಾಕಾರದ ನೆರಳು” ನಿಮ್ಮ ಈ ಭಾನುವಾರದ ಓದಿಗೆ

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ