Advertisement

Tag: ಆತ್ಮಕತೆ

ಯುದ್ಧದಲ್ಲಿ ಗೆಲ್ಲುವುದು ಸಾವು ಮಾತ್ರ…

ಯುಸಿ಼ಫ್ ತನ್ನ ಹದಿನೈದು ವರ್ಷದ ಮಗ ಆದಮ್‌ನ ಹಿಂದೆ ನಿಂತ. ಅಂಬೆಗಾಲು ಹಾಕುತ್ತ ಜನರ ಕಾಲೊಳಗಿಂದ ಬಾಗಿಲ ಬಳಿ ಹೋಗಲು ಮಗನಿಗೆ ತಿಳಿಸಿದ. ಆದಮ್ ಪ್ರಯತ್ನಪಟ್ಟು ಬಾಗಿಲ ಬಳಿ ಬಂದು ಹೊರಗೆ ನುಸುಳಿ ಓಡತೊಡಗಿದ. ಆದರೆ ನಾಜಿಗಳ ಗುಂಡಿಗೆ ಗುರಿಯಾದ. ಮಗನನ್ನು ಹಿಂಬಾಲಿಸಿದ ಯುಸಿ಼ಫ್ ಮೇಲೂ ಗುಂಡು ಹಾರಿಸಲಾಯಿತು. ನಾಜಿಯೊಂದು ಓಡಿ ಬಂದು ಬಿದ್ದ ಯುಸಿ಼ಫ್‌ನನ್ನು ಬೂಟುಗಾಲಿನಿಂದ ಒದ್ದು, ಬಂದೂಕಿನಿಂದ ತಿವಿಯಲಾಯಿತು. ಖತಿನ್ ಅನುಭವಿಸಿದ ಕೊನೆ ಗಳಿಗೆಯನ್ನು ಮೂರ್ಛಾವಸ್ಥೆಯಲ್ಲಿದ್ದ ಯುಸಿ಼ಫ್ ನೋಡಲಾಗಲಿಲ್ಲ. ನಾಜಿಗಳು ಅಲ್ಲಿಂದ ಹೋದ ನಂತರ ನೆರೆ ಗ್ರಾಮದ ಜನರು ಯುಸಿ಼ಫ್‌ನನ್ನು ಬದುಕಿಸಿದರು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ಸರಣಿ

Read More

ನಿಶೆಯ ಹೆಬ್ಬಾವಿನ ಬಾಯಲ್ಲಿ ಮಲಗಿದ್ದೆ

“ನನ್ನ ಸ್ವಕಾರಣದಿಂದ ಪಿಎಚ್.ಡಿ ಸಂಶೋಧನೆಗೂ, ಅತಿಥಿ ಉಪನ್ಯಾಸಕ ವೃತ್ತಿಗೂ ರಾಜಿನಾಮೆ ನೀಡುತ್ತಿರುವೆ’ ಎಂದು ಒಂದು ಸಾಲಿನ ರಾಜಿನಾಮೆ ಬರೆದು ಲಕೋಟೆಯಲ್ಲಿಟ್ಟು ಯಾರ್ಯಾರಿಗೆ ಕೊಡಬೇಕೊ ಅವರಿಗೆಲ್ಲ ಕೊಟ್ಟು ಹಾಸ್ಟಲಿಗೆ ಬಂದೆ. ಆ ಕ್ಷಣವೇ ಕ್ಯಾಂಪಸ್ಸನ್ನು ತೊರೆದೆ. ಯಾರಿಗೂ ಹೇಳಲಿಲ್ಲ. ಇಷ್ಟು ಕಾಲ ಪೊರೆದ ಕ್ಯಾಂಪಸ್ಸೇ ನಿನ್ನನ್ನು ಬಿಟ್ಟು ಹೋಗುತ್ತಿರುವೆ. ನಿನ್ನ ಈ ನೆಲದ ಸಾರವನೆಲ್ಲ ತಾಯ ಎದೆ ಹಾಲ ಕುಡಿದಂತೆ ಹೀರಿ ಅರಗಿಸಿಕೊಂಡಿರುವೆ. ಹೋಗುವೆ ನನ್ನ ಮುದ್ದಿನ ನವಿಲುದಾರಿಗಳೇ ಎಂದು ಕತ್ತಲಲ್ಲಿ ಬಂದಿದ್ದೆ”
ʻನನ್ನ ಅನಂತ ಅಸ್ಪೃಶ್ಯ ಆಕಾಶʼ ಮೊಗಳ್ಳಿ ಗಣೇಶ್‌  ಆತ್ಮಕತೆಯ  ಮೂವತ್ತೇಳನೆಯ ಕಂತು. 

Read More

ನಡೆ ಎಲ್ಲೆಂದರಲ್ಲಿಗೆ ನಡೆ

ಹಳ್ಳಿಗೆ ಹೋಗಿ ಹೀಗಾಯಿತು ಎಂದು ಹೇಳಿದರೆ ನನ್ನ ಕನಸು ನನ್ನ ದುಃಖ ಅವರಿಗೆ ಅರ್ಥವಾಗುತ್ತಿರಲಿಲ್ಲ. ಯಾರಿಗೂ ಹೇಳಿಕೊಳ್ಳಲು ಆಗುತ್ತಿರಲಿಲ್ಲ. ಹೇಳಿಕೊಂಡರೆ ನಗುತ್ತಿದ್ದರು. ಜುಜುಬಿ ಫೋಕ್‌ಲೋರ್ ಓದ್ಬುಟ್ಟು ಇಷ್ಟೆಲ್ಲಾ ಬಿಲ್ಡಪ್ ಕೊಡ್ತಿಯಲ್ಲಾ. ನಿನ್ನ ರೇಂಜ್ ಏನಿದೆಯೊ ಅದ್ನೇ ಮೆಯಿಂಟೇನ್ ಮಾಡು ಎಂದಿದ್ದರು ಗೆಳೆಯರು. ನಿಜವಿತ್ತು. ನಾನೇನು ಮಹಾ ತಿಳಿದವನಾಗಿರಲಿಲ್ಲ. ಅವೆಲ್ಲ ಈ ವ್ಯವಸ್ಥೆಯ ಬಲೆಯಿಂದ ತಪ್ಪಿಸಿಕೊಂಡು ಕಣ್ಮರೆಯಾಗಿ ಎಲ್ಲೊ ಹೋಗಿ ಅನಾಥನೇ ಆಗಿ ಬದುಕಲು ಹೂಡುತ್ತಿದ್ದ ವಿಕಟ ವಿನೋದ ದುರಂತ ನಾಟಕ. ಕೆ.ಆರ್.ಮಾರ್ಕೆಟಲ್ಲಿ ಹೋಗಿ ಮೂಟೆ ಹೊತ್ತು ಸಂಸಾರ ನಡೆಸಲು ಇಲ್ಲಿ ತನಕ ಹೋರಾಡಿ ಬರಬೇಕಿತ್ತೇ…
ಮೊಗಳ್ಳಿ ಗಣೇಶ್‌ ಬರೆಯುವ “ನನ್ನ ಅನಂತ ಅಸ್ಪೃಶ್ಯ ಆಕಾಶ” ಆತ್ಮಕತೆ ಸರಣಿಯ 36ನೇ ಕಂತು

Read More

ವ್ಯಾಸರಾವ್‌ ನಿಂಜೂರ್‌ ಆತ್ಮಕಥನದ ಪುಟಗಳು

ಕೊಡವೂರಿನಲ್ಲಿ ಎಂಟನೆಯ ದರ್ಜೆ ತೇರ್ಗಡೆಯಾದ ಬಳಿಕ, ನನ್ನ ಅಣ್ಣ ರಾಮಚಂದ್ರ ಕಲಿಯುತ್ತಿದ್ದ ಮಲ್ಪೆಯ ಫಿಶರೀಸ್ ಹೈಸ್ಕೂಲಿಗೆ ಸೇರಿಕೊಳ್ಳುವುದು ಎಂದು ಮನೆಮಂದಿಯ ಲೆಕ್ಕಾಚಾರವಿತ್ತು. ಅಲ್ಲಿ ಫೀಸಿನಲ್ಲೂ ರಿಯಾಯಿತಿ ಪಡೆಯುವ ಸಂಭವವಿತ್ತು. ಆದರೆ ಅಪ್ಪಯ್ಯನ ತರ್ಕವೇ ಬೇರೆ. `ದೂರ ನಡೆದುಕೊಂಡು ಹೋದರೆ ವಿದ್ಯೆ ತಲೆಗೆ ಹತ್ತುತ್ತದೆ. ಆದ್ದರಿಂದ ಕಲ್ಯಾಣಪುರದ ಮಿಲಾಗ್ರಿಸ್ ಹೈಸ್ಕೂಲೇ ಸಮ’ ಎಂದುಬಿಟ್ಟರು. ಅವರ ಮಾತಿಗೆ ಅಪೀಲೇ ಇಲ್ಲ. ಬರಿಗಾಲಲ್ಲಿ ಕಲ್ಬಂಡೆ, ಅರ್ಕಾಳಬೆಟ್ಟು, ನೇಜಾರು ಮಾರ್ಗವಾಗಿ ಕಲ್ಯಾಣಪುರ ಮುಟ್ಟಲು ಕನಿಷ್ಠ ಒಂದು ಗಂಟೆಯಾದರೂ ಬೇಕು.
ವ್ಯಾಸರಾವ್‌ ನಿಂಜೂರ್‌ ಅವರ ಆತ್ಮಕಥನ “ಎಳೆದ ತೇರು” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಒಳ್ಳೆಯತನವೇ ಆಸ್ತಿಯಾಗಿದ್ದ ಕಾಲವದು

ಜನರು ಸ್ವಾಭಿಮಾನಿಗಳಾಗಿದ್ದರೆ ಹೊರತು ದುರಭಿಮಾನಿಗಳಾಗಿದ್ದಿಲ್ಲ. ಬೇರೆಯವರ ಘನತೆಯನ್ನು ಹಣ, ಅಂತಸ್ತು ಮತ್ತು ಹುದ್ದೆಗಳಿಂದ ಅಳೆಯುತ್ತಿರಲಿಲ್ಲ. ಮಾನವರಿಗೆ ಒಳ್ಳೆಯತನವೇ ಆಸ್ತಿಯಾಗಿತ್ತು. ಈ ಆಸ್ತಿ ಕಳೆದುಕೊಂಡರೆ ಸತ್ತುಹೋದಂತೆಯೆ ಎಂಬ ಭಾವ ಅವರಿಗಿತ್ತು. ಎಲ್ಲ ಸಮಾಜದವರನ್ನು ಗೌರವಿಸುತ್ತ ಸಾಧ್ಯವಾದ ಕಡೆಗಳಲ್ಲೆಲ್ಲ ಅವರ ಆಚರಣೆಗಳಲ್ಲಿ ಭಾಗವಹಿಸುತ್ತ ಎಲ್ಲರೊಳಗೊಂದಾಗಿ ಬದುಕುತ್ತಿದ್ದರು. ರಂಜಾನ್ ದರ್ಗಾ ಬರೆಯುವ  ಆತ್ಮಕತೆ  ‘ನೆನಪಾದಾಗಲೆಲ್ಲ’ ಸರಣಿಯ 26ನೆಯ ಕಂತು 

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ