Advertisement

Tag: ಆಶಾ ಜಗದೀಶ್

ಗಾಢವಾಗಿ ಆವರಿಸಿಕೊಂಡ ಸಾವಿನ ಚಾದರದೊಳಗಿಂದ…

ಸಾವೇ ಹಾಗೆ ಅದು ಉಂಟು ಮಾಡು ಪರಿಣಾಮವೂ ತೀವ್ರತರವಾದದ್ದು. ಹತ್ತಿರದವರ ಸಾವು ನಮ್ಮ ಬದುಕನ್ನು ಪಲ್ಲಟಗೊಳಿಸುವ ರೀತಿ ಎಂಥವರನ್ನೇ ಆಗಲಿ ಮಾನಸಿಕವಾಗಿ ಕುಗ್ಗಿಸಿಬಿಡುತ್ತದೆ. ಅದು ಸಹಜವಾದ ಸಾವಾದರೆ ಅದನ್ನು ಸಹಜವಾಗಿಯೇ ಸ್ವೀಕರಿಸಲು ಪ್ರಯತ್ನಿಸಬಹುದು. ಆದರೆ ಅದು ಕೊಲೆಯೋ, ಆತ್ಮಹತ್ಯೆಯೋ ಆಗಿದ್ದರೆ, ನಿಜಕ್ಕೂ ಅದನ್ನು ಮನಸ್ಸು ಒಪ್ಪಲು, ನಂಬಲು ಸಿದ್ಧವಿರುವುದೇ ಇಲ್ಲ.
ಅಕಾಲಿಕ ಸಮಯದಲ್ಲಿ ಸಾವಿನ ಬಾಗಿಲು ತಟ್ಟಿದ ಹಲವು ಲೇಖಕಿಯರ ಕುರಿತು ಆಶಾ ಜಗದೀಶ್‌ ಬರಹ ನಿಮ್ಮ ಓದಿಗೆ

Read More

ಬೇರು ಮತ್ತು ಬಿಳಲು…

ಒಮ್ಮೆ ದೊಡ್ಡಮ್ಮನಿಗೆ ಅಪರಾತ್ರಿಯಲ್ಲಿ ಎಚ್ಚರ ತಪ್ಪಿಬಿಟ್ಟಿತ್ತು. ಮನೆಯಿಡೀ ಗದ್ದಲ… ದೊಡ್ಡಪ್ಪನ ಜೋರು ಅಳು… ಮನೆಮಂದಿಯೂ ಚಡಪಡಿಸುತ್ತಿದ್ದಾರೆ. ಐದಾರು ವರ್ಷದ ನನಗೆ ಏನು ಮಾಡಲೂ ತಿಳಿಯುತ್ತಿಲ್ಲ. ಕಾಲುಗಳು ನಡುಗುತ್ತಿವೆ. ಹೊಟ್ಟೆ ಚುಳ್ ಎನ್ನುತ್ತಿದೆ. ಅಳು ಗಂಟಲಲ್ಲೆ ಸಿಕ್ಕಿ ಹಾಕಿಕೊಂಡಂಥ ಅನುಭವ. ವಿಪರೀತ ಭಯದಿಂದ ಒಳಕ್ಕೆ ಹೊರಕ್ಕೆ ಕುಣಿಯುತ್ತಾ ಕೊನೆಗೆ ಗಣಿಗೆಯ ಸಂದಿಯಲ್ಲಿ ಹೋಗಿ ನಿಂತಿದ್ದೆ. ಎಷ್ಟು ಹೊತ್ತು ನಿಂತಿದ್ದೆನೋ.. ಮುಂದೆ ಏನಾಯಿತೋ.. ಒಂದೂ ನೆನಪಿಲ್ಲ. ಅಂದು ಕೆಂಪು ಫ್ರಾಕ್ ತೊಟ್ಟಿದ್ದೆ. ಎಲ್ಲ ಅಸ್ಪಷ್ಟ ನೆನಪುಗಳು.
ಇತ್ತೀಚೆಗೆ ಬಿಡುಗಡೆಯಾದ ಆಶಾ ಜಗದೀಶ್‌ ಅವರ “ಕಾಣೆಯಾದವರು” ಲಲಿತ ಪ್ರಬಂಧಗಳ ಸಂಕಲನದ ಒಂದು ಪ್ರಬಂಧ ನಿಮ್ಮ ಓದಿಗೆ

Read More

ಕಲಿಸುವಷ್ಟೇ, ಕಲಿಯುವುದೂ ಇದೆ…

ಈ ಪುಟ್ಟ ವೀಡಿಯೋ ಎತ್ತುವ ಪ್ರಶ್ನೆಗಳು ಅಸೀಮ. ನಾವು ಎಂಥ ವ್ಯವಸ್ಥೆ ಮತ್ತು ಪರಿಸ್ಥಿತಿಯಲ್ಲಿ ಇದ್ದೇವೆ ಎಂದು ನೋವಾಗುತ್ತದೆ. ಆದರೆ ನೋಯುವುದಕ್ಕಿಂತ ಸಧ್ಯದ ಜರೂರತ್ತೆಂದರೆ ನಾವು ನಮ್ಮ ಹೆಣ್ಣುಮಕ್ಕಳ ಬ್ಯಾಗಿನಲ್ಲಿ ಕಸ್ಮೆಟಿಕ್ಸ್ ಗಳಿಗಿಂತಲೂ ಮುಖ್ಯವಾಗಿ ಒಂದು ಬ್ಲೇಡನ್ನೋ ಅಥವಾ ಪೆಪ್ಪರ್‌ ಸ್ಪ್ರೇಯನ್ನೋ ಇಟ್ಟುಕೊಳ್ಳುವ ಅಭ್ಯಾಸ ಮಾಡಿಸಬೇಕಿದೆ. ಮತ್ತದನ್ನು ಸರಿಯಾದ ಸಂದರ್ಭದಲ್ಲಿ ಸರಿಯಾಗಿ ಬಳಸುವುದನ್ನೂ ಕಲಿಸಬೇಕಿದೆ. ಯಾರೋ ಬಂದು ನಮ್ಮನ್ನು ಕಾಪಾಡುತ್ತಾರೆ ಎಂದು ಕಾಯುವ ಬದಲು, ನಮ್ಮನ್ನು ನಾವೇ ಕಾಪಾಡಿಕೊಳ್ಳುವುದು ಒಳಿತಲ್ಲವೇ…
ಆಶಾ ಜಗದೀಶ್‌ ಬರಹ ನಿಮ್ಮ ಓದಿಗೆ

Read More

ಹೂ ನೋಡಿ ಗಿಡದ ಪರೀಕ್ಷೆ

ಹಕ್ಕಿ ಗರಿಗಳ ರಮ್ಯಲೋಕವನ್ನು ಚಿತ್ರಿಸುವ ‘ಹಕ್ಕಿಪುಚ್ಚವೆನ್ನುವ ಬೆಚ್ಚಾನೆ ತಾವು’ ಪ್ರಬಂಧ ಹಕ್ಕಿಪುಕ್ಕವೊಂದು ಹಾರಿಬಂದು, ಪ್ರಾರ್ಥನೆಗೆ ನಿಂತಿರುವ ಮಗುವಿನ ಕೈ ಸೇರಿ, ಆ ಮಗುವಿನ ಮುಖದಲ್ಲಿ ಮಂದಹಾಸ ಮೂಡಿಸುವ ಪ್ರಸನ್ನಚಿತ್ರದೊಂದಿಗೆ ಆರಂಭವಾಗುತ್ತದೆ. ಪುಕ್ಕ ಹಿಡಿದ ನಗುಮುಖದ ಮಗುವಿನ ಚಿತ್ರದೊಂದಿಗೆ ದ.ರಾ. ಬೇಂದ್ರೆ ಅವರ ‘ಗರಿ’ ಕವಿತೆಯನ್ನು ನೆನಪಿಸಿಕೊಳ್ಳಬೇಕು. ‘ಹಾರಲೆಂದು ಹುಟ್ಟಿದ ಹಕ್ಕಿ ಮೈಯ ಬದುಕು’ ಎಂದು ಕವಿ ಉದ್ಗರಿಸುವ, ಪುಕ್ಕದ ಮೂಲಕ ಹಕ್ಕಿಯ ಬದುಕಿನ ಘನತೆಯನ್ನು ಸೂಚಿಸುವ ‘ಗರಿ’ ಬೇಂದ್ರೆಯವರ ಅದ್ಭುತ ಕವಿತೆಗಳಲ್ಲೊಂದು. ಆ ಕವಿತೆ ಕಾಣಿಸುವ ಹಕ್ಕಿಯ ಬದುಕಿನ ಘನತೆ, ಆಶಾ ಅವರ ಪ್ರಬಂಧದಲ್ಲಿ ಹಲವು ರೂಪಗಳಲ್ಲಿ ಚಿತ್ರಣಗೊಳ್ಳುತ್ತದೆ.
ಆಶಾ ಜಗದೀಶ್‌ ಹೊಸ ಪುಸ್ತಕ “ಕಾಣೆಯಾದವರು” ಪ್ರಬಂಧಗಳ ಸಂಕಲನಕ್ಕೆ ರಘುನಾಥ ಚ.ಹ. ಬರೆದ ಮುನ್ನುಡಿ

Read More

ಆಶಾ ಜಗದೀಶ್ ಕಥಾಸಂಕಲನಕ್ಕೆ ಮಾಲಿನಿ ಗುರುಪ್ರಸನ್ನ ಬರೆದ ಮಾತುಗಳು

“ಶೋಷಣೆಗಳಿಗೆ ಹತ್ತುಹಲವು ಮುಖಗಳಿವೆ. ಅವುಗಳಿಂದ ಪಾರಾಗಲೂ ಹತ್ತುಹಲವು ದಾರಿಗಳನ್ನು ಹುಡುಕುತ್ತೇವೆ. ಆ ಶೋಷಣೆಗಳ ವಿರುದ್ಧ ಹೋರಾಡಲು ಯತ್ನಿಸುತ್ತೇವೆ. ಹಾಗಿರುವ ಅನೇಕ ಕಥೆಗಳು ಆಶಾ ಜಗದೀಶ್ ಹೊರತರುತ್ತಿರುವ ಈ ಸಂಕಲನದಲ್ಲಿವೆ. ಸಮಾಜದ ಶ್ರೇಣೀಕೃತ ವ್ಯವಸ್ಥೆ, ಹೆಣ್ಣು ಎಂಬ ಕಾರಣಕ್ಕೆ ಅವಳಿಗೆ ದಕ್ಕಿರುವ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ