Advertisement

Tag: ಕತೆ

ಮಂಜುನಾಯಕ ಚಳ್ಳೂರು ಬರೆದ ಕತೆ “ಫೂ….”

ಆ ಹೊತ್ತು ಅವಳು ಹುಚ್ಚಿಯಂತೆ ಕಾಣುತ್ತಿದ್ದಳು ನನಗೆ. ಮುಖದ ತುಂಬ ಕೈಯಾಡಿಸಿದಳು. ತಲೆ ಸವರಿದಳು. ಯಾಕೋ ಎಷ್ಟೊತ್ತಾದರೂ ನನ್ನ ಬಿಡಲೇ ಇಲ್ಲ. ಅವ್ವ ಅಲ್ಲಿಂದಲೇ, `ಸಾಕ್ ಹೋಗು ಚಂದ್ರಪ್ಪಾ. ಬುಟ್ರ ಲಂಗದಾಗ್ ಸುರುಗ್ಸ್ಯಂತಾಳ್ ಈ ಅಡಾವುಡಿ ನಿನ್ನಾ…’ ಎಂದಳು. ಅತ್ತೆ, `ಯೇ ಮಂಗಾ.. ಬಾಯೈತಂತ ಏನೇನರ ಬೊಗಳ್ಬ್ಯಾಡ. ನನ ಹೊಟ್ಯಾಗ್ ಹುಟ್ಬೇಕಾದದ್ ಇದು. ತಪ್ಪಿ ನಿನ್ ಹೊಟ್ಯಾಗ್ ಹುಟ್ಟೇತಿ.’ ಎಂದುತ್ತರಿಸಿದಳು. ಆಗವಳ ಕೈಗಳು ನಡುಗುತ್ತಿದ್ದವು. ಕೆಂಡದಂತೆ ಬೆಚ್ಚಗಾಗಿದ್ದವು.
ಮಂಜುನಾಯಕ ಚಳ್ಳೂರು ಅವರ “ಫೂ..” ಕಥಾಸಂಕಲನದ ಶೀರ್ಷಿಕೆ ಕತೆ ನಿಮ್ಮ ಈ ಭಾನುವಾರದ ಓದಿಗೆ

Read More

ಆಕರ್ಷ ಕಮಲ ಬರೆದ ಈ ಭಾನುವಾರದ ಕತೆ

ಪಜಲ್ ಪೀಸ್‌ಗಳನ್ನು ಕೆಳಕ್ಕಿರಿಸಿ ಕೀಲಿಕೈಗಳ ಗೊಂಚಲನ್ನು ಚರಂಡಿಗೆ ಎಸೆಯಲು ನಿರ್ಧರಿಸಿದ್ದನೇನೋ ಎನ್ನುವಷ್ಟೇ ವೇಗವಾಗಿ ಎಲಿವೇಟರ್‌ಗಳ ಕಡೆಗೆ ಓಡಿದ. ಹದಿಮೂರನೇ ಮಹಡಿಯಿಂದ ಗ್ರೌಂಡ್ ಫ್ಲೋರ್ ಲಾಬಿಗೆ ಬರುವಷ್ಟರಲ್ಲಿ ಕಚೇರಿಯಿಂದ ಹೊರನಡೆಯುವಾಗ ತನ್ನ ಹೆಸರು ನೆನಪಿಲ್ಲದ ಕಾವಲುಗಾರನಿಗೆ ಏನು ಹೇಳಬಹುದು, ಮನಸ್ಸನ್ನು ನೋಯಿಸದೆ ಪೊಲಿಟಿಕಲಿ ಕರೆಕ್ಟ್ ಆಗಿ ಹೇಗೆ ಮಾತನಾಡಬಹುದು ಎಂದೆಲ್ಲ ಯೋಚಿಸಿದ. ಆಕ್ಸೆಸ್ ಕಾರ್ಡ್ ಇಲ್ಲದೆಯೇ ಮತ್ತೆ ಕಚೇರಿಗೆ ಬರಲೇಬೇಕು.
ಆಕರ್ಷ ಕಮಲ ಬರೆದ ಕತೆ “ಆಯತಾಕಾರದ ನೆರಳು” ನಿಮ್ಮ ಈ ಭಾನುವಾರದ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್ ಕಥೆ

ಈ ದೃಶ್ಯಕ್ಕೆ ಅನತಿ ದೂರದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆಯುತ್ತಿದೆ. ಲಚ್ಚಣ್ಣನಿಗೆ ಎರಡು ದಶಕಗಳ ಕಾಲ ಈ ಊರಿನಲ್ಲಿ ಅನ್ನದ ವ್ಯಾಪ್ತಿ ತೋರಿಸಿದ್ದ ದೇವಿ ಪ್ರಸಾದ ಹೋಟೆಲಿನ ವಸ್ತ್ರಾಪಹರಣ ಮಾಡುತ್ತಿರುವಂತೆ ನಾಲ್ವರು ಕೆಲಸಗಾರರು ಅದರ ಮಾಡಿನ ಹಂಚುಗಳನ್ನು ಕಳಚಿ ಇಳಿಸುತ್ತಿದ್ದಾರೆ. ಆ ಹೋಟೆಲನ್ನು ಮೂರು ದಶಕಗಳ ಕಾಲ ನಡೆಸಿದ್ದ ಗೋಪಾಲಕೃಷ್ಣ ಮಂಜಿತ್ತಾಯರು ಕೊನೆಯುಸಿರೆಳೆದ ತಾಯಿಯ ಶವದೆದುರು ಶತಪಥ ಹಾಕುವ ಆಘಾತಗೊಂಡ ಮಗನಂತೆ ಅತ್ತಿಂದಿತ್ತ ಹೋಗುತ್ತಿದ್ದಾರೆ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್‌ ಬರೆದ ಕತೆ “ವಿದಾಯ” ನಿಮ್ಮ ಓದಿಗೆ

Read More

ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಈ ಭಾನುವಾರದ ಕತೆ

ದೊಡ್ಡ ಮನೆ, ಐದೆಕರೆ ಫಲವತ್ತಾದ ಕೃಷಿಭೂಮಿ, ಅಡಕೆ ತೋಟ ಮೇಲಾಗಿ ಅತ್ತೆ ನಾದಿನಿಯರ ಕಾಟವಿಲ್ಲದ ಎಲ್ಲರೂ ಬಯಸುವ ಕನಸಿನ ಸಂಸಾರ! ಏನು ಕೊರತೆ ಇತ್ತು ಸುಖಕ್ಕೆ? ಆದರೆ ಯಾಕೋ ಅಲ್ಲಿ ಸ್ವರ್ಗಕ್ಕೆ ಕಿಚ್ಚು ಹಚ್ಚುವ ಯಾವುದೇ ಸಂಭ್ರಮ ಕಾಣದೇ ನಿಧಾನವಾಗಿ ಸಂಸಾರದೊಳಗೇ ಅಸಮಾಧಾನದ ಕಿಚ್ಚು ಹೊತ್ತಿಕೊಂಡದ್ದು ಅಷ್ಟು ಬೇಗನೇ ಯಾರ ಅರಿವಿಗೂ ಬರಲಿಲ್ಲ. ಆದರೆ ಎಲ್ಲರ ಅರಿವಿಗೆ ಬರುವ ಹೊತ್ತಿಗೆ ಬಹಳ ತಡವಾಗಿ ಹೋಗಿತ್ತು.
ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಕತೆ “ಶಿಕ್ಷೆ” ನಿಮ್ಮ ಈ ಭಾನುವಾರದ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಧುಸೂದನ ವೈ. ಎನ್. ಕತೆ

ಅವಳು ಚಡಪಡಿಸಿದಳು. ಮುಷ್ಠಿ ಬಿಗಿ ಹಿಡಿದಳು. ಉಗಿದು ಅವನನ್ನು ಓಡಿಸುವುದೋ, ಅಥವಾ ಕಿರುಚಿಕೊಳ್ಳುವುದೋ ಗೊತ್ತಾಗಲಿಲ್ಲ. ಸುಮ್ಮನೆ ನಿರ್ಲಕ್ಷಿಸಿ ನಿಂತರೆ ಹೇಗೆ, ಯೋಚಿಸಿದಳು. ಅವನು ಇದಾವುದರ ಪರಿವೆಯೆ ಇಲ್ಲದಂತೆ ಬಜ್ಜಿ ತಿನ್ನುತ್ತಲೆ ಇದ್ದ. ಅವಕಾಶ ಸಿಕ್ಕಂತೆಲ್ಲ ಅವನು ಹತ್ತಿರ ಸರಿಯುತ್ತಿರುವುದು ಅವಳಿಗೆ ಸ್ಪಷ್ಟವಾಗಿ ಗೊತ್ತಾಗುತ್ತಿತ್ತು.
“ನಾನು ಮೆಚ್ಚಿದ ನನ್ನ ಕತೆ”ಯ ಸರಣಿಯಲ್ಲಿ ಮಧುಸೂದನ ವೈ. ಎನ್. ಬರೆದ ಕತೆ “ಬೋಣಿ”

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ