Advertisement

Tag: ಕ್ರಿಕೆಟ್

150 ವರ್ಷಗಳ ಕ್ರಿಕೆಟ್ ಟೆಸ್ಟ್‌ಗಳಲ್ಲಿ ಎರಡೇ ‘ಟೈ’ ಮ್ಯಾಚುಗಳು!: ಇ.ಆರ್. ರಾಮಚಂದ್ರನ್ ಅಂಕಣ

ಕೊನೆಯ ರನ್ – ಗೆಲುವಿನ ರನ್ ಇಯನ್ ಮೆಕಿಫ್ ಓಡುತ್ತಿದ್ದಾಗ ಜೊ ಸೊಲೊಮನ್ ಬಾಲನ್ನು ಅಟ್ಟಿಸಿಕೊಂಡು ಹೋಗಿ ಹಿಡಿದು ಅದನ್ನು ವಿಕೆಟ್‌ಗೆ ಎಸೆದು ಮೆಕಿಫ್‌ಅನ್ನು ರನ್ ಔಟ್ ಮಾಡಿದರು. ಸೋಲೊಮನ್ ಬಾಲ್ ಎಸೆದಾಗ ಮೂರು ವಿಕೆಟ್‌ಗಳಿದ್ದರೂ ಅವರು ಸ್ಕೊಯರ್ ಲೆಗ್‌ನಲ್ಲಿ ಇದ್ದುದ್ದರಿಂದ ಆ ಜಾಗದಿಂದ ಅವರಿಗೆ ಕಾಣಿಸುತ್ತಿದ್ದ ವಿಕೆಟ್ ಒಂದೇ! ಅವರು ಗುರಿ ಇಟ್ಟು ಹೊಡೆದು ವಿಕೆಟ್‌ಗೆ ಬಿದ್ದು ಮೆಕಿಫ್ ರನ್ ಔಟಾದರು. ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಟೆಸ್ಟ್‌ಮ್ಯಾಚ್‌ಗಳಲ್ಲಿ ಇದುವರೆಗೂ ಆದ ಎರಡು ಟೈ ಮ್ಯಾಚುಗಳ ಕುರಿತ ಬರಹ ನಿಮ್ಮ ಓದಿಗೆ

Read More

ಕ್ರಿಕೆಟ್‌ ಜಗತ್ತಿನ ಕೆಚ್ಚೆದೆಯ ಸರ್ದಾರರು

ಸ್ಟುವರ್ಟ್ ವಿರುದ್ಧ ಸಿಟ್ಟಿನಲ್ಲಿದ್ದ ಯುವ್‌ರಾಜ್‌ ಸ್ಟುವರ್ಟ್ ಬ್ರಾಡ್‌ನ ಬೋಲಿಂಗ್ ಎದುರಿಸಲು ಮುಂದಾದರು. ಅವರ ಸಿಟ್ಟು ಎಷ್ಟರಮಟ್ಟಿಗೆ ಇತ್ತು ಅಂದರೆ ಮುಂದೆ ಅವರು ಆಡಿದ ಪ್ರತಿ ಬಾಲನ್ನೂ ಸಿಕ್ಸರ್‌ಗೆ ಕಳಿಸಿದರು. ಒಂದೊಂದು ಸಿಕ್ಸರ್ ಹೊಡೆದಮೇಲೂ ಫ್ಲಿಂಟಾಫ್ ಕಡೆಗೆ ನೋಡಿ ಬ್ಯಾಟ್ ತಿರುಗಿಸುತ್ತಿದ್ದರು ಯುವ್‌ರಾಜ್‌! ಬ್ರಾಡ್ ಪಾಪ! ಅವರು ಬಹಳ ದೊಡ್ಡ ಬೆಲೆ ತೆರಬೇಕಾಯಿತು. 6 ಬಾಲುಗಳಲ್ಲಿ 36! ಇ ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಯುವ್‌ರಾಜ್‌ ಸಿಂಘ್‌ ಹಾಗೂ ಹರ್ಭಜನ್‌ ಸಿಂಘ್‌ ಆಟದ ಕುರಿತ ಬರಹ ನಿಮ್ಮ ಓದಿಗೆ

Read More

ಮಹಿಳಾ ಕ್ರಿಕೆಟ್ ಲೋಕದ‌ ತಾರೆಯರು….

ಅವರ ಕ್ರಿಕೆಟ್ ಜೀವನದಲ್ಲಿ ಕೋಚ್ ಆಗಿದ್ದ ರಮೇಶ್ ಪವಾರ್ ಅವರ ಜೊತೆ ಹೊಂದಾಣಿಕೆ ಇಲ್ಲದೆ ಕೆಲವು ಘರ್ಷಣೆಗಳಾದವು. ಬಿಸಿಸಿಐ ತನಕ ದೂರುಗಳು ಹೋದವು. ಅವರ ಮತ್ತು ಈಗಿನ ಕಪ್ತಾನ್‌ರ ಹರ್ಮನ್‌ಪ್ರೀತ್ ಕೌರ್ ಮಧ್ಯೆಯೂ ಅಷ್ಟು ಹೊಂದಾಣಿಕೆ ಇರಲಿಲ್ಲ. ಆದರೂ ವೃತ್ತಿಪರ ಸಂಬಂಧವನ್ನು ಬದಿಗಿಟ್ಟು ತಂಡದ ಹಿತಕ್ಕಾಗಿ ಜೊತೆಗೆ ಚೆನ್ನಾಗಿ ಆಡುತ್ತಿದ್ದಾರೆ. ಇದು ಬಹಳ ಮುಖ್ಯ. ವೈಯುಕ್ತಿಕವಾಗಿ ಏನೇ ಒಡಕು ತೊಡಕುಗಳಿರಲಿ ಅದನ್ನು ಬದಿಗಿಟ್ಟು ತಂಡದ ಏಳಿಗೆಗಾಗಿ ಶ್ರಮಿಸುವವರ ಕೊಡುಗೆ ಬಹಳ ಮಹತ್ತರವಾದದ್ದು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ಬರಹ ನಿಮ್ಮ ಓದಿಗೆ

Read More

ಕ್ರಿಕೆಟ್ ಮೈದಾನಗಳು ಮತ್ತು ಕಾಮೆಂಟೇಟರ್ಸ್‌

ಭಾರತದಲ್ಲಿ ಮುಂಚೆ ಟೆಸ್ಟ್ ಮ್ಯಾಚುಗಳು ಆಡುವುದಕ್ಕೆ ಇದ್ದ ಮೈದಾನಗಳು ಕೇವಲ 5. ದೆಹಲಿ, ಮುಂಬೈ, ಕಲ್ಕತ್ತಾ, ಕಾನ್ಪುರ ಮತ್ತು ಮದ್ರಾಸ್ ನಗರಗಳಲ್ಲಿ. ದೆಹಲಿಯ ಫಿರೋಜ್ ಕೋಟ್ಲ, ಮುಂಬೈಯ ಬ್ರೇಬರ್ನ್‌ ಸ್ಟೇಡಿಯಂ, ಕಲ್ಕೊತಾದ ಈಡನ್ ಗಾರ್ಡನ್ಸ್, ಕಾನ್ಪುರದ ಗ್ರೀನ್ ಪಾರ್ಕ್‌, ಮತ್ತು ಚೆನ್ನೈನ ಚೆಪಾಕ್ ಸ್ಟೇಡಿಯಂ. ಆಮೇಲೆ, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ, ಹೈದರಾಬಾದಿನ ಲಾಲ್ ಬಹದ್ದೂರ್ ಸ್ಟೇಡಿಯಂ ಇತ್ಯಾದಿ ಬಂದವು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ಬರಹ ನಿಮ್ಮ ಓದಿಗೆ

Read More

ದ್ರಾವಿಡ್ ಮತ್ತು ಗಂಗೂಲಿ: ಒಂದು ಅಪೂರ್ವ ಜೋಡಿ

ಅವರ ಕ್ರಿಕೆಟ್ಟನ್ನು ಸದಾಕಾಲ ಸ್ಮರಿಸಲು ಕರ್ನಾಟಕದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ, ‘ದ ವಾಲ್‌ʼಗೆ ಒಂದು ಗೋಡೆ ಮೀಸಲಿಟ್ಟು ಅವರ ಚಿತ್ರವನ್ನು ಮಾಡಿಸಿದ್ದಾರೆ. ಇದು ಒಂದು ರೀತಿ ಜನಗಳು, ಕ್ರೀಡಾಭಿಮಾನಿಗಳು, ಮುಂದಿನ ಪೀಳಿಗೆಯವರು ರಾಹುಲ್ ದ್ರಾವಿಡ್‌ರ ಆಟವನ್ನು ಇಲ್ಲಿ ಬಂದು ನೋಡಿ ಅವರ ಆಟವನ್ನು ಸ್ಮರಿಸುವುದಕ್ಕೆ ಅವಕಾಶ. ಅದರ ಮೇಲೆ ಕನ್ಸಿಸ್ಟೆನ್ಸಿ, ಕಮಿಟ್ಮೆಂಟ್, ಕ್ಲಾಸ್ ಎಂದು ಬರೆಸಿದ್ದಾರೆ. ಅರ್ಥಾತ್‌ ಸ್ಥಿರತೆ, ಭದ್ಧತೆ ಮತ್ತು ಆಡುವ ಶಿಸ್ತು ಅನ್ನುವ ಅರ್ಥ ಕೊಡುತ್ತೆ. ಇದೆಲ್ಲವೂ ಅವರ ಆಟಗಾರಿಕೆಯಲ್ಲಿ ನೋಡಬಹುದು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ