Advertisement

Tag: ಗುರುಪ್ರಸಾದ್ ಕಂಟಲಗೆರೆ

ತಗಡಿನ ಸಂದಿಯಿಂದಲೇ ರಂಗೇರಿಸುತ್ತಿದ್ದ ವಸ್ತು ಪ್ರದರ್ಶನ

ನಮಗೂ ಒಂದು ದಿನ ಅದೃಷ್ಟ ಖುಲಾಯಿಸಿ ಬಿಟ್ಟಿತು. ಸೆಕ್ಯುರಿಟಿಯ ಮನಕರಗಿ ಓನರ್ ಇಲ್ಲದ ಸಮಯ ನೋಡಿ ನಮ್ಮನ್ನು ಒಳ ಬಿಟ್ಟಿದ್ದ. ಆ ಸೌಂಡು, ಜಗಮಗ, ರಾಟೆ, ಆಟಗಳು, ಸರ್ಕಸ್‍ನ ಪ್ರಾಣಿಗಳ ಸದ್ದು, ನಗರಿಗರು ಅಲ್ಲಲ್ಲೆ ನಿಂತು ತಿನ್ನುತ್ತಿದ್ದ ತಿನಿಸುಗಳು, ಇವೆಲ್ಲ ಅತ್ಯಾಕರ್ಷಕವಾಗಿದ್ದವು. ಅವನ್ನೆಲ್ಲ ಅನುಭವಿಸಲು ದುಡ್ಡಿಲ್ಲದ ನಾವು ನೋಡಿಯೇ ಹೆಚ್ಚು ಥ್ರಿಲ್ ಆಗುತ್ತಿದ್ದೆವು. ಈಗ ಅವೆಲ್ಲ ಕೈಗೆಟುಕುವಂತೆಯೇ ಇದ್ದರೂ, ಅವನ್ನೆಲ್ಲ ಆಡುವ ಧೈರ್ಯವನ್ನು, ಮನಸ್ಸನ್ನು ಕಳೆದುಕೊಂಡಿದ್ದೇವೆ. ‘ಟ್ರಂಕು ತಟ್ಟೆ’ ಸರಣಿಯಲ್ಲಿ ಗುರುಪ್ರಸಾದ್ ಕಂಟಲಗೆರೆ ಅನುಭವ ಕಥನ.

Read More

ಹೊಟ್ಟೆ ಮತ್ತು ಮನಸ್ಸು ತುಂಬಿದ ಭಾರೀ ಭೋಜನ…

“ಅವರಿಗೆ ಸುಲಭವೆನಿಸಿದ ಲೆಕ್ಕವನ್ನು, ‘ಒಂದಲ್ಲ ನಾಲ್ಕು ಸಲ ಕೇಳಿ ಹೇಳಿ ಕೊಡ್ತಿನಿ’ ಎನ್ನುತ್ತಿದ್ದರು. ಅದೇ ಸಲುಗೆಯ ಮೇಲೆ ಹುಡುಗರೇನಾದರೂ ‘ಇದು ಅರ್ಥ ಆಗ್ಲಿಲ್ಲ ಯಂಗೆ ಸರ್’ ಎಂದು ಕೇಳಿದರೆ ಉಪಾಯವಾಗಿ ತಾವಿರುವಲ್ಲಿಯ ಬೋರ್ಡ್ ಹತ್ತಿರಕ್ಕೆ ಕರೆಸಿಕೊಂಡು. ‘ಇಂಥ ಸುಲಭದ್ದು ಅರ್ಥ ಆಗ್ಲಿಲ್ವ, ಹೇಳಿ ಕೊಡ್ಬೇಕಾದ್ರೆ ಯತ್ತಗೆ ನೋಡ್ತಿರ್ತಿರ, ಎಲ್ಲಾರ ದನ ಕಾಯದ ಬಿಟ್ಟು, ಸ್ಕೂಲಿಗೆ ಯಾಕೆ ಬತ್ತಿರ’ ಎಂದು ಒಂದೇ ಉಸಿರಿಗೆ ಬೈಯುತ್ತ ಕನಿಷ್ಠ ಎರೆಡು ಕೋಲು ಮುರಿಯುವವರೆಗೂ ಹೊಡೆಯುತ್ತಿದ್ದರು.”

Read More

ನಾಟಕದ ಹೊಟ್ಟೆ ನೋವೂ ಮತ್ತು ತಪ್ಪಿದ ಹಾಜರಾತಿ

ನಮ್ಮ ಅಡುಗೆ ಭಟ್ಟರು, ಹಿರಿಯ ವಿದ್ಯಾರ್ಥಿಗಳು ಆಗಿಂದಾಗ್ಗೆ ಈ ಬಗ್ಗೆ ಆಡುತ್ತಿದ್ದ ಮಾತುಗಳನ್ನು ಕೇಳಿಸಿಕೊಂಡಿದ್ದೆವಾದರೂ ಹುಡುಗು ಬುದ್ಧಿಯ ನಮಗೆ ಇದೇನು ಮುಖ್ಯ ಎನಿಸಿರಲಿಲ್ಲ. ಅದುವರೆಗೆ ನಾವ್ಯಾರು ಅದನ್ನು ನೋಡಿರಲಿಲ್ಲ. ನೋಡಿರದ ನಮ್ಮಗಳ ಕಲ್ಪನೆಯಲ್ಲಿ ಹೊಸ ಹಾಸ್ಟೆಲ್ ‘ಹತ್ತಾರು ರೂಮುಗಳಿವೆಯಂತೆ! ತರಗತಿಗೊಂದೊಂದು ರೂಮು ಕೊಡುತ್ತಾರಂತೆ! ಸ್ನಾನಕ್ಕೆ ಕಕ್ಕಸ್ಸಿಗೆಲ್ಲ ಸಪರೇಟ್ ರೂಮುಗಳಿವೆಯಂತೆ! ಸದಾ ನೀರು ಬರುತ್ತಲೇ ಇರುತ್ತದಂತೆ! ದಿನಾ ಸ್ನಾನ ಮಾಡಬೇಕಂತೆ!”

Read More

ಚಿತ್ರಾನ್ನದಲ್ಲಿ ಕಡ್ಳೆ ಬೀಜಕ್ಕಾಗಿ ಹೋರಾಟ

ಹಿಂದಿನ ಬೆಂಚಿನಲ್ಲಿ ಸತೀಶ ಎಂಬ ತೀಟಲೆ ಹುಡುಗನಿದ್ದ. ಅವನು ಗುಂಪು ಕಟ್ಟಿಕೊಂಡು ‘ಮರಿ’ ಜಾಗದಲ್ಲಿ ‘ಮುದಿ’ ಸೇರಿಸಿ ರಾಗವಾಗಿ ಹೇಳುತ್ತಿದ್ದನು. ಈ ಅಪಬ್ರಂಶವನ್ನು ಕೇಳಿದ್ದೆ ತಡ, ಧ್ವನಿ ಬಂದ ಕಡೆಗೆ ನುಗ್ಗಿ ಕೈಗೆ ಸಿಕ್ಕಿದವರನ್ನು ರಪರಪನೆ ಚೆಚ್ಚಿ ಬಿಡುತ್ತಿದ್ದರು. ಎಷ್ಟು ಸರ್ತಿ ಹೇಳಿಕೊಟ್ಟರೂ ಕೆಲ ಹುಡುಗರು ಮತ್ತೆ ಮತ್ತೆ ಹಾಗೆ ಹೇಳುತ್ತಿದ್ದರು. ಇದರಿಂದ ಉರಿದು ಬೀಳುತ್ತಿದ್ದ ಮಾಸ್ಟರ್ ಸಿಟ್ಟಿನಿಂದಲೇ ಹಾರ್ಮೋನಿಯಂ ಎತ್ತಿಕೊಂಡು ಹೊರ ಹೋಗಿಬಿಡುತ್ತಿದ್ದರು.
ಗುರುಪ್ರಸಾದ್ ಕಂಟಲಗೆರೆ ಬರೆಯುವ ‘ಟ್ರಂಕು-ತಟ್ಟೆ’ ಸರಣಿಯ ಐದನೆಯ ಕಂತು

Read More

ಹಂಪ್ ಮೇಲೆ ಚೆಲ್ಲಿದ ರಕ್ತದ ಕಲೆಗಳ ಭಯ

ನನಗೆ ಆ ದಿನಗಳಲ್ಲಿ ಮಧ್ಯರಾತ್ರಿ ಹನ್ನೆರೆಡಕ್ಕೆ ಸರಿಯಾಗಿ ಎಚ್ಚರಾಗುತ್ತಿತ್ತು. ತಲೆ ತುಂಬ ರಗ್ಗು ಹೊದ್ದು ಕಣ್ಣು ಮುಚ್ಚಿಕೊಂಡರೂ ನಿದ್ರೆ ಬರುತ್ತಿರಲಿಲ್ಲ. ಸದಾ ಎಚ್ಚರವಾಗೆ ಇರುತ್ತಿದ್ದೆ. ಎದೆ ಕಂಪಿಸುತ್ತಿತ್ತು. ಅಲುಗಾಡದೆ ಮುದುರಿಕೊಂಡಿರುತ್ತಿದ್ದೆ. ವಿಶಲ್ ಊದುತ್ತಾ ಲಾಟಿ ಬಡಿಯುತ್ತ ಬರುವ ಗೂರ್ಖನ ಬೂಟುಗಾಲಿನ ಸದ್ದು ಕೇಳಿಸುತ್ತಿತ್ತು. ಸರಿಯಾಗಿ ಹನ್ನೆರೆಡು ಗಂಟೆಗೆ ರೈಲಿನ ಬೆಲ್ಲು ಢಣಗುಡುತ್ತಿತ್ತು. ರೈಲು ಬರುವ ಸದ್ದು ಕೇಳಿದ ತಕ್ಷಣ ನನ್ನ ಕಲ್ಪನೆಗಳು ಗರಿಗೆದರುತ್ತಿದ್ದವು.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ