Advertisement

Tag: ಡಾ.ವಿನತೆ ಶರ್ಮಾ

ಹೊರಾಂಗಣ ಕಲಿಕೆ ಮತ್ತು ಹೆಣ್ಣಿನ ಒಳದನಿ: ವಿನತೆ ಶರ್ಮಾ ಅಂಕಣ

“ಕೇವಲ ಹೊರಾಂಗಣ ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಕಾರಣದಿಂದಲೇ ಅದೆಷ್ಟೋ ಹೆಂಗಸರ ಗಂಡು ಜೀವನಸಂಗಾತಿಗಳು ಅವರನ್ನು ಬಿಟ್ಟುಹೋದದ್ದಿದೆ. ತಾಯಂದಿರು ತಮ್ಮ ಹೆಣ್ಣುಮಕ್ಕಳಿಗೆ ಧೈರ್ಯವನ್ನು ತುಂಬಿ ಆತ್ಮಸ್ಥೈರ್ಯವನ್ನು ಹೆಚ್ಚಿಸಿದ ಕಥೆಗಳಿವೆ. ತಮ್ಮ ಖಾಸಗಿ ಜೀವನದಲ್ಲಿನ ತಮ್ಮ ಸ್ವಲಿಂಗ ಸಂಬಂಧ ಆಯ್ಕೆಯಿಂದಾಗಿ ಕೆಲವರು ಕೆಲಸದ ಸ್ಥಳದಲ್ಲಿ ತಾರತಮ್ಯಕ್ಕೊಳಗಾಗಿ, ಬೆರಳು ತೋರಿಸುವ ಮಂದಿಯ ಕೈಯಲ್ಲಿ ಅನಿಸಿಕೊಂಡು ತಮ್ಮ ವೃತ್ತಿಜೀವನದಲ್ಲಿ ಅದೆಷ್ಟು ನರಳಿದ್ದಾರೆ…”

Read More

ದನಿಯ ಒಂದು ಹನಿಯಾದಾಗ: ವಿನತೆ ಶರ್ಮಾ ಅಂಕಣ

“ಪೂರ್ವ-ಪಶ್ಚಿಮ ದೇಶಗಳಲ್ಲಿ, ಉತ್ತರ-ದಕ್ಷಿಣ ಧ್ರುವಗಳಲ್ಲಿ, ಒಳನಾಡು-ಹೊರನಾಡಿನಲ್ಲಿ ಜನನುಡಿಗೆ ಬೆಲೆ ಸಂದ ಉದಾಹರಣೆಗಳು ನಮ್ಮಲ್ಲಿವೆ. ಜನನಾಯಕರು ಸಾಮಾನ್ಯಜನರ ಸತ್ಯಕ್ಕೆ ತಲೆಬಾಗಿದ ನಿದರ್ಶನಗಳಿವೆ. ಆದರೂ … ಉರುಳುತ್ತಿರುವ ಕಾಲಚಕ್ರ ಕೆಲ ಕಹಿಸತ್ಯಗಳನ್ನು, ಕೆಲ ಗುರುತರ ಬದಲಾವಣೆಗಳನ್ನು ದಾಖಲಿಸುತ್ತಿದೆ. ಅಮೆರಿಕ ದೇಶದ ಈ ಹಿಂದಿನ ಅಧ್ಯಕ್ಷ ಒಬಾಮ ಹೇಳಿದಂತೆ ‘ವಯಸ್ಸಾದ ಕೆಲ ಹಿರಿಯರು ಅದರಲ್ಲೂ ಗಂಡಸರು’ ತಪ್ಪು ಮಾಡುತ್ತಿದ್ದಾರೆ.”

Read More

ದೇಸಿ ವಿದ್ಯಾರ್ಥಿಗಳ ವಿದೇಶಿ ಹಾಡುಪಾಡು: ವಿನತೆ ಶರ್ಮಾ ಅಂಕಣ

“ಇಷ್ಟೆಲ್ಲಾ ಆಗುವಷ್ಟರಲ್ಲಿ ಅವನ ಇಬ್ಬರು ಸ್ನೇಹಿತರು ವಾಪಸ್ ಹೈದರಾಬಾದಿನ ತಮ್ಮನೆಗೆ ವಾಪಸ್ಸಾಗಿದ್ದರು. ಇವನು ಆಶಾವಾದಿ, ದೇಶದ ಆರ್ಥಿಕತೆಗೆ ಅನುಕೂಲವಾಗುವ ಮತ್ತೊಂದು ಆರು ತಿಂಗಳ ಕೋರ್ಸಿಗೆ ಸೇರಿಕೊಂಡು ಪಾರ್ಟ್ ಟೈಮ್ ವಿದ್ಯಾರ್ಥಿಯಾದ. ಈಗ ಆ ಕೋರ್ಸನ್ನ ಮಾಡುತ್ತಲೇ ಜೀವನೋಪಾಯಕ್ಕಾಗಿ ಎರಡು ಕಡೆ ಕೆಲಸ ಮಾಡುತ್ತಿದ್ದಾನೆ. ಅವನ ಒಂದು ಉದ್ಯೋಗವಿರುವುದು ಪಿಜ್ಝಾ ಅಂಗಡಿಯಲ್ಲಿ..”

Read More

ಹಲ್ಲಿ, ಹಾವು, ಚೇಳುಗಳ ಸ್ವರ್ಗ!: ಡಾ.ವಿನತೆ ಶರ್ಮಾ ಅಂಕಣ

“ಹೇಳಿಕೇಳಿ, ಆಸ್ಟ್ರೇಲಿಯಾದ ಪರಿಸರ ಬಹು ಸೂಕ್ಷ್ಮವಾದದ್ದು, ಬೇರೆ ಖಂಡಗಳಿಗಿಂತ ಭಿನ್ನವಾದದ್ದು. ಪರದೇಶದಿಂದ ಆಮದಾಗಿ ಬಂದ ಕಪ್ಪೆ ಈ ದೇಶದ ಸ್ವಾಭಾವಿಕ ಪರಿಸರಕ್ಕೆ ಮತ್ತು ಜೀವಚರಗಳಿಗೆ ದುಃಸ್ವಪ್ನವಾಗಿಬಿಟ್ಟಿತು. ಈ ಕಪ್ಪೆಯ ವಂಶಾಭಿವೃದ್ದಿಯನ್ನ ತಡೆಗಟ್ಟಲು, ಅದನ್ನು ಧೈರ್ಯದಿಂದ ಎದುರಿಸಿ ನುಂಗಿ ನೀರುಕುಡಿಯಲು ಇಲ್ಲಿ ಯಾವುದೇ ಪರಭಕ್ಷಕ ಪ್ರಾಣಿ ಇರಲಿಲ್ಲ. ಕಪ್ಪೆಗೆ ಆಸ್ಟ್ರೇಲಿಯಾದಲ್ಲಿ ಯಾವ ಎದುರಾಳಿಯೂ ಇಲ್ಲವಾಗಿ, ಇಲ್ಲಿನ ಸ್ವಾತಂತ್ರ್ಯ ಅದಕ್ಕೆ ತುಂಬಾ ಇಷ್ಟವಾಗಿಹೋಯ್ತು.”

Read More

ಮೊಬೈಲ್ ಸ್ಕೂಟರ್ ನ ‘ವಿಶೇಷ’ ಕತೆಗಳು: ವಿನತೆ ಶರ್ಮಾ ಅಂಕಣ

“ವಿಶೇಷ ಸಾಮರ್ಥ್ಯರಿಗೆ ಕಷ್ಟಗಳಿಗಿಂತ ಸವಾಲುಗಳೇ ಹೆಚ್ಚು. ಹೆಚ್ಚಿನಪಾಲು ಸಮಾಜ ಅವರನ್ನು, ಅವರ ಮನಃಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಸೋತಿದೆ ಅನಿಸುತ್ತದೆ. ನನ್ನ ಪಕ್ಕ ಸ್ಕೂಟರಿನಲ್ಲಿ ಸಾಗಿದ್ದ ಅವರಿಬ್ಬರೂ ರಸ್ತೆಯ ಏರುತಗ್ಗುಗಳ ಪ್ರಕಾರ ವೇಗವನ್ನು ನಿಯಂತ್ರಿಸುತ್ತಿದ್ದರು. ಅವನ, ಅವಳ ಅಂದಿನ ದಿನದಲ್ಲಿ ಅದೇನೆಲ್ಲಾ ಏರುತಗ್ಗುಗಳಿದ್ದವೋ ಯಾರು ಬಲ್ಲರು? ಇಬ್ಬರಿಗೂ ಆ ದಿನ ಎರಡು ಹೊತ್ತಿನ ಪೂರ್ತಿ ಊಟ ಸಿಕ್ಕಿತ್ತೇ?”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ