Advertisement

Tag: ದಾದಾಪೀರ್ ಜೈಮನ್

ನಿಂತಲ್ಲಿ ಕುಂತಲ್ಲಿ ಕಾಡುವ ಕಥೆ ಬರೆದ ದಾದಾ

ಇಲ್ಲಿರುವ ಎಲ್ಲಾ ಕತೆಗಳಿಗಿಂತ ಕೊನೆಯ ಕತೆ ‘ಎಲ್ಲೋ ಯಲ್ಲೋ’
ಕಥೆಯೇ ಯಾಕೆ ಜಾಸ್ತಿ ಇಷ್ಟವಾಯಿತು ಅಂದುಕೊಂಡರೂ ಯಾವುದ್ಯಾವುದೋ ಕಾರಣಗಳು ತೋಚುತ್ತವೆ. ಆದರೆ ಮುಖ್ಯವಾಗಿ ಇಷ್ಟವಾಗಿದ್ದು ಒಂದು ಗಂಡು ಮತ್ತು ಹೆಣ್ಣಿನ ನಡುವೆ ಇರಬಹುದಾದ ಸಹಜವಾದ ಗೆಳೆತನದ ರೀತಿ ಮತ್ತು ಒಬ್ಬಳು ಶಿಕ್ಷಕಿಯ ಗಂಡನಾಗಿ ಅವರ ಕಷ್ಟ‌ನಷ್ಟಗಳ ಬಗ್ಗೆ ಅರಿವಿರುವುದು. ಹೇಗೆ ಹುಡುಗ ಹುಡುಗ ಆತ್ಮೀಯ ಗೆಳೆಯರಾಗಿರಲು ಸಾಧ್ಯವೋ ಅದೇ ರೀತಿ ಹುಡುಗ ಹುಡುಗಿ ಕೂಡಾ ಅದೇ ಆತ್ಮೀಯತೆಯಲ್ಲಿರಲು ಸಾಧ್ಯ. ಸಮಾಜ ಈ ವಿಷಯದಲ್ಲಿ ಮುಂಚಿನಷ್ಟು ಮಡಿವಂತಿಕೆ ಇಟ್ಟುಕೊಂಡಿಲ್ಲವಾದರೂ ಪೂರ್ತಿ ಬದಲಾಗಿಯೂ ಇಲ್ಲ.
ಗಿರಿಧರ್‌ ಗುಂಜಗೋಡು ಬರೆಯುವ “ಓದುವ ಸುಖ” ಅಂಕಣ

Read More

ಜಂಕ್ಷನ್ ಪಾಯಿಂಟಿನ ಕಥೆಗಾರನಿಗೆ ಕೆಂಡಸಂಪಿಗೆಯ ಅಭಿನಂದನೆಗಳು

ಕನ್ನಡದ ತರುಣ ಕತೆಗಾರ ಹಗರಿಬೊಮ್ಮನಹಳ್ಳಿಯ ದಾದಾಪೀರ್ ಜೈಮನ್ ತಮ್ಮನ್ನು ಕಲಾಭ್ಯಾಸಿ ಎಂದೇ ಗುರುತಿಸಿಕೊಳ್ಳಲು ಇಷ್ಟಪಡುತ್ತಾರೆ. ಅವರ ಮೊದಲ ಕಥಾಸಂಕಲನ ‘ನೀಲಕುರಿಂಜಿ’ ಕೇಂದ್ರ ಸಾಹಿತ್ಯ ಅಕಾಡೆಮಿಯ 2022ರ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರಶಸ್ತಿಗಳು ಪ್ರಕಟವಾದಾಗ ಎದುರಾಗುವ ಸಂಭ್ರಮಗಳು, ಜೊತೆಗೇ ಬರುವ ಟೀಕೆಗಳು ಇತ್ಯಾದಿ  ಸಾಹಿತ್ಯ ಕೃತಿಗಳು ಎದುರಿಸಬೇಕಾದ ʻಮಂಥನʼ ಎಂದು ಹೇಳುತ್ತ ಈ ಕ್ಷಣವನ್ನು ಸ್ವೀಕರಿಸಿದ್ದೇನೆ ಎನ್ನುತ್ತಾರೆ ದಾದಾಪೀರ್ . ಕೆಂಡಸಂಪಿಗೆಯಲ್ಲಿ ‘ಜಂಕ್ಷನ್ ಪಾಯಿಂಟ್’ ಅಂಕಣ ಬರೆಯುತ್ತಿರುವ ದಾದಾಪೀರ್ ಪ್ರಶಸ್ತಿ ಪಡೆದ ಸಂಭ್ರಮವನ್ನು ಸಂಕೋಚದಿಂದಲೇ ಇಲ್ಲಿ ಹಂಚಿಕೊಂಡಿದ್ದಾರೆ.

Read More

ತೇರು, ಅಲಾಯಿ ದೇವರು ಮತ್ತು ಚವಂಗಿ ಕಲ್ಲು

ರಂಜಾನ್ ಹಬ್ಬದ ದಿನ ಅಮ್ಮ ನನ್ನನ್ನು ಬೆಳಿಗ್ಗೆಯೇ ಎಬ್ಬಿಸಿ ಗುಡಿಸಲಿನ ನೆರಕೆಯ ಪುಟ್ಟ ಬಚ್ಚಲಲ್ಲಿ ಎಂಟಾಣೆ ಕ್ಲಿನಿಕ್ ಪ್ಲಸ್ ಶಾಂಪೂ ಎಂಬ ಲಕ್ಷುರಿ ಬೆರೆಸಿ ಸ್ನಾನ ಮಾಡಿಸಿ, ಸಕ್ಕರೆ ರೇಟು ಜಾಸ್ತಿ ಎಂದು ಬೆಲ್ಲ ಹಾಕಿದ ಶಾವಿಗೆ ಖೀರು ಮಾಡಿ ಒಂದು ಪುಟ್ಟ ಟಿಫನ್ ಕ್ಯಾರಿಯರಲ್ಲಿ ಇಡೀ ಓಣಿಗೆಲ್ಲಾ ತುಂಬಿಕೊಡುತ್ತಿದ್ದಳು. ಚಿಕನ್ ಕೊಳ್ಳಲು ದುಡ್ಡಿಲ್ಲದೆ ಇದ್ದರೂ ಆಲೂಗಡ್ಡೆ ಸಾರನ್ನೇ ಮಾಡಿ ಅದನ್ನೇ ಚಿಕನ್ ಎಂದು ಅಮ್ಮ ನೂರಿ ನಂಬಿಸಬಲ್ಲವಳಾಗಿದ್ದಳು. ನಮ್ಮ ಓಣಿಯ ಛಲವಾದಿಗಳಾಗಿದ್ದ ರೂಪ, ರೇಖಿ, ಪರುಸ, ಕೆಂಚತ್ತಿ, ಸುಶೀಲತ್ತಿ, ಹಾಲಪ್ಪ ಮಾಮ ಎಲ್ಲರೂ ಶಾವಿಗೆ ಖೀರಿಗಾಗಿ ಕಾಯುತ್ತಿದ್ದರು.
ದಾದಾಪೀರ್‌ ಜೈಮನ್‌ ಬರೆಯುವ ಜಂಕ್ಷನ್‌ ಪಾಯಿಂಟ್‌ ಅಂಕಣ

Read More

ಕಮಿಷನ್ ಕನಕನ ನಿಧಿ ಶೋಧದ ಕಥೆ

ಅಣೋ, ನನ್ ಪ್ರೀತಿಸ್ತಾ ಇರೋ ಹುಡುಗಿ ತೋರಿಸ್ತೀನಿ.’ ಎಂದು ಫೋನಿನಲ್ಲಿ ವಿ ಪ್ಯಾಟರ್ನ್ ಹಾಕಿ ಲಾಕ್ ತೆರೆದು ‘ಇವಳೇ ನೋಡಣೋ’ ಎಂದು ತೋರಿಸಿದ. ನಾನೆ ಪೂರ್ವಗ್ರಹದಿಂದ  ‘ನಿಜಕ್ಕೂ ಪ್ರೀತಿಸ್ತಾ ಇದ್ಯೇನೋ? ಅಥವಾ ಫ್ರೆಂಡ್ಸ್ ವಿಥ್ ಬೆನಿಫಿಟ್ಸ?’ ಅಂತ ಕೇಳಿದೆ. ಅದಕ್ಕವನು ತುಂಬಾ ಕ್ಲಾರಿಟಿಯಿಂದ ‘ನನಗೆ ಅವಳಿಷ್ಟ. ಅವಳಿಗೆ ನಾನಿಷ್ಟ. ಮದ್ವೆ ಯಾಕಗಬಾರದು?’ ಎಂದು ತುಂಬಾ ನಿಖರವಾಗಿ ಹೇಳಿದ. ನಾನು ನನ್ನ ಮನಸ್ಸಿನಲ್ಲಿ ‘ಎಲಾ ಚಾಲಾಕಿ!’ ಎಂದುಕೊಂಡೆ. ದಾದಾಪೀರ್‌ ಜೈಮನ್‌ ಬರೆಯುವ ಜಂಕ್ಷನ್‌ ಪಾಯಿಂಟ್‌ ಅಂಕಣ

Read More

ಮಲ್ಲಿಕಾ ಮತ್ತು ಸೌಭಾಗ್ಯಮ್ಮ … ಎರಡು ಪ್ರಸಂಗಗಳು

ಪ್ರತಿ ಅರ್ಧ ಗಂಟೆಗೊಮ್ಮೆ ಸಾವನ್ನು ಮಡಿಲಲ್ಲಿಟ್ಟುಕೊಂಡು ಸರಿದಾಡುವ ಆಂಬುಲೆನ್ಸ್ ಸದ್ದಿಗೆ ಸಂಕಟವಾಗುತ್ತಿದ್ದ ಹೊತ್ತದು. ಕೆಳಗಡೆ ಶುರುವಾದ ಗಿಜಿ ಗಿಜಿ ಕೇಳಿ ಕಿಟಕಿಯಿಂದ ನೋಡಿದಾಗ ಪೀಜಿ ಓನರ್ ಮತ್ತು ಅವನ ಹೆಂಡತಿ ಸುನೀತಕ್ಕ ಆಂಬುಲೆನ್ಸ್ ಹತ್ತುತ್ತಿದ್ದರು. ಕೂಡಲೇ ಕೆಳಗಡೆ ಓಡಿಹೋದೆ. ನಾನು ಹೋಗುವುದಕ್ಕೂ ಅಂಬುಲೆನ್ಸಿನ ಬಾಗಿಲು ಮುಚ್ಚುವುದಕ್ಕೂ ಸರಿ ಹೋಯಿತು. ಆ ಕ್ಷಣಭಂಗುರತೆಯ ಸಮಯದಲ್ಲೇ ನನಗೆ ಕಂಡಿದ್ದು ಕಣ್ಣೀರು ತುಂಬಿಕೊಂಡಿದ್ದ ಸುನೀತಕ್ಕನ ಕಣ್ಣುಗಳು…
ದಾದಾಪೀರ್‌ ಜೈಮನ್‌ ಅಂಕಣ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ