Advertisement

Tag: ನಾಗಶ್ರೀ ಅಜಯ್‌

ಅಂತಃಕರಣದ ಹಣತೆ ಬೆಳಗುವ ಸಮಯ

ಮಕ್ಕಳು ಈಗಲ್ಲದೆ ಮತ್ಯಾವಾಗ ತಂಟೆ ಮಾಡಬೇಕು? ಇನ್ನೆಂದು ಮನಸೋ ಇಚ್ಚೆ ತಿಂದು ಕುಡಿದು ಖುಷಿಪಡಬೇಕು? ಎಂದು ಅಪ್ಪನಿಗೆ ಎದುರಾಡುತ್ತಿದ್ದ ಅವಳಿಗೆ ನಮ್ಮ ಬಾಲ್ಯ ಅವಳ ಬಾಲ್ಯದ ಕಿಟಕಿಯಾಗಿತ್ತು. ಮಕ್ಕಳನ್ನು ಓದಿಸುವ, ಬೆಳೆಸುವ, ಜವಾಬ್ದಾರಿಯಲ್ಲಿ ಮುಳುಗಿಹೋದ ಆಕೆ ಬಿಡುವು ಮಾಡಿಕೊಂಡು ಹೊಲಿಯುತ್ತಿದ್ದ ಬಟ್ಟೆ, ಹಾಕುತ್ತಿದ್ದ ರಂಗೋಲಿ, ಕಸೂತಿ, ಓದುತ್ತಿದ್ದ ಪುಸ್ತಕಗಳು ದಿನಕಳೆದಂತೆ ಕಡಿಮೆಯಾಯಿತು. ಸ್ವಂತಕ್ಕೆ ಸಮಯ ಕೊಟ್ಟುಕೊಳ್ಳಲಾಗದ ಸಾದಾ ಗೃಹಿಣಿಯಾಗಿ ಹಲವು ಕಾಲ ಕಳೆದಳು.
ಎಸ್. ನಾಗಶ್ರೀ ಅಜಯ್‌ ಬರೆಯುವ ಲೋಕ ಏಕಾಂತ ಅಂಕಣ

Read More

ಸುಂದರಿಗೇನು ಕಷ್ಟ-ಸುಖಗಳಿರುವುದಿಲ್ಲವೇ?

ಇರುವ ಚೆಂದವನ್ನು ಕಾಪಾಡಿಕೊಳ್ಳಬೇಕೆಂಬ ಒತ್ತಡ ಸೃಷ್ಟಿಸುವ ತಾಕಲಾಟ ಬಲ್ಲೆ. ಒಂದೇ ಘಟ್ಟದಲ್ಲಿ ಹೆಚ್ಚು ಕಾಲ ಇರಲಾಗದು. ನಿಧಾನಕ್ಕೆ ಈ ಜತನ ಮಾಡುವ ಉಸಾಬರಿ ಸಾಕೆನ್ನಿಸಿತು. ಹೊರಗೆ ‘ಕಾಣುವ’ ಚೆಂದಕ್ಕಿಂತ ನಾನು ಬೇರೆ ಅನ್ನಿಸಿತು. ಎಷ್ಟೇ ಕಷ್ಟಪಟ್ಟರೂ ಕಾಲನ ಹೊಡೆತ ತನ್ನ ಕೆಲಸ ಮಾಡಿಯೇ ತೀರುತ್ತದೆ. ಕಾಲದೊಂದಿಗೆ ಹೋರಾಡುವುದಕ್ಕಿಂತ ನನ್ನ ವ್ಯಕ್ತಿತ್ವ, ಪ್ರತಿಭೆ, ಬುದ್ಧಿ, ಮನಸ್ಸಿನ ಜೊತೆ ಗುದ್ದಾಡುತ್ತಾ ಬೆಳೆಯುವುದರಲ್ಲಿ ಬದುಕಿನ ಸೌಂದರ್ಯವಿದೆ. ಈ ಸಮಯ ಮತ್ತೆ ಬರಲಾರದು. ಈ ಅವಕಾಶ ಮತ್ತೆ ಸಿಗಲಾರದು. ಹಠಕ್ಕೆ ಬಿದ್ದಂತೆ ಸಂಗೀತ ಮುಂದುವರೆಸಿದೆ.
ನಾಗಶ್ರೀ ಅಜಯ್‌ ಬರೆಯುವ ಲೋಕ ಏಕಾಂತ ಅಂಕಣ

Read More

ಹೆಸರಿಲ್ಲದ ಬಂಧಗಳ ಬಾಹುಗಳಲ್ಲಿ…

ಕೆಲವು ಕೆಟ್ಟ ಸನ್ನಿವೇಶಗಳಲ್ಲಿ ಈ ಪ್ರಪಂಚವೇ ನಮ್ಮ ವಿರುದ್ಧ ನಿಂತಿದೆಯೇನೋ ಎನ್ನಿಸುವ ಹೊತ್ತಿನಲ್ಲಿ ಇಂತಹ ಹಚ್ಚನೆಯ ಹಿತವನ್ನು ಸವರಿದ ಸಂದರ್ಭಗಳನ್ನು ಮೆಲುಕು ಹಾಕಬೇಕು. ಬಹುಶಃ ಈ ಪ್ರಪಂಚ ನಡೆಯುತ್ತಿರುವುದೇ ಇಂತಹ ಅಜ್ಞಾತ ಕೈಗಳ ಅಭಯದಿಂದ. ಪ್ರತಿದಿನವೂ ಸಿಗುವ ಅವಕಾಶ ಇರುವ, ಸಂಬಂಧಗಳಿಂದ ಅಂಟಿಕೊಂಡ, ಸ್ನೇಹ-ವ್ಯವಹಾರ-ವಿಶ್ವಾಸ- ಪರಿಚಯದ ಮುಸುಕು ಹೊದ್ದ ದಿನನಿತ್ಯದ ಕೊಡು-ಕೊಳ್ಳುವಿಕೆಗೆ ಒಂದು ತೂಕವಾದರೆ, ಮತ್ತೊಮ್ಮೆ ಸಿಗುವ ಸಾಧ್ಯತೆಯೇ ಕ್ಷೀಣವಾಗಿರುವ ಅಪ್ಪಟ ಮನುಷ್ಯಸಂಬಂಧವಾಗಿ ಎದುರಾಗುವ ಉಪಕಾರಗಳದ್ದು ಮತ್ತೊಂದು ವಜನು.

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ...

Read More

ಬರಹ ಭಂಡಾರ