ಸೂಕ್ಷ್ಮ ಅಂಶಗಳ ನೇಯ್ಗೆಯಲ್ಲಿ ಸಂಕೀರ್ಣ ಭಾವಬಿಂಬ

ಸಮಾಜ ʻಕುರೂಪಿʼ ಗುರುತಿಸಿದ,  ಹೆಣ್ಣೊಬ್ಬಳ ಮಾನಸಿಕ ತುಮುಲದ ಕಥೆಯೇ ‘ಅವಿವಾಹಿತೆ’. ಬಹಿರಂಗದ ಸೌಂದರ್ಯಕ್ಕಿಂತ ಆಂತರಿಕ ಸೌಂದರ್ಯವೇ ಮುಖ್ಯವೆಂಬ ಭಾವನೆ ಪ್ರತಿಯೊಬ್ಬರಲ್ಲಿ ತುಂಬಿರುತ್ತದೆ. ಆದರೆ ಅಂತರಂಗದ ನಿಷ್ಕಲ್ಮಷ ಹಾಗೂ ನಿರ್ಮಲವಾದ ಭಾವನೆ ಪರಿಗಣನೆಗೆ ಬಾರದ ಸಮಾಜದಲ್ಲಿ ನಿರುಪಮಾಳ ಭವಿಷ್ಯದ ಕನಸು ನುಚ್ಚು ನೂರಾಗುವ ಚಿತ್ರಣವನ್ನು ವ್ಯಾಸರಾಯ ಬಲ್ಲಾಳರು ಸಮರ್ಪಕವಾಗಿ ಚಿತ್ರಿಸಿದ್ದಾರೆ. ಸಮಾಜದಲ್ಲಿ ‘ವಿವಾಹ’ವೆಂಬುದು ತುಂಬಾ ಅಗತ್ಯವೆಂಬ ಚೌಕಟ್ಟು ನಿರ್ಮಾಣವಾಗಿ ಹೋಗಿದೆ. ಬದ್ದ ಕಲ್ಪನೆಗಳ ನೆಲೆಯಲ್ಲಿ ನಿರುಪಮಾ ತನ್ನ ಆಸಕ್ತಿ ಮತ್ತು ಆಶಯಗಳತ್ತ ಗಮನ ಹರಿಸುತ್ತಾಳೆ. ನಿರುಪಮಗೆ ಸಮಾಜದ ಈ ಕ್ರೌರ್ಯ ವ್ಯವಸ್ಥೆಯನ್ನು ಎದುರಿಸಲಾಗುವುದಿಲ್ಲ.  ವ್ಯಾಸರಾಯ ಬಲ್ಲಾಳರ ʻಅವಿವಾಹಿತೆʼ ಕತೆಯ ಕುರಿತು ರಾಜಶೇಖರ ಜಮದಂಡಿ ಅವರು ಬರೆದ ವಿಮರ್ಶೆ ಇಲ್ಲಿದೆ. 

Read More