ಹೊಸ ಕಾಲವು ಕೊಟ್ಟ ದಿಟ್ಟತೆಯ ಕವಿತೆಗಳಿವೆಯಿಲ್ಲಿ!

ಆಶಾ ತೀರಾ ವಾಚ್ಯವಾಗಿಸಿ ಯಾವುದನ್ನೂ ಹೇಳುವುದಿಲ್ಲ. ಬಹುಶಃ ಬಂಡಾಯ, ದಲಿತ, ಸ್ತ್ರೀವಾದದ ಘೋಷಣಾ ಸಾಹಿತ್ಯ ಮುಗಿದಂತೆ ಕಾಣುತ್ತಿದೆ. ಆ ಎಲ್ಲ ಚಳುವಳಿಗಳು ಕನ್ನಡದ ಒಟ್ಟೂ ಸಮಾಜದ ಮೇಲೆ, ಸಾಹಿತ್ಯದ ಮೇಲೆ ಉಂಟುಮಾಡಿದ ಅದ್ಭುತ ಚಾಲನಾ ಪ್ರಭಾವವನ್ನು ಅರ್ಥೈಸಿಕೊಂಡು, ಮನದಲ್ಲೂ ಇಟ್ಟುಕೊಂಡು, ಅದೇ ಕಾಲಕ್ಕೆ ಘೋಷಣೆಯ ಕಾಲ್ತೊಡಕುಗಳನ್ನೂ ಕಳಚಿ ಬರೆಯುವ ಹೊಸ ಯುವ ಸಮೂಹವೊಂದು ಕನ್ನಡದಲ್ಲಿ ತಯಾರಾಗಿದೆ. ನಿರ್ವಿವಾದವಾಗಿ ಆಶಾ ಕೂಡಾ ಆ ಪಡೆಯ ಉತ್ತಮ ಸದಸ್ಯೆ.
ಆಶಾ ಜಗದೀಶ್‌ ಕವನ ಸಂಕಲನ “ನಡು ಮಧ್ಯಾಹ್ನದ ಕಣ್ಣು” ಕೃತಿಗೆ ಲಲಿತಾ ಸಿದ್ಧಬಸವಯ್ಯ ಬರೆದ ಮುನ್ನುಡಿ

Read More