Advertisement

Tag: ಎನ್.ಸಿ. ಮಹೇಶ್

ಮಳೆ ನಕ್ಷತ್ರಗಳ ಲೆಕ್ಕಾಚಾರದ ನಡುವೆ

ಹಳ್ಳಿಗರು ನಮಗಿಂತ ಬೆಸ್ಟ್. ಅವರಲ್ಲೂ ನಾಟಕ ಮಾಡುವ ಉಮೇದು ಇದೆ. ಹಾಗೆ ನೋಡಿದರೆ ನಮಗಿಂತ ಹೆಚ್ಚು ಇದೆ. ಆದರೆ ಅವರಿಗೆ ನಾಟಕ ಎನ್ನುವುದು ತಮ್ಮ ಬಿಡುವಿನ ದಿನಗಳ ಒಂದು ದಿವ್ಯ ಬಾಬ್ತು. ಮಳೆಗಾಲ ಆರಂಭವಾಗಿ ಬೇಸಾಯ ಆರಂಭಿಸಿ ಉತ್ತುಬಿತ್ತು ಫಸಲು ಕೈಗೆ ಬರುತ್ತದೆ ಅನಿಸಿದಾಗ ಅವರು ನಾಟಕದ ಪ್ರಾಕ್ಟೀಸ್ ಮಾಡಿ ಬಣ್ಣ ಹಚ್ಚಿ ಸಂಭ್ರಮಿಸುತ್ತಾರೆ.
ಎನ್.ಸಿ. ಮಹೇಶ್ ಬರೆಯುವ ‘ರಂಗ ವಠಾರ’ ಅಂಕಣ

Read More

ಸುಳಿಯ ಸೆಳವಿಗೆ ಸಿಲುಕದೇ…

ಮನುಷ್ಯ ಮುಕ್ತವಾಗಿ ಮತ್ತು ಸ್ವಚ್ಛಂದವಾಗಿ ಬೇರೆಯವರ ಜೊತೆ ಕಲೆಯಲು ರಂಗಭೂಮಿಗೆ ಬರಬೇಕು. ಅಲ್ಲಿ ಇರುವ ಮಜವೇ ಬೇರೆ. ಪ್ರೀತಿಯಲ್ಲಿ, ಸಲಿಗೆಯಲ್ಲಿ ಮತ್ತು ಸ್ನೇಹದಲ್ಲಿ ಕಾಲೆಳೆಯುವ ಬಗೆಗಳು ಇಲ್ಲಿ ಪಡೆದುಕೊಳ್ಳುವ ಆಯಾಮವೇ ಬೇರೆ. ಮೇಕಪ್‍ಗೆ ಕೂತರೆ ಮತ್ತು ರಂಗಕ್ಕೆ ಬಂದರೆ ಅಲ್ಲಿ ಅವರ ಚಹರೆ ಬೇರೆ. ಈ ಎಲ್ಲ ತಿಳಿದು ಮತ್ತು ಸಮುದ್ರದ ಬಗೆಗೆ ನನ್ನಲ್ಲಿ ಮೊದಲಿಂದ ಇರುವ ಸೆಳೆತದಿಂದ ಹೊರಟೆ. ಟಿಟಿಯಲ್ಲಿ ಹುಡುಗರ ಗೇಲಿ. ಪರಸ್ಪರ ಕಾಲೆಳೆಯುವ ಗುಣ ನಗು ತರಿಸುತ್ತಿತ್ತು.
ಎನ್.ಸಿ. ಮಹೇಶ್‌ ಬರೆಯುವ “ರಂಗ ವಠಾರ” ಅಂಕಣ

Read More

ಆತ್ಮಾವಲೋಕನ ಎಂಬುದೊಂದು ಯುದ್ಧ

ಪ್ರಸಿದ್ಧ ರಂಗಶಾಲೆಗಳಲ್ಲಿ ಕಲಿತು ಹೊರಬರುವವರು ಮಿಕ್ಕವರಿಗಿಂತ ಒಂದು ಸ್ತರದ ಮೇಲೆ ಇರುತ್ತಾರೆ. ಯಾಕೆಂದರೆ ಅವರನ್ನು ಹಾಗೆ ತರಬೇತುಗೊಳಿಸಿರಲಾಗುತ್ತದೆ. ಅವರಿಗೆ ರಂಗಪಠ್ಯವನ್ನು ಅಭ್ಯಾಸ ಮಾಡಿಸುವ ಕ್ರಮವೇ ಬೇರೆ. ನಟನೆ ಮತ್ತು ನಟರ ಆಯ್ಕೆ ನಂತರದ ಕೆಲಸ. ಮೊದಲು ರಂಗಪಠ್ಯದ ಸಾರಸರ್ವದ ಬಗ್ಗೆ ಚರ್ಚೆಗಳು ಆರಂಭವಾಗುತ್ತವೆ. ಆ ರಂಗನಾಟಕ ರೂಪಕವಾಗಿ ಅರಳಿಕೊಂಡಿರುವ ಬಗೆಯನ್ನು ಬೆರಗಿನಲ್ಲಿ ಅರ್ಥೈಸಲಾಗುತ್ತದೆ. ನಂತರ ಪ್ರತಿಯೊಂದು ಪಾತ್ರ, ಅದರ ಅನನ್ಯತೆಯನ್ನು ವಿವರಿಸಲಾಗುತ್ತದೆ. ಚಿಕ್ಕ ಪಾತ್ರ ದೊಡ್ಡ ಪಾತ್ರದ ವರ್ಗೀಕರಣವನ್ನು ಮೊದಲು ಇಲ್ಲವಾಗಿಸುತ್ತಾರೆ.
ಎನ್.ಸಿ. ಮಹೇಶ್‌ ಬರೆಯುವ ರಂಗ ವಠಾರ ಅಂಕಣ

Read More

ಕತ್ತಲಿಗೆ ಬೆಳಕಿನ ಬೊಟ್ಟು ಇಟ್ಟಂತೆ ಇರುವ ಚಂದ್ರ..

‘ಅಸಲಿಗೆ ಇದನ್ನೇ ನಾಟಕ ಅಂದುಕೊಂಡಿದ್ದೆ. ಅಕ್ಷರ ರೂಪದಲ್ಲಿ ಇರುವಷ್ಟು ಹೊತ್ತು ಅದು ನಾಟಕವೇ. ಕೃತಿಯೇ. ಚರ್ಚಿತ ವಸ್ತುವೇ. ಆದರೆ ನಾಟಕ ಅಂದರೆ ಅಷ್ಟೇ ಅಲ್ಲ. ನಮ್ಮ ನಡುವಿನ ಮನುಷ್ಯರ ಢಾಳಾದ ಚಿತ್ರಣ ಅಕ್ಷರಗಳಲ್ಲಿ ರೂಪು ತಳೆಯುತ್ತ ಒಂದು ರೂಪು ಪಡೆಯುವುದನ್ನು ಮೊದಮೊದಲು ನಾನೂ ನಾಟಕ ಅಂತಲೇ ಅಂದುಕೊಂಡಿದ್ದೆ. ಆದರೆ ನಂತರದಲ್ಲಿ ನಾನು ಅರಿತ ಸತ್ಯ ಅಂದರೆ ಈ ಅಕ್ಷರರೂಪದ ನಾಟಕ ರಂಗದ ಮೇಲೆ ರೂಪು ತಳೆಯಬೇಕಾದ ಪೂರ್ವದಲ್ಲಿ ಒಂದು ಮಹಾನ್ ನಾಟಕದ ಅನಾವರಣ ಆಗತೊಡಗುತ್ತದೆ.’
ಎನ್.ಸಿ. ಮಹೇಶ್‌ ಬರೆಯುವ ‘ರಂಗ ವಠಾರ’ ಅಂಕಣ

Read More

ನಾಟಕವೆಂದರೆ ಶೃತಿಗೆ ಅಣಿಗೊಳಿಸಿದ ವೀಣೆಯಂತೆ

ರಂಗದ ಕಾಯಕ ಅಂದರೆ ಮೊದಲು ನಮ್ಮ ಮನೋಧರ್ಮ ಗುರುತಿಸಿಕೊಂಡು ನಾಟಕ ಕಟ್ಟಿ ಅದು ಪ್ರೇಕ್ಷಕರ ಕಣ್ಣುಗಳ ಫ್ರೇಮಿನಲ್ಲಿ ಸರಿಯಾಗಿ ಫಿಟ್ಟಾಗುತ್ತದೆಯೇ ಎಂದು ಅಂದಾಜು ಮಾಡಿಕೊಳ್ಳಬೇಕು. ನಂತರ ಜನರಿಗೆ ಕಾಯಬೇಕು. ಪಾರ್ಕಿಂಗ್ ಕಡೆ ಕಣ್ಣು ಹಾಯಿಸುತ್ತಿರಬೇಕು. ಇಷ್ಟಾದ ಮೇಲೆ ಭರ್ಜಿಯ ಮೊನೆಗಳಿಗೆ ಮೈ ಒಡ್ಡಿ ನಿಲ್ಲಬೇಕು ಮತ್ತು ನೋವಿನಲ್ಲೂ ನಗಬೇಕು. ನಗಲು ಸಾಧ್ಯವಾಗದಿದ್ದರೆ ಮನಸ್ಸಿನ ಹದ ಕೆಡುತ್ತದೆ. ಮನಸ್ಸು ಕೆಟ್ಟರೆ ಬದುಕಿನ ನೋಟಕ್ರಮದ ಜಾಡು ತಪ್ಪುತ್ತದೆ. ಒಟ್ಟು ಚಿತ್ರವೇ ಕಲಕಿಹೋಗುತ್ತದೆ.
‘ರಂಗ ವಠಾರ’ ಅಂಕಣದಲ್ಲಿ ಮತ್ತೆ…

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ