Advertisement

Tag: ಕತೆಗಳು

ಇಲ್ಲಿ ಬಳ್ಳಿ, ಹೂವು, ಮೋಡ ಕೂಡ ಮಾತನಾಡುತ್ತವೆ: ಡಾ. ವಿಜಯಾ ಬರಹ

‘ಹೊರದಾರಿ’ಯಲ್ಲಿ ಬರುವ ದತ್ತು ಮಗುವಿನ ಸಮಸ್ಯೆ ಅನೇಕ ಸತ್ಯ ಘಟನೆಗಳನ್ನು ನೆನಪಿಸಿತು. ಇಂಥ ಸಮಸ್ಯೆಗಳಿಂದಲೇ ಇರಬೇಕು. ಈಗ ನಿಯಮಗಳು ತುಂಬಾ ಬಿಗಿಯಾಗಿವೆ. ಸುಲಭವಿಲ್ಲ ಮಗುವೊಂದನ್ನು ಪಡೆಯುವುದು. ಅದೇನೇ ಇರಲಿ ವಾಚ್ಯವಾಗಿ ಹೇಳದಿದ್ದರೂ ಹೆಣ್ಣು ಮಗುವೊಂದು ಮಾತ್ರ ಇನ್ನೊಂದು ಕರುಳಿನ ಕೂಗನ್ನು ಗ್ರಹಿಸಬಲ್ಲದು ಎಂದು ತೋರಿದ್ದೀರಿ. ಎಲ್ಲಕ್ಕಿಂತ ಮಿಗಿಲಾಗಿ ನನಗೆ ನೀವು ಕೊಡುವ ವಿವರಗಳು ಆಪ್ತವಾದವು. ಗಿಡ ಮರ ಬಳ್ಳಿಗಳ ಜೊತೆ ಮಾತಾಡಿಬಿಡುತ್ತೀರಿ!
ಎ.ಎನ್. ಪ್ರಸನ್ನ ಕಥಾ ಸಂಕಲನ “ದಾಸವಾಳ” ಕುರಿತು ಡಾ. ವಿಜಯಾ ಬರಹ

Read More

ಕಥಾ ಬೇಸಾಯವನ್ನು ಬದುವಿನಲ್ಲಿ ನಿಂತು ನೋಡಿ

ಉಳುಮೆ ಅನುಭವದ್ದು. ಒಂದು ಸಾಲಿನ ಉಳುಮೆ ಸಾಕೋ, ಎರಡುಸಾಲು ಹೊಡೆಯಬೇಕೋ, ಮೂರುಸಾಲು ಆಗಬೇಕೋ ಎಂಬುದು ಉಳುಮೆಗಾರನ ವಿವೇಚನೆಯದು. ಹಾಗೆಯೇ ಬಲಸುತ್ತು, ಎಡಸುತ್ತು ಉಳುಮೆಯ ವಿಚಾರವೂ ಸಹ. ಬದುವಿನ ಉಬ್ಬಂಚು ತಗ್ಗಬೇಕಾದರೆ ಎಡಸುತ್ತಿನ ಉಳುಮೆಗೆ ನೇಗಿಲು ಹಿಡಿಯಬೇಕು. ಎದೆಯ ಹೊಲದಲ್ಲಿ ಹುಟ್ಟುವ ಕಥೆ ಬೆಳೆದು ಬೆಳೆಯಾಗವುದು ಇಂತಹ ಹದಗಳಲ್ಲಿಯೇ. ಹೊಲದ ವಿಸ್ತಾರವಿದ್ದಂತೆ ಕಥೆಯ ವಿಸ್ತಾರವೂ ಇರುತ್ತದೆ. ವಿಸ್ತಾರ ದೊಡ್ಡದಿದ್ದರೂ ಉಳುಮೆಯಾದಷ್ಟು ನೆಲದಲ್ಲಷ್ಟೇ ಬೆಳೆ. ಸದಾಶಿವ ಸೊರಟೂರು ಕಥಾಸಂಕಲನ “ಅರ್ಧ ಬಿಸಿಲು ಅರ್ಧ ಮಳೆ”ಗೆ ಸ. ರಘುನಾಥ ಬರೆದ ಮುನ್ನುಡಿ

Read More

ಎಸ್. ಗಂಗಾಧರಯ್ಯ ಅನುವಾದಿಸಿದ ಹೆಮಿಂಗ್ವೆ ಕಥೆ “ಕನೇರಿ”

ಕನೇರಿ ತನ್ನ ಪುಕ್ಕಗಳನ್ನೊಮ್ಮೆ ಕೊಡವಿತು. ನಂತರ ಅವುಗಳನ್ನು ಕುಕ್ಕತೊಡಗಿತು. `ನಂಗೆ ಯಾವಾಗಲೂ ಹಕ್ಕಿಗಳೆಂದರೆ ಪಂಚ ಪ್ರಾಣ. ನಾನು ಈ ಕನೇರಿ ಹಕ್ಕೀನಾ ನನ್ನ ಪುಟ್ಟ ಮಗಳಿಗಾಗಿ ತಗಂಡು ಹೋಗ್ತಿದೀನಿ. ಹಾ, ಅಲ್ಲಿ ನೋಡಿ. ಅವನು ಈಗ ಹಾಡ್ತಾ ಇದಾನೆ,’ ಅಂದಳು ಅಮೇರಿಕನ್ ಹೆಂಗಸು. ಕನೇರಿ ಚಿಲಿಪಿಲಿಗುಟ್ಟತೊಡಗಿತು. ಅದರ ಗಂಟಲ ಮೇಲಿನ ಪುಕ್ಕಗಳು ನಿಮಿರಿ ನಿಂತವು. ನಂತರ ಅದು ತನ್ನ ಕೊಕ್ಕನ್ನು ಕೆಳಕ್ಕಾಕಿಕೊಂಡು ಪುಕ್ಕಗಳನ್ನು ಹೆಕ್ಕತೊಡಗಿತು.
ನೊಬೆಲ್‌ ಪ್ರಶಸ್ತಿ ಪುರಸ್ಕೃತ ಅರ್ನೆಸ್ಟ್‌ ಹೆಮಿಂಗ್ವೆಯ ಒಂದಷ್ಟು ಕಥೆಗಳನ್ನು ಎಸ್. ಗಂಗಾಧರಯ್ಯ ಕನ್ನಡಕ್ಕೆ ತಂದಿದ್ದು, ಈ ಸಂಕಲನದ ಒಂದು ಕಥೆ “ಕನೇರಿ” ನಿಮ್ಮ ಓದಿಗೆ

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ