Advertisement

Tag: ಕಥಾ ಸಂಕಲನ

ಯಾರು ದೊಡ್ಡೋರು?: ರಹಮತ್ ತರೀಕೆರೆ ಕಥಾ ಸಂಕಲನದ ಒಂದು ಕತೆ

“ಹಿಂಗ್ ಬಂದು ಸಮುದ್ರದಾಗೆ ತೇಲ್ತಾ ಇರುವಾಗ ಒಂದು ಕುಲ್ಡುಗೊಕ್ಕರೆ ಮೇಲ್ಗಡೆ ಹರ‍್ತಾ ನೀರ್ ಮೇಲಿರೋ ಕುಂಬಳ್‌ಕಾಯೀನಾ ನೋಡ್ತು. ಯಲಾ ಯಲಾ! ಒಂದ್ ವಾರಕ್ಕೆ ಆಗೋವಷ್ಟು ತಿನ್ನಕೆ ಸಿಕ್ತು ಕಣಲೆ ಅಂದ್ಕೊಂಡು ಕೊಕ್ನಾಗೆ ಕಚ್ಕೊಂಡ್ ಬಂದು ಒಂದು ದೊಡ್ಡ ಆಲದಮರದ ಮ್ಯಾಲೆ ಬಂದು ಕುತ್ಕೊಂಡ್ತು. ಕುತ್ಕಂಡು ಎಲ್ಡ್ ಕಾಲಾಗೆ ಕಾಯಿನ ಅಮುಕ್ಕೊಂಡು ಚಂದರ್ಕಿಗೆ ಬಾಯಿಹಾಕಿ ಮುಚ್ಚಳ ತಗೀತು. ಆಗ ಒಳಗಿದ್ದೋರೆಲ್ಲ ಅಲೆಲೆಲೆ, ಏಳ್ರಲಾ ಬೆಳಕ್ ಹರೀತು.”
ರಹಮತ್‌ ತರೀಕೆರೆ ಕಥಾ ಸಂಕಲನ “ಗೇರಮರಡಿ ಕತೆಗಳು”ದಿಂದ ಒಂದು ಕತೆ ನಿಮ್ಮ ಓದಿಗೆ

Read More

ಮಂಜುನಾಯಕ ಚಳ್ಳೂರ ಕಥಾಲೋಕ…

“ಧಾರವಾಡದಲ್ಲಿ ಪಿಯುಸಿಯಲ್ಲಿದ್ದಾಗ ‘ಗಾಳಿಪಟ’ ಎಂಬ ಕತೆ ಬರೆದಿದ್ದೆ‌‌. ಅದಕ್ಕೂ ಮುನ್ನ ‘ಗೋಧಾವರಿ’ ಎಂಬ ಕತೆಯನ್ನು ಬರೆದು ಸ್ನೇಹಿತರ ಮುಂದೆ ಇಟ್ಟಾಗ, ಹಾಸ್ಟೇಲಿನ ದೋಸ್ತರೆಲ್ಲ ಅದನ್ನು ಓದಿ “ಚೊಲೋ ಬರ್ದಿ” ಎಂದು ಬೆನ್ನುತಟ್ಟಿದ್ದರು‌. ತುಷಾರ ಕಥಾ ಸ್ಪರ್ಧೆಗೆಂದು ಬರೆದಿದ್ದ ಕತೆ ಅದು. ಕೈಬರಹದಲ್ಲಿದ್ದ ಆ ಕತೆಯ ಪ್ರತಿಯನ್ನು, ಮತ್ತೊಮ್ಮೆ ಓದಿ ಕೊಡುವುದಾಗಿ ನನ್ನಿಂದು ಇಸಿದುಕೊಂಡು ಹೋದ ದೋಸ್ತ ಇನ್ನೂ ವಾಪಸ್ ಕೊಟ್ಟಿಲ್ಲ. ಮಂಜುನಾಯಕ ಚಳ್ಳೂರರ “ಫೂ” ಕಥಾಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ ಸಿಕ್ಕಿದ್ದು ಇದೇ ಸಂದರ್ಭದಲ್ಲಿ ಅವರ ಕಥಾಲೋಕದ ಕುರಿತು ರೂಪಶ್ರೀ ಕಲ್ಲಿಗನೂರ್‌ ಬರಹ

Read More

ಇಲ್ಲಿ ಬಳ್ಳಿ, ಹೂವು, ಮೋಡ ಕೂಡ ಮಾತನಾಡುತ್ತವೆ: ಡಾ. ವಿಜಯಾ ಬರಹ

‘ಹೊರದಾರಿ’ಯಲ್ಲಿ ಬರುವ ದತ್ತು ಮಗುವಿನ ಸಮಸ್ಯೆ ಅನೇಕ ಸತ್ಯ ಘಟನೆಗಳನ್ನು ನೆನಪಿಸಿತು. ಇಂಥ ಸಮಸ್ಯೆಗಳಿಂದಲೇ ಇರಬೇಕು. ಈಗ ನಿಯಮಗಳು ತುಂಬಾ ಬಿಗಿಯಾಗಿವೆ. ಸುಲಭವಿಲ್ಲ ಮಗುವೊಂದನ್ನು ಪಡೆಯುವುದು. ಅದೇನೇ ಇರಲಿ ವಾಚ್ಯವಾಗಿ ಹೇಳದಿದ್ದರೂ ಹೆಣ್ಣು ಮಗುವೊಂದು ಮಾತ್ರ ಇನ್ನೊಂದು ಕರುಳಿನ ಕೂಗನ್ನು ಗ್ರಹಿಸಬಲ್ಲದು ಎಂದು ತೋರಿದ್ದೀರಿ. ಎಲ್ಲಕ್ಕಿಂತ ಮಿಗಿಲಾಗಿ ನನಗೆ ನೀವು ಕೊಡುವ ವಿವರಗಳು ಆಪ್ತವಾದವು. ಗಿಡ ಮರ ಬಳ್ಳಿಗಳ ಜೊತೆ ಮಾತಾಡಿಬಿಡುತ್ತೀರಿ!
ಎ.ಎನ್. ಪ್ರಸನ್ನ ಕಥಾ ಸಂಕಲನ “ದಾಸವಾಳ” ಕುರಿತು ಡಾ. ವಿಜಯಾ ಬರಹ

Read More

ಹಳ್ಳಿಯ ಅಂತರಾತ್ಮದ ಆರ್ದ್ರ ಕಥನ

ಇಡೀ ಕಥೆಗಳ ಅಂತರಾಳದಲ್ಲಿ ವಿಷಾದದ ದನಿಯೊಂದು ಲಘು ಹಾಸ್ಯದ ಲೇಪನದೊಂದಿಗೆ ಅನಾವರಣಗೊಂಡಿದೆ. ಯಾವುದೇ ʻಇಸಂʼನಿಂದ ಮುಕ್ತಗೊಂಡಂತೆ ಕಾಣುವ ಇಲ್ಲಿನ ಲೋಕದಲ್ಲಿ ಮನಕುಲದ ಒಳಿತು ಹಾಗೂ ಜೀವಪರ ತುಡಿತವೇ ಮೇಲುಗೈಯ್ಯಾಗಿದೆ. ಈ ಸಂಕಲನದ ಬಹು ಮುಖ್ಯ ಸಂಗತಿ ಅಂದರೆ, ಇದುಅಪ್ಪಟ ಪ್ರಾದೇಶಿಕ ಸೊಗಡಿನಿಂದ ಲಕಲಕಿಸುತ್ತದೆ. ಅಂತೆಯೇ ಯಾವುದೇ ಮಡಿವಂತಿಕೆಯ ಸೋಗಿಲ್ಲದೆ ಪ್ರಾಮಾಣಿಕವಾಗಿ ಅನಿಸಿದ್ದನ್ನು ನೇರವಾಗಿ ಹೇಳುತ್ತದೆ.
ಮಂಜಯ್ಯ ದೇವರಮನಿ ಕಥಾ ಸಂಕಲನ “ದೇವರ ಹೊಲ”ಕ್ಕೆ ಎಸ್. ಗಂಗಾಧರಯ್ಯ ಬರೆದ ಮುನ್ನುಡಿ

Read More

ತಿಪಟೂರು ಸೀಮೆಯ ಘಮಲು

ಕೇವಲ ನಿರೂಪಕಿ ಆಗದೆ ಕತೆಗಳ ಒಳಗಿನಿಂದ ಬಂದು ಮಾತನಾಡುವ ಕತೆಗಾರ್ತಿಗೆ ಆ ಕಾರಣಕ್ಕೆ ಒಂದು ರೀತಿಯ ಸಹಜ ಯಜಮಾನಿಕೆ ಪ್ರಾಪ್ತವಾಗಿದೆ. ಭಾರತದ ಮಹಾವ್ಯಾಖ್ಯಾನಗಳನ್ನು ನೀಡಿದ ವಾಲ್ಮೀಕಿ ವ್ಯಾಸರು ಕತೆಯ ಒಳಗಿನವರು. ತಾವೂ ತಮ್ಮ ಕತೆಯಲ್ಲಿ ಪಾತ್ರಧಾರಿಗಳು ಅಥವಾ ತಮ್ಮಿಂದಲೇ ಕತೆಗಳನ್ನು ಆರಂಭಿಸಿದವರು. ಕತೆಗಾರಿಕೆಗೆ ಇದೊಂದು ಅತ್ಯುತ್ತಮ ಮಾದರಿ. ತಾನೇ ಊರಾಡಿ ಎತ್ತಿಕೊಂಡು ಬಂದ ಕತೆಗಳಂತಿರುವ ಸಮೂಹ ಪ್ರಜ್ಞೆ ಈ ಕತೆಗಳ ಸತ್ವ. ಕತೆಗಳು ಸಮೂಹದ ಸ್ವತ್ತು. ಸಮೂಹ ಕೊಡುತ್ತಿರುವ ಸಮಸ್ತ ಬೈಗುಳಗಳಾದಿಯಾಗಿ ಯಾವುದನ್ನೂ ಸೋಸದೆ ಇಡಿಯಾಗಿ ನಮಗೆ ತಲುಪಿಸಲಾಗಿದೆ.
ದಯಾ ಗಂಗನಘಟ್ಟ ಕಥಾ ಸಂಕಲನ “ಉಪ್ಪುಚ್ಚಿ ಮುಳ್ಳು”ಗೆ ನಟರಾಜ್‌ ಬೂದಾಳು ಬರೆದ ಮುನ್ನುಡಿ

Read More
  • 1
  • 2

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ