Advertisement

Tag: ಕೃತಿ ಪುರಪ್ಪೇಮನೆ

ಭಾಗವತಿಕೆಯ ಪರಂಪರೆಯಲ್ಲಿ ವಿದ್ವಾನ್ ಗಣಪತಿ ಭಟ್ ಅವರ ವೈಶಿಷ್ಟ್ಯತೆ

ಯಕ್ಷಗಾನವನ್ನು ವೃತ್ತಿಯಾಗಿ ಸ್ವೀಕರಿಸಿದವರಿಗೆ ಜನಪ್ರಿಯ ಮಾದರಿಗಳಿಂದ ತಪ್ಪಿಸಿಕೊಳ್ಳುವುದು ಕಷ್ಟದ ಕೆಲಸ. ಅವರಿಗೆ ಹಲವು ಒತ್ತಡಗಳಿರುತ್ತವೆ. ಒತ್ತಡಗಳ ವಿರುದ್ಧ ನಿಲ್ಲುವುದಕ್ಕೆ ಒಂದು ರೀತಿಯ ನಿಷ್ಠುರತೆ, ಛಲ, ವಿಶ್ವಾಸವೂ ಬೇಕು. ಅಂತಹುದಕ್ಕೆ ಮಾದರಿ ವಿದ್ವಾನರು. ನಮಗೆ ಈಗ ಸಿಗುವ ಅವರ ತಾರುಣ್ಯ ಕಾಲದ ವೃತ್ತಿ ಮೇಳದ ಹೊಸಪ್ರಸಂಗದ ಪದ್ಯಗಳು, ಹಳೆಯ ದೇವಿ ಮಹಾತ್ಮೆಯ ಧ್ವನಿ ಮುದ್ರಿಕೆಯನ್ನು ಕೇಳಿದರೆ ಇದು ಸ್ಪಷ್ಟವಾಗುತ್ತದೆ.
ಯಕ್ಷಾರ್ಥ ಚಿಂತಾಮಣಿ ಅಂಕಣದಲ್ಲಿ ಕೃತಿ ಪುರಪ್ಪೇಮನೆ ಲೇಖನ ಇಲ್ಲಿದೆ.

Read More

ಪೇಟೇಸರದಲ್ಲಿ ನೋಡಿದ ಯಕ್ಷಗಾನ ಬಯಲಾಟದ ಸುತ್ತಮುತ್ತ

ಮಂಡಕ್ಕಿ ಅಂಗಡಿ ಇಡುವವರು ನಮ್ಮ ಚರ್ಚೆಯಲ್ಲಿ ಭಾಗವಹಿಸಿದರು, ಆದರೆ ಅವರು ಫೋಟೊ ತೆಗೆಯೋದು ಬೇಡ ಅಂದರು. ಮುಂಚೆ ಬಳೆ ವ್ಯಾಪಾರ ಮಾಡುತ್ತಿದ್ದರು. ಯಕ್ಷಗಾನವು ಇಷ್ಟ ಆಗುವುದರಿಂದ ಮಂಡಕ್ಕಿ ವ್ಯಾಪಾರ ಮಾಡುತ್ತಾರೆ. ಟೆಂಟ್ ಮೇಳದಲ್ಲಿ ಬರಿ ಭಾಗವತಿಕೆ ಕೇಳೋಕಾಗತ್ತೆ. ಭಾಗವತಿಕೆನೆ ಮುಖ್ಯ ಅವರ ಪ್ರಕಾರ. ‘ಯಕ್ಷಗಾನ ನೋಡಿದ ಹಾಗೂ ಆತು, ಗಂಜಿಗೆ ಕಾಸು ಆತು’, ಅದಕ್ಕೆ ಮಂಡಕ್ಕಿ ವ್ಯಾಪಾರ ಶುರುಮಾಡಿದೆ ಅಂದರು. ಇಲ್ಲಿಯ ಎಲ್ಲಾ ಕಲಾವಿದರೂ ಯಾವ ಪಾತ್ರವನ್ನಾದರೂ ಪದ್ಯ ನೋಡಿಕೊಂಡು ಮಾಡಬಲ್ಲವರಾಗಿದ್ದರು.
ಕೃತಿ ಪುರಪ್ಪೇಮನೆ ಬರಹ

Read More

ಸರಕು ಮತ್ತು ಸಂಪ್ರದಾಯ

ಎಲ್ಲವೂ ಸರಕಾಗುತ್ತಿರುವ ಸಮಾಜದಲ್ಲಿ ನಾವಿರುವಾಗ ಸಂಪ್ರದಾಯದ ಮೇಲೆ ಅದರ ಪರಿಣಾಮಗಳೇನು? ಸರ್ವವ್ಯಾಪಿಯಾದ ವ್ಯವಸ್ಥೆ ಸಂಪ್ರದಾಯವನ್ನು ಮುಟ್ಟದೇ ಇರುತ್ತದೆಯೇ? ಸಂಪ್ರದಾಯದ ಪ್ರತಿಕ್ರಿಯೆಯ ಸಮಸ್ಯೆಗಳೇನು ಎನ್ನುವುದನ್ನು ನೋಡೋಣ. ಸಂಪ್ರದಾಯವೆನ್ನುವುದು ಸರಳವಾಗಿ ಹೇಳುವುದಾದರೆ ನಮ್ಮ ಹಿರಿಯರಿಂದ ಬಂದಿದ್ದು. ಪೀಳಿಗೆಯಿಂದ ಪೀಳಿಗೆಗೆ ಬರುವಂತದ್ದು. ಹಿರಿಯರು, ಪೀಳಿಗೆ ಅಂದಾಗ ಅದು ಸಮುದಾಯವನ್ನು, ಕುಟುಂಬವನ್ನು ಒಳಗೊಂಡಿದೆ ಎನ್ನುವುದನ್ನು ಸೂಚಿಸುತ್ತದೆ. ಕೃತಿ ಪುರಪ್ಪೇಮನೆ ಬರೆಯುವ “ಯಕ್ಷಾರ್ಥ ಚಿಂತಾಮಣಿ” ಅಂಕಣದಲ್ಲಿ ಹೊಸ ಬರಹ

Read More

ಸ್ವಾಯತ್ತತೆಯೆಡೆಗೆ ತುಡಿಯುವ ದಾಕ್ಷಾಯಿಣಿಯ ಪಾತ್ರ

ಸಂಸಾರಕ್ಕೆ ಯೋಗ್ಯವೆನಿಸುವ ಲಕ್ಷಣಗಳಾವುವೂ ಶಿವನಲ್ಲಿ ಇರುವಂತೆ ನಮಗೆ ಕಾಣಿಸುವುದಿಲ್ಲ. ಅವಳ ಅಪ್ಪನಾದ ದಕ್ಷನಿಗೂ ಹಾಗೆ ಕಂಡಿರಬೇಕು. ಇಲ್ಲಿ ನಾವು ಗಮನಿಸಬೇಕಾದ್ದು, ಶಿವನ ಅಲೆಮಾರಿತನ, ಒರಟುತನವು ‘ಗೃಹಸ್ಥ’ ನ ಲಕ್ಷಣಕ್ಕೆ ತೀರಾ ವಿರುದ್ಧವಾದುದು ಎನ್ನುವುದನ್ನು. ಲಹರಿಯಲ್ಲಿ ಯೋಚಿಸುತ್ತಾ ಹೋದರೆ, ಇದು ಹಲವು ಉತ್ತರಗಳನ್ನು ಮೇಲಿನ ಪ್ರಶ್ನೆಗಳಿಗೆ ಕೊಡುತ್ತಾ ಹೋಗುತ್ತದೆ.

Read More

ಪ್ರದರ್ಶನ ಕಲೆಗಳಲ್ಲಿ ಸ್ತ್ರೀಯರ ಸ್ಥಾನ

ಯುಗಧರ್ಮದ ಮನಸ್ಥಿತಿಯು ಆ ಸಮಾಜ ಸೃಷ್ಟಿಸಿದ ಘಟಕಗಳಲ್ಲಿ ಅಂತರ್ಗತವಾಗಿಯೆ ಇರುತ್ತದೆ. ಉದಾಹರಣೆಯಾಗಿ ಯಕ್ಷಗಾನವನ್ನೆ ತೆಗೆದುಕೊಂಡರೆ, ಅದರ ಎಲ್ಲ ಅಂಗಗಳಲ್ಲಿ, ರೂಪ-ಸ್ವರೂಪ, ಹಿಮ್ಮೇಳ-ಮುಮ್ಮೇಳ, ಮೌಲ್ಯ-ಔಚಿತ್ಯ, ರಸ-ರುಚಿ, ಪಠ್ಯ-ಸಂಕಲನ, ಅಥವಾ ತಾಳಮದ್ದಲೆಯಲ್ಲಿ ಬೆಳೆದು ಬಂದ ವಾಗ್ವಾದದ, ತರ್ಕದ ಪರಂಪರೆ ಇವೆಲ್ಲದರಲ್ಲೂ ನಾವು ಈ ಆಲೋಚನೆಯ ಒಂದು ಎಳೆಯು ನಿರಂತರವಾಗಿರುವುದನ್ನು ಕಾಣಬಹುದು.
ಯಕ್ಷಗಾನ ಕ್ಷೇತ್ರದಲ್ಲಿ ಮಹಿಳೆಯ ಸ್ಥಾನದ ಕುರಿತು ‘ಯಕ್ಷಾರ್ಥ ಚಿಂತಾಮಣಿ’ಯಲ್ಲಿ ಕೃತಿ ಪುರಪ್ಪೇಮನೆ ಲೇಖನ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ