Advertisement

Tag: ಗಿರಿಧರ್ ಗುಂಜಗೋಡು

ಕಾಡ ತೊರೆಯ ಜಾಡು “ಕಡಿದಾಳು ಶಾಮಣ್ಣ”

ಮನಸ್ಸು ಮಾಡಿದ್ದರೆ ಅಥವಾ ಹಣಸಂಪಾದನೆಯ ಮಾರ್ಗ ಹಿಡಿದದ್ದರೆ ದೊಡ್ಡ ಶ್ರೀಮಂತರಾಗಬಹುದಿತ್ತು. ಅವರು ಒಂದು ಕಾಲದಲ್ಲಿ ಸ್ಥಾಪಿಸಿದ್ದ ಪ್ರೆಸ್ಸಿನ ಮೂಲಕವೋ ಇಲ್ಲಾ ಕೃಷಿಯ ಮೂಲಕವೋ ಧಾರಾಳ ಹಣಗಳಿಕೆ ಮಾಡಬಹುದಾಗಿತ್ತು. ಅಥವಾ ಸಂಗೀತದಲ್ಲಿ ಮುಂದುವರೆದಿದ್ದರೆ ಸರೋದ್‌ನಲ್ಲಿ ಅಂತಾರಾಷ್ಟ್ರೀಯ ಖ್ಯಾತಿ ಗಳಿಸಬಹುದಾಗಿತ್ತು. ಹೋರಾಟದ ಹಾದಿಯಲ್ಲಿ ನಡೆಯುತ್ತಿರುವಾಗ ತಾನಾಗಿಯೇ ಬಂದ ಅವಕಾಶವನ್ನು ನಿರಾಕರಣೆ ಮಾಡದಿದ್ದರೆ ಶಾಸಕರಾಗಬಹುದಾಗಿತ್ತು ಅಥವಾ ಕಾಲೇಜು ಉಪನ್ಯಾಸಕರಾಗಬಹುದಾಗಿತ್ತು. ಆದರೆ ಅದ್ಯಾವುದೂ ಆಗದೇ ಸಾಮಾನ್ಯ ರೈತನ ಜೀವನ ನಡೆಸಿದರು.
ಗಿರಿಧರ್‌ ಗುಂಜಗೋಡು ಅಂಕಣ

Read More

‘ಅವಧೇಶ್ವರಿ’ ನನ್ನ ಸೆಳೆದ ಕಥೆಯೂ…

ಕಥಾನಾಯಕಿಯಾದ ನರ್ಮದಾ ಪುರುಕುತ್ಸಾನಿಯ ಪಾತ್ರ ಅತ್ಯಂತ ಸಶಕ್ತವಾಗಿದೆ. ಕನ್ನಡ ಕಾದಂಬರಿ ಲೋಕದಲ್ಲಿ ಶಕ್ತಿಯುತವಾದ ನಾಯಕಿ ಮುಖ್ಯ ಪಾತ್ರದಲ್ಲಿರುವುದು ಸ್ವಲ್ಪ ಅಪರೂಪವೇ. ಪುರುಕುತ್ಸಾನಿಯ ಪಾತ್ರವನ್ನು ಪುಣೇಕರ್ ಅವರು ಕಟ್ಟಿಕೊಟ್ಟಿರುವ ಬಗೆ ಬಹಳ ಚನ್ನಾಗಿದೆ. ಸುತ್ತಮುತ್ತಲಿನ ರಾಜರಂತೆ ವಿಸ್ತರಣಾ ದಾಹವನ್ನು ಹೊಂದದೇ ತನ್ನ ರಾಜ್ಯವನ್ನು ಇರುವಷ್ಟು ಉಳಿಸಿಕೊಂಡು ಅಲ್ಲೇ ದಕ್ಷವಾಗಿ ಆಡಳಿತವನ್ನು ಮಾಡುತ್ತಾಳೆ. ಓದುವ ಸುಖ ಅಂಕಣದಲ್ಲಿ ಗಿರಿಧರ್‌ ಗುಂಜಗೋಡು ಬರಹ

Read More

ರಷ್ಯಾದ ಭೌಗೋಳಿಕ ಕಥನ…

ಒಂದುವೇಳೆ ಬೆಂಗಳೂರು ಸಮುದ್ರಮಟ್ಟಕ್ಕಿಂತ ಒಂದು ಮುನ್ನೂರು ಮೀಟರ್ ಕೆಳಗಿದ್ದಿದ್ದರೆ? ಅರಬ್ಬೀ ಸಮುದ್ರದ ಮೂಲಕ ಬಂದ ಗಾಳಿ ಪಾಲ್ಘಾಟ್ ಗ್ಯಾಪಿನ ಕಾರಣ ಪಶ್ಚಿಮ ಘಟ್ಟಗಳಿಗೆ ಅಪ್ಪಳಿಸದೇ ಊಟಿ ತಲುಪಿ ಅಲ್ಲಿ ತಂಪುಗೊಂಡು ಬೆಂಗಳೂರಿನ ಕಡೆಗೆ ಪ್ರಯಾಣ ಬೆಳೆಸಿ ಈಗಿನ ಎತ್ತರಕ್ಕೆ ತಡೆಯಿರದ ಕಾರಣ ಮುಂದೆ ಹೋಗಿಬಿಡುತ್ತಿತ್ತು. ಈಗಿನ ಅತ್ಯುತ್ತಮ ಹವಾಮಾನ ಇರುತ್ತಲೇ ಇರಲಿಲ್ಲ. ಹೈದರಾಲಿ ಮತ್ತು ಟಿಪ್ಪು ಲಾಲ್‌ಬಾಗ್ ನಿರ್ಮಿಸುತ್ತಲೇ ಇರಲಿಲ್ಲ. ಮೈಸೂರು ಅರಸರಿಗೆ ಪ್ರಿಯವಾದ ಜಾಗವಾಗುತ್ತಲೇ ಇರಲಿಲ್ಲ. ಬ್ರಿಟಿಷರಿತೆ ತಮ್ಮ ಊರನ್ನು ನೆನಪಿಸುವ ಪ್ರದೇಶವೂ ಆಗುತ್ತಿರಲಿಲ್ಲ.
ಗಿರಿಧರ್‌ ಗುಂಜಗೋಡು ಬರೆಯುವ ಓದುವ ಸುಖ ಅಂಕಣ

Read More

ಡಾರ್ಕ್ ಹ್ಯೂಮರ್ ಮತ್ತು ನಮ್ಮ ಗ್ರಹಿಕೆಗಳು

ನಾವು ಎಷ್ಟೋ ಬಾರಿ ಸೆಕ್ಸಿಸ್ಟ್, ಕ್ಯಾಸ್ಟಿಸ್ಟ್ ಜೋಕುಗಳನ್ನು ಮಾಡುತ್ತೇವೆ. ಕೆಲವೊಮ್ಮೆ ಉದ್ದೇಶಪೂರ್ವಕವಾಗಿದ್ದರೆ ಇನ್ನೂ‌ ಕೆಲವೊಮ್ಮೆ ಅಪ್ರಯತ್ನಪೂರ್ವಕಾಗಿ ಬರುತ್ತದೆ. ಈಗಲೂ ಬರವಣಿಗೆಯಲ್ಲಿ ನಾನು ಇಂತಹ ಪದಗಳ ಬಳಸುವುದು ಕಮ್ಮಿಯಾದರೂ ಆತ್ಮೀಯ ಗೆಳೆಯರೊಟ್ಟಿಗೆ ಮಾತಾಡುವಾಗ ಕ್ಯಾಸ್ಟಿಸ್ಟ್ ಅಲ್ಲದಿದ್ದರೂ ಸೆಕ್ಸಿಸ್ಟ್ ಬೈಗಳುಗಳು ಅಪ್ರಯತ್ನಪೂರ್ವಕವಾಗಿ ಬರುತ್ತವೆ. ಮುಂದಾದರೂ ಅದನ್ನು ಕಮ್ಮಿ ಮಾಡಬೇಕು ಎಂದು ಇವರ ಬರಹಗಳ ಓದಿದಾಗ ಅನ್ನಿಸಿದೆ.
ಗಿರಿಧರ್‌ ಗುಂಜಗೋಡು ಅಂಕಣ

Read More

ಹಾಯ್‌ ಅಂಗೋಲಾ!

ಅಂಗೋಲಾದ ಜನರ ಬಗ್ಗೆ ಹೇಳುವುದು, ಅಲ್ಲಿನ ವ್ಯವಸ್ಥೆ ಬಗ್ಗೆ ಹೇಳುವುದು, ಅಲ್ಲಿನ ಊಟ ತಿಂಡಿ ಬಗ್ಗೆ ಹೇಳುವುದು ಇದೆಲ್ಲಾ ಸಹಜ. ನಿರೂಪಣೆ ಅದ್ಭುತವಾಗಿದೆ, ಹೊಸ ವಿಷಯ ತಿಳಿಯುತ್ತದೆ ಎಲ್ಲಾ ನಿಜವೇ. ಆದರೆ ಅತ್ಯಂತ ವಿಶಿಷ್ಟವಾದ ಅಧ್ಯಾಯವಿದೆ. ಮೊದಲ ಬಾರಿ ಓದಿದಾಗ ಬಹಳ ವಿಚಿತ್ರ ಅನ್ನಿಸಿತ್ತು‌. ಒಂದು ಕ್ಷೌರ ಮಾಡಿಸಿಕೊಳ್ಳಲು ಮುನ್ನೂರು ಕಿಲೋಮೀಟರ್ ಪ್ರಯಾಣಿಸಬೇಕಾಗಿದ್ದ ಪ್ರಸಾದರ ಅವಸ್ಥೆ ಬಗ್ಗೆ ಕೇಳಿದಾಗ ನಗುವುದೋ ಅಳುವುದೋ ಗೊತ್ತಾಗುವುದಿಲ್ಲ. ಆಫ್ರಿಕನ್ನರ ಕೂದಲ ರೀತಿಗೂ ಭಾರತೀಯರ ಕೂದಲ‌ ರೀತಿಗೂ ಅಜಗಜಾಂತರ ವ್ಯತ್ಯಾಸವಿರುವುದು ಗೊತ್ತಿರುವ ಸಂಗತಿ.
ಗಿರಿಧರ್‌ ಗುಂಜಗೋಡು ಬರೆಯುವ ಓದುವ ಸುಖ ಅಂಕಣ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಚಿತ್ರಾಕ್ಷರ: ಕೆ ವಿ ಸುಬ್ರಮಣ್ಯಂ ಕಲೆ ಮತ್ತು ಬರಹಗಳ ಬಿಂಬ

ಯಾವುದೇ ಒಬ್ಬ ಕಲಾವಿದ ಕಲಾಕೃತಿಗಳನ್ನು ತನ್ನ ಸ್ವಂತ ಅಭಿರುಚಿಯಂತೆ ಮಾಡುವುದನ್ನು ಕಲಿಯುವ ಮೊದಲು ನಕಲು ಮಾಡುವುದರಿಂದ ಪ್ರಾರಂಭಿಸುವಂತೆ ಇವರು ಕೂಡ ಮೊದಲು ನಕಲು ಮಾಡಿಯೇ ಪ್ರಾರಂಭಿಸಿದ್ದು. ನೋಡಿದ್ದನ್ನು…

Read More

ಬರಹ ಭಂಡಾರ