ಇಲ್ಲಿ ಎಲ್ಲವೂ ಸರಿ ಇದ್ಯಾ…?

ವಿನಯ ಅಲಿಶಾಳಿಗೆ ಪ್ರಪೋಸ್ ಮಾಡಿದ ಎಂಬ ಸುದ್ದಿ ಕೇಳಿದ ಮೂರು ದಿನಕ್ಕೇ ಅರವಿಂದನಿಗೆ ಲಘು ಹೃದಯಾಘಾತವಾಗಿತ್ತು. ಶಿಕಾಗೋದಿಂದ ಓಡಿಬಂದಿದ್ದರು, ವಿನಯ ಮತ್ತು ಅಲಿಶಾ ಇಬ್ಬರೂ. ಮನಸ್ಸಿನ ವ್ಯಾಪಾರವೇ ವಿಚಿತ್ರ. ವಿನಯ ಅಲಿಶಾಳನ್ನು ಮದುವೆ ಮಾಡಿಕೊಳ್ಳುವುದು ಗ್ಯಾರಂಟಿ ಎಂದು ಗೊತ್ತಿದ್ದರೂ ವಿನಯನ ಪ್ರಪೋಸಲ್ಲಿಗೂ, ಅರವಿಂದನ ಹಾರ್ಟ್ ಅಟ್ಯಾಕಿಗೂ ಕಾರ್ಯಕಾರಣ ಸಂಬಂಧ ಹುಡುಕಲು ವೈದ್ಯಕೀಯ ಪುರಾವೆಗಳ ಸಾಥ್ ಕೇಳಿದ್ದಳು, ಸುಕನ್ಯಾ.
ಗುರುಪ್ರಸಾದ್‌ ಕಾಗಿನೆಲೆ ಬರೆದ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್”ನ ಎರಡನೆಯ ಕಂತು ನಿಮ್ಮ ಓದಿಗಾಗಿ

Read More