ಕೃಷ್ಣ ಸಾಕ್ಷಾತ್ಕಾರ ಮಾಡಿಸುವ ಅಪರೂಪದ ಖಂಡಕಾವ್ಯ

ಭಾಗವತದ ವಿಷಯ ಬಂದಾಗ ನೆನಪಾಗುವದು ಕೃಷ್ಣ ಮತ್ತು ಗೋಪಿಕೆಯರ ರಾಸಲೀಲೆ. ಯಮುನಾ ನದಿಯ ತಟದಲ್ಲಿರುವ ಬೃಂದಾವನ, ಗೋಪಿಕಾ ಸ್ತ್ರೀಯರು ಮತ್ತು ಕೃಷ್ಣ ಇವೆಲ್ಲವೂ ಅವಿನಾಭಾವ ಸಂಬಂಧವನ್ನು ಹೊಂದಿರುವಂತವು. ಇಲ್ಲಿ ದಾಸ ದಾಸಿಯ ಭೇದಗಳಿಲ್ಲ. ಯಾರದೋ ಮಗಳು, ಮತ್ಯಾರದೋ ಹೆಂಡತಿ, ಇನ್ಯಾರದೋ ಸಹೋದರಿಯೋ ಆಗಿರುವವರೆಲ್ಲ ತಮ್ಮ ಅಸ್ತಿತ್ವವನ್ನು ಮರೆತು ಕೃಷ್ಣನಲ್ಲಿ ಒಂದಾಗುವ ಅದ್ವೈತೀ ಭಾವ. ಕೃಷ್ಣನೂ ಸಹ ತಾನು ದೇವನೆನ್ನುವದನ್ನು ಮರೆತು ರಾಸಲೀಲೆಯಲ್ಲಿ ಮುಳುಗಿಬಿಡುತ್ತಾನೆ.
ಪ್ರೊ. ಕೆ.ಇ. ರಾಧಾಕೃಷ್ಣ ಅವರ “ಗೋಪಿಕೋನ್ಮಾದ” ಕೃತಿಯ ಕುರಿತು ನಾರಾಯಣ ಯಾಜಿ ಬರಹ

Read More