Advertisement

Tag: ಚಂದ್ರಮತಿ ಸೋಂದಾ

ಆಧುನಿಕ ಮನೋಧರ್ಮದ ಭರತನ ಚರಿತ್ರೆ: ಚಂದ್ರಮತಿ ಸೋಂದಾ ಬರಹ

ಪಿತೃಪ್ರಧಾನ ವ್ಯವಸ್ಥೆಯ ದೌರ್ಬಲ್ಯಗಳನ್ನು ಸೂಕ್ಷ್ಮವಾಗಿ ಎತ್ತಿ ತೋರಿಸುತ್ತಲೇ ಅದಕ್ಕೆ ವಿಭಿನ್ನವಾದ ಇನ್ನೊಂದು ಮುಖವೂ ಸಾಧ್ಯವಿದೆ ಎನ್ನುವ ಪಿಸುನುಡಿಯೊಂದಿಗೆ ಹೊರಡುವ ಕೃತಿ ನಿಧಾನವಾಗಿ ಅದರ ಸಾಧ್ಯತೆಯನ್ನು ಅನಾವರಣಗೊಳಿಸುತ್ತ, ಸರಿಯಾದ ದಾರಿ ಹೀಗಿರಬೇಕು ಎನ್ನುವಂತೆ ಮುಂದುವರಿಯುತ್ತದೆ. ರಾಜಸತ್ತೆಯಲ್ಲಿ ಹಿರಿಮಗನಿಗೆ ಪಟ್ಟಗಟ್ಟಿದ ಮೇಲೆ ಉಳಿದ ಅಣ್ಣತಮ್ಮಂದಿರು, ಪರಿವಾರದವರು ರಾಜನನ್ನು ಅವಲಂಬಿಸಿಯೇ ಇರಬೇಕೆನ್ನುವ ತಥಾಗತ ನಂಬಿಕೆಯಲ್ಲಿ ಉಳಿದವರ ಮನಃಸ್ಥಿತಿ ಏನಿದ್ದೀತು? ಹೇಗಿದ್ದೀತು?
ಡಾ. ಆರ್ ಸುನಂದಮ್ಮ ಬರೆದ “ಭರತಕಲ್ಪ” ಕೃತಿಯ ಕುರಿತು ಡಾ. ಚಂದ್ರಮತಿ ಸೋಂದಾ ಬರಹ ನಿಮ್ಮ ಓದಿಗೆ

Read More

ಅವರವರ ಭಾವಕ್ಕೆ……: ಚಂದ್ರಮತಿ ಸೋಂದಾ ಸರಣಿ

ಹಬ್ಬಗಳಲ್ಲಿ, ಅದರಲ್ಲಿಯೂ ನವರಾತ್ರಿಯಲ್ಲಿ ಕೊಡುವ ದಕ್ಷಿಣೆ ನಮಗೆ ಪಾಕೆಟ್‌ಮನಿ ತರಹ. ಆಗ ನಮಗೆ ಕೊಡುತ್ತಿದ್ದುದು ಹತ್ತು ನಯಾಪೈಸೆ. ಎಲ್ಲ ಹಬ್ಬಗಳಲ್ಲಿ ಕೊಡುತ್ತಿದ್ದ ದಕ್ಷಿಣೆಯನ್ನು ಜೋಪಾನವಾಗಿ ಕಾಪಿಟ್ಟು ಅದರಿಂದ ಬಣ್ಣದ ದಾರ, ಮಣಿಗಳನ್ನು ತರಿಸಿಕೊಂಡು ಲೇಸು, ಬಾಗಿಲತೋರಣ, ಕಸೂತಿ, ಮಣಿಗಳಿಂದ ಆರತಿ ಕಟ್ಟು ತಯಾರಿಸಿ ನಮ್ಮ ನಮ್ಮ ಕೌಶಲಗಳನ್ನು ಮೆರೆಯಲು ಈ ಹಣ ಸಹಕಾರಿಯಾಗಿತ್ತು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಒಂಭತ್ತನೆಯ ಕಂತು

Read More

ಎಮ್ಮೆಎಮ್ಮೆಯೆಂದೇಕೆ ಬೀಳುಗಳೆವಿರಿ?

ಕೆಲವು ಎಮ್ಮೆಗಳು ಬಹಳ ಸೂಕ್ಷ್ಮ. ಎಮ್ಮೆ ಕರುಹಾಕಿ ನಂತರದಲ್ಲಿ ಒಬ್ಬರೇ ಹಾಲು ಕರೆಯುತ್ತಿದ್ದರೆ ಅದು ಕೆಲವು ದಿನಗಳ ನಂತರ ಇನ್ನೊಬ್ಬರಿಗೆ ಹಾಲನ್ನು ಕೊಡುವುದಿಲ್ಲ. ಸೊರವು ಬಿಡದೆ ಸುಮ್ಮನೆ ನಿಂತಿರುತ್ತದೆ. ಮೊಲೆಗಳನ್ನು ಎಷ್ಟೇ ಜಗ್ಗಿದರೂ ಮೊಲೆಗೆ ಹಾಲು ಇಳಿಸುವುದೇ ಇಲ್ಲ. ಇದನ್ನು ನಮ್ಮೂರಕಡೆ ಕೈಮರ್ಚಲು ಎನ್ನುತ್ತಾರೆ. ಇನ್ನೊಬ್ಬರು ಹಾಲು ಕರೆಯಬೇಕೆಂದರೆ ಸಾಕಷ್ಟು ಸರ್ಕಸ್ ಮಾಡಬೇಕಾಗುತ್ತದೆ.
ಎಮ್ಮೆಯ ಕುರಿತು ಹಲವು ಕುತೂಹಲಕರ ಪ್ರಸಂಗಗಳನ್ನು ಬರೆದಿದ್ದಾರೆ ಚಂದ್ರಮತಿ ಸೋಂದಾ

Read More

“ದೋಸೆ”ಯ ವೈಭೋಗ…..

ಮಿಕ್ಸಿ ಇಲ್ಲದ ಕಾಲವಾದರೂ ವಾರದಲ್ಲಿ ನಾಲಕ್ಕೋ ಐದೋ ದಿನ ದೋಸೆಯೇ ಬೆಳಗಿನ ತಿಂಡಿಗೆ. ಅವಲಕ್ಕಿ, ಉಪ್ಪಿಟ್ಟು ಅಂದರೆ ಅದು ಸೋಮಾರಿಗಳ ತಿಂಡಿ ಎನ್ನುವ ಅಭಿಪ್ರಾಯವಿತ್ತು. ಒಮ್ಮೆ ಮನೆಯಲ್ಲಿ ಹೆಂಗಸರಿಲ್ಲದೆ, ಗಂಡಸು ತಿಂಡಿಮಾಡಿಕೊಳ್ಳುವ ಪ್ರಮೇಯ ಬಂದರೆ ಅಕ್ಕಪಕ್ಕದ ಮನೆಯ ಹೆಂಗಸರು `ಮನೇಲ್ಲಿ ಯಾರೂ ಹೆಂಗಸ್ರಿಲ್ಲೆ. ನಮ್ಮನೆಗೆ ತಿಂಡಿಗೆ ಬಾ, ದೋಸೆ ತಿನ್ನಲಕ್ಕು’ ಎಂದು ಕರೆಯುವುದಿತ್ತು.
ಚಂದ್ರಮತಿ ಸೋಂದಾ ಬರೆದ ದೋಸೆ ಕುರಿತ ಪ್ರಬಂಧ ನಿಮ್ಮ ಓದಿಗೆ

Read More

ಬೋನಿಗೆ ಬಂದನಾ ಇಲಿರಾಯನು

ನಮ್ಮೂರಿನಲ್ಲಿದ್ದಂತೆ ಈ ನಗರದಲ್ಲಿ ಗದ್ದೆ ಇದೆಯಾ? ಗೊಣಬೆ ಇದೆಯಾ? ಅಥವಾ ಭತ್ತದ ಕಣಜವೋ, ಅಕ್ಕಿ ಮೂಟೆಯೋ ಅವಕ್ಕೆ ಸಿಗುತ್ತಾ? ಅಂದ್ಮೇಲೆ ಯಾರಾದ್ರೂ ಚೂರುಪಾರು ತರಕಾರಿ ಬೆಳೆಯೋಣ ಅಂತ ಹೊರಟರೆ ಅದರಲ್ಲಿ ಬಿಡೋ ಕಾಯಿಗಳನ್ನುತಿನ್ನದೇ ಮತ್ತೇನು ಮಾಡಲು ಸಾಧ್ಯ. ಅಕ್ಕಿ ಭತ್ತ, ತರಕಾರಿ ಏನಾದರೂ ಸರಿ, ಹೊಟ್ಟೆಪಾಡು ನೋಡಿಕೊಳ್ಳಬೇಕು. ಆದರೂ ಈ ಸುಂಡಿಲಿಗಳು ಚಳ್ಳೇ ಹಣ್ಣು ತಿನ್ನಿಸುವುದರಲ್ಲಿ ಭಾರೀ ಹುಶಾರು.

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ