ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಟಿ.ಕೆ. ದಯಾನಂದ ಕತೆ

ಕಷ್ಟಪಟ್ಟು ಎದ್ದು ಗೋಡೆಗೆ ಒರಗಿಕೊಂಡ ಆಕೆ ಕೈ ಸನ್ನೆ ಮಾಡಿ ನೀರು ಕೇಳಿದಳು. ಹತ್ತಿರದಲ್ಲೇ ನಿಂತಿದ್ದ ಹುಡುಗಿಯೊಬ್ಬಳು ನೀರು ತಂದುಕೊಟ್ಟಳು. ನೀರು ಕುಡಿದು ಸುಧಾರಿಸಿಕೊಂಡ ಮೇಲೆ ಆಕೆ ದೊಡ್ಡ ಉಸಿರು ಬಿಟ್ಟು, ‘ಮಗ ಸತ್ತರೆ ತಾಯಿ ಏನು ಹೇಳ್ತಾಳಪ್ಪ. ಮಗ ಸತ್ತ, ಸಾಯಿಸಿದ್ರು’ ಎಂದು ಅಳಲು ಶುರುಮಾಡಿದಳು. ಕಣ್ಣೀರು ಒರೆಸಿಕೊಳ್ಳುತ್ತಾ, ‘ಇನ್ನೊಬ್ಬ ಮಗ ಇದ್ದಿದ್ರೆ ಆ ಪಾಪಿಗಳನ್ನ ಹೊಡೆದುಕೊಂದು ಈ ಸಾವಿಗೆ ಸೇಡು ತೀರಿಸ್ಕೊ ಅಂತ ಹೇಳಬೋದಿತ್ತು. ಆದ್ರೆ ಇದ್ದವ್ನು ಒಬ್ಬನೇ ಮಗ. ಅವನು ವಾಪಸ್ ಬರ್ತಾನಾ’ ಎಂದು ಬರಿಗಣ್ಣುಗಳಿಂದ ಅವನನ್ನು ನೋಡಿದಳು.

Read More