Advertisement

Tag: ಡಾ. ಎಲ್.ಸಿ. ಸುಮಿತ್ರಾ

ಜಿ. ಎಚ್. ನಾಯಕರ ನೆನಪು: ಡಾ. ಎಲ್.ಸಿ. ಸುಮಿತ್ರಾ ಬರಹ

ಮೀರಕ್ಕ ಕೂಡ ಯಾವಾಗಲೂ ನೂಲಿನ ಸೀರೆ ಧರಿಸುವವರು. ನಾವು ಎಂಎ ಓದುತ್ತಿದ್ದಾಗ ಮಾನಸಗಂಗೋತ್ರಿಯ ಬಯಲು ರಂಗಮಂದಿರದ ಆವರಣದಲ್ಲಿ ನಡೆದ ಯಾವುದೋ ಕಾರ್ಯಕ್ರಮ ನೋಡಲು ಮೀರಕ್ಕ, ಮಗಳು ಕೀರ್ತಿಯೊಡನೆ ಬಂದಿದ್ದರು. ಅವರುಟ್ಟ ರೇಷ್ಮೆ ಸೀರೆಯನ್ನು ಚೆನ್ನಾಗಿದೆಯೆಂದು ನಮ್ಮ ಗುಂಪಿನಲ್ಲಿದ್ದವರು ಯಾರೋ ಹೇಳಿದಾಗ ಕೀರ್ತಿ ತಕ್ಷಣ ಇದು ಅಮ್ಮನಿಗೆ ಯಾರೋ ಪ್ರಸೆಂಟ್ ಮಾಡಿದ್ದು ಅಪ್ಪ ಬರೀ ಕಾಟನ್ ಸೀರೆ ಕೊಡಿಸ್ತಾರೆ ಅಂತ ತಮಾಷೆಗೆಂಬಂತೆ ಹೇಳಿದಳು.
ನೆನ್ನೆಯಷ್ಟೇ ಅಗಲಿದ ಹಿರಿಯ ವಿಮರ್ಶಕ ಜಿ. ಎಚ್. ನಾಯಕರ ಕುರಿತು ಡಾ. ಎಲ್.ಸಿ. ಸುಮಿತ್ರಾ ಹಂಚಿಕೊಂಡಿದ್ದ ನೆನಪುಗಳು ನಿಮ್ಮ ಓದಿಗೆ

Read More

ಎಚ್.ಎಸ್. ಅನುಪಮಾ ಕಾದಂಬರಿಯಲ್ಲಿ “ಅಕ್ಕ”

ಅಕ್ಕಮಹಾದೇವಿಯದು ಅಭಾವ ವೈರಾಗ್ಯಅಲ್ಲ. ಅವಳದು ಸ್ವಭಾವ ವೈರಾಗ್ಯ ಎಲ್ಲ ಇದ್ದು ಅದರ ಕುರಿತು ಆಕರ್ಷಣೆ ಇಲ್ಲದಿರುವುದು ಅವಳ ವ್ಯಕ್ತಿತ್ವವೇ ವಿಶಿಷ್ಟ ಚೈತನ್ಯ ಉಳ್ಳದ್ದು. ಮಠದ ಗುರು ಲಿಂಗ ಶರಣರು ಅವಳಿಗೆ ಲಿಂಗ ದೀಕ್ಷೆ ನೀಡುತ್ತಾರೆ. ದಿಗಂಬರ ಸನ್ಯಾಸಿಗಳನ್ನು ನೋಡಿ ಎಲ್ಲವನ್ನು ಕಳಚಿ ಇರುವುದರ ಕುರಿತು ಯೋಚಿಸುತ್ತಾಳೆ. ಲಿಂಗ ಶರಣರು ಕಲ್ಯಾಣಕ್ಕೆ ಹೋಗಿ ಬಂದು ಬಸವಣ್ಣನ ಮಹಾಮನೆಯ ವಿಷಯ ಹೇಳುತ್ತಾರೆ. ಕಸಪಯ್ಯ ರಾಯ ಇವನ ಗುಡಿ ಕಟ್ಟಿಸುವಾಗ ಅವನ ಸತಿಗೂ ಗುಡಿ ಕಟ್ಟಲು ಹೇಳುತ್ತಾಳೆ.
ಡಾ. ಎಚ್.ಎಸ್. ಅನುಪಮಾ ಅವರ ಹೊಸ ಕಾದಂಬರಿ “ಬೆಳಗಿನೊಳಗು” ಕುರಿತು ಡಾ. ಎಲ್.ಸಿ. ಸುಮಿತ್ರಾ ಬರಹ

Read More

ವಿಶಿಷ್ಟ ಅನುಭವಗಳ ಮೊತ್ತ ‘ಅಂಗೈ ಅಗಲದ ಆಕಾಶ’

ಇಂಥ ಸ್ಮೃತಿಚಿತ್ರಗಳಲ್ಲಿ ಸತ್ಯದ ಪರಿಧಿಯಿಂದ ಹೊರಹೋಗಲು ಸಾಧ್ಯವಿಲ್ಲ, ಅಂದರೆ ಶುದ್ಧ ನೆನಪುಗಳು ಯಾವಾಗಲೂ ವಾಸ್ತವದಲ್ಲಿ ಜೀವಿಸಿರುತ್ತವೆ ಹಾಗಾಗಿ ಬರೆಯುವಾಗ ನಿರೂಪಕಿಯೂ ವಾಸ್ತವದಲ್ಲೇ ಜೀವಿಸಿರಬೇಕಾಗುತ್ತದೆ, ಕಲ್ಪನೆ ಇಲ್ಲಿ ಕೆಲಸ ಮಾಡದು. ಆಗ ಎಲ್ಲ ಕೋನದಿಂದ ನಿಂತು ನೋಡುವ ಆಯಾಮಗಳು ಕಳೆದುಹೋಗುತ್ತವೆ. ಆದರೆ ಸುಮಿತ್ರಾ ಅವರು ಕೆಲವು ಘಟನೆಗಳನ್ನು ಇಂದಿನ ಸಂದರ್ಭದಲ್ಲಿಟ್ಟು ತೂಗಿ ನೋಡುತ್ತಾರೆ. ಹಾಗಾಗಿ ಸನ್ನಿವೇಶಗಳಿಗೊಂದು ಬೇರೆಯದೇ ಆದ ತೂಕ ಪ್ರಾಪ್ತವಾಗುತ್ತದೆ.
ಡಾ. ಎಲ್. ಸಿ. ಸುಮಿತ್ರಾ ಅವರ ಸ್ಮೃತಿ ಚಿತ್ರಗಳ ಸಂಕಲನ “ಅಂಗೈ ಅಗಲದ ಆಕಾಶ”ದ ಕುರಿತು ಲೇಖಕಿ ಸುನಂದಾ ಕಡಮೆ ಬರಹ

Read More

ಮರದ ನೆರಳಿನಲ್ಲಿ…

ಮನೆಯ ಎದುರಿಗೆ ರಸ್ತೆಯ ಪಕ್ಕದಲ್ಲಿ ಜೀರಕನ ಮರ ಹಣ್ಣು ಬಿಟ್ಟಾಗ ನಮಗೆ ಆ ಮರದ ಆಕರ್ಷಣೆ.. ಹೊಂಬಣ್ಣದ ಜೀರ್ಕ ಹಣ್ಣುಗಳನ್ನು ದೋಟಿಗೆ ಎಟುಕಿಸಿ ಉದುರಿಸಿ ಹಿರಿಯರ ಕಣ್ಣು ತಪ್ಪಿಸಿ ಅಡಿಕೆ ಚಪ್ಪರದ ಮೇಲೆ ತೆಗೆದುಕೊಂಡು ಹೋಗಿ ಇಟ್ಟು.. ಅಡಿಗೆ ಮನೆಯಿಂದ ಉಪ್ಪು ಬಾಳೆಲೆ, ಬೆಲ್ಲ ಇನ್ನೊಬ್ಬರು ತರುವುದು. ಜೀರಿಗೆ ಮೆಣಸು ಮತ್ತೊಬ್ಬರು.. ಹಣ್ಣಿನ ತೊಳೆ ಬಿಡಿಸಿ ಬಾಳೆ ಎಲೆ ಮೇಲೆ ಉಪ್ಪು, ಮೆಣಸು ಬೆಲ್ಲ ಹಾಕಿ ಕಲೆಸಿ ಮತ್ತೆ ಚಿಕ್ಕ ಬಾಳೆ ಎಲೆ ತುಂಡಿನ ಮೇಲೆ ಎಲ್ಲರಿಗೂ ಹಂಚಿ ಆ ಕಟುವಾದ ಹುಳಿ, ಸಿಹಿ, ಖಾರದ ರುಚಿಯನ್ನು ಚಪ್ಪರಿಸಿಕೊಂಡು ತಿನ್ನುತ್ತಿದ್ದೆವು..
ಡಾ. ಎಲ್.ಸಿ. ಸುಮಿತ್ರಾ ಬರೆದ ಪ್ರಬಂಧ

Read More

ಸುಧಾ ಆಡುಕಳ ಕಥಾಸಂಕಲನಕ್ಕೆ ಡಾ. ಎಲ್.ಸಿ. ಸುಮಿತ್ರಾ ಮಾತುಗಳು

“‘ಹೊಳೆ’ ಕಥೆಯಲ್ಲಿ ಕಾಡುನಾಶದಿಂದ ಹೊಳೆ ಬತ್ತಿಹೋಗುವ ಪರಿಸರದ ಚಿಂತನೆಯಿದೆ. ‘ಸತ್ಯದ ಬದುಕು’ ವ್ಯಕ್ತಿ ಸ್ವಾತಂತ್ರ್ಯವನ್ನು ಕೌಟುಂಬಿಕ ಸಂಬಂಧಗಳು ಮೊಟಕು ಮಾಡುವ, ನಿಯಂತ್ರಿಸುವ ರೀತಿಯನ್ನು ಹೇಳುತ್ತಲೇ ಅಲಕಾ ಎಂಬ ಹುಡುಗಿ ಮನೆಯಲ್ಲೂ, ಕೆಲಸ ಮಾಡುವ ಜಾಗೆಯಲ್ಲೂ ಹೇಗೆ ಒಂದು ಪರಿಕರವಾಗಿ ಬಳಸಲ್ಪಡುತ್ತಾಳೆ… ಕೊನೆಗೆ ಹೇಗೆ ಅವಳು ಭಾವನಾತ್ಮಕ ಬಂಧಗಳಿಂದ ಹೊರಬರುವ ಬಗೆಯನ್ನು ಚಿತ್ರಿಸುತ್ತದೆ. ‘ಕಥೆಯನ್ನರಸುತ್ತಾ’ ಎಂಬ ಕಥೆ ಹೊಸಬಗೆಯ ನಿರೂಪಣೆಯನ್ನು ಹೊಂದಿದೆ.”
ಸುಧಾ ಆಡುಕಳ ಅವರ ಚೊಚ್ಚಲ ಕಥಾಸಂಕಲನ ‘ಒಂದು ಇಡಿಯ ಬಳಪʼದ ಕುರಿತು ಡಾ. ಎಲ್.ಸಿ. ಸುಮಿತ್ರಾ ಅಭಿಪ್ರಾಯ

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ