ಕಂಬಾರರಿಗೆ ಒದಗಿ ಬಂದ ಮತ್ತೊಂದು ಕತೆ ಚಾಂದಬೀ ಸರ್ಕಾರ

ದೇಶಪಾಂಡೆ ಅವರ ಮನೆಯಿಂದ ಖಾನ್ ಇದ್ದ ಸ್ಥಳಕ್ಕೆ ತಲುಪುವತನಕ ಚಾಂದಬೀ ಭೂಮಿಯ ಮೇಲೆ ಕಾಲೂರಲೇ ಇಲ್ಲ. ಕ್ಷಣಕ್ಕೊಮ್ಮೆ ಗರ್ಭವ ಮುಟ್ಟಿ ನೋಡಿಕೊಳ್ಳುತ್ತ ಪ್ರತಿಸಲವೂ ಹೊಸ ಹೊಸದಾಗಿ ಕೃಷ್ಣನ ತಾಯಿ ಯಶೋಧೆಯಾಗಿ ಕನಸು ಕಾಣತೊಡಗಿದಳು. ಖಾನನ ಬಳಿಗೆ ಹೋದೊಡನೆ ದೇಶಪಾಂಡೆ ದಂಪತಿಗಳ ಪ್ರೀತಿ, ಗೌರವಾದರಗಳನ್ನು ಹತ್ತು ಸಲ ಹೇಳಿದಳು. ಬಸಿರಾದ ವಿಷಯವನ್ನು ಹತ್ತು ಬಾರಿ ಹೇಳಿದಳು. ಪ್ರತಿಯೊಂದು ಸಲವೂ ಇದೇ ಮೊದಲನೇ ಸಲವೆಂಬಂತೆ ಪ್ರತಿಸಲವೂ ಹೊಸ ಹೊಸ ವಿವರಗಳೊಂದಿಗೆ ಹೇಳಿದಳು.
ಡಾ. ಚಂದ್ರಶೇಖರ ಕಂಬಾರರ ಹೊಸ ಕಾದಂಬರಿ ‘ಚಾಂದಬೀ ಸರ್ಕಾರ’ದ ಒಂದು ಅಧ್ಯಾಯ ನಿಮ್ಮ ಓದಿಗೆ

Read More