ಮಾತು ಮೀರಿದ ಕ್ರಿಯಾರೂಪ: ಬರಗೂರು ರಾಮಚಂದ್ರಪ್ಪ

ಪ್ರಜಾಸತ್ತಾತ್ಮಕ ಸಮಾಜವೊಂದರಲ್ಲಿ ನಡೆಯುತ್ತಿರುವ ಸ್ಥಿತ್ಯಂತರದ ಸಂಕಟಗಳನ್ನು, ಅಲ್ಲೀವರೆಗೆ ಅಜ್ಞಾತವಾಗಿದ್ದ ಸಮುದಾಯಗಳ ಬದುಕಿನ ಮೂಲಕ ಪರಿಶೀಲಿಸುವ ಪ್ರತಿಭಟನಾ ಪ್ರತೀಕಗಳನ್ನೂ ಕಾಣಬಹುದು. ಈ ಮಾದರಿಯ ರಚನೆಗಳಲ್ಲಿ ಚಲನಶೀಲತೆಯ ಒರತೆ ಉಕ್ಕುವುದುಂಟು. ಈ ಒರತೆಯನ್ನು ಕೃತಿಕಾರರು ತಂತಮ್ಮ ಬೊಗಸೆಯಲ್ಲಿ ಎಷ್ಟೆಷ್ಟು ಮತ್ತು ಹೇಗೆ ಹೇಗೆ ತುಂಬಿಕೊಳ್ಳುತ್ತಾರೆಂಬ ಆಧಾರದಲ್ಲಿ ಕೃತಿಯ ವಸ್ತು-ವಿನ್ಯಾಸಗಳು ಕಟ್ಟಿಕೊಳ್ಳುತ್ತವೆ. ಬದಲಾವಣೆಯ ಬೊಗಸೆಯನ್ನು ತನ್ನದಾಗಿಸಿಕೊಳ್ಳುವ ವಿಧಾನದಲ್ಲೇ ನೆಲೆ-ನಿಲುವುಗಳು ರೂಪುಗೊಳ್ಳುತ್ತವೆ; ಸಮಕಾಲೀನವಾಗುತ್ತವೆ.

Read More