Advertisement

Tag: ತಿಳಗೂಳ

ಬಸಪ್ಪ ಕಾಕಾನ ನೆನಪುಗಳು: ಶರಣಗೌಡ ಪಾಟೀಲ ಬರೆದ ಪ್ರಬಂಧ

ಬಸಪ್ಪ ಕಾಕಾನ ಮನಸ್ಸು ಕೂಡ ಬಿಳಿ ಬಟ್ಟೆಯಷ್ಟೇ ಶುಭ್ರಗಿತ್ತು. ಆತ ಬಿಳಿ ಬಟ್ಟೆ ಧರಿಸಿ ಹೊರಟರೆ ಥೇಟ ಸ್ವಾತಂತ್ರ್ಯ ಹೋರಾಟಗಾರ ಕಂಡಂತೆ ಕಾಣಿಸುತ್ತಿದ್ದ. ಎದುರಿಗೆ ಸಿಕ್ಕವರಿಗೆಲ್ಲ ಮಾತಾಡಿಸಿ ಊಟ ತಿಂಡಿ ಕೆಲಸ ಕಾರ್ಯದ ಬಗ್ಗೆ ವಿಚಾರಿಸುತ್ತಿದ್ದ. ಬಸಪ್ಪ ಕಾಕಾನ ಕುಟುಂಬವೂ ಚಿಕ್ಕದಾಗಿತ್ತು. ಒಬ್ಬನೇ ಮಗ ಆತನಿಗೆ ಅಂಗಡಿ ವ್ಯವಹಾರದ ಬಗ್ಗೆ ಯಾವದೂ ಗೊತ್ತಿರಲಿಲ್ಲ. ಬೇಕಂತಲೇ ಬಸಪ್ಪ ಕಾಕಾ ಗೊತ್ತು ಪಡಿಸಿರಲಿಲ್ಲ.
ಶರಣಗೌಡ ಬಿ. ಪಾಟೀಲ, ತಿಳಗೂಳ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಗುಣ ಕೆಡಿಸಿದ ಹಣ!: ಶರಣಗೌಡ ಪಾಟೀಲ ಬರೆದ ಪ್ರಬಂಧ

ನಿವೃತ್ತಿ ನಂತರವೂ ಇವನು ಸುಮ್ಮನೆ ಕೂಡದೆ ನಿರಂತರ ಕೆಲಸ ಕಾರ್ಯದಲ್ಲಿ ಮಗ್ನನಾಗಿರುತಿದ್ದ. ಮುಂಜಾನೆ ಊಟ ಮುಗಿಸಿಕೊಂಡು ನಡು ಊರ ಕಟ್ಟೆ ಕಡೆ ಬಂದು ಸಮವಯಸ್ಕರ ಜೊತೆ ಮಳೆ ಬೆಳೆ ಊರು ಕೇರಿ ದೇಶಾವರಿ ಚರ್ಚೆ ಮಾಡುತಿದ್ದ. ಪಕ್ಕದ ಹೋಟಲಿನಿಂದ ಚಹಾ ತರಿಸಿ ತಾನೂ ಕುಡಿದು ಅವರಿಗು ಕುಡಿಸಿ ಖುಷಿ ಪಡುತಿದ್ದ. ಆಗಾಗ ಹೊಲ ಗದ್ದೆಗೂ ಹೋಗಿ ಆಳುಗಳಿಗೆ ಸಲಹೆ ಸೂಚನೆ ಕೊಡುತ್ತಿದ್ದ. ಇವನ ಕ್ರಿಯಾಶೀಲತೆ ನೋಡಿ ಅನೇಕರು ಆಶ್ಚರ್ಯ ಹೊರಹಾಕಿ “ಕುಬೇರಪ್ಪ ನಿವೃತ್ತನಾದರು ಸುಮ್ಮನೆ ಕೂಡೋದಿಲ್ಲ ಏನಾದರು ಮಾಡ್ತಿರ್ತಾನೆ ಶ್ರಮಜೀವಿ” ಅಂತ ವರ್ಣನೆ ಮಾಡುತ್ತಿದ್ದರು.
ಶರಣಗೌಡ ಬಿ. ಪಾಟೀಲ, ತಿಳಗೂಳ ಬರೆದ ಪ್ರಬಂಧ

Read More

ಶರಣಗೌಡ ಬಿ ಪಾಟೀಲ ಬರೆದ ಈ ಭಾನುವಾರದ ಕಥೆ

ನಿಮ್ಮಪ್ಪ ಹ್ಯಾಂಗೇ ಇರಲಿ ಅವನು ನಮ್ಮ ಕಣ್ಮುಂದೆ ಇರಬೇಕು. ಅಂವ ನನ್ನ ಪಾಲಿನ ದೇವರು. ನನ್ನ ಹಣೆಬರಹದಾಗ ಏನಿದೆಯೋ ಅದು ಆಗಿ ಹೋಗಿದೆ. ಹಿರಿಯರ ಮಾತಿಗೆ ಬೆಲೆ ಕೊಟ್ಟು ಆತನ ಜೊತೆ ಮದುವೆಯಾದೆ. ಅಂತಹ ಗಂಡನ ಜೊತೆ ಹ್ಯಾಂಗ ಸಂಸಾರ ಮಾಡ್ತಿಯೋ ಏನೋ ಅಂತ ಆಡಿಕೊಳ್ಳತಿದ್ದರು. ಅವರ ಮಾತಿಗೆ ನಾನೆಂದೂ ತಲೆ ಕೆಡಿಸಿಕೊಳ್ಳಲಿಲ್ಲ. ಹೀಗಿದ್ದರೂ ಆತ ಹೇಳದೇ ಕೇಳದೇ ಹೋಗಿದ್ದಾನೆ.
ಶರಣಗೌಡ ಬಿ ಪಾಟೀಲ, ತಿಳಗೂಳ ಬರೆದ ಸಣ್ಣ ಕತೆ “ಎಲ್ಲರಂತವನಲ್ಲ!” ನಿಮ್ಮ ಈ ಭಾನುವಾರದ ಓದಿಗೆ

Read More

ಮುದ್ದೆಯಾದ ಕಾಗದ!

ಮರುದಿನ ಅಜ್ಜಿಯ ಆರೋಗ್ಯ ಮತ್ತಷ್ಟು ಹದೆಗೆಟ್ಟಿತು. ಅವಳಿಗೆ ಎದ್ದು ತಿರುಗಾಡಲು ಆಗಲಿಲ್ಲ. ಮಲಗಿದ್ದಲ್ಲೇ ಮಲಗಿ ಒಂದೇ ಸವನೆ ನರಳತೊಡಗಿದಳು. ಆಗಲೂ ಅಮ್ಮನ ಮನಸ್ಸು ಕರಗಲಿಲ್ಲ. ಊಟ ತಿಂಡಿಯೂ ಹಾಕಲಿಲ್ಲ. ಇವಳಿಗೆ ಮನೆಯಲ್ಲಿಟ್ಟುಕೊಂಡರೆ ನಮಗೂ ರೋಗ ಬರಬಹುದು ಅಂತ ಯೋಚಿಸಿ ಮನೆಯ ಅಂಗಳದಲ್ಲಿ ಮಲಗಲು ಖಡಕ್ಕಾಗಿ ಸೂಚಿಸಿ ಅವಳ ಹಾಸಿಗೆ ಹೊಚ್ಚಿಗೆ ತಾಟು ತಂಬಿಗೆ ಎಲ್ಲವೂ ಬೇರ್ಪಡಿಸಿ ಕೈ ತೊಳೆದುಕೊಂಡಳು. ಈ ಎಲ್ಲ ದೃಶ್ಯಾವಳಿ ನೋಡಿ ರಾಜೂನ ದುಃಖ ಉಕ್ಕಿ ಬಂದಿತು. ಮಲ್ಲಿಕಾಳ ಕರುಳು ಹಿಂಡಿದಂತಾಯಿತು.
ಶರಣಗೌಡ ಬಿ ಪಾಟೀಲ ತಿಳಗೂಳ ಪ್ರಬಂಧ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ